ಗುಬ್ಬಿ ಜೊತೆ ಕಿರುತೆರೆ ಹುಡುಗಿ ಕವಿತಾ
Team Udayavani, Jun 20, 2018, 11:02 AM IST
ನಟ-ನಿರ್ದೇಶಕ ರಾಜ್ ಬಿ. ಶೆಟ್ಟಿ ಅವರು “ಗುಬ್ಬಿ ಮೇಲೆ ಬ್ರಹ್ಮಾಸ್ತ್ರ’ ಎಂಬ ಚಿತ್ರದಲ್ಲಿ ನಾಯಕನಾಗಿ ನಟಿಸುತ್ತಿರುವುದು ಗೊತ್ತೇ ಇದೆ. ಈಗಾಗಲೇ ಸೋಮವಾರ ಬೆಳಿಗ್ಗೆ ರಾಜರಾಜೇಶ್ವರಿ ನಗರದ ಶ್ರೀ ರಾಜರಾಜೇಶ್ವರಿ ದೇವಸ್ಥಾನದಲ್ಲಿ ಚಿತ್ರಕ್ಕೆ ಮುಹೂರ್ತವಾಗಿದೆ. ನಟ ಸತೀಶ್ ನೀನಾಸಂ ಬಂದು, ಚಿತ್ರದ ಮೊದಲ ದೃಶ್ಯಕ್ಕೆ ಕ್ಲಾಪ್ ಮಾಡುವ ಮೂಲಕ ಚಿತ್ರತಂಡಕ್ಕೆ ಶುಭ ಕೋರಿದ್ದಾರೆ.
ಮುಂಚೆ ಈ ಚಿತ್ರದಲ್ಲಿ ಯಾರ್ಯಾರು ನಟಿಸುತ್ತಿದ್ದಾರೆ ಎಂದು ಚಿತ್ರತಂಡದವರು ಬಿಟ್ಟುಕೊಟ್ಟಿರಲಿಲ್ಲ. ಈಗ “ಲಕ್ಷ್ಮೀ ಬಾರಮ್ಮ’ ಧಾರಾವಾಹಿ ಖ್ಯಾತಿಯ ಕವಿತಾ ಈ ಚಿತ್ರದಲ್ಲಿ ನಾಯಕಿಯಾಗಿ ನಟಿಸುತ್ತಿದ್ದಾರೆ. ಕವಿತಾಗೆ ಇದು ಮೂರನೆಯ ಚಿತ್ರವಾಗಿದ್ದು, ಇದಕ್ಕೂ ಮುನ್ನ ಅವರು ಆರ್ಜೆ ಶ್ರೀನಿ ನಿರ್ದೇಶನದ “ಶ್ರೀನಿವಾಸ ಕಲ್ಯಾಣ’ ಮತ್ತು ರಾಜೇಶ್ ಅಭಿನಯದ “ಫಸ್ಟ್ ಲವ್’ ಎಂಬ ಚಿತ್ರಗಳಲ್ಲಿ ನಾಯಕಿಯಾಗಿ ಕಾಣಿಸಿಕೊಂಡಿದ್ದರು.
ಈಗ ಅವರು ರಾಜ್ ಬಿ. ಶೆಟ್ಟಿಗೆ ನಾಯಕಿಯಾಗಿ ಅಭಿನಯಿಸುತ್ತಿದ್ದಾರೆ. ಚಿತ್ರದ ಮುಹೂರ್ತದ ಶಾಟ್ನಲ್ಲಿ ಅವರೂ ನಟಿಸಿದ್ದರು. “ಗುಬ್ಬಿ ಮತ್ತು ಬ್ರಹ್ಮಾಸ್ತ್ರ’ ಚಿತ್ರವನ್ನು ನಿರ್ದೇಶಿಸುತ್ತಿರುವುದು ಸುಜಯ್ ಶಾಸ್ತ್ರಿ. ಈ ಹಿಂದೆ “ಶ್ರೀನಿವಾಸ ಕಲ್ಯಾಣ’ ಸೇರಿದಂತೆ ಕೆಲವು ಚಿತ್ರಗಳಲ್ಲಿ ಕಾಮಿಡಿ ಪಾತ್ರಗಳಲ್ಲಿ ನಟಿಸಿದ್ದ ಸುಜಯ್ ಶಾಸ್ತ್ರಿ, ಈಗ ಇದೇ ಮೊದಲ ಬಾರಿಗೆ ಚಿತ್ರ ನಿರ್ದೇಶನಕ್ಕಿಳಿದಿದ್ದಾರೆ.
ಇನ್ನು ಚಿತ್ರಕ್ಕೆ ಪ್ರದೀಪ್ ಬಿ.ವಿ ಅವರು ಕಥೆ ಬರೆದರೆ, ಪ್ರಸನ್ನ ವಿ.ಎಂ. ಮತ್ತು ಸುಜಯ್ ಸೇರಿಕೊಂಡು ಚಿತ್ರಕಥೆಯನ್ನು ರಚಿಸಿದ್ದಾರೆ. ಸುನಿತ್ ಹಲಗೇರಿ ಅವರ ಛಾಯಾಗ್ರಹಣ ಈ ಚಿತ್ರಕ್ಕಿದೆ. “ಚಮಕ್’ ಮತ್ತು “ಅಯೋಗ್ಯ’ ಚಿತ್ರಗಳನ್ನು ನಿರ್ಮಿಸಿರುವ ಕ್ರಿಸ್ಟಲ್ ಪಾರ್ಕ್ ಸಿನಿಮಾಸ್ನ ಟಿ.ಆರ್. ಚಂದ್ರಶೇಖರ್ ಈ ಚಿತ್ರವನ್ನೂ ನಿರ್ಮಿಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?
EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ
Vijay Mallya ಹಸ್ತಾಂತರಕ್ಕೆ ಫ್ರಾನ್ಸ್ನೊಂದಿಗೆ ಭಾರತ ಮಾತುಕತೆ
ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್ಕಮ್ ಹೊಟೇಲ್ನಲ್ಲಿ ವ್ಯವಸ್ಥೆ
VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್