ಎರಡು ದಶಕ ಬಳಿಕ ಮತ್ತೆ “ಉಪೇಂದ್ರ’
ಮರು ಬಿಡುಗಡೆಗೆ ಉಪೇಂದ್ರ ಸಿನ್ಮಾ ರೆಡಿ
Team Udayavani, Sep 25, 2019, 3:04 AM IST
ಕನ್ನಡದಲ್ಲೀಗ ಚಿತ್ರಗಳ ಮರು ಬಿಡುಗಡೆ ಪರ್ವ. ಹೌದು, ಈಗಾಗಲೇ ಬಿಡುಗಡೆಯಾಗಿ ಪ್ರೇಕ್ಷಕರ ಮನಸ್ಸನ್ನು ಗೆದ್ದ ಹಲವು ಸೂಪರ್ ಹಿಟ್ ಚಿತ್ರಗಳು ಮರು ಬಿಡುಗಡೆಯಾಗಿವೆ. ಈಗಲೂ ಆಗುತ್ತಲೇ ಇವೆ. ಡಾ.ರಾಜಕುಮಾರ್, ಡಾ.ವಿಷ್ಣುವರ್ಧನ್, ಡಾ.ಅಂಬರೀಶ್ ಅವರ ಸಿನಿಮಾಗಳು ಸೇರಿದಂತೆ ಹಲವು ನಾಯಕರ ಚಿತ್ರಗಳು ಮರು ಬಿಡುಗಡೆಯಾಗಿರುವ ಉದಾಹರಣೆಗೇನು ಕಮ್ಮಿ ಇಲ್ಲ. ಈಗ ಉಪೇಂದ್ರ ಅಭಿನಯದ “ಉಪೇಂದ್ರ’ ಸಿನಿಮಾ ಕೂಡ ಬಿಡುಗಡೆಯಾಗುತ್ತಿದೆ.
1999ರಲ್ಲಿ ಬಿಡುಗಡೆಯಾಗಿ ಸೂಪರ್ ಹಿಟ್ ಎನಿಸಿಕೊಂಡಿದ್ದ “ಉಪೇಂದ್ರ’ ಚಿತ್ರ ಉಪೇಂದ್ರ ಅವರ ವೃತ್ತಿಬದುಕಲ್ಲಿ ದೊಡ್ಡ ಬ್ರೇಕ್ ಕೊಟ್ಟ ಚಿತ್ರಗಳಲ್ಲೊಂದು. ಈಗ ಈ ಚಿತ್ರ ಬಿಡುಗಡೆಯಾಗಿ ಎರಡು ದಶಕಗಳು ಕಳೆದು ಹೋಗಿವೆ. ಪುನಃ ಚಿತ್ರವನ್ನು ಬಿಡುಗಡೆ ಮಾಡಲು ನಿರ್ಮಾಪಕರಾದ ಶಿಲ್ಪಾ ಶ್ರೀನಿವಾಸ್ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಎರಡು ದಶಕಗಳ ಹಿಂದೆ ಯಾವುದೇ ಮಲ್ಟಿಪ್ಲೆಕ್ಸ್ ಇರಲಿಲ್ಲ. ಇತ್ತೀಚೆಗೆ ಮರು ಬಿಡುಗಡೆ ಆಗುತ್ತಿರುವ ಚಿತ್ರಗಳಿಗೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿರುವ ಹಿನ್ನೆಲೆಯಲ್ಲಿ ನಿರ್ಮಾಪಕರು, “ಉಪೇಂದ್ರ’ ಚಿತ್ರವನ್ನು ಬಿಡುಗಡೆ ಮಾಡಲು ನಿರ್ಧರಿಸಿದ್ದಾರೆ.
ಸದ್ಯಕ್ಕೆ ಉಪೇಂದ್ರ ಅವರೊಂದಿಗೆ ಮಾತುಕತೆ ನಡೆಸಬೇಕಿದ್ದು, ಈ ಚಿತ್ರ ಮರು ಬಿಡುಗಡೆ ಮಾಡುವುದಾದರೆ, ಹೇಗೆಲ್ಲಾ ಪ್ರಚಾರ ಮಾಡಬೇಕು, ಯಾವಾಗ ಬಿಡುಗಡೆ ಮಾಡಬೇಕು ಎಂಬ ಬಗ್ಗೆ ಯೋಚಿಸಿಲ್ಲವಂತೆ. ಆಗ ಕನ್ನಡ ಮತ್ತು ತೆಲುಗಿನಲ್ಲಿ ತೆರೆಕಂಡಿತ್ತು. ಈಗ ಕನ್ನಡ, ತೆಲುಗು, ತಮಿಳು ಭಾಷೆಯಲ್ಲಿ ಬಿಡುಗಡೆ ಮಾಡಲು ಯೋಚಿಸಿದ್ದಾರೆ ನಿರ್ಮಾಪಕರು. “ಉಪೇಂದ್ರ’ ಚಿತ್ರವನ್ನು ಉಪೇಂದ್ರ ಅವರು ನಿರ್ದೇಶಿಸಿ, ನಟಿಸಿದ್ದರು.
ಅವರಿಗೆ ಪ್ರೇಮ, ದಾಮಿನಿ ಹಾಗು ಬಾಲಿವುಡ್ ನಟಿ ರವೀನಾ ಟಂಡನ್ ಅವರು ನಾಯಕಿಯರಾಗಿ ಕಾಣಿಸಿಕೊಂಡಿದ್ದರು. ಈ ಚಿತ್ರಕ್ಕೆ ಗುರುಕಿರಣ್ ಅವರು ಸಂಗೀತ ನೀಡಿದ್ದರು. ಗುರುಕಿರಣ್ ಕೊಟ್ಟ ಸಂಗೀತದ ಹಾಡುಗಳು ಇಂದಿಗೂ ಗುನುಗುವಂತಿವೆ. ಅದೇನೆ ಇರಲಿ, ಒಂದು ಕಾಲದಲ್ಲಿ ಸಾಕಷ್ಟು ಸುದ್ದಿ ಮಾಡಿದ್ದ “ಉಪೇಂದ್ರ’ ಈಗ ಮತ್ತೆ ಮರು ಬಿಡುಗಡೆಯಾಗುವ ಮೂಲಕ ಇನ್ನಷ್ಟು ಸುದ್ದಿಯಾಗಲು ಸಜ್ಜಾಗುತ್ತಿದೆ ಎಂಬುದೇ ಈ ಹೊತ್ತಿನ ವಿಶೇಷ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು
Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ
Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್ಪೋಸ್ಟ್ಗಳಲ್ಲಿ ತಪಾಸಣೆ
Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್ ಭೇಟಿ; ಆಯೋಗಕ್ಕೆ “ಕೈ’ ದೂರು