ಯಜಮಾನನ ಕೈಯಲ್ಲಿ ಉದ್ಘರ್ಷ ಟ್ರೇಲರ್‌


Team Udayavani, Mar 7, 2019, 9:56 AM IST

udgarha.jpg

ಏಕಕಾಲಕ್ಕೆ 4 ಭಾಷೆಯ ಟ್ರೇಲರ್‌ ರಿಲೀಸ್‌ ಚಂದನವನದ ಸಸ್ಪೆನ್ಸ್‌ ಚಿತ್ರಗಳ ಮಾಸ್ಟರ್‌ ಸುನೀಲ್‌ ಕುಮಾರ್‌ ದೇಸಾಯಿ ನಿರ್ದೇಶನದ “ಉದ್ಘರ್ಷ’ ಚಿತ್ರದ ಮೊದಲ ಟ್ರೇಲರ್‌ ಅದ್ಧೂರಿಯಾಗಿ ಬಿಡುಗಡೆಯಾಗಿದೆ.

ಇತ್ತೀಚೆಗೆ ತೆರೆಕಂಡ ದರ್ಶನ್‌ ಅಭಿನಯದ “ಯಜಮಾನ’ ಚಿತ್ರದಲ್ಲಿ ಖಳನಾಯಕ ನಾಗಿ ಅಬ್ಬರಿಸಿ ಕನ್ನಡ ಚಿತ್ರ ಪ್ರೇಕ್ಷಕರ ಮನ ಗೆದ್ದಿದ್ದ ನಟ ಅನೂಪ್‌ ಸಿಂಗ್‌ ಠಾಕೂರ್‌ ಚೊಚ್ಚಲ ಬಾರಿಗೆ “ಉದ್ಘರ್ಷ’ ಚಿತ್ರದಲ್ಲಿ ನಾಯಕ ನಟನಾಗಿ ಕಾಣಿಸಿ ಕೊಳ್ಳುತ್ತಿದ್ದಾರೆ. ಹಾಗಾಗಿ ಚಿತ್ರದ ಟ್ರೇಲರ್‌ ರಿಲೀಸ್‌ ಮಾಡಿ, ಶುಭ ಹಾರೈಸಲು ದರ್ಶನ್‌ ಆಗಮಿಸಿದ್ದರು.

ಅಂದು ನಟ ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ಅವರೊಂದಿಗೆ ಹಿರಿಯ ನಿರ್ದೇಶಕ ಎಸ್‌.ವಿ ರಾಜೇಂದ್ರ ಸಿಂಗ್‌ ಬಾಬು, ನಟಿಯರಾದ ಪ್ರೇಮಾ, ಸುಮನ್‌ ನಗರ್‌ ಕರ್‌, ನಟ ಆದಿತ್ಯ, ಲಹರಿ ವೇಲು ಇತರರು ಹಾಜರಿದ್ದು ಚಿತ್ರತಂಡಕ್ಕೆ ಶುಭ ಹಾರೈಸಿದರು.

ಈ ವೇಳೆ ಚಿತ್ರಕ್ಕಾಗಿ ನಾಯಕ ಅನೂಪ್‌ ಸಿಂಗ್‌ ಹಾಕಿರುವ ಪರಿಶ್ರಮವನ್ನು ಮುಕ್ತಕಂಠದಿಂದ ಶ್ಲಾ ಸಿದರು. “ಕನ್ನಡ ಬರದಿದ್ದರೂ, ಅನೂಪ್‌, ತಮ್ಮ ಪಾತ್ರಕ್ಕೆ ಡಬ್ಬಿಂಗ್‌ ಮಾಡಿರುವುದನ್ನು ನೋಡಿದಾಗ ಅವರ ಶ್ರದ್ದೆ ಗೊತ್ತಾಗುತ್ತದೆ.
ತಮ್ಮ ಪಾತ್ರಕ್ಕಾಗಿ ಸಾಕಷ್ಟು ಹೋಮ್‌ವರ್ಕ್‌ ಮಾಡಿದ್ದಾರೆ. ಚಿತ್ರ ಅವರಿಗೆ ದೊಡ್ಡ ಗೆಲುವು ತಂದುಕೊಡಲಿ’ ಎಂದರು.

“”ನಮ್ಮೂರ ಮಂದಾರ ಹೂವೆ’ ಚಿತ್ರದ ಸಂದರ್ಭದಲ್ಲಿ ಲೈಟ್‌ ಬಾಯ್‌ ಆಗಿದ್ದ ನನಗೆ ಪ್ರೀಮಿಯರ್‌ ಶೋಗೆ ಟಿಕೆಟ್‌ ನೀಡಲಾಗಿತ್ತು. ಅಲ್ಲಿಯವರೆಗೂ ಪ್ರೀಮಿಯರ್‌ ಶೋ ಅಂದರೆ ಏನು ಅಂತ ಗೊತ್ತಿರಲಿಲ್ಲ’ ಎಂದು ತಮ್ಮ ಹಿಂದಿನ ದಿನಗಳನ್ನು ದರ್ಶನ್‌ ಮೆಲುಕು ಹಾಕಿದರು. “ಚಿತ್ರಮಂದಿರದಲ್ಲಿ ಪ್ರೇಕ್ಷಕರಿಂದ ಚಿತ್ರಕ್ಕೆ ಚಪ್ಪಾಳೆ, ಶಿಳ್ಳೆ ಸಿಕ್ಕಾಗ ಮಾತ್ರ ನಿರ್ದೇಶಕರ ಶ್ರಮ ನಿಜವಾಗಿಯೂ ಸಾರ್ಥಕವಾಗುತ್ತದೆ. ಚಿತ್ರದ ಟ್ರೇಲರ್‌ ನೋಡಿದಾಗ ಈ ಚಿತ್ರ ಕೂಡ ಅಂತಹ ಚಪ್ಪಾಳೆ-ಶಿಳ್ಳೆ ಗಿಟ್ಟಿಸಿಕೊಳ್ಳುವ ಲಕ್ಷಣ ಕಾಣುತ್ತಿದೆ’ ಎಂದು ದರ್ಶನ್‌ ಅಭಿಪ್ರಾಯಪಟ್ಟರು.

ನಿರ್ದೇಶಕ ಸುನೀಲ್‌ ಕುಮಾರ್‌ ದೇಸಾಯಿ, “ನನ್ನ ಹಿಂದಿನ ಚಿತ್ರಗಳಂತೆ “ಉದ್ಘರ್ಷ’ದಲ್ಲೂ ಕ್ಷಣ  ಕ್ಷಣಕ್ಕೆ ಕೂತೂಹಲ ಮೂಡಿಸುವಂತಹ ವಿಶೇಷ ಸಸ್ಪೆನ್ಸ್‌, ಥ್ರಿಲ್ಲರ್‌, ಆ್ಯಕ್ಷನ್‌ ಸನ್ನಿವೇಶಗಳಿವೆ. ಒಂದು ದಿನದಲ್ಲಿ ನಡೆಯುವ ಘಟನೆಯೊಂದನ್ನು ಈ ಚಿತ್ರದಲ್ಲಿ ಹೇಳುತ್ತಿದ್ದೇವೆ. ನನಗೂ ಇದೊಂದು ಹೊಸ ಅನುಭವ. ಪ್ರೇಕ್ಷಕರಿಗೂ ಹೊಸ ಅನುಭವ ನೀಡಲಿದೆ’ ಎಂಬ ಭರವಸೆ ಕೊಟ್ಟರು ದೇಸಾಯಿ.

ದೇವರಾಜ್‌ ಆರ್‌. ನಿರ್ಮಾಣದ “ಉದ್ಘರ್ಷ’ ಚಿತ್ರದಲ್ಲಿ ನಾಯಕ ಅನೂಪ್‌ ಸಿಂಗ್‌ ಠಾಕೂರ್‌ ಅವರೊಂದಿಗೆ “ಕಬಾಲಿ’ ಖ್ಯಾತಿಯ ಸಾಯಿ ಧನ್ಸಿಕಾ, ತಾನ್ಯಾ ಹೋಪ್‌,ಬಹುಭಾಷಾ ನಟರಾದ ಕಬೀರ್‌ ಸಿಂಗ್‌ ದುಹಾನ್‌, ಪ್ರಭಾಕರ್‌, ಕಿಶೋರ್‌, ಹರ್ಷಿಕಾ ಸೇರಿದಂತೆ ಇತರರು ನಟಿಸಿದ್ದಾರೆ. ಚಿತ್ರಕ್ಕೆ ಬಾಲಿವುಡ್‌ನ‌ ಸಂಜಯ್‌ ಚೌಧರಿ ಸಂಗೀತ ನೀಡಿದ್ದಾರೆ.

ಸದ್ಯ ಬಿಡುಗಡೆಯಾಗಿರುವ “ಉದ್ಘರ್ಷ’ ಚಿತ್ರದ ಟ್ರೇಲರ್‌ ಗೆ ಕಿಚ್ಚ ಸುದೀಪ್‌ ಇಂಗ್ಲೀಷ್‌ನಲ್ಲಿ ಹಿನ್ನೆಲೆ ಧ್ವನಿ ನೀಡಿ¨ªಾರೆ. ಖಳನಟ ಕಬೀರ್‌ ಸಿಂಗ್‌ ಅವರ ಒಂದು ಡೈಲಾಗ್‌ ಬಿಟ್ಟರೆ, ಸಂಪೂರ್ಣ ಟ್ರೇಲರ್‌ ಹಿನ್ನೆಲೆ ಸಂಗೀತ, ಸುದೀಪ್‌ ಹಿನ್ನೆಲೆ ಧ್ವನಿಯಲ್ಲೇ ಸಾಗುತ್ತದೆ. “ಉದ್ಘರ್ಷ’ ಚಿತ್ರ ತಮಿಳಿನಲ್ಲಿ “ಉಚ್ಚಕಟ್ಟಂ’ ಎಂಬ ಹೆಸರಿನಿಂದ ರಿಲೀಸ್‌ ಆಗಲಿದ್ದು, ಉಳಿದಂತೆ ತೆಲುಗು, ಮಲಯಾಳಂನಲ್ಲಿ “ಉದ್ಘರ್ಷ’ ಹೆಸರಿನಿಂದಲೇ ತೆರೆಗೆ ಬರುತ್ತಿದೆ.

ಕನ್ನಡ, ತೆಲುಗು, ತಮಿಳು ಹಾಗೂ ಮಲಯಾಳಂನಲ್ಲಿ ಏಕಕಾಲಕ್ಕೆ ರಿಲೀಸ್‌ ಆಗಿರುವ ಟ್ರೇಲರ್‌ಗೆ ಸೋಷಿಯಲ್‌ ಮೀಡಿಯಾಗಳಲ್ಲಿ ಭಾರೀ ಮೆಚ್ಚುಗೆ ಸಿಗುತ್ತಿದೆ. ಇದೇ ಖುಷಿಯಲ್ಲಿರುವ ಚಿತ್ರ ತಂಡ, ಇದೇ ತಿಂಗಳ ಅಂತ್ಯದಲ್ಲಿ ಚಿತ್ರ ವನ್ನು ನಾಲ್ಕೂ ಭಾಷೆಗಳಲ್ಲೂ ಏಕಕಾಲಕ್ಕೆ ಬಿಡುಗಡೆ ಮಾಡಲು ನಿರ್ಧರಿಸಿದೆ. 

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

nalkane ayama kannada movie

Sandalwood; ‘ನಾಲ್ಕನೇ ಆಯಾಮ’ ಮೇಲೆ ಗೌತಮ್‌ ಕನಸು: ಇಂದು ತೆರೆಗೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.