ಡಬ್ಬಲ್‌ ಇಂಜಿನ್‌ಗೆ ಟ್ರಬಲ್‌!


Team Udayavani, Jun 18, 2018, 11:08 AM IST

double-engine.jpg

ಒಂದು ಸಿನಿಮಾ ಚಿತ್ರಮಂದಿರದಲ್ಲಿ ಬಿಡುಗಡೆಗೆ ಮುನ್ನವೇ ಆ ಚಿತ್ರ ಯೂಟ್ಯೂಬ್‌ನಲ್ಲಿ ಅಪ್‌ಲೋಡ್‌ ಆಗಿಬಿಟ್ಟರೆ? ಅರೇ, ಇದೇನಿದು, ಪ್ರೇಕ್ಷಕರ ಮುಂದೆ ಬರುವ ಮುನ್ನವೇ, ಆನ್‌ಲೈನ್‌ನಲ್ಲಿ ಚಿತ್ರ ಬಿಡುಗಡೆಯೇ? ಈ ಪ್ರಶ್ನೆ ಎಂಥವರಿಗೂ ಕಾಡದೇ ಇರದು. ಆದರೂ, ಅಂಥದ್ದೊಂದು ಗೊಂದಲಕ್ಕೆ “ಡಬ್ಬಲ್‌ ಇಂಜಿನ್‌’ ಚಿತ್ರ ಕಾರಣವಾಗಿದೆ. ಹೌದು, ಚಂದ್ರಮೋಹನ್‌ ನಿರ್ದೇಶನದ “ಡಬ್ಬಲ್‌ ಎಂಜಿನ್‌’ ಚಿತ್ರದ ಟ್ರೈಲರ್‌ ಎಲ್ಲೆಡೆ ಜೋರು ಸದ್ದು ಮಾಡಿದೆ.

ಆದರೆ, ಟ್ರೈಲರ್‌ ಬಿಡುಗಡೆಯಾಗಿ ಕೇವಲ ಆರು ಗಂಟೆಯಲ್ಲೇ ಉತ್ತಮ ಪ್ರತಿಕ್ರಿಯೆ ಕೂಡ ಸಿಕ್ಕಿದೆ. ಆ ಖುಷಿಯಲ್ಲಿದ್ದ ಚಿತ್ರತಂಡಕ್ಕೆ, ಟ್ರೈಲರ್‌ ಬಿಡುಗಡೆ ದಿನದಂದೇ ಶಾಕ್‌ ಆಗಿಬಿಟ್ಟಿದೆ. ಆ ಶಾಕ್‌ಗೆ ಕಾರಣ, ಚಂದ್ರಮೋಹನ್‌ ನಿರ್ದೇಶನದ “ಬಾಂಬೆ ಮಿಠಾಯಿ’ ಚಿತ್ರವನ್ನು ಕಿಡಿಗೇಡಿಗಳು ಯು ಟ್ಯೂಬ್‌ಗ ಅಪ್‌ಲೋಡ್‌ ಮಾಡಿ, “ಡಬ್ಬಲ್‌ ಇಂಜಿನ್‌’ ಫ‌ುಲ್‌ ಮೂವಿ ಎಂದು ಸ್ಟೇಟಸ್‌ ಹಾಕಿಬಿಟ್ಟಿದ್ದಾರೆ.

ಜಿನರೆಲ್ಲಾ ಯೂಟ್ಯೂಬ್‌ನಲ್ಲಿ “ಡಬ್ಬಲ್‌ ಇಂಜಿನ್‌’ ಚಿತ್ರ ಅಪ್‌ಲೋಡ್‌ ಆಗಿದೆ ಅಂತ ನೋಡೋಕೆ ಶುರುಮಾಡಿದ್ದಾರೆ. ಹೀಗೇ ಬಿಟ್ಟರೆ, ಸಮಸ್ಯೆ ಆಗುತ್ತದೆ ಎಂದು ಸೈಬರ್‌ ಕ್ರೈಮ್‌ ಪೊಲೀಸರಿಗೆ ದೂರು ಕೊಟ್ಟಿದ್ದಾಗಿ ಹೇಳುತ್ತಾರೆ ನಿರ್ದೇಶಕ ಚಂದ್ರಮೋಹನ್‌. ಈ ಹಿಂದೆ ಅವರ ನಿರ್ದೇಶನದ “ಬಾಂಬೆ ಮಿಠಾಯಿ’ ಚಿತ್ರ ಬಿಡುಗಡೆಯಾಗಿ ಮೂರನೇ ವಾರಕ್ಕೆ ಪೈರಸಿ ಮಾಡಿ ಅಪ್‌ಲೋಡ್‌ ಮಾಡಲಾಗಿತ್ತಂತೆ.

ಅದರಿಂದ ಚಿತ್ರಕ್ಕೆ ಪೆಟ್ಟು ಬಿದ್ದಿತ್ತು ಎಂದು ಹೇಳುವ ನಿರ್ದೇಶಕರು, “ದೊಡ್ಡ ನಿರ್ಮಾಪಕರಾದರೆ, ಇಂತಹ ಪೆಟ್ಟು ಸಹಿಸಿಕೊಳ್ಳುತ್ತಾರೆ. ನಮ್ಮಂತಹ ಹೊಸಬರಿಗೆ ತುಂಬಾ ಸಮಸ್ಯೆ ಎದುರಾಗುತ್ತದೆ. ನಾವು ಸಿನಿಮಾ ಮತ್ತು ಚಿತ್ರಮಂದಿರಗಳನ್ನು ನಂಬಿದವರು. ಹೀಗೆಲ್ಲಾ ಆಗಿಬಿಟ್ಟರೆ ಹೇಗೆ ಎಂಬ ಭಯದಿಂದ ಮುಂಜಿಾಗ್ರತೆಗಾಗಿ ಸೈಬರ್‌ ಕ್ರೈಮ್‌ ಪೊಲೀಸರಿಗೆ ದೂರು ಕೊಟ್ಟಿದ್ದೇವೆ. ಸೂಕ್ತ ಕ್ರಮ ಕೈಗೊಳ್ಳುವುದಾಗಿ ಪೊಲೀಸರು ಭರವಸೆ ಕೊಟ್ಟಿದ್ದಾರೆ’ ಎನ್ನುತ್ತಾರೆ.

ಅಂದಹಾಗೆ, ಚಿತ್ರವನ್ನು ಜಿುಲೈ ಮೊದಲ ವಾರದಲ್ಲಿ ಬಿಡುಗಡೆ ಮಾಡಲು ಯೋಚಿಸಲಾಗಿದೆ. ಚಿತ್ರದಲ್ಲಿ ಸುಮನ್‌ರಂಗನಾಥ್‌, ಚಿಕ್ಕಣ್ಣ, ದತ್ತಣ್ಣ, ಸಾಧು ಕೋಕಿಲ, ಅಚ್ಯುತ್‌ ಕುಮಾರ್‌, ಸುಚೇಂದ್ರ ಪ್ರಸಾದ್‌ ಇತರರು ನಟಿಸಿದ್ದಾರೆ. ವೀರ್‌ ಸಮರ್ಥ್ ಸಂಗೀತವಿದೆ. ಸೂರ್ಯ ಎಸ್‌.ಕಿರಣ್‌ ಛಾಯಾಗ್ರಹಣವಿದೆ. ಎಸ್‌.ಆರ್‌.ಎಸ್‌. ಗ್ರೂಪ್‌ ಬ್ಯಾನರ್‌ನಡಿ ಗೆಳೆಯರು ಸೇರಿ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಚಿತ್ರತಂಡದವರು ಇಂದು (ಸೋಮವಾರ) ಕರ್ನಾಟಕ ಚಲನಚಿತ್ರ ವಾಣಿಜಿ್ಯ ಮಂಡಳಿ ಅಧ್ಯಕ್ಷ ಸಾ.ರಾ.ಗೋವಿಂದು ಅವರನ್ನು ಭೇಟಿ ಮಾಡಿ, ಸಮಸ್ಯೆ ಕುರಿತು ಮನವಿ ಮಾಡಲು ನಿರ್ಧರಿಸಿದ್ದಾರೆ.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.