Sandalwood: ಮೊದಲ ಹಂತ ಮುಗಿಸಿದ ಉಡಾಳ
Team Udayavani, Mar 26, 2024, 11:13 AM IST
ಯೋಗರಾಜ್ ಸಿನಿಮಾಸ್ ಹಾಗೂ ರವಿ ಶಾಮನೂರು ಫಿಲಂಸ್ ಲಾಂಛನದಲ್ಲಿ ದಾವಣಗೆರೆಯ ರವಿ ಶಾಮನೂರು ಹಾಗೂ ಯೋಗರಾಜ್ ಭಟ್ ಅವರು ನಿರ್ಮಿಸುತ್ತಿರುವ, ಅಮೋಲ್ ಪಾಟೀಲ್ ನಿರ್ದೇಶನದಲ್ಲಿ ಪೃಥ್ವಿ ಶಾಮನೂರು ನಾಯಕನಾಗಿ ನಟಿಸುತ್ತಿರುವ “ಉಡಾಳ’ ಚಿತ್ರಕ್ಕೆ ಬಿಜಾಪುರದಲ್ಲಿ ಮೊದಲ ಹಂತದ ಚಿತ್ರೀಕರಣ ನಡೆದಿದೆ.
ಚಿತ್ರದ ನಾಯಕ ಪೃಥ್ವಿ ಈ ಚಿತ್ರದಲ್ಲಿ ಗೈಡ್ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. 25 ದಿನಗಳ ಮೊದಲ ಹಂತದ ಚಿತ್ರೀಕರಣದಲ್ಲಿ ಹಾಡು, ನೃತ್ಯ ಹಾಗೂ ಮಾತಿನ ಭಾಗದ ಸನ್ನಿವೇಶಗಳನ್ನು ಚಿತ್ರಿಸಿಕೊಳ್ಳಲಾಗಿದೆ. ಈ ಭಾಗದ ಚಿತ್ರೀಕರಣ ಸಂಪೂರ್ಣ ಬಿಜಾಪುರದಲ್ಲೇ ನಡೆದಿದೆ. ಈಗಾಗಲೇ ಚಿತ್ರದ ಮುಕ್ಕಾಲು ಭಾಗದ ಚಿತ್ರೀಕರಣ ಮುಕ್ತಾಯವಾಗಿದೆ. ಸದ್ಯದಲ್ಲೇ ದ್ವಿತೀಯ ಹಂತದ ಚಿತ್ರೀಕರಣ ಆರಂಭವಾಗಲಿದೆ ಎಂದು ನಿರ್ದೇಶಕ ಅಮೋಲ್ ಪಾಟೀಲ್ ತಿಳಿಸಿದ್ದಾರೆ.
ಉಡಾಳ ಪಕ್ಕಾ ಕಮರ್ಷಿಯಲ್ ಜಾನರ್ ಚಿತ್ರವಾಗಿದೆ. ಲವ್, ಕಾಮಿಡಿ ಸೇರಿದಂತೆ ಎಲ್ಲಾ ಅಂಶಗಳು ಈ ಚಿತ್ರದಲ್ಲಿದೆ. ಯೋಗರಾಜ್ ಭಟ್ ಅವರ ಜೊತೆಗೆ ಸಹ ನಿರ್ದೇಶಕರಾಗಿ ಕಾರ್ಯ ನಿರ್ವಹಿಸುತ್ತಿದ್ದ ಅಮೋಲ್ ಪಾಟೀಲ್ ಈ ಚಿತ್ರದ ಮೂಲಕ ಸ್ವತಂತ್ರ ನಿರ್ದೇಶಕರಾಗಿ ಚಿತ್ರರಂಗ ಪ್ರವೇಶಿಸಿದ್ದಾರೆ, ಅಮೋಲ್ ಪಾಟೀಲ್ ಬಿಜಾಪುರ ಮೂಲದವರು ಎನ್ನುವುದು ಮತ್ತೂಂದು ವಿಶೇಷ.
ತಮ್ಮ ಮೊದಲ ಚಿತ್ರ ಪದವಿಪೂರ್ವದಲ್ಲೇ ಪೃಥ್ವಿ ಶಾಮನೂರು ಪ್ರೇಕ್ಷಕರ ಮನ ಗೆದ್ದಿದ್ದರು. ಪ್ರಸ್ತುತ ಅವರು ನಾಯಕರಾಗಿ ನಟಿಸುತ್ತಿರುವ ಉಡಾಳ ಚಿತ್ರದ ಕುರಿತು ಸಾಕಷ್ಟು ನಿರೀಕ್ಷೆಯಿದೆ. ಪೃಥ್ವಿ ಶಾಮನೂರು ಅವರಿಗೆ ನಾಯಕಿಯಾಗಿ ಹೃತಿಕ ಶ್ರೀನಿವಾಸ್ ನಟಿಸುತ್ತಿದ್ದಾರೆ. ಬಲ ರಾಜವಾಡಿ, ಸುಮಿತ್, ಹರೀಶ್ ಹಿರಿಯೂರು, ಮಾಳು ನಿತ್ನಾಳ್, ಪ್ರವೀಣ್ ಗೋಕಾಕ್, ದಯಾನಂದ್ ಮುಂತಾದವರು ತಾರಾಬಳಗದಲ್ಲಿದ್ದಾರೆ.
ಯೋಗರಾಜ್ ಭಟ್ ಅವರು ಚಿತ್ರದ ಹಾಡುಗಳನ್ನು ರಚಿಸಿದ್ದು, ಚೇತನ್ ಡ್ಯಾವಿ ಸಂಗೀತ ನೀಡಿದ್ದಾರೆ. ಶಿವಶಂಕರ್ ನೂರಂಬಡ ಛಾಯಾಗ್ರಹಣ, ಅರ್ಜುನ್ ರಾಜ್ ಸಾಹಸ ನಿರ್ದೇಶನ ಹಾಗೂ ಮೋಹನ್, ರಘು ಅವರ ನೃತ್ಯ ನಿರ್ದೇಶನ ಉಡಾಳ ಚಿತ್ರಕ್ಕಿದೆ. n
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rakshit Shetty: ʼರಿಚರ್ಡ್ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?
Sandalwood; ಟ್ರೆಂಡ್ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ
Kannada Cinema; ಬ್ಯಾಡ್ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…
ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ
Sandalwood: ಶೈನ್ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್ ಮ್ಯಾರೀಡ್” ಟೈಟಲ್
MUST WATCH
ಹೊಸ ಸೇರ್ಪಡೆ
Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ
Rakshit Shetty: ʼರಿಚರ್ಡ್ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?
Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ