ಕನ್ನಡದ ಹಿರಿಯ ನಟ ಹುಲಿವಾನ್ ಗಂಗಾಧರಯ್ಯ ಕೋವಿಡ್ ಸೋಂಕಿನಿಂದ ಸಾವು
Team Udayavani, Jul 18, 2020, 12:12 PM IST
ಬೆಂಗಳೂರು: ಕೋವಿಡ್ ಸೋಂಕಿನಿಂದ ಬಳಲುತ್ತಿದ್ದ ಕನ್ನಡ ಚಿತ್ರರಂಗದ ಹಿರಿಯ ನಟ ಹುಲಿವಾನ್ ಗಂಗಾಧರಯ್ಯ ಅವರು ಶುಕ್ರವಾರ ರಾತ್ರಿ ಅಸುನೀಗಿದ್ದಾರೆ.
70 ವರ್ಷದ ಹುಲಿವಾನ್ ಗಂಗಾಧರಯ್ಯ ಅವರು ಕಳೆದ ಕೆಲವು ದಿನಗಳಿಂದ ಜ್ವರ ಮತ್ತು ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ. ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಶುಕ್ರವಾರ ರಾತ್ರಿ ಚಿಕಿತ್ಸೆ ಫಲಕಾರಿಯಾಗದೆ ಮರಣ ಹೊಂದಿದ್ದಾರೆ.
ಹುಲಿವಾನ್ ಗಂಗಾಧರಯ್ಯ ಅವರು ಸಮಾರು 118 ಚಿತ್ರಗಳು, ಹಲವು ಧಾರವಾಹಿಗಳಲ್ಲಿ ಮತ್ತು ಸಾವಿರಾರು ನಾಟಕಗಳಲ್ಲಿ ಅಭಿನಯಿಸಿದ್ದಾರೆ. ಕುರಿಗಳು ಸಾರ್ ಕುರಿಗಳು, ಶಬ್ಧವೇದಿ, ಕರ್ವ, ಅಪ್ಪು, ನೀರ್ ದೋಸೆ ಮುಂತಾದ ಜನಪ್ರಿಯ ಚಿತ್ರಗಳಲ್ಲಿ ಗಂಗಾಧರಯ್ಯ ಅವರು ಅಭಿನಯಿಸಿದ್ದರು.
ಇತ್ತೀಚೆಗೆ ಧಾರವಾಹಿಯೊಂದರ ಚಿತ್ರೀಕರಣದಲ್ಲಿ ಭಾಗವಹಿಸಿದ್ದ ಹುಲಿವಾನ್ ಗಂಗಾಧರಯ್ಯ ಅವರಿಗೆ ಜ್ವರ ಕಾಣಿಸಿಕೊಂಡಿತ್ತು.