ಟ್ರೇಲರ್‌, ಟೀಸರ್‌, ಸಾಂಗ್ಸ್‌ ಧಮಾಕ: ರಿಲೀಸ್ ಗೆ ತಯಾರಾದ ಚಿತ್ರಗಳ ಶರವೇಗದ ಪ್ರಮೋಷನ್


Team Udayavani, Oct 22, 2021, 12:57 PM IST

ಟ್ರೇಲರ್‌, ಟೀಸರ್‌, ಸಾಂಗ್ಸ್‌ ಧಮಾಕ: ರಿಲೀಸ್ ಗೆ ತಯಾರಾದ ಚಿತ್ರಗಳ ಶರವೇಗದ ಪ್ರಮೋಷನ್

ಕೋವಿಡ್‌ ಭಯ ನಿಧಾನವಾಗಿ ದೂರವಾಯ್ತು, ಥಿಯೇಟರ್‌ಗಳಲ್ಲಿ 100% ಪ್ರವೇಶಾತಿ ಸಿಕ್ಕಾಯ್ತು, ರಿಲೀಸ್‌ಗಾಗಿ ವರ್ಷದಿಂದ ಕಾದು ಕುಳಿತಿದ್ದ “ಸಲಗ’, “ಕೋಟಿಗೊಬ್ಬ-3′ ಅಂತಹ ಬಿಗ್‌ ಬಜೆಟ್‌ ಸ್ಟಾರ್ ಸಿನಿಮಾಗಳೂ ರಿಲೀಸ್‌ ಆಯ್ತು, ಬಾಕ್ಸಾಫೀಸ್‌ನಲ್ಲಿ ಸೌಂಡ್‌ ಆಯ್ತು, ಥಿಯೇಟರ್‌ಗಳ ಮುಂದೆ ಹೌಸ್‌ಫ‌ುಲ್‌ ಬೋರ್ಡ್‌ ಕೂಡ ಬಿದ್ದಾಯ್ತು… ಇದಕ್ಕಿಂತ ಇನ್ನೇನು ಬೇಕು..? ಹೌದು, ಸ್ಯಾಂಡಲ್‌ವುಡ್‌ ಸಿನಿಪ್ರಿಯರು ಮತ್ತು ಚಿತ್ರರಂಗದ ಮಂದಿ ಒಂದೂವರೆ ವರ್ಷದಿಂದ ಕಾಯುತ್ತಿದ್ದ ದಿನಗಳು ಮತ್ತೆ ಮರುಕಳಿಸುತ್ತಿವೆ.

ಸಿನಿಮಾ ಮಾಡಿ ಒಂದೂವರೆ ವರ್ಷದಿಂದ ಬಿಡುಗಡೆಗೆ ಹಿಂದೆ-ಮುಂದೆ ನೋಡುತ್ತಿದ್ದ ನೂರಾರು ಸಿನಿಮಾಗಳ ನಿರ್ಮಾಪಕರು, ನಿರ್ದೇಶಕರು, ಕಲಾವಿದರು ಮತ್ತು ತಂತ್ರಜ್ಞರ ಮುಖದಲ್ಲಿ ಸಣ್ಣ ನಗುವಿನ ಗೆರೆ ಮೂಡುತ್ತಿದೆ. ಇದೇ ವೇಳೆ ಈಗಾಗಲೇ ತಮ್ಮ ಕೆಲಸಗಳನ್ನು ಪೂರ್ಣಗೊಳಿಸಿರುವ ಚಿತ್ರತಂಡಗಳು ತಮ್ಮ ರಿಲೀಸ್‌ಗೆ ತಯಾರಿ ಮಾಡಿಕೊಳ್ಳುತ್ತಿದ್ದು, ನಿಧಾನವಾಗಿ ಪ್ರಚಾರ ಕಾರ್ಯಗಳಿಗೂ ಚಾಲನೆ ಕೊಟ್ಟಿವೆ.

ಅದರಲ್ಲೂ ಅಕ್ಟೋಬರ್‌ ಮೊದಲ ವಾರದಿಂದ ಥಿಯೇಟರ್‌ಗಳಲ್ಲಿ ಪೂರ್ಣ ಪ್ರಮಾಣದಲ್ಲಿ ಪ್ರೇಕ್ಷಕರ ಪ್ರವೇಶಾತಿ ಶುರುವಾದ ನಂತರ ಪ್ರೇಕ್ಷಕರಿಂದಲೂ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದ್ದು, ಇದು ಸಹಜವಾಗಿಯೇ ಸಿನಿಮಂದಿಯ ಜೋಶ್‌ ಇನ್ನಷ್ಟು ಹೆಚ್ಚಿಸಿದೆ. ಇದರ ಪರಿಣಾಮವಾಗಿ ದಸರಾ ಹಬ್ಬದ ಸಂದರ್ಭದಲ್ಲಿ ಬಿಡುಗಡೆಗೆ ರೆಡಿಯಾಗಿರುವ ಸಾಲು ಸಾಲು ಸಿನಿಮಾಗಳು ತಮ್ಮ ಪ್ರಮೋಶನ್ಸ್‌ ಕೆಲಸಗಳಿಗೆ ಚಾಲನೆ ನೀಡಿವೆ. ಬ್ಯಾಕ್‌ ಟು ಬ್ಯಾಕ್‌ ಹೊಸ ಸಿನಿಮಾಗಳ ಫ‌ಸ್ಟ್‌ಲುಕ್‌, ಟೀಸರ್‌, ಸಾಂಗ್ಸ್‌, ಟ್ರೇಲರ್‌ ಬಿಡುಗಡೆಯಾಗುತ್ತಿದೆ. “ಭಜರಂಗಿ-2′, “ಸಖತ್‌’, “ತ್ರಿಬಲ್‌ ರೈಡಿಂಗ್‌’, “ಲವ್‌ ಯು ರಚ್ಚು’, “ಬಡವ ರಾಸ್ಕಲ್‌’, “ನಮ್ಮ ಹುಡುಗರು’, “ಕಡಲ ತೀರದ ಭಾರ್ಗವ’, “ರೈಡರ್‌’, “ನಮ್ಮೂರಿನ ರಸಿಕರು’, “ರಂಗ ಸಮುದ್ರ’, “ಅಮೃತ್‌ ಅಪಾರ್ಟ್‌ಮೆಂಟ್‌’, “ಟಾಮ್‌ ಅಂಡ್‌ ಜೆರ್ರಿ’, “ಮುಗಿಲ್‌ ಪೇಟೆ’ ಹೀಗೆ ಕಳೆದ ಎರಡು ವಾರಗಳಲ್ಲಿ ಕನ್ನಡದಲ್ಲಿ ನಲವತ್ತಕ್ಕೂ ಹೆಚ್ಚು ಸಿನಿಮಾಗಳ ಹೊಸ ಸಿನಿಮಾಗಳ ಫ‌ಸ್ಟ್‌ಲುಕ್‌, ಟೀಸರ್‌, ಸಾಂಗ್ಸ್‌, ಟ್ರೇಲರ್‌ ಬಿಡುಗಡೆಯಾಗಿರುವುದೇ ಇದಕ್ಕೆ ಸಾಕ್ಷಿ!

ಇದನ್ನೂ ಓದಿ:ಚಿತ್ರೀಕರಣ ಮುಗಿಸಿ ಕುಂಬಳಕಾಯಿ ಹೊಡೆದ ಭಟ್ರು ಟೀಮ್ : ಶೀಘ್ರದಲ್ಲೇ ಬಾಕಿ ಸುದ್ದಿ

ಇದು ಬಿಡುಗಡೆಗೆ ರೆಡಿಯಾಗಿರುವ ಸಿನಿಮಾಗಳ ಚಟುವಟಿಕೆಗಳ ಕಥೆಯಾದರೆ, ಇನ್ನು ಕಳೆದ ಒಂದು ವರ್ಷದಿಂದ ಸ್ಕ್ರಿಪ್ಟ್ ರೆಡಿ ಮಾಡಿಕೊಂಡು ಪ್ರೀ-ಪ್ರೊಡಕ್ಷನ್‌ ಕೆಲಸಗಳಲ್ಲಿ ಹಲವು ಸ್ಟಾರ್ ಮತ್ತು ಹೊಸಬರ ಸಿನಿಮಾಗಳು ಕೂಡ ಸದ್ದಿಲ್ಲದೆ ಸ್ಕ್ರಿಪ್ಟ್ ಪೂಜೆ, ಮುಹೂರ್ತ ನೆರವೇರಿಸಿಕೊಂಡು ಸೆಟ್ಟೇರುತ್ತಿವೆ. ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ಅಭಿನಯದ “ಕ್ರಾಂತಿ’, ಡಾರ್ಲಿಂಗ್‌ ಕೃಷ್ಣ ಅಭಿನಯದ “ಲವ್‌ಬರ್ಡ್ಸ್‌’ ಸೇರಿದಂತೆ ಕಳೆದ ಎರಡು ವಾರದಲ್ಲಿ ಸುಮಾರು ಹದಿನೈದಕ್ಕೂ ಹೆಚ್ಚು ಹೊಸಬರ ಮತ್ತು ಸ್ಟಾರ್ ನಟರ ಸಿನಿಮಾಗಳು ಮುಹೂರ್ತವನ್ನು ಆಚರಿಸಿಕೊಂಡರೆ, ಹತ್ತಕ್ಕೂ ಹೆಚ್ಚು ಹೊಸ ಸಿನಿಮಾಗಳು ಅನೌನ್ಸ್‌ ಆಗಿವೆ. ಒಟ್ಟಾರೆ ನವರಾತ್ರಿ ಸಿನಿಮಾ ಮಂದಿಗೆ ಮತ್ತು ಸಿನಿಪ್ರಿಯರಿಗೆ ನವ ಭರವಸೆ ಕೊಟ್ಟಂತಿದ್ದು, ಈ ಸಿನಿಮಾಗಳು ಇದೇ ಪ್ರಮಾಣದಲ್ಲಿ ಮುಂದಿನ ದಿನಗಳಲ್ಲಿ ಬಿಡುಗಡೆಯಾದರೆ, ಸ್ಯಾಂಡಲ್‌ವುಡ್‌ ಮತ್ತೆ ರಂಗುರಂಗಾಗಿ ಚಿತ್ರ ಕಳೆಕಟ್ಟುವುದರಲ್ಲಿ ಅನುಮಾನವಿಲ್ಲ.

ಜಿ.ಎಸ್.ಕಾರ್ತಿಕ ಸುಧನ್

ಟಾಪ್ ನ್ಯೂಸ್

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

Supreme Court

Supreme Courtನಲ್ಲಿ ಪಿವಿಎನ್‌, ಮನಮೋಹನ್‌ ಸಿಂಗ್‌ಗೆ ಕೇಂದ್ರ ಸರಕಾರ ಶ್ಲಾಘನೆ

Rajeev Chandrashekhar

Corrupt ಡಿಕೆಶಿ ಸರ್ಟಿಫಿಕೆಟ್‌ ಬೇಕಾಗಿಲ್ಲ: ಕೇಂದ್ರ ಸಚಿವ ರಾಜೀವ್‌ ತಿರುಗೇಟು

1-wqewqe

2014 ಭರವಸೆ, 2019 ನಂಬಿಕೆ, 2024ರಲ್ಲಿ ಗ್ಯಾರಂಟಿ: ಮೋದಿ

mamata

CAA, NRC ರದ್ದು: ದೀದಿ ಶಪಥ ಪ್ರಣಾಳಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Actor Dwarakish: ಸಕಲ ಗೌರವಗಳೊಂದಿಗೆ ನಟ ದ್ವಾರಕೀಶ್‌ ಅಂತ್ಯಕ್ರಿಯೆ

Actor Dwarakish: ಸಕಲ ಗೌರವಗಳೊಂದಿಗೆ ನಟ ದ್ವಾರಕೀಶ್‌ ಅಂತ್ಯಕ್ರಿಯೆ

choo mantar kannada movie

Sharan; ಮೇ 10ಕ್ಕೆ ‘ಛೂ ಮಂತರ್‌’ ತೆರೆಗೆ ಸಿದ್ಧ

aditya;s kangaroo movie

Aditya; ಟ್ರೇಲರ್ ನಲ್ಲಿ ‘ಕಾಂಗರೂ’ ದರ್ಶನ; ಮೇ.3ರಂದು ತೆರೆಗೆ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

Supreme Court

Supreme Courtನಲ್ಲಿ ಪಿವಿಎನ್‌, ಮನಮೋಹನ್‌ ಸಿಂಗ್‌ಗೆ ಕೇಂದ್ರ ಸರಕಾರ ಶ್ಲಾಘನೆ

suicide

ಕಾಶ್ಮೀರದಲ್ಲಿ ಗುಂಡು ಹಾರಿಸಿ ಬಿಹಾರ ಕಾರ್ಮಿಕನ ಹತ್ಯೆ  

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.