Tapasvi; ಮಹಿಳಾ ಪ್ರಧಾನ ಚಿತ್ರದಲ್ಲಿ ಪ್ರೊಫೆಸರ್ ಆದ ರವಿಚಂದ್ರನ್
Team Udayavani, Mar 21, 2024, 6:27 PM IST
ಮಹಿಳಾ ಪ್ರಧಾನ ಕಥಾಹಂದರ ಹೊಂದಿರುವ “ತಪಸ್ವಿ’ ಸಿನಿಮಾದ ಕೆಲಸಗಳು ಭರದಿಂದ ನಡೆಯುತ್ತಿದ್ದು, ಇದೀಗ ಈ ಸಿನಿಮಾದ ಪ್ರಮುಖ ಪಾತ್ರವೊಂದಕ್ಕೆ ನಟ ರವಿಚಂದ್ರನ್ ಎಂಟ್ರಿಯಾಗಿದ್ದಾರೆ. “ಬೆಂಗಳೂರು ಮೂವೀಸ್’ ಲಾಂಛನದಲ್ಲಿ ಮೂಡಿ ಬರುತ್ತಿರುವ ಈ ಸಿನಿಮಾಕ್ಕೆ ಸ್ಪೆನ್ಸರ್ ಮ್ಯಾಥ್ಯೂ ಕಥೆ ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿದ್ದು, ರವಿ ಚಂದ್ರನ್ ಇತ್ತೀಚೆಗೆ ಈ ಸಿನಿಮಾತಂಡವನ್ನು ಸೇರಿಕೊಂಡಿದ್ದಾರೆ.
ಇನ್ನು “ತಪಸ್ವಿ’ ಸಿನಿಮಾ ಬಗ್ಗೆ ಮಾಹಿತಿ ಹಂಚಿಕೊಂಡ ರವಿಚಂದ್ರನ್, “ಇದೊಂದು ಮಹಿಳಾ ಪ್ರಧಾನ ಸಿನಿಮಾ. ಈಗಾಗಲೇ ಈ ಸಿನಿಮಾದ ಬಹುತೇಕ ಶೂಟಿಂಗ್ ಮಾಡಿ ಮುಗಿಸಿದ್ದಾರೆ. ನನ್ನ ಭಾಗದ ಚಿತ್ರೀಕರಣವಷ್ಟೇ ಬಾಕಿ ಇದೆ. ಅದನ್ನು ಆರೇಳು ತಿಂಗಳಿನಿಂದ ಈ ಪಾತ್ರವನ್ನು ನೀವೇ ಮಾಡಬೇಕು ಎಂಬ ಹಠ ಅವರದ್ದು. ನಿರ್ದೇಶಕ ಮ್ಯಾಥ್ಯೂ ನನಗೆ ಆತ್ಮೀಯರಾಗಿದ್ದು, ಅವರ ಒತ್ತಾಯದ ಮೇರೆಗೆ ಈ ಸಿನಿಮಾ ಮಾಡಲು ಒಪ್ಪಿಕೊಂಡೆ. ಒಂದು ಸಾಮಾಜಿಕ ಸಂದೇಶ ಸಾರುವಂಥ, ತೂಕವಾದ ಪಾತ್ರವಾಗಿದ್ದು ಇಡೀ ಸಿನಿಮಾಗೆ ನ್ಯಾಯ ಒದಗಿಸಲು ನನ್ನ ಸೆಲೆಕ್ಟ್ ಮಾಡಿದ್ದಾರೆ’ ಎಂದಿದ್ದಾರೆ.
ನಿರ್ದೇಶಕ ಸ್ಪೆನ್ಸರ್ ಮ್ಯಾಥ್ಯೂ ಮಾತನಾಡಿ, “ಈ ಸಿನಿಮಾದಲ್ಲಿ ಸ್ಟ್ರಾಂಗ್ ಮೆಸೇಜ್ ಇದೆ. ಜನರಿಗೆ ಅದು ತಲುಪಬೇಕು ಎಂದರೆ ಅದು ರವಿಚಂದ್ರನ್ ಅವರಿಂದ ಮಾತ್ರ ಎಂಬುದು ನಮ್ಮ ಭಾವನೆ. ಹಾಗಾಗಿ ಈ ಸಿನಿಮಾಕ್ಕೆ ಅವರನ್ನೇ ಆಯ್ಕೆ ಮಾಡಿಕೊಂಡಿದ್ದೇವೆ. ಇದೊಂದು ನೈಜ ಘಟನೆಯಾಧಾರಿತ ಮಹಿಳಾ ಪ್ರಧಾನ ಸಿನಿಮಾವಾಗಿದ್ದು, ಇದರಲ್ಲಿ ರವಿಚಂದ್ರನ್ ಪ್ರೊಫೆಸರ್ ಪಾತ್ರದಲ್ಲಿ ನಟಿಸುತ್ತಿದ್ದಾರೆ’ ಎಂದರು.
ಇನ್ನು “ತಪಸ್ವಿ’ ಸಿನಿಮಾದಲ್ಲಿ ಅಮ್ಮಯ್ರ ಗೋಸ್ವಾಮಿ ನಾಯಕಿಯಾಗಿ ಬಣ್ಣ ಹಚ್ಚಿದ್ದಾರೆ. ಉಳಿದಂತೆ ವಿನಯ ಪ್ರಸಾದ್, ಪ್ರಜ್ವಲ್, ಸಚಿನ್, ಅನುಷ ಕಿಣಿ, ಭಾಸ್ಕರ್ ಮುಂತಾದವರು ಸಿನಿಮಾದ ಇತರ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸುತ್ತಿದ್ದಾರೆ. ಬೆಂಗಳೂರು ಸುತ್ತಮುತ್ತ “ತಪಸ್ಸಿ’ ಸಿನಿಮಾದ ಶೂಟಿಂಗ್ ಭರದಿಂದ ಸಾಗುತ್ತಿದ್ದು, ಇದೇ ವರ್ಷಾಂತ್ಯಕ್ಕೆ ಸಿನಿಮಾ ತೆರೆಗೆ ಬರುವ ಸಾಧ್ಯತೆಯಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ
Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.