ನಿರ್ದೇಶನದತ್ತ ವಿಜಯ್‌

ಸಲಗ ಚಿತ್ರಕ್ಕೆ ಆ್ಯಕ್ಷನ್‌-ಕಟ್‌

Team Udayavani, May 14, 2019, 3:00 AM IST

vijay

ದುನಿಯಾ ವಿಜಯ್‌ ಮತ್ತೆ ಟ್ರ್ಯಾಕ್‌ಗೆ ಮರಳಿದ್ದಾರೆ. ಇತ್ತೀಚೆಗೆ ನಾನಾ ಕಾರಣಗಳಿಗಾಗಿ ಸುದ್ದಿಯಾಗಿದ್ದ ವಿಜಯ ಈ ಬಾರಿ ಸಿನಿಮಾದಿಂದಲೇ ಸುದ್ದಿಯಲ್ಲಿದ್ದಾರೆ. ಅದು ಸಿನಿಮಾದಲ್ಲೇ ಹೊಸ ಆಯಾಮಕ್ಕೆ ತೆರೆದುಕೊಳ್ಳುವ ಮೂಲಕ. ಹೌದು, ವಿಜಯ್‌ ಈಗ ನಿರ್ದೇಶನದತ್ತ ಮುಖ ಮಾಡಿದ್ದಾರೆ. ಹಾಗಂತ ಬೇರೆಯವರಿಗೆ ಅವರು ನಿರ್ದೇಶನ ಮಾಡುತ್ತಿಲ್ಲ.

ತಾವೇ ನಾಯಕರಾಗಿ ನಟಿಸುತ್ತಿರುವ “ಸಲಗ’ ಚಿತ್ರಕ್ಕೆ ಆ್ಯಕ್ಷನ್‌-ಕಟ್‌ ಹೇಳಲು ಮುಂದಾಗಿದ್ದಾರೆ. ಈ ಮೂಲಕ ಚಿತ್ರರಂಗದ ಮತ್ತೂಂದು ಮಗ್ಗುಲಿಗೆ ವಿಜಯ್‌ ತೆರೆದುಕೊಂಡಿದ್ದಾರೆ. ಈಗಾಗಲೇ ಕಥೆ, ಚಿತ್ರಕಥೆ ಎಲ್ಲವನ್ನು ಪಕ್ಕಾ ಮಾಡಿಕೊಂಡಿರುವ ವಿಜಯ್‌, ನಿರ್ದೇಶನದ ತಯಾರಿಯಲ್ಲಿ ತೊಡಗಿದ್ದಾರೆ. ಆರಂಭದಲ್ಲಿ ವಿಜಯ್‌ “ಕುಸ್ತಿ’ ಚಿತ್ರದಲ್ಲಿ ನಟಿಸಲು ಮುಂದಾಗಿದ್ದು, ಈ ಚಿತ್ರವನ್ನು ರಾಘು ಶಿವಮೊಗ್ಗ ನಿರ್ದೇಶಿಸುತ್ತಾರೆನ್ನಲಾಗಿತ್ತು.

ಆ ನಂತರ “ಸಲಗ’ ಅನೌನ್ಸ್‌ ಆದಾಗಲೂ ರಾಘು ಅವರ ಹೆಸರೇ ಕೇಳಿಬಂದಿತ್ತು. ನಂತರ ಆ ಚಿತ್ರದಿಂದ ರಾಘು ಹೊರಬಂದಾಗ ಎದ್ದ ಪ್ರಶ್ನೆ ಎಂದರೆ “ಸಲಗ’ ಚಿತ್ರವನ್ನು ಯಾರು ನಿರ್ದೇಶಿಸುತ್ತಾರೆಂಬುದು. ಸಾಕಷ್ಟು ಚರ್ಚೆಗಳ ಬಳಿಕ ಸ್ವತಃ ವಿಜಯ್‌ ಈ ಸಿನಿಮಾವನ್ನು ನಿರ್ದೇಶಿಸುವ ಮನಸ್ಸು ಮಾಡಿದ್ದಾರೆ.

ಆರಂಭದಲ್ಲಿ ಈ ಚಿತ್ರದ ನಿರ್ಮಾಣದ ಹೊಣೆಯನ್ನು ವಿಜಯ್‌ ಹೊತ್ತುಕೊಂಡಿದ್ದರು. ಆದರೆ, ಈಗ ನಿರ್ಮಾಪಕ ಕೆ.ಪಿ.ಶ್ರೀಕಾಂತ್‌ “ಸಲಗ’ ನಿರ್ಮಿಸಲು ಮುಂದಾಗಿರುವುದರಿಂದ ವಿಜಯ್‌, ನಿರ್ದೇಶನದತ್ತ ವಾಲಿದ್ದಾರೆ. “ಸಲಗ’ ಒಂದು ಔಟ್‌ ಅಂಡ್‌ ಔಟ್‌ ಮಾಸ್‌ ಸಬ್ಜೆಕ್ಟ್ ಆಗಿದ್ದು, ಈ ಮೂಲಕ ವಿಜಯ್‌ ಮತ್ತೂಮ್ಮೆ ಮಾಸ್‌ ಹೀರೋ ಆಗಿ ಮಿಂಚಲಿದ್ದಾರೆಂಬ ವಿಶ್ವಾಸ ಚಿತ್ರತಂಡಕ್ಕಿದೆ.

ಈ ಚಿತ್ರದಲ್ಲಿ ವಿಜಯ್‌ ಗೆಟಪ್‌ ಕೂಡಾ ಭಿನ್ನವಾಗಿರಲಿದೆಯಂತೆ. ವಿಭಿನ್ನ ಶೇಡ್‌ನ‌ಲ್ಲಿ ಕಾಣಿಸಿಕೊಳ್ಳಲಿರುವ ವಿಜಯ್‌, ನಿರ್ದೇಶನದ ಜೊತೆಗೆ ಪಾತ್ರ ಪೋಷಣೆಗೂಹೆಚ್ಚಿನ ತಯಾರಿ ನಡೆಸುತ್ತಿದ್ದಾರಂತೆ. ಚಿತ್ರಕ್ಕೆ ನಾಯಕಿ ಇನ್ನಷ್ಟೇ ಆಯ್ಕೆಯಾಗಬೇಕಿದೆ. ಉಳಿದಂತೆ ಚಿತ್ರದಲ್ಲಿ ಧನಂಜಯ್‌ ಪ್ರಮುಖ ಪಾತ್ರ ಮಾಡುತ್ತಿದ್ದಾರೆ. “ಟಗರು’ ಚಿತ್ರಕ್ಕೆ ಸಂಗೀತ ನೀಡಿದ ಚರಣ್‌ರಾಜ್‌ ಅವರ ಸಂಗೀತ ಚಿತ್ರಕ್ಕಿದೆ. ಜೂನ್‌ನಿಂದ “ಸಲಗ’ ಚಿತ್ರೀಕರಣಕ್ಕೆ ಹೊರಡಲಿದೆ.

ಟಾಪ್ ನ್ಯೂಸ್

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.