ನಾನು ನಿರ್ದೇಶಕನಾಗಿದ್ದಾಗ ಬಹಳ ಸ್ಟ್ರಾಂಗ್‌ ಆಗಿ ಇರುತ್ತೇನೆ..: ಉಪೇಂದ್ರ


Team Udayavani, Jun 4, 2022, 9:26 AM IST

ನಾನು ನಿರ್ದೇಶಕನಾಗಿದ್ದಾಗ ಬಹಳ ಸ್ಟ್ರಾಂಗ್‌ ಆಗಿ ಇರುತ್ತೇನೆ..: ಉಪೇಂದ್ರ

ಶುಕ್ರವಾರ ಬೆಳಗ್ಗೆಯಿಂದಲೇ ನಗರದ ಬಂಡೆ ಮಹಾಕಾಳಿ ದೇವಸ್ಥಾನದ ರಸ್ತೆ ಜನರಿಂದ ಕಿಕ್ಕಿರಿದಿತ್ತು. ರಸ್ತೆಯ ಎರಡೂ ಬದಿ ವಾಹನಗಳಾದರೆ, ರಸ್ತೆ ಮಧ್ಯೆಯೇ ಕುತೂಹಲದ ಕಂಗಳೊಂದಿಗೆ ಎದುರು ನೋಡುತ್ತಿದ್ದ ಅಭಿಮಾನಿಗಳು. ಉಪೇಂದ್ರ, ಶಿವರಾಜ್‌ಕುಮಾರ್‌, ಸುದೀಪ್‌, ವಿಜಯ್‌, ಡಾಲಿ ಧನಂಜಯ್‌… ಹೀಗೆ ಎಲ್ಲಾ ನಟರ ಅಭಿಮಾನಿಗಳು ಅಲ್ಲಿ ಜೊತೆಯಾಗಿದ್ದರು. ಇದಕ್ಕೆ ಕಾರಣವಾಗಿದ್ದು, ಉಪೇಂದ್ರ ನಟನೆ, ನಿರ್ದೇಶನದ ಚಿತ್ರ.

“ಯು-ಐ’ ಚಿಹ್ನೆಯನ್ನಿಟ್ಟುಕೊಂಡು ಉಪ್ಪಿ ಏಳು ವರ್ಷಗಳ ಬಳಿಕ ನಿರ್ದೇಶನ ಮಾಡುತ್ತಿರುವ ಚಿತ್ರದ ಮುಹೂರ್ತ ಶುಕ್ರವಾರ ಬಂಡೆ ಮಹಾಕಾಳಿ ದೇವಸ್ಥಾನದಲ್ಲಿ ನಡೆಯಿತು. ಉಪ್ಪಿ ಸಿನಿಮಾಕ್ಕೆ ಹಾರೈಸಲು ಶಿವರಾಜ್‌ಕುಮಾರ್‌, ಸುದೀಪ್‌, ವಿಜಯ್‌, ಡಾಲಿ ಧನಂಜಯ್‌ ಸೇರಿದಂತೆ ಚಿತ್ರರಂಗದ ಅನೇಕರು ಆಗಮಿಸಿದ್ದರಿಂದ ದೇವಸ್ಥಾನದ ಮುಂದೆ ಜಾತ್ರೆ ಸಂಭ್ರಮವೇ ಮರುಕಳಿಸಿದಂತಿತ್ತು.

ಎಲ್ಲಾ ಓಕೆ, “ಯು-ಐ’ ಸಿಂಬಲ್‌ನಲ್ಲಿ ಉಪೇಂದ್ರ ಏನು ಹೇಳಲು ಹೊರಟಿದ್ದಾರೆ ಎಂದು ನೀವು ಕೇಳಬಹುದು. ಈ ಬಾರಿಯೂ ಉಪ್ಪಿ ಈ ಪ್ರಶ್ನೆಗೆ ಬುದ್ಧಿವಂತಿಕೆಯ ಉತ್ತರ ನೀಡಿದ್ದಾರೆ. ಎಲ್ಲವನ್ನು ನೋಡುಗನ ದೃಷ್ಟಿಕೋನಕ್ಕೆ ಬಿಟ್ಟಿದ್ದಾರೆ.

“ಸಿನಿಮಾ ದೃಶ್ಯ ಮಾಧ್ಯಮ. ದೃಶ್ಯ ನೋಡಿ ಕಲ್ಪನೆ ಮಾಡಿಕೊಳ್ಳಬೇಕು. ಒಬ್ಬ ಚಿತ್ರ ಕಲಾವಿದ ಒಂದು ಚಿತ್ರ ಬರೆಯುತ್ತಾನೆ. ಅದನ್ನು ಅವನೇ ಚೆನ್ನಾಗಿದೆ ಎಂದರೆ ಚೆನ್ನಾಗಿರುತ್ತದಾ… ನೀವು ನೋಡಿ ಹೇಳಿದ್ರೆ ಅದಕ್ಕೊಂದು ಬೆಲೆ ಇರುತ್ತದೆ’ ಎಂಬ ಜಾಣ್ಮೆಯ ಉತ್ತರ ಉಪೇಂದ್ರ ಅವರದು.

ಇನ್ನು, ಉಪ್ಪಿ ನಿರ್ದೇಶನ ಮಾಡುತ್ತಾರೆ ಎಂದಾಗ ಪ್ರತಿ ಬಾರಿ ಕೇಳಿಬರುವ ಒಂದು ಮಾತೆಂದರೆ, ಪ್ರೇಕ್ಷಕರನ್ನು ಕನ್‌ಫ್ಯೂಸ್‌ ಮಾಡುತ್ತಾರೆ ಎಂದು. ಈ ಪ್ರಶ್ನೆಗೂ ಉಪೇಂದ್ರ ಉತ್ತರಿಸಿದ್ದಾರೆ. “ನಾನು ಸಿನಿಮಾ ಮಾಡೋದು ಕನ್ವಿನ್ಸ್‌ ಮಾಡೋಕೆ. ಆದರೆ, ಅನೇಕರು ನಾನು ಕನ್‌ಫ್ಯೂಸ್‌ ಮಾಡುತ್ತೇನೆ ಎಂದುಕೊಳ್ಳುತ್ತಾರೆ. ಈಗ ಸತ್ಯನೇ ಗೊಂದಲವಾಗಿದೆ. ಅದು ನನ್ನ ತಪ್ಪಲ್ಲ. ಕನ್ವಿನ್ಸ್‌ ಆಗುವವರಿಗೆ ಕನ್ವಿನ್ಸ್‌ ಮಾಡುತ್ತೇನೆ. ಕನ್‌ಫ್ಯೂಸ್‌ ಆಗುವವರು ಹಾಗೇ ಇರುತ್ತಾರೆ. ಅದಕ್ಕೆ ನಾನು ಹೊಣೆಯಲ್ಲ’ ಎಂದು ಖಡಕ್‌ ಉತ್ತರ ನೀಡುತ್ತಾರೆ ಉಪೇಂದ್ರ.

ಉಪೇಂದ್ರ ಅವರ ನಿರ್ದೇಶನದಲ್ಲಿ ಮೂಡಿಬರುವ ವಿಭಿನ್ನ ಕಾನ್ಸೆಪ್ಟ್ಗಳನ್ನು ನೋಡಿದವರು, “ನಿಮ್ಮ ತಲೆ ಸ್ಪೆಷಲ್‌ ಆಗಿ ಓಡುತ್ತದೆ, ಹೇಗೆ’ ಎಂದು ಹೊಗಳುತ್ತಾರಂತೆ. ಇದಕ್ಕೆ ಉಪ್ಪಿ ಹೇಳುವುದು ಹೀಗೆ, ” ದೇವರಾಣೆ ಏನೂ ಓಡುವುದಿಲ್ಲ. ನಾನು ತಲೆಯನ್ನು ಖಾಲಿ ಇಟ್ಟುಕೊಳ್ಳುತ್ತೀನಿ. ಖಾಲಿ ಇಟ್ಟುಕೊಂಡರೆ ಏನೇನೋ ಐಡಿಯಾಗಳು ಬರುತ್ತವೆ. ಆದರೆ ನಾವು ನಾವು ಖಾಲಿ ಇಟ್ಟುಕೊಳ್ಳುವುದಿಲ್ಲ. ಏನೇನೋ ವಿಷಯಗಳನ್ನು ತುಂಬುಕೊಳ್ಳುವ ಪ್ರಯತ್ನ ಮಾಡುತ್ತಲೇ ಇರುತ್ತೇವೆ’ ಎನ್ನುವುದು ಉಪ್ಪಿ ಮಾತು.

ಇದನ್ನೂ ಓದಿ:ಇಂದು ಫ್ರೆಂಚ್‌ ಓಪನ್‌ ವನಿತಾ ಫೈನಲ್‌: ಪ್ರಶಸ್ತಿ ರೇಸ್‌ನಲ್ಲಿ ಸ್ವಿಯಾಟೆಕ್‌-ಗಾಫ್

ನಟರಾಗಿ ತುಂಬಾ ಜಾಲಿಯಾಗಿ, ನಿರ್ದೇಶಕರ ಕನಸಿಗೆ ಜೀವ ತುಂಬುವ ಸ್ಟಾರ್‌ ಆಗಿರುವ ಉಪೇಂದ್ರ, ನಿರ್ದೇಶಕರಾಗಿ ಹೇಗೆ ಎಂಬ ಕುತೂಹಲ ಸಹಜ. ಇದಕ್ಕೆ ಉಪ್ಪಿ ನೇರವಾಗಿ ಉತ್ತರಿಸಿದ್ದಾರೆ. “ಇಡೀ ಚಿತ್ರ ನಿರ್ದೇಶಕರ ಸ್ಟೈಲ್‌ನಲ್ಲಿರುತ್ತದೆ. ನಾನು ನಿರ್ದೇಶಕನಾಗಿದ್ದಾಗ ಬಹಳ ಸ್ಟ್ರಾಂಗ್‌ ಆಗಿ ಇರುತ್ತೇನೆ. ತುಂಬಾ ಕಮಾಂಡಿಂಗ್‌ ಆಗಿ ಇರುತ್ತೇನೆ. ಟ್ರೂಥ್‌ಫ‌ುಲ್‌ ಆಗಿರುತ್ತೇನೆ. ಕಲಾವಿದನಾಗಿದ್ದಾಗ ಬೇರೆ. ನನಗೆ ಬಂದು ಕಥೆ ಹೇಳುತ್ತಾರೆ, ನಾನು ಅವರನ್ನು ನಂಬುತ್ತೇನೆ. ಹೇಳಿದಂತೆ ಮಾಡಲಿಲ್ಲ ಅಂದಾಗಲೂ ಬೇಸರ ನುಂಗಿಕೊಂಡು ಸುಮ್ಮನಿರುತ್ತೇನೆ. ಒಬ್ಬ ನಿರ್ದೇಶಕನಾಗಿದ್ದಾಗ, ನಾನು ಏನು ಅಂದು ಕೊಂಡಿದ್ದೇನೋ ಅದನ್ನೇ ಮಾಡುತ್ತೇನೆ. ಅದಕ್ಕೇ ಜನ ನನ್ನ ಬಗ್ಗೆ ಅಷ್ಟು ನಂಬಿಕೆ ಇಟ್ಟಿರುತ್ತಾರೆ. ನಾನು ಅದನ್ನು ಕಳೆದುಕೊಳ್ಳುವುದಕ್ಕೆ ಇಷ್ಟಪಡುವುದಿಲ್ಲ. ಹೀಗಿದ್ದರೆ ಸಿನಿಮಾ ಮಾಡೋಣ. ಇಲ್ಲವಾದರೆ ಬೇಡ ಎಂದು ಮೊದಲೇ ಹೇಳಿಬಿಡುತ್ತೇನೆ. ಆಗ ಎಲ್ಲರಿಗೂ ಒಳ್ಳೆಯದು. ಪ್ರಾಮಾಣಿಕವಾಗಿರುವುದಕ್ಕಿಂತ ಇನ್ನೊಂದು ಯಶಸ್ಸು ಇಲ್ಲ’ ಎನ್ನುವುದು ಉಪ್ಪಿ ನುಡಿ.

ಅಂದಹಾಗೆ, ಉಪೇಂದ್ರ ಈ ಕಥೆಯನ್ನು 15-20 ವರ್ಷಗಳ ಹಿಂದೆಯೇ ಮಾಡಿಟ್ಟುಕೊಂಡಿದ್ದರಂತೆ. ಈ ಬಗ್ಗೆ ಮಾತನಾಡುವ ಅವರು, “ಈ ಕಥೆ ನಾನು ಮಾಡಿದ್ದು 15-20 ವರ್ಷಗಳ ಹಿಂದೆ. ಒಂದು ಲೈನ್‌ ಇಟ್ಟುಕೊಂಡಿದ್ದೆ. ಕೆಲವೊಮ್ಮೆ ಎಷ್ಟು ಅಂದುಕೊಂಡರೂ ಆಗುವುದಿಲ್ಲ. ಕೆಲವೊಮ್ಮೆ ಬೇಡ ಎಂದರೂ ಆಗಿಬಿಡುತ್ತದೆ. ಈ ಕಥೆ ನಾನು ಎಷ್ಟು ಜನರಿಗೆ ಹೇಳಿದ್ದೇನೆ ಎಂದರೆ, ಇದು ನಂದು ಅಂತ ಯಾರು ಬರುತ್ತಾರೋ ಗೊತ್ತಿಲ್ಲ. ಆದರೆ, ಅವರಿಗೆ ಗೊತ್ತಿಲ್ಲ, ನಿನ್ನೆ ಹೇಳಿರುವುದು, ನಾಳೆ ಬದಲಾಗುತ್ತದೆ ಎಂದು’ ಎನ್ನುವುದು ಉಪೇಂದ್ರ ಮಾತು.

ಉಪೇಂದ್ರ ನಿರ್ದೇಶನದ ಚಿತ್ರವನ್ನು ಲಹರಿ ಸಂಸ್ಥೆಯ ಮನೋಹರನ್‌ ಹಾಗೂ ಕೆ.ಪಿ. ಶ್ರೀಕಾಂತ್‌ ನಿರ್ಮಿಸುತ್ತಿದ್ದಾರೆ.

ಟಾಪ್ ನ್ಯೂಸ್

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾಶ್ರೀ: ಮೇ 27ರವರೆಗೆ ನ್ಯಾಯಾಂಗ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.