“ಬಹುಕೃತ ವೇಷಂ’ನಲ್ಲಿ ವೈಷ್ಣವಿ ಹೊಸ ವೇಷ


Team Udayavani, Mar 17, 2020, 7:05 AM IST

vishnavi

ಈಗಾಗಲೇ ಕಿರುತೆರೆಯ ಪ್ರೇಕ್ಷಕರಿಗೆ ಅತ್ಯಂತ ಚಿರಪರಿಚಿತವಾಗಿರುವ ನಟಿ ವೈಷ್ಣವಿ ಗೌಡ ಈಗ ನಿಧಾನವಾಗಿ ಹಿರಿತೆರೆಯತ್ತಲೂ ಒಂದು ಚಿತ್ತ ಹರಿಸಿದ್ದಾರೆ. ಕಳೆದ ವರ್ಷ ವೈಷ್ಣವಿ ನಾಯಕಿಯಾಗಿ ನಟಿಸಿದ್ದ ಚೊಚ್ಚಲ ಚಿತ್ರ “ಗಿರ್‌ಗಿಟ್ಲೆ’ ಬಿಡುಗಡೆಯಾಗಿದ್ದು, ಅನೇಕರಿಗೆ ಗೊತ್ತಿರಬಹುದು. ಈ ಚಿತ್ರ ಬಾಕ್ಸಾಫೀಸ್‌ನಲ್ಲಿ ದೊಡ್ಡ ಮಟ್ಟಕ್ಕೆ ಹಿಟ್‌ ಆಗದಿದ್ದರೂ, ಚಿತ್ರಕ್ಕೆ ಪ್ರೇಕ್ಷಕರು ಮತ್ತು ವಿಮರ್ಶಕರಿಂದ ಉತ್ತಮ ಪ್ರಶಂಸೆ ವ್ಯಕ್ತವಾಗಿತ್ತು.

ಈ ವರ್ಷ ವೈಷ್ಣವಿ ಸದ್ದಿಲ್ಲದೆ ತಮ್ಮ ಎರಡನೇ ಚಿತ್ರದ ಮೂಲಕ ಮತ್ತೆ ಪ್ರೇಕ್ಷಕರ ಮುಂದೆ ಬರುವ ತಯಾರಿ ನಡೆಸುತ್ತಿದ್ದಾರೆ. ಅಂದಹಾಗೆ, ಆ ಚಿತ್ರದ ಹೆಸರು “ಬಹುಕೃತ ವೇಷಂ’. ಈಗಾಗಲೇ “ಗಿರ್‌ಗಿಟ್ಲೆ’ ಚಿತ್ರದ ಮೂಲಕ ಬಿಗ್‌ ಸ್ಕ್ರೀನ್‌ನಲ್ಲೂ ಅಭಿನಯಿಸಿ ಸೈ ಎನಿಸಿಕೊಂಡಿರುವ ವೈಷ್ಣವಿ, ಸದ್ಯ ತಮ್ಮ ಎರಡನೇ ಚಿತ್ರ “ಬಹುಕೃತ ವೇಷಂ’ನಲ್ಲಿ ಮತ್ತೂಂದು ವಿಭಿನ್ನ ಪಾತ್ರದ ಮೂಲಕ ತೆರೆಮೇಲೆ ಬರುವ ಯೋಚನೆಯಲ್ಲಿದ್ದಾರೆ.

ಈ ಚಿತ್ರದಲ್ಲಿ ವೈಷ್ಣವಿ ಮಧ್ಯಮ ಕುಟುಂಬ ಹುಡುಗಿಯ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರಂತೆ. ಈಗಾಗಲೇ ಈ ಚಿತ್ರದ ಚಿತ್ರೀಕರಣ ಆರಂಭವಾಗಿದ್ದು, ಕೆಲ ದಿನಗಳ ಕಾಲ ಚಿತ್ರದ ಚಿತ್ರೀಕರಣ ಕೂಡ ನಡೆದಿದೆ. ಎಲ್ಲಾ ಅಂದುಕೊಂಡಂತೆ ನಡೆದರೆ, ಈ ವರ್ಷದ ಕೊನೆಯೊಳಗೆ ವೈಷ್ಣವಿ ಗೌಡ “ಬಹುಕೃತ ವೇಷಂ’ ಚಿತ್ರದ ಮೂಲಕ ಸಿನಿ ಪ್ರಿಯರ ಮುಂದೆ ಬರೋದು ಬಹುತೇಕ ಪಕ್ಕಾ ಎನ್ನಲಾಗುತ್ತಿದೆ.

ತಮ್ಮ ಎರಡನೇ ಚಿತ್ರ “ಬಹುಕೃತ ವೇಷಂ’ ಪಾತ್ರದ ಬಗ್ಗೆ ಮಾತನಾಡುವ ವೈಷ್ಣವಿ ಗೌಡ, “ಇದೊಂದು ಬಹುತೇಕ ಹೊಸಬರ ಟೀಮ್‌ನಲ್ಲಿ ಆಗುತ್ತಿರುವ ಸಿನಿಮಾ. ಈ ಸಿನಿಮಾದಲ್ಲಿ ನನ್ನ ಪಾತ್ರದ ಹೆಸರು ನಕ್ಷತ್ರಾ ಅಂಥ. ಮಧ್ಯಮ ವರ್ಗದ ಒಳ್ಳೆಯ ಕುಟುಂಬದ ಹುಡುಗಿಯೊಬ್ಬಳ ಜೀವನದಲ್ಲಿ ಬರುವ ಕೆಲವು ತಿರುವುಗಳು, ಕೆಲ ಘಟನೆಗಳು ಆಕೆಯನ್ನು ಎಲ್ಲಿಗೆ ಕರೆದುಕೊಂಡು ಹೋಗುತ್ತದೆ ಅನ್ನೋದೆ ಸಿನಿಮಾದ ಕಥೆಯ ಒಂದು ಎಳೆ.

ಇಡೀ ಸಿನಿಮಾ ಹುಡುಗಿಯೊಬ್ಬಳ ಸುತ್ತ ಟ್ರಾವೆಲ್‌ ಆಗುತ್ತದೆ. ತುಂಬ ಸ್ಟ್ರಾಂಗ್‌ ಆಗಿ, ಇಂಡಿಪೆಂಡೆಂಟ್‌ ಆಗಿ ಇರುವಂಥ ಹುಡುಗಿಯ ಕ್ಯಾರೆಕ್ಟರ್‌ ಇದರಲ್ಲಿದೆ. ಎಲ್ಲರಿಗೂ ಕನೆಕ್ಟ್ ಆಗುವ ಕ್ಯಾರೆಕ್ಟರ್‌ ನನ್ನದು. ಜೊತೆಗೆ ನನಗೆ ಒಂದು ಫೈಟ್‌ ಕೂಡ ಇದೆ. ಈ ಸಿನಿಮಾದ ಟೀಮ್‌ ಇಷ್ಟವಾಯ್ತು. ನಂತರ ಸ್ಟೋರಿ, ಕ್ಯಾರೆಕ್ಟರ್‌ ಎಲ್ಲವೂ ಇಷ್ಟವಾಯ್ತು…’ ಎನ್ನುತ್ತಾರೆ. ಇನ್ನು “ನನಗೆ ಸೀರಿಯಲ್‌ ಅಥವಾ ಸಿನಿಮಾ ಅಂಥ ಎರಡರ ನಡುವೆ ಅಂಥದ್ದೇನೂ ವ್ಯತ್ಯಾಸವಿಲ್ಲ.

ಎರಡರಲ್ಲೂ ಕೂಡ ನನ್ನ ಕೆಲಸವನ್ನ ನಾನೇ ಮಾಡಬೇಕು. ಏನೇ ಮಾಡಿದ್ರೂ ಪ್ರಾಮಾಣಿಕವಾಗಿ, ಅದಕ್ಕೆ ಕಂಪ್ಲೀಟ್‌ ಎಫ‌ರ್ಟ್‌ ಹಾಕಿ ಮಾಡ್ಬೇಕು. ಇಷ್ಟು ವರ್ಷ ಇಲ್ಲಿದ್ದು ನಾನು ಕಲಿತುಕೊಂಡಿರುವುದು ಇದನ್ನೇ…’ ಎನ್ನುವ ವೈಷ್ಣವಿ ಗೌಡ. “ಸೀರಿಯಲ್‌ ಮತ್ತು ಸಿನಿಮಾ ಎರಡಕ್ಕೂ ಅದರದ್ದೇ ಆದ ಲಿಮಿಟೇಶನ್ಸ್‌ ಮತ್ತು ಇಂಪಾರ್ಟೆನ್ಸ್‌ ಇರುತ್ತದೆ. ಅದಕ್ಕೆ ತಕ್ಕಂತೆ ಹೊಂದಾಣಿಕೆ ಮಾಡಿಕೊಂಡು ಕೆಲಸ ಮಾಡಿಕೊಂಡು ಹೋಗಬೇಕಾಗುತ್ತದೆ.

ಆದ್ರೆ ಎರಡೂ ಕೂಡ ಒಬ್ಬಳು ಆರ್ಟಿಸ್ಟ್‌ ಆಗಿ ನನ್ನಿಂದ ಬೆಸ್ಟ್‌ ಪರ್ಪಾರ್ಮೆನ್ಸ್‌ ಬಯಸುತ್ತದೆ. ನಾನು ಕೂಡ ಯಾವಾಗಲೂ ಅದನ್ನ ಕೊಡೋದಕ್ಕೆ ತಯಾರಾಗಿರುತ್ತೇನೆ’ ಎನ್ನುತ್ತಾರೆ. ಒಟ್ಟಾರೆ ಈ ಬಾರಿ “ಬಹುಕೃತ ವೇಷಂ’ ಮೂಲಕ ಹೊಸವೇಷ ತೊಟ್ಟು ಸಿನಿಪ್ರಿಯರ ಮುಂದೆ ಬರುತ್ತಿರುವ ವೈಷ್ಣವಿ ಗೌಡ ಅಭಿಮಾನಿಗಳಿಗೆ ಎಷ್ಟರ ಮಟ್ಟಿಗೆ ಇಷ್ಟವಾಗುತ್ತಾರೆ ಅನ್ನೋದು ಈ ವರ್ಷದ ಕೊನೆಯೊಳಗೆ ಗೊತ್ತಾಗುವ ಸಾಧ್ಯತೆ ಇದೆ.

ಟಾಪ್ ನ್ಯೂಸ್

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kannada Cinema; ರಾಜ್ಯಾದ್ಯಂತ “ಸಾಂಕೇತ್‌’ ಸಿನೆಮಾ ತೆರೆಗೆ

Kannada Cinema; ರಾಜ್ಯಾದ್ಯಂತ “ಸಾಂಕೇತ್‌’ ಸಿನೆಮಾ ತೆರೆಗೆ

Sandalwood; ಶೀಘ್ರದಲ್ಲಿ ತೆರೆಗೆ ಬರುತ್ತಿದೆ ‘ಕಬಂಧ’

Sandalwood; ಶೀಘ್ರದಲ್ಲಿ ತೆರೆಗೆ ಬರುತ್ತಿದೆ ‘ಕಬಂಧ’

bheema

Duniya Vijay; ‘ಭೀಮ’ನಿಗಾಗಿ ತೆರೆಯಲಿದೆ ಮುಚ್ಚಿದ 18 ಚಿತ್ರಮಂದಿರ

Kannada Movies: ಹಿಟ್‌ ರೇಟ್‌ ಮೇಲೆ; ಸ್ಯಾಟಲೈಟ್‌, ಓಟಿಟಿಯ ಹೊಸ ಧೋರಣೆ

Kannada Movies: ಹಿಟ್‌ ಮೇಲೆ ರೇಟ್‌; ಸ್ಯಾಟಲೈಟ್‌, ಓಟಿಟಿಯ ಹೊಸ ಧೋರಣೆ

Sandalwood; ಕನ್ನಡದಲ್ಲಿ ಇಂದು ತೆರೆಗೆ ಬರುತ್ತಿದೆ ನಾಲ್ಕು ಚಿತ್ರಗಳು

Sandalwood; ಕನ್ನಡದಲ್ಲಿ ಇಂದು ತೆರೆಗೆ ಬರುತ್ತಿದೆ ನಾಲ್ಕು ಚಿತ್ರಗಳು

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.