ಸಾಯೋವರೆಗೂ ಪ್ರಯತ್ನ ಮಾಡ್ತೀನಿ


Team Udayavani, Nov 13, 2017, 10:48 AM IST

upendra1.jpg

ಉಪೇಂದ್ರ ಹೊಸ ರಾಜಕೀಯ ಪಕ್ಷ ಹುಟ್ಟಿಹಾಕಿದ್ದು ಗೊತ್ತೇ ಇದೆ. ಮುಂದಿನ ವರ್ಷದ ವಿಧಾನಸಬೆ ಚುನಾವಣೆಗೆ ಉಪೇಂದ್ರ ಮತ್ತು ಅವರ ಪಕ್ಷ ದೊಡ್ಡ ಮಟ್ಟದಲ್ಲಿ ಎಂಟ್ರಿ ಕೊಡುವ ನಿರೀಕ್ಷೆ ಇದೆ. ಇದೆಲ್ಲದರ ಮಧ್ಯೆ ಬಹಳ ಜನರಿಗೆ ಇದೊಂದು ಪ್ರಶ್ನೆ ಇದ್ದೇ ಇದೆ. ಉಪೇಂದ್ರರಿಗೆ ಇವೆಲ್ಲಾ ಬೇಕಿತ್ತಾ ಮತ್ತು ಈ ವ್ಯವಸ್ಥೆಯಲ್ಲಿ ಉಪೇಂದ್ರ ಏನಾದರೂ ಮಾಡುವುದಕ್ಕೆ ಸಾಧ್ಯವಾ ಎಂದು?

 ಈ ಕುರಿತು ಉಪೇಂದ್ರ ಅವರನ್ನು ಕೇಳಿದರೆ, “ಎಷ್ಟೋ ಜನ ನನಗೆ ಇದು ಬೇಕಿತ್ತಾ ಅಂತ ಕೇಳುತ್ತಾರೆ. ನಾನು ಬಹಳ ಕೆಳಮಟ್ಟದಿಂದ ಬಂದವನು. ಒಂದು ಹೊತ್ತಿನ ಊಟಕ್ಕೆ ಪರದಾಡುತ್ತಾ, ಕ್ರಮೇಣ ಲಕ್ಸುರಿ ಕಂಡವನು ನಾನು. ಸಿನಿಮಾ ಮಾಡಿದೆ, ಪಾರಿನ್‌ ಸುತ್ತಿದೆ, ನನ್ನದೇ ರೆಸಾರ್ಟ್‌ ಇದೆ… ಆದರೂ ಸುಖ ಸಿಗಲಿಲ್ಲ. ಏನೋ ಬೇರೆ ಕಾಡುತ್ತಿದೆ. ನಾನು ಹುಟ್ಟಿರೋದೇ ಬೇರೆ ಕಾರಣಕ್ಕೆ ಅಂತ ಅನಿಸುತಿತ್ತು.

ಎಲ್ಲರೂ ತಪ್ಪನ್ನು ಒಪ್ಪಿಕೊಂಡುಬಿಟ್ಟಿದ್ದಾರೆ. ಆ ತಪ್ಪನ್ನು ಸರಿ ಮಾಡಬೇಕೆಂದು ಹೊರಟಿದ್ದೇನೆ. ಇದರಲ್ಲಿ ಗೆಲ್ಲುತ್ತೀನಿ ಎನ್ನುವ ನಂಬಿಕೆ ಇದೆ. ಗೆದ್ದರೆ ಸಂತೋಷ. ಇಲ್ಲ ಸಾಯೋವರೆಗೂ ಪ್ರಯತ್ನ ಮಾಡುತ್ತಲೇ ಇರುತ್ತೀನಿ. ಪ್ರತಿ ಚುನಾವಣೆಯ ಆರು ತಿಂಗಳ ಮುಂಚೆ ಬಂದು ಪ್ರಯತ್ನ ಮಾಡುತ್ತಲೇ ಇರುತ್ತೀನಿ’ ಎನ್ನುತ್ತಾರೆ ಉಪೇಂದ್ರ.

 ಇನ್ನು ಏನೋ ಮಾಡಬೇಕು ಎಂಬ ಕಲ್ಪನೆ ಉಪೇಂದ್ರ ಕಾಲೇಜು ಹೋಗುತ್ತಿದ್ದ ದಿನಗಳಿಂದ ಇತ್ತಂತೆ. “ನನ್ನ ಉದ್ದೇಶ ಸಿನಿಮಾ ಅಲ್ಲ, ಬೇರೇನೋ ಇದೆ ಅಂತ ಹೇಳುತ್ತಲೇ ಬಂದಿದ್ದೆ. ನಾನು ಪಿಯುಸಿಯಲ್ಲಿದ್ದಾಗಲೇ ಈ ಆಸೆ ಇತ್ತು. ಆಗ ಈ ದೇಶ ಎಂದರೇನು, ರಾಜ್ಯ ಎಂದರೇನು ಅಂತ ಯಾವುದೂ ಗೊತ್ತಿರಲಿಲ್ಲ. ಏನೋ ಮಾಡಬೇಕು ಅಂತ ಮಾತ್ರ ಆಸೆ ಇತ್ತು.

 ಆಗ ನಾನು ಬೆಂಗಳೂರು ಹೈಸ್ಕೂಲ್‌ನಲ್ಲಿ ಓದುವಾಗ, ಒಬ್ಬರು ಎಜೆಆರ್‌ ಅಂತ ಇತಿಹಾಸದ ಮೇಷ್ಟ್ರಿದ್ದರು. ಅವರು ನಮ್ಮ ದೇಶದ ಇತಿಹಾಸ ಹೇಳ್ಳೋರು. ಈ ದೇಶವನ್ನ ಯಾರ್ಯಾರು ಆಳಿದರು, ಏನೆಲ್ಲಾ ಮಾಡಿದರು ಅಂತ ಪಾಠ ಮಾಡುತ್ತಿದ್ದರು. ಆಗಲೇ ನಾನೂ ಏನೋ ಮಾಡಬೇಕು ಅಂತ ಆಸೆ ಇತ್ತು. ಸಿನಿಮಾ ನಟನಾದರೆ, ಏನೋ ಮಾಡಬಹುದು ಅಂತ ಬಂದೆ.

ಮೊದಲ ಬಾರಿಗೆ ಮನ್ಮಥನ ಪಾತ್ರದಲ್ಲಿ ನನ್ನನ್ನ ನೋಡಿದಾಗ ಶಾಕ್‌ ಆಯ್ತು. ಸರಿ ನಟನೆ ಬೇಡ, ಇನ್ನೊಂದು ಮಾಡೋಣ ಅಂತ ನಿರ್ದೇಶನ ಮಾಡಿದೆ. ಕೊನೆಗೆ ಇನ್ನ್ಯಾರೋ ಹೀರೋ ವಾಡಿದರು. ಎಲ್ಲವೂ ಅದಾಗೇ ಆಗುತ್ತಲೇ ಹೋಯ್ತು. ಈಗ ಕೊನೆಗೂ ಅವಕಾಶ ಸಿಕ್ಕಿದೆ’ ಎನ್ನುತ್ತಾರೆ ಉಪೇಂದ್ರ.

ಎಲ್ಲಾ ಜನರ ಕೈಲಿದೆ!: ಉಪೇಂದ್ರ ಅಭಿನಯದ “ಉಪೇಂದ್ರ ಮತ್ತೆ ಬಾ’ ಚಿತ್ರ ಈ ಶುಕ್ರವಾರ ಬಿಡುಗಡೆಯಾಗುತ್ತಿದೆ. ಆ ನಂತರ ಚಿತ್ರಜೀವನದ ಅವರ ಪ್ಲಾನ್‌ ಏನು ಎಂದು ಕೇಳಿದರೆ, “ಎಲ್ಲಾ ಜನರ ಕೈಲಿದೆ’ ಎಂದು ಉತ್ತರಿಸುತ್ತಾರೆ ಅವರು. “ಎಲ್ಲಾ ಅವರ ಕೈಲಿದೆ. ಹಾಲಲ್ಲಿ ಹಾಕಿದರೆ ಹಾಲಲ್ಲಿ ಇರ್ತೀನಿ, ನೀರಲ್ಲಿ ಹಾಕಿದರೆ ನೀರಲ್ಲಿ ಇರ್ತೀನಿ.

ಈ ವಾರ “ಉಪೇಂದ್ರ ಮತ್ತೆ ಬಾ’ ಬಿಡುಗಡೆಯಾಗುತ್ತದೆ. ಆ ನಂತರ ತೆಲುಗು ನಿರ್ಮಾಪಕರ “ಹೋಮ್‌ ಮಿನಿಸ್ಟರ್‌’ ಚಿತ್ರ ಮುಗಿಸಬೇಕಿದೆ. ಇದಾದ ಮೇಲೆ ಚುನಾವಣೆಗಳು. ಚುನಾವಣೆಯ ನಂತರ ಏನಾಗುತ್ತದೋ ಇನ್ನೂ ಗೊತ್ತಿಲ್ಲ’ ಎನ್ನುತ್ತಾರೆ ಅವರು. ಈ ಮಧ್ಯೆ “ಉಪ್ಪಿ-ರುಪ್ಪಿ’ ಚಿತ್ರದ ಕಥೆಯೇನು ಎಂದರೆ, ಅದು ಸದ್ಯಕ್ಕಿಲ್ಲ ಆಮೇಲೆ ಎಂಬ ಉತ್ತರ ಅವರಿಂದ ಬರುತ್ತದೆ.

ಟಾಪ್ ನ್ಯೂಸ್

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Moksha Kushal

Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.