ವೀರ್‌ 25ನೇ ಚಿತ್ರ ಮಾಸ್‌ ಲೀಡರ್‌


Team Udayavani, Aug 9, 2017, 10:50 AM IST

Veer-Samarath.jpg

ಒಬ್ಬ ಸಂಗೀತ ನಿರ್ದೇಶಕನ ಸಿನಿ ಪಯಣದಲ್ಲಿ 25 ನೇ ಚಿತ್ರ ಅನ್ನೋದು ಒಂದು ಹಂತದ ಸಾಧನೆಯೇ ಸರಿ. ಅದೀಗ ಸಂಗೀತ ನಿರ್ದೇಶಕ ವೀರ್‌ಸಮರ್ಥ್ ಅವರ ಪಾಲಿಗೂ ಬಂದಿದೆ. ಶಿವರಾಜಕುಮಾರ್‌ ಅಭಿನಯದ “ಮಾಸ್‌ ಲೀಡರ್‌’ ಅವರ 25ನೇ ಚಿತ್ರ. ಈ ವಾರ ತೆರೆಕಾಣುತ್ತಿರುವ ಚಿತ್ರದ ಬಗ್ಗೆ ವೀರ್‌ ಸಮರ್ಥ್ಗೆ ಖುಷಿ ಮತ್ತು ಹೆಮ್ಮೆ ಇದೆ.

ಕಾರಣ, ಅವರ ಈ ಎಂಟು ವರ್ಷಗಳ ಜರ್ನಿಯಲ್ಲಿ ಇದೇ ಮೊದಲ ಸಲ ಸ್ಟಾರ್‌ನಟನ ಸಿನಿಮಾವೊಂದಕ್ಕೆ ಸಂಗೀತ ನೀಡಿದ್ದಾರೆ. ಅಷ್ಟೇ ಅಲ್ಲ, “ಮಾಸ್‌ ಲೀಡರ್‌’ನಲ್ಲಿ ಅವರ ಸಂಗೀತ ಹಾಡುಗಳು ಮೆಚ್ಚುಗೆಗೆ ಪಾತ್ರವಾಗಿರುವುದೂ ಅವರಿಗೆ ಖುಷಿಯ ಸಂಗತಿ.

ವೀರ್‌ ಸಮರ್ಥ್ ಸಂಗೀತ ನಿರ್ದೇಶನದ ಮೊದಲ ಚಿತ್ರ ಮುರಳಿ ಅಭಿನಯದ “ಶಿವಮಣಿ’. ಮೊದಲ ಪ್ರಯತ್ನದಲ್ಲೇ ಅವರು “ಮೊದ ಮೊದಲ ಮಾತು ಚೆಂದ …’ ಎಂಬ ಗುನುಗುವ ಹಾಡು ಕೊಟ್ಟರು. ಅದಾದ ಮೇಲೆ ಸಿಕ್ಕ ಒಂದೊಂದೇ ಚಿತ್ರಗಳಲ್ಲಿ ಒಳ್ಳೆಯ ಹಾಡು ಕೊಟ್ಟರೂ, ಸಿನಿಮಾಗಳು ಜನಮನ್ನಣೆ ಪಡೆಯಲಿಲ್ಲ.

“ಒಲವೇ ವಿಸ್ಮಯ’ದ “ಕೊಂಚ ರೇಷಿಮೆ, ಕೊಂಚ ಹುಣ್ಣಿಮೆ …’, “ಕಾರಂಜಿ’ಯ “ಕುಂಬಾರಕಿ …’, “ಈ ದಿನ ಹೊಸತಾಗಿದೆ …’, “ದ್ಯಾವ್ರೇ’ ಚಿತ್ರದ “ದ್ಯಾವ್ರೇ …’, “ಪರಪಂಚ’ದ “ಹುಟ್ಟಿದ ಊರನು ಬಿಟ್ಟು ಬಂದ ಮೇಲೆ …’ ಸೇರಿದಂತೆ ಹಲವು ಹಾಡುಗಳು ಹಿಟ್‌ ಆಗಿವೆಯಾದರೂ, ವೀರ್‌ ಸಮರ್ಥ್ ಆ ಹಾಡುಗಳಿಗೆ ಸಂಗೀತ ಸಂಯೋಜಿಸಿದ್ದಾರೆ ಅನ್ನೋದು ಸಿನಿಮಾ ಮಂದಿ ಹೊರತಾಗಿ ಬಹಳಷ್ಟು ಮಂದಿಗೆ ಗೊತ್ತಿಲ್ಲ.

ಆದರೆ, ಈಗ “ಮಾಸ್‌ ಲೀಡರ್‌’ ಬಿಡುಗಡೆಗೂ ಮುನ್ನ ಚಿತ್ರದ ಹಾಡುಗಳು ಕೇಳುಗರ ಮನಗೆದ್ದಿವೆ ಎನ್ನುವ ವೀರ್‌ ಸಮರ್ಥ್, ಆಡಿಯೋ ಗುಣಮಟ್ಟದ ಜತೆಗೆ ಹಾಡಿನ ವೀಡಿಯೋ ಕೂಡ ಫ್ರೆಶ್‌ ಎನಿಸಿರುವುದರಿಂದ ಜನರಿಂದ ಉತ್ತಮ ಪ್ರತಿಕ್ರಿಯೆ ಸಿಕ್ಕಿದೆ’ ಎನ್ನುತ್ತಾರೆ ವೀರ್‌ಸಮರ್ಥ್. 

“ನನ್ನ ಪಾಲಿಗೆ “ಮಾಸ್‌ ಲೀಡರ್‌’ ದೊಡ್ಡ ಬಜೆಟ್‌ನ ಸ್ಟಾರ್‌ ಚಿತ್ರ. ಸದ್ಯಕ್ಕೆ ಈಗ “ರಾಜ ಲವ್ಸ್‌ ರಾಧೆ’, “ಜಾಲಿಬಾರು ಪೋಲಿ ಹುಡುಗರು’, “ಶಿವಗಾಮಿ’, “ಡಬ್ಬಲ್‌ ಇಂಜಿನ್‌’ ಸೇರಿದಂತೆ ಏಳು ಸಿನಿಮಾಗಳು ಕೈಯಲ್ಲಿವೆ. ಇಷ್ಟು ವರ್ಷಗಳ ಪಯಣ ಖುಷಿಕೊಟ್ಟಿದೆ. “ಮಾಸ್‌ ಲೀಡರ್‌’ ಆ ಖುಷಿಯನ್ನು ಇನ್ನಷ್ಟು ಇಮ್ಮಡಿಗೊಳಿಸುತ್ತದೆ’ ಎನ್ನುತ್ತಾರೆ ವೀರ್‌ಸಮರ್ಥ್.

ಟಾಪ್ ನ್ಯೂಸ್

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Kannada Cinema: ತೆರೆಗೆ ಬಂತು ಯುವ, ತಾರಿಣಿ

Kannada Cinema: ತೆರೆಗೆ ಬಂತು ಯುವ, ತಾರಿಣಿ

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’

Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

17

ಕೋರ್ಟ್‌ ಮೇಲೆ ಪಟ್ಟಭದ್ರರ ಒತ್ತಡ: ವಕೀಲರ ಪತ್ರ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

16-

ನಟ, ಕಾಂಗ್ರೆಸ್‌ ಮಾಜಿ ಸಂಸದ ಗೋವಿಂದ “ಶಿಂಧೆ ಸೇನೆ’ ಸೇರ್ಪಡೆ

15-

ಕಂಗನಾ ವಿರುದ್ಧ ಪೋಸ್ಟ್: ಕೈ ನಾಯಕಿಗೆ‌ ಟಿಕೆಟ್‌ ಡೌಟ್‌

14-

Chandigarh: ಪುತ್ರನ ಬೆನ್ನಲ್ಲೇ ಪುತ್ರಿ ಜತೆಗೆ ಸಾವಿತ್ರಿ ಜಿಂದಾಲ್‌ ಬಿಜೆಪಿಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.