ಮತ್ತೆ ಬಂದ ಉಪೇಂದ್ರ


Team Udayavani, Apr 24, 2018, 4:48 PM IST

Upendra-and-R-Chandru-(1).jpg

ಉಪೇಂದ್ರ ಅವರು ಕೆಪಿಜೆಪಿ ಪಕ್ಷ ಸೇರಿದ್ದು, ಈ ಬಾರಿಯ ವಿಧಾನಸಭೆಗೆ ಸ್ಪರ್ಧಿಸುವುದಾಗಿ ಹೇಳಿದ್ದು, ಕೊನೆಗೆ ಆ ಪಕ್ಷದ ಸಂಸ್ಥಾಪಕರೊಂದಿಗೆ ಮುನಿಸಿಕೊಂಡು ಹೊರಬಂದಿದ್ದು ಎಲ್ಲವೂ ನಿಮಗೆ ಗೊತ್ತೇ ಇದೆ. ಈ ನಡುವೆಯೇ ಅವರು “ಪ್ರಜಾಕೀಯ’ ಪಕ್ಷ ಸ್ಥಾಪಿಸಿ, ಚುನಾವಣೆಗೆ ಸ್ಪರ್ಧಿಸುತ್ತಾರೆಂದು ಹೇಳಲಾಗಿತ್ತಾದರೂ, ಅದು ಈ ಬಾರಿ ಸಾಧ್ಯವಾಗಿಲ್ಲ. ಸಹಜವಾಗಿಯೇ ಉಪೇಂದ್ರ ಅವರ ಮುಂದಿನ ನಡೆ ಬಗ್ಗೆ ಕುತೂಹಲ ಅನೇಕರಲ್ಲಿತ್ತು.

ಅನೇಕರು ಉಪೇಂದ್ರ ಮತ್ತೆ ಸಿನಿಮಾದಲ್ಲೇ ಮುಂದುವರೆಯುತ್ತಾರೆಂದು ಲೆಕ್ಕಾಚಾರ ಹಾಕಿದ್ದರು. ಅದರಂತೆ ಈಗ ಉಪೇಂದ್ರ ಹೊಸ ಸಿನಿಮಾ ಒಪ್ಪಿಕೊಂಡಿದ್ದಾರೆ. ಅದು ಆರ್‌.ಚಂದ್ರು ನಿರ್ದೇಶನದ ಸಿನಿಮಾ. ನಿರ್ದೇಶಕ ಆರ್‌.ಚಂದ್ರು ಈ ಹಿಂದೆ “ಐ ಲವ್‌ ಯೂ’ ಎಂಬ ಸಿನಿಮಾ ಮಾಡುವುದಾಗಿ ಹೇಳಿಕೊಂಡಿದ್ದರು. ಆಗ ಸಿನಿಮಾಕ್ಕೆ ನಾಯಕನ ಆಯ್ಕೆಯಾಗಿರಲಿಲ್ಲ. ಈಗ ಆ ಚಿತ್ರದಲ್ಲಿ ಉಪೇಂದ್ರ ನಟಿಸುತ್ತಿರುವ ಸುದ್ದಿ ಬಂದಿದೆ.

ಅಲ್ಲಿಗೆ ಉಪೇಂದ್ರ ಮತ್ತೆ ಬಣ್ಣ ಹಚ್ಚುವುದು ಪಕ್ಕಾ ಆಗಿದೆ. ಚಿತ್ರದ ಟೈಟಲ್‌ ಹೇಳುವಂತೆ ಇದೊಂದು ಔಟ್‌ ಅಂಡ್‌ ಔಟ್‌ ಲವ್‌ಸ್ಟೋರಿ. ಹಾಗಾದರೆ ಉಪೇಂದ್ರ ಈ ಚಿತ್ರದಲ್ಲಿ, ಈ ವಯಸ್ಸಲ್ಲಿ ಲವರ್‌ ಬಾಯ್‌ ಆಗುತ್ತಿದ್ದಾರಾ ಎಂದು ನೀವು ಕೇಳಬಹುದು. ಮೂಲಗಳ ಪ್ರಕಾರ, ಇದು “ಎ’, “ಉಪೇಂದ್ರ’ ಹಾಗೂ “ಪ್ರೀತ್ಸೆ’ ಶೈಲಿಯ ಲವ್‌ಸ್ಟೋರಿಯಾಗಿದ್ದು, ಉಪೇಂದ್ರ ಅವರ ಪಾತ್ರ ಕೂಡಾ ವಿಭಿನ್ನವಾಗಿದೆ ಎನ್ನಲಾಗಿದೆ.

ಈ ಮೂರು ಶೈಲಿಯ ಜೊತೆಗೆ ಚಂದ್ರು ಅವರ ಶೈಲಿ ಇರಲಿದೆ ಎಂದು ಪ್ರತ್ಯೇಕವಾಗಿ ಹೇಳುವ ಅಗತ್ಯವಿಲ್ಲ. ಈ ಚಿತ್ರದಲ್ಲಿ ಉಪೇಂದ್ರ ಅವರ ಗೆಟಪ್‌ ಕೂಡಾ ವಿಭಿನ್ನವಾಗಿರಲಿದೆಯಂತೆ. ಅದಕ್ಕಾಗಿ ಮುಂಬೈ ತಂಡ ಕೂಡಾ ಬರಲಿದೆಯಂತೆ. ಚಿತ್ರದ ಮುಹೂರ್ತ ಮೇ 18 ರಂದು ನಡೆಯಲಿದೆ. ಅಂದಹಾಗೆ, ಈ ಚಿತ್ರ ಕನ್ನಡ ಹಾಗೂ ತೆಲುಗು ಎರಡೂ ಭಾಷೆಯಲ್ಲೂ ತಯರಾಗುತ್ತಿದೆ.

ಈಗಾಗಲೇ ಉಪೇಂದ್ರ ತೆಲುಗಿನಲ್ಲಿ ಹಲವು ಸಿನಿಮಾ ಮಾಡಿದ್ದಾರೆ. ಇನ್ನು, ಆರ್‌.ಚಂದ್ರು ಕೂಡಾ “ಚಾರ್‌ಮಿನಾರ್‌’ ರೀಮೇಕ್‌ ಅನ್ನು ತೆಲುಗಿನಲ್ಲಿ ನಿರ್ದೇಶಿಸಿದ್ದಾರೆ. ಹಾಗಾಗಿ, ಇಬ್ಬರಿಗೂ ತೆಲುಗು ಚಿತ್ರರಂಗ ಹೊಸದಲ್ಲ. ಇನ್ನು, ಆರ್‌.ಚಂದ್ರು ಹಾಗೂ ಉಪೇಂದ್ರ ಈ ಚಿತ್ರದ ಮೂಲಕ ಎರಡನೇ ಬಾರಿಗೆ ಜೊತೆಯಾಗುತ್ತಿದ್ದಾರೆ.

ಈಗಾಗಲೇ ಇವರಿಬ್ಬರ ಕಾಂಬಿನೇಶನ್‌ನಲ್ಲಿ “ಬ್ರಹ್ಮ’ ಎಂಬ ಚಿತ್ರ ಬಂದಿತ್ತು. ಈಗ “ಐ ಲವ್‌ ಯೂ’ ಮೂಲಕ ಮತ್ತೆ ಒಂದಾಗಿದ್ದಾರೆ. ಚಿತ್ರಕ್ಕೆ ನಾಯಕಿ ಸೇರಿದಂತೆ ತಾಂತ್ರಿಕ ವರ್ಗ ಇನ್ನಷ್ಟೇ ಅಂತಿಮವಾಗಬೇಕಿದೆ. ತೆಲುಗು ಚಿತ್ರರಂಗದ ರಾಜ್‌ಪ್ರಭಾಕರ್‌ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಅಂದಹಾಗೆ, ಉಪೇಂದ್ರ ಅವರು ಮತ್ತೆ ಸಿನಿಮಾ ಅನೌನ್ಸ್‌ ಆಗುತ್ತಿದ್ದಂತೆ ಅವರ ಹಳೆಯ ಸಿನಿಮಾಗಳಿಗೂ ಜೀವ ಬರುವ ಸಾಧ್ಯತೆ ಇದೆ.

ಈಗಾಗಲೇ ಉಪೇಂದ್ರ ಜೊತೆ ಸಿನಿಮಾ ಮಾಡುವುದಾಗಿ ಶಶಾಂಕ್‌, ಮಂಜು ಮಾಂಡವ್ಯ, ಗುರುದತ್‌ ಹಾಗೂ ಉದಯ್‌ ಪ್ರಕಾಶ್‌ ಘೋಷಿಸಿಕೊಂಡಿದ್ದರು. ಉಪೇಂದ್ರ ರಾಜಕೀಯ ಪ್ರವೇಶದ ಘೋಷಣೆಯಾಗುತ್ತಿದ್ದಂತೆ ಆ ಸಿನಿಮಾ ಕೆಲಸಗಳು ಕೂಡಾ ಸ್ಥಗಿತಗೊಂಡಿದ್ದವು. ಈಗ ಉಪೇಂದ್ರ ಮತ್ತೆ ನಟಿಸುವುದಕ್ಕೆ ಶುರು ಮಾಡಿರುವುದರಿಂದ, ಆ ಚಿತ್ರಗಳು ಸೆಟ್ಟೇರಿದರೂ ಆಶ್ಚರ್ಯವಿಲ್ಲ.

ಟಾಪ್ ನ್ಯೂಸ್

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.