![New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್ ಗ್ಯಾಂಗ್’](https://www.udayavani.com/wp-content/uploads/2024/07/POLICE-5-12-415x218.jpg)
ಕನ್ನಡದ ಹಿರಿಯ ನಟ ಮನ್ದೀಪ್ ರಾಯ್ ಅವರಿಗೆ ಹೃದಯಾಘಾತ
Team Udayavani, Dec 5, 2022, 3:27 PM IST
![1-fasdsada](https://www.udayavani.com/wp-content/uploads/2022/12/1-fasdsada-620x364.jpg)
ಬೆಂಗಳೂರು : ಕನ್ನಡ ಚಿತ್ರ ರಂಗದ ಹಿರಿಯ ನಟ ಮನ್ದೀಪ್ ರಾಯ್ ಅವರಿಗೆ ಹೃದಯಾಘಾತವಾಗಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಕನ್ನಡದ 500ಕ್ಕೂ ಹೆಚ್ಚು ಚಿತ್ರಗಳಲ್ಲಿ ವಿಭಿನ್ನ ಪಾತ್ರಗಳಲ್ಲಿ ನಟಿಸಿರುವ ಹಾಸ್ಯ ನಟ ಮನದೀಪ್ ರಾಯ್ ಅವರಿಗೆ ಮೂರು ದಿನಗಳ ಹಿಂದೆ ಹೃದಯಾಘಾತವಾಗಿದೆ ಎನ್ನುವುದು ತಡವಾಗಿ ಬೆಳಕಿಗೆ ಬಂದಿದೆ.
ರಾಯ್ ಅವರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದರು ಎಂದೂ ವರದಿಯಾಗಿತ್ತು. ಸದ್ಯ ಅವರು ಬೆಂಗಳೂರಿನ ಶೇಷಾದ್ರಿಪುರಂನಲ್ಲಿರುವ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಚಿಕಿತ್ಸೆಯ ಬಳಿಕ ರಾಯ್ ಅವರು ಚೇತರಿಸಿಕೊಳ್ಳುತ್ತಿದ್ದು, ಚಿತ್ರ ರಂಗದ ಹಲವಾರು ಮಂದಿ ಅವರ ಶೀಘ್ರ ಚೇತರಿಕೆಗಾಗಿ ಹಾರೈಸಿದ್ದಾರೆ. ಇನ್ನೂ ಕೆಲ ದಿನಗಳ ಕಾಲ ಆಸ್ಪತ್ರೆಯಲ್ಲೇ ವಿಶ್ರಾಂತಿ ಪಡೆದುಕೊಳ್ಳಲಿದ್ದಾರೆ ಎಂದು ಹೇಳಲಾಗಿದೆ.
ವರನಟ ಡಾ. ರಾಜ್ ಕುಮಾರ್, ಶಂಕರ್ ನಾಗ್, ಅನಂತ್ ನಾಗ್ ಸೇರಿ ದಿಗ್ಗಜರೊಂದಿಗೆ ನಟಿಸಿರುವ ರಾಯ್ ಅವರು ಯುವ ನಟರೊಂದಿಗೂ ಪೋಷಕ ನಟರಾಗಿ ಹಲವು ಪಾತ್ರಗಳ ಮೂಲಕ ಗಮನ ಸೆಳೆದಿದ್ದಾರೆ.
ಟಾಪ್ ನ್ಯೂಸ್
![New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್ ಗ್ಯಾಂಗ್’](https://www.udayavani.com/wp-content/uploads/2024/07/POLICE-5-12-415x218.jpg)
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.