ಟ್ವೆಂಟಿ ಒನ್‌ ಅವರ್ಸ್‌: ಥ್ರಿಲ್ಲರ್‌ ಸ್ಟೋರಿಯಲ್ಲಿ ಡಾಲಿ ಧನಂಜಯ್‌


Team Udayavani, May 9, 2022, 3:41 PM IST

ಟ್ವೆಂಟಿ ಒನ್‌ ಅವರ್ಸ್‌: ಥ್ರಿಲ್ಲರ್‌ ಸ್ಟೋರಿಯಲ್ಲಿ ಡಾಲಿ ಧನಂಜಯ್‌

ಡಾಲಿ ಧನಂಜಯ್‌ ನಟನೆಯ ಹೊಸ ಚಿತ್ರವೊಂದು ಸದ್ದಿಲ್ಲದೇ ಬಿಡುಗಡೆ ಹಂತಕ್ಕೆ ಬಂದಿದೆ. ಅದು “ಟ್ವೆಂಟಿ ಒನ್‌ ಅವರ್ಸ್‌’. ಸದ್ದಿಲ್ಲದೇ ಕೊರೊನಾ ಲಾಕ್‌ ಡೌನ್‌ ಗ್ಯಾಪ್‌ನಲ್ಲಿ ಧನಂಜಯ್‌ ಅವರ ” ಟ್ವೆಂಟಿ ಒನ್‌ ಅವರ್ಸ್‌’ ಎಂಬ ಸಸ್ಪೆನ್ಸ್ ಥ್ರಿಲ್ಲರ್‌ ಚಿತ್ರದಲ್ಲಿ ನಟಿಸಿದ್ದಾರೆ.

ಜೈಶಂಕರ್‌ ಪಂಡಿತ್‌ ನಿರ್ದೇಶಿಸಿರುವ ಈ ಚಿತ್ರ ಮೇ 20 ರಂದು ಚಿತ್ರ ಮಂದಿರಕ್ಕೆ ಲಗ್ಗೆ ಇಡುತ್ತಿದೆ. ಚಿತ್ರದ ಟ್ರೇಲರ್‌ ಬಿಡುಗಡೆ ಸಮಾರಂಭ ಇತ್ತೀಚೆಗೆ ನಡೆಯಿತು. ಧನಂಜಯ್‌ ಸೇರಿದಂತೆ ಇಡೀ ಚಿತ್ರತಂಡ ಪತ್ರಿಕಾಗೋಷ್ಠಿಯಲ್ಲಿ ತಮ್ಮ ಅಭಿಪ್ರಾಯ ಹಂಚಿಕೊಂಡರು.

ಚಿತ್ರದ ಬಗ್ಗೆ ಮಾತನಾಡಿದ ಧನಂಜಯ್‌, “ಇತ್ತೀಚೆಗೆ ಈ ಚಿತ್ರದ ಕುರಿತು ಪೋಸ್ಟ್ ಹಾಕಿದಾಗ, ಯಾವ ಗ್ಯಾಪ್‌ ನಲ್ಲಿ ಈ ಸಿನಿಮಾ ಮಾಡಿದ್ದೀರಾ? ಅಂತ ಗೆಳೆಯರು ಕೇಳಿದರು. ಮೊದಲ ಲಾಕ್‌ ಡೌನ್‌ ನಂತರ ಮಾಡಿರುವ ಸಿನಿಮಾ ಇದು. ಮಲಯಾಳಿ ಹುಡುಗಿಯೊಬ್ಬಳು ಬೆಂಗಳೂರಿಗೆ ಬಂದು ಕಾಣೆಯಾಗುತ್ತಾಳೆ. ಆಕೆಯ ಹುಡುಕಾಟದ ಸುತ್ತ ನಡೆಯುವ ಕಥೆಯಿದು. ನಾನು ತನಿಖಾಧಿಕಾರಿ ಪಾತ್ರದಲ್ಲಿ ಅಭಿನಯಿಸಿದ್ದೇನೆ. ಕರ್ನಾಟಕ ಹಾಗೂ ಕೇರಳದಲ್ಲಿ ನಡೆಯುವ ಕಥೆಯಾಗಿರುವುದರಿಂದ ಕನ್ನಡ ಹಾಗೂ ಮಲಯಾಳಂನಲ್ಲಿ ಸಂಭಾಷಣೆ ಇರುತ್ತದೆ. ಆದರೆ ಕರ್ನಾಟಕದಲ್ಲಿ ಈ ಚಿತ್ರ ಪೂರ್ತಿ ಕನ್ನಡದ ಸಂಭಾಷಣೆಯಲ್ಲಿ ಬಿಡುಗಡೆಯಾಗುತ್ತದೆ. ಇಲ್ಲಿ ಬಿಡುಗಡೆಯಾದ ನಂತರ ಕೇರಳದಲ್ಲಿ ತೆರೆ ಕಾಣುತ್ತದೆ. ಒಳ್ಳೆಯ ನಿರ್ದೇಶಕರು, ನಿರ್ಮಾಪಕರು ಹಾಗೂ ತಂತ್ರಜ್ಞರ ತಂಡ. ಬಹಳ ದಿನಗಳ ನಂತರ ಸಸ್ಪೆನ್ಸ್  ಥ್ರಿಲ್ಲರ್‌ ಚಿತ್ರವೊಂದರಲ್ಲಿ ನಟಿಸಿದ್ದೇನೆ’ ಎನ್ನುವುದು ಧನಂಜಯ್‌ ಮಾತು.

ಇದನ್ನೂ ಓದಿ: ಮೇ 13ಕ್ಕೆ “ಸೆಲ್ಫಿ ಮಮ್ಮಿ ಗೂಗಲ್‌ ಡ್ಯಾಡಿ” ರಿಲೀಸ್

“ಇದು ಸಸ್ಪೆನ್ಸ್  ಥ್ರಿಲ್ಲರ್‌ ಚಿತ್ರ. ಇಪ್ಪತ್ತೂಂದು ಗಂಟೆಗಳಲ್ಲಿ ನಡೆಯುವ ವಿಶೇಷ ಕಥೆ ಹೊಂದಿರುವ ಚಿತ್ರವಿದು. ಧನಂಜಯ್‌ ನಿರ್ದೇಶಕರ ನಟ. ಅವರ ಜೊತೆ ಕೆಲಸ ಮಾಡಿದ್ದು ಸಂತೋಷ ತಂದಿದೆ. ದುರ್ಗಾ ಕೃಷ್ಣ, ಸುದೇವ್‌ ನಾಯರ್‌, ರಾಹುಲ್‌ ಮಾಧವ್‌ ಮುಖ್ಯಭೂಮಿಕೆಯಲ್ಲಿದ್ದಾರೆ. ಇಡೀ ತಂಡದ ಶ್ರಮದಿಂದ ಚಿತ್ರ ಚೆನ್ನಾಗಿ ಬಂದಿದೆ’ ಎಂದರು ನಿರ್ದೇಶಕ ಜೈಶಂಕರ್‌ ಪಂಡಿತ್‌.

ಸುದೇವ್‌ ನಾಯರ್‌ ಮಾತನಾಡಿ, “ನಾನು ಈ ಹಿಂದೆ ಓಲ್ಡ್‌ ಮಾಂಕ್‌ ಚಿತ್ರದಲ್ಲಿ ನಟಿಸಿದ್ದೆ. ಈ ಚಿತ್ರದಲ್ಲಿ ಉತ್ತಮ ಪಾತ್ರದಲ್ಲಿ ಅಭಿನಯಿಸಿದ್ದೇನೆ. ಧನಂಜಯ್‌ ಜೊತೆಗೆ ಅಭಿನಯಿಸಿದ್ದು ಖುಷಿಯ ವಿಚಾರ’ ಎಂದರು.

ನಿರ್ಮಾಪಕರಾದ ಬಾಲಕೃಷ್ಣ ಎನ್‌.ಎಸ್‌, ಅಭಿಷೇಕ್‌ ರುದ್ರಮೂರ್ತಿ, ಸುನೀಲ್‌ ಗೌಡ, ಹಾಗೂ ಪ್ರವೀಣ್‌ ಮಹದೇವ್‌ ಸಹ ನಿರ್ಮಾಣದ ಬಗ್ಗೆ ಮಾತನಾಡಿದರು. ರುಪರ್ಟ್‌ ಫ‌ರ್ನಾಂಡಿಸ್‌ ಸಂಗೀತ ನಿರ್ದೇಶನ, ತಿರುನವುಕ್ಕರಸು ಛಾಯಾಗ್ರಹಣ, ರಿಚರ್ಡ್‌ ಕೆವಿನ್‌ ಸಂಕಲನ ಹಾಗೂ ಪ್ರತಾಪ್‌ ಆರ್‌ ಮೆಂಡನ್‌ ಅವರ ಕಲಾ ನಿರ್ದೇಶನವಿರುವ ಈ ಚಿತ್ರಕ್ಕೆ ಸುಕೃತ್‌ ವಿ ಹಾಗೂ ಡಿ.ವಿ.ಬಾಲಸುಬ್ರಹ್ಮಣ್ಯ ಸಂಭಾಷಣೆ ಬರೆದಿದ್ದಾರೆ.

ಟಾಪ್ ನ್ಯೂಸ್

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Actor Dwarakish: ಸಕಲ ಗೌರವಗಳೊಂದಿಗೆ ನಟ ದ್ವಾರಕೀಶ್‌ ಅಂತ್ಯಕ್ರಿಯೆ

Actor Dwarakish: ಸಕಲ ಗೌರವಗಳೊಂದಿಗೆ ನಟ ದ್ವಾರಕೀಶ್‌ ಅಂತ್ಯಕ್ರಿಯೆ

choo mantar kannada movie

Sharan; ಮೇ 10ಕ್ಕೆ ‘ಛೂ ಮಂತರ್‌’ ತೆರೆಗೆ ಸಿದ್ಧ

aditya;s kangaroo movie

Aditya; ಟ್ರೇಲರ್ ನಲ್ಲಿ ‘ಕಾಂಗರೂ’ ದರ್ಶನ; ಮೇ.3ರಂದು ತೆರೆಗೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.