ಟ್ರೇಲರ್‌ನಲ್ಲಿ ಹೊರಬಂದ ಮಹಿಷಾಸುರ


Team Udayavani, Dec 29, 2020, 3:30 PM IST

ಟ್ರೇಲರ್‌ನಲ್ಲಿ  ಹೊರಬಂದ ಮಹಿಷಾಸುರ

ತನ್ನ ಟೈಟಲ್‌ ಮತ್ತು ಫ‌ಸ್ಟ್‌ಲುಕ್‌ ಮೂಲಕ ಗಮನ ಸೆಳೆದಿದ್ದ “ಮಹಿಷಾಸುರ’ ಚಿತ್ರದ ಟ್ರೇಲರ್‌ ಸೋಮವಾರ ಬಿಡುಗಡೆಯಾಗಿದೆ. ತ್ರಿಕೋನ ಪ್ರೇಮ ಕಥಾ ಹಂದರ ಹೊಂದಿರುವ “ಮಹಿಷಾಸುರ’ ಚಿತ್ರದಲ್ಲಿ ರಾಜ್‌ ಮಂಜು, ಸುದರ್ಶನ್‌ ನಾಯಕರಾಗಿ, ಬಿಂದುಶ್ರೀ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ. ಈ ಹಿಂದೆ ಸಂಜಯ್‌ ಕುಲಕರ್ಣಿ, ವಿಜಯಕುಮಾರ್‌ ಸೇರಿದಂತೆ ಹಲವಾರು ನಿರ್ದೇಶಕರ ಬಳಿ ಕೆಲಸ ಮಾಡಿದ ಅನುಭವವಿರುವ ಉದಯ ಪ್ರಸನ್ನ ಮೊದಲ ಬಾರಿಗೆ “ಮಹಿಷಾಸುರ’ ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದು ಆ್ಯಕ್ಷನ್‌ – ಕಟ್‌ ಹೇಳಿದ್ದಾರೆ.

“ಮಹಿಷಾಸುರ’ ಚಿತ್ರದ ಬಗ್ಗೆ ಮಾತನಾಡುವ ನಿರ್ದೇಶಕ ಉದಯ್‌ ಪ್ರಸನ್ನ, “ಸಮಾಜಕ್ಕೆ ಒಂದು ಉತ್ತಮ ಸಂದೇಶ ಈ ಸಿನಿಮಾದಲ್ಲಿದೆ. ಮನುಷ್ಯ ಎಷ್ಟೇ ಒಳ್ಳೆಯವನಾಗಿದ್ದರೂ ಆತ ತಾಳ್ಮೆ, ಸಹನೆ ಕಳೆದುಕೊಂಡರೆ, ಅವನ ಅಂತರಂಗದಲ್ಲಿರುವ ಅಸುರ “ಮಹಿಷಾಸುರ’ನ ರೂಪ ತಾಳುತ್ತಾನೆ. ಹಳ್ಳಿಯೊಂದರಲ್ಲಿ ನಡೆಯುವ ಕಥೆ ಇದಾಗಿದ್ದು, ಕಣ್ಣಾರೆ ಕಂಡ ನೈಜಘಟನೆಯನ್ನುಪ್ರೇರಣೆಯಾಗಿಟ್ಟುಕೊಂಡ ಈ ಸಿನಿಮಾ ಮಾಡಲಾಗಿದೆ. ಚಿಕ್ಕಂದಿನಿಂದಲೂ ಒಟ್ಟಿಗೆ ಬೆಳೆದ ಯುವಕರಿಬ್ಬರು ಒಂದು ಹೆಣ್ಣಿಗಾಗಿ ಹೇಗೆ ಅಸುರ ರೂಪ ತಾಳುತ್ತಾರೆ ಅನ್ನೋದು ಕಥೆಯ ಒಂದೆಳೆ’ ಎಂದು ವಿವರಣೆ ಕೊಡುತ್ತಾರೆ.

“ಹುಟ್ತಾನೇ ಯಾರೂ ಕೆಟ್ಟವರಾಗಿ ಜನಿಸುವುದಿಲ್ಲ, ನಮ್ಮ ಅಕ್ಕಪಕ್ಕದವರೇ ನಮ್ಮನ್ನು ಮಹಿಷಾಸುರ ಆಗುವ ಹಾಗೆ ಮಾಡುತ್ತಾರೆ. ಇಂದಿನ ರಾಜಕಾರಣಿಗಳು ತಮ್ಮ ವೋಟ್‌ ಬ್ಯಾಂಕ್‌ಗೋಸ್ಕರ ಯುವ ಜನರನ್ನು ಹೇಗೆಲ್ಲಾ ಬಳಸಿಕೊಳ್ಳುತ್ತಾರೆ ಎಂಬುದನ್ನು ಸಿನಿಮಾದಲ್ಲಿ ಹೇಳಿದ್ದೇವೆ’ ಎನ್ನುತ್ತಾರೆ ನಿರ್ದೇಶಕ ಉದಯ ಪ್ರಸನ್ನ. ಇನ್ನು “ಮೇಲುಕೋಟೆ ಟೂರಿಂಗ್‌ ಟಾಕೀಸ್‌’ ಬ್ಯಾನರ್‌ನಲ್ಲಿ ಶ್ರೀಮತಿ ಪಾರ್ವತಿ ಚಂದ್ರಶೇಖರ್‌, ಶ್ರೀಮತಿ ಲೀಲಾವತಿ ಸುರೇಶ್‌ ಕುಮಾರ್‌ ಹಾಗೂಪ್ರೇಮಾ ಚಂದ್ರಯ್ಯ “ಮಹಿಷಾಸುರ’ ಚಿತ್ರಕ್ಕೆ ಬಂಡವಾಳ ಹೂಡಿ ನಿರ್ಮಿಸಿದ್ದಾರೆ. ಚಿತ್ರಕ್ಕೆ ಸುನಿಲ್‌ ಕೌಶಿ ಸಂಗೀತ, ವೇಣು ಸಾಹಿತ್ಯ, ಕೃಷ್ಣಛಾಯಾಗ್ರಹಣವಿದೆ. ಮೇಲುಕೋಟೆ, ಮಂಡ್ಯ, ಮೈಸೂರು, ರಾಮನಗರ ಸುತ್ತಮುತ್ತ ಚಿತ್ರದ ಚಿತ್ರೀಕರಣ ನಡೆಸಲಾಗಿದೆ.

ಇತ್ತೀಚೆಗೆ “ಮಹಿಷಾಸುರ’ ಚಿತ್ರದ ಆಡಿಯೋವನ್ನು ಚಿತ್ರ ಸಾಹಿತಿ, ನಿರ್ದೇಶಕ ಕವಿರಾಜ್‌ ಬಿಡುಗಡೆಗೊಳಿಸಿದ್ದರು. ಸದ್ಯ ಬಿಡುಗಡೆಯಾಗಿರುವ “ಮಹಿಷಾಸುರ’ ಚಿತ್ರದ ಟೀಸರ್‌, ಹಾಡು ಮತ್ತು ಟ್ರೇಲರ್‌ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದ್ದು, ಇದೇ ಖುಷಿಯಲ್ಲಿರುವ ಚಿತ್ರತಂಡ, ಮುಂಬರುವ ಜ. 8ಕ್ಕೆ ಚಿತ್ರವನ್ನು ಪ್ರೇಕ್ಷಕರ ಮುಂದೆ ತರುವ ಯೋಜನೆ ಹಾಕಿಕೊಂಡಿದೆ.

ಟಾಪ್ ನ್ಯೂಸ್

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’

Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’

ʼToxicʼನಲ್ಲಿ ಯಶ್‌ ಜೊತೆ ಕರೀನಾ ನಟಿಸೋದು ಪಕ್ಕಾ ಆದರೆ ನಾಯಕಿಯಾಗಿ ಅಲ್ಲ,ಮತ್ಯಾವ ಪಾತ್ರ?

ʼToxicʼನಲ್ಲಿ ಯಶ್‌ ಜೊತೆ ಕರೀನಾ ನಟಿಸೋದು ಪಕ್ಕಾ ಆದರೆ ನಾಯಕಿಯಾಗಿ ಅಲ್ಲ,ಮತ್ಯಾವ ಪಾತ್ರ?

Kannada Cinema; ಸದ್ದು ಮಾಡುತ್ತಿದೆ ‘ಖಾಲಿ ಡಬ್ಬ’

Kannada Cinema; ಸದ್ದು ಮಾಡುತ್ತಿದೆ ‘ಖಾಲಿ ಡಬ್ಬ’

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.