ಉತ್ತಮ ಸಮಾಜಕ್ಕಾಗಿ “ಉಪ್ಪಿ’ ಪ್ರಣಾಳಿಕೆ: ಟ್ವೀಟ್
Team Udayavani, Dec 15, 2018, 4:41 PM IST
ಸ್ಯಾಂಡಲ್ವುಡ್ನ ರಿಯಲ್ ಸ್ಟಾರ್, ನಟ, ನಿರ್ದೇಶಕ, ಹಾಗೂ ಪ್ರಜಾಕೀಯ ಪಕ್ಷದ ಸಂಸ್ಥಾಪಕ ಉಪೇಂದ್ರ ಇದೀಗ ತಮ್ಮ ಪಕ್ಷದ ಸಂಘಟನೆಯಲ್ಲಿ ತೊಡಗಿದ್ದು, ಶುಕ್ರವಾರ ತಮ್ಮ ಟ್ವೀಟರ್ ಖಾತೆಯಲ್ಲಿ ಸಂಭಾವ್ಯ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ್ದಾರೆ. ಅಲ್ಲದೇ ಈ ಪ್ರಣಾಳಿಕೆಯ ಬಗ್ಗೆ ಅನಿಸಿಕೆ ತಿಳಿಸುವಂತೆ ಹಾಗೂ ಅದನ್ನು ಶೇರ್ ಮಾಡುವಂತೆ ಮನವಿ ಕೂಡಾ ಮಾಡಿದ್ದಾರೆ.
ಹೌದು, ಉಪೇಂದ್ರ ಇದೀಗ ನಟನೆಯಿಂದ ಕೊಂಚ ಬ್ರೇಕ್ ಪಡೆದಿದ್ದು, ಪಕ್ಷದ ಸಂಘಟನೆಯಲ್ಲಿ ಸಕ್ರಿಯರಾಗಿದ್ದಾರೆ. ಈ ಹಿಂದೆ ಉಪೇಂದ್ರ “ಕೆಪಿಜೆಪಿ’ ಪಕ್ಷದ ಮೂಲಕ ರಾಜ್ಯದಲ್ಲಿ ಸಾಕಷ್ಟು ನಿರೀಕ್ಷೆಗಳನ್ನು ಹುಟ್ಟುಹಾಕಿದ್ದರು. ಬಳಿಕ ಭಿನ್ನಾಭಿಪ್ರಾಯದಿಂದ ಪಕ್ಷ ತೊರೆದು “ಯುಪಿಪಿ’ (ಉತ್ತಮ ಪ್ರಜಾಕೀಯ ಪಾರ್ಟಿ) ಪಕ್ಷ ಸ್ಥಾಪಿಸಿದ್ದು, ಈಗ ಪಕ್ಷ ಸಂಘಟನೆಗಾಗಿ ಪ್ರಣಾಳಿಕೆಯನ್ನು ಟ್ವೀಟರ್ ನಲ್ಲಿ ಬಿಡುಗಡೆ ಮಾಡಿದ್ದಾರೆ.
— Upendra (@nimmaupendra) December 13, 2018
* ನಮ್ಮದು ಪಾರದರ್ಶಕ, ಸರಳ, ಪ್ರಜೆಗಳನ್ನೊಳಗೊಂಡ ಆಡಳಿತ.
* ದೂರುಗಳನ್ನ ಸಲ್ಲಿಸಿಲು ಪ್ರಜೆಗಳಿಗಾಗಿ ಮೊಬೈಲ್ ಅಪ್ಲಿಕೇಶನ್.
* ಪ್ರಜೆಗಳ ನೇರ ಸಂಪರ್ಕಕ್ಕಾಗಿ, ಸರ್ಕಾರದಿಂದ ಸರ್ಕಾರದ್ದೇ ಆದ ಟೆಲಿವಿಷನ್ ಚಾನಲ್ ಆರಂಭ.
* ಸರ್ಕಾರಿ ಕಚೇರಿಗಳಲ್ಲಿ ಬಯೋಮೆಟ್ರಿಕ್ ಕಡ್ಡಾಯ.
* ಕಡ್ಡಾಯವಾಗಿ ಸರ್ಕಾರಿ ನೌಕರರರು ಏಕರೂಪದ ಸಮವಸ್ತ್ರ ಧರಿಸುತ್ತಾರೆ.
* ಪ್ರತಿಯೊಂದು ಸರ್ಕಾರಿ ಯೋಜನೆಗಳು ಮತ್ತು ಟೆಂಡರ್ಗಳ ಪ್ರಕಿಯೆ ಸಂಪೂರ್ಣ ಆನ್ಲೈನ್ನಲ್ಲೇ ಚರ್ಚೆ ಮತ್ತು ನಿರ್ಧಾರಗಳನ್ನು ಕೈಗೊಳ್ಳಲಾಗುತ್ತದೆ.
* ವಿಧಾನಸೌಧದಲ್ಲಿ ನಡೆಯುವಂತಹ ಪ್ರತಿಯೊಂದು ಚಟುವಟಿಕೆಗಳಿಗೆ ದಾಖಲೆ, ಪುರಾವೆ ಮತ್ತು ದೃಶ್ಯ ಮಾಧ್ಯಮಗಳು ಸಾಕ್ಷಿ.
* ಸಚಿವರು, ಶಾಸಕರು, ಕಾರ್ಪೊರೇಟರ್ಗಳು, ಹಾಗೂ ಎಲ್ಲಾ ಸರ್ಕಾರಿ ಅಧಿಕಾರಿಗಳು ಯೋಜನೆಗಳ ಅಧಿಕೃತ ದಾಖಲೆ ಪುರಾವೆಗಳೊಂದಿಗೆ ಅಧಿವೇಶನದಲ್ಲಿ ಭಾಗವಹಿಸಬೇಕು. ಎಲ್ಲಾ ಪ್ರಕಿಯೆಗಳನ್ನು ಕಡ್ಡಾಯವಾಗಿ ನೇರ ಪ್ರಸಾರದಲ್ಲಿ ಟಿ.ವಿ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಬಿತ್ತರಿಸಬೇಕು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು
Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ
ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ