ನಿರ್ದೇಶನದತ್ತ ವಿಜಯ್‌

ಸಲಗ ಚಿತ್ರಕ್ಕೆ ಆ್ಯಕ್ಷನ್‌-ಕಟ್‌

Team Udayavani, May 14, 2019, 3:00 AM IST

vijay

ದುನಿಯಾ ವಿಜಯ್‌ ಮತ್ತೆ ಟ್ರ್ಯಾಕ್‌ಗೆ ಮರಳಿದ್ದಾರೆ. ಇತ್ತೀಚೆಗೆ ನಾನಾ ಕಾರಣಗಳಿಗಾಗಿ ಸುದ್ದಿಯಾಗಿದ್ದ ವಿಜಯ ಈ ಬಾರಿ ಸಿನಿಮಾದಿಂದಲೇ ಸುದ್ದಿಯಲ್ಲಿದ್ದಾರೆ. ಅದು ಸಿನಿಮಾದಲ್ಲೇ ಹೊಸ ಆಯಾಮಕ್ಕೆ ತೆರೆದುಕೊಳ್ಳುವ ಮೂಲಕ. ಹೌದು, ವಿಜಯ್‌ ಈಗ ನಿರ್ದೇಶನದತ್ತ ಮುಖ ಮಾಡಿದ್ದಾರೆ. ಹಾಗಂತ ಬೇರೆಯವರಿಗೆ ಅವರು ನಿರ್ದೇಶನ ಮಾಡುತ್ತಿಲ್ಲ.

ತಾವೇ ನಾಯಕರಾಗಿ ನಟಿಸುತ್ತಿರುವ “ಸಲಗ’ ಚಿತ್ರಕ್ಕೆ ಆ್ಯಕ್ಷನ್‌-ಕಟ್‌ ಹೇಳಲು ಮುಂದಾಗಿದ್ದಾರೆ. ಈ ಮೂಲಕ ಚಿತ್ರರಂಗದ ಮತ್ತೂಂದು ಮಗ್ಗುಲಿಗೆ ವಿಜಯ್‌ ತೆರೆದುಕೊಂಡಿದ್ದಾರೆ. ಈಗಾಗಲೇ ಕಥೆ, ಚಿತ್ರಕಥೆ ಎಲ್ಲವನ್ನು ಪಕ್ಕಾ ಮಾಡಿಕೊಂಡಿರುವ ವಿಜಯ್‌, ನಿರ್ದೇಶನದ ತಯಾರಿಯಲ್ಲಿ ತೊಡಗಿದ್ದಾರೆ. ಆರಂಭದಲ್ಲಿ ವಿಜಯ್‌ “ಕುಸ್ತಿ’ ಚಿತ್ರದಲ್ಲಿ ನಟಿಸಲು ಮುಂದಾಗಿದ್ದು, ಈ ಚಿತ್ರವನ್ನು ರಾಘು ಶಿವಮೊಗ್ಗ ನಿರ್ದೇಶಿಸುತ್ತಾರೆನ್ನಲಾಗಿತ್ತು.

ಆ ನಂತರ “ಸಲಗ’ ಅನೌನ್ಸ್‌ ಆದಾಗಲೂ ರಾಘು ಅವರ ಹೆಸರೇ ಕೇಳಿಬಂದಿತ್ತು. ನಂತರ ಆ ಚಿತ್ರದಿಂದ ರಾಘು ಹೊರಬಂದಾಗ ಎದ್ದ ಪ್ರಶ್ನೆ ಎಂದರೆ “ಸಲಗ’ ಚಿತ್ರವನ್ನು ಯಾರು ನಿರ್ದೇಶಿಸುತ್ತಾರೆಂಬುದು. ಸಾಕಷ್ಟು ಚರ್ಚೆಗಳ ಬಳಿಕ ಸ್ವತಃ ವಿಜಯ್‌ ಈ ಸಿನಿಮಾವನ್ನು ನಿರ್ದೇಶಿಸುವ ಮನಸ್ಸು ಮಾಡಿದ್ದಾರೆ.

ಆರಂಭದಲ್ಲಿ ಈ ಚಿತ್ರದ ನಿರ್ಮಾಣದ ಹೊಣೆಯನ್ನು ವಿಜಯ್‌ ಹೊತ್ತುಕೊಂಡಿದ್ದರು. ಆದರೆ, ಈಗ ನಿರ್ಮಾಪಕ ಕೆ.ಪಿ.ಶ್ರೀಕಾಂತ್‌ “ಸಲಗ’ ನಿರ್ಮಿಸಲು ಮುಂದಾಗಿರುವುದರಿಂದ ವಿಜಯ್‌, ನಿರ್ದೇಶನದತ್ತ ವಾಲಿದ್ದಾರೆ. “ಸಲಗ’ ಒಂದು ಔಟ್‌ ಅಂಡ್‌ ಔಟ್‌ ಮಾಸ್‌ ಸಬ್ಜೆಕ್ಟ್ ಆಗಿದ್ದು, ಈ ಮೂಲಕ ವಿಜಯ್‌ ಮತ್ತೂಮ್ಮೆ ಮಾಸ್‌ ಹೀರೋ ಆಗಿ ಮಿಂಚಲಿದ್ದಾರೆಂಬ ವಿಶ್ವಾಸ ಚಿತ್ರತಂಡಕ್ಕಿದೆ.

ಈ ಚಿತ್ರದಲ್ಲಿ ವಿಜಯ್‌ ಗೆಟಪ್‌ ಕೂಡಾ ಭಿನ್ನವಾಗಿರಲಿದೆಯಂತೆ. ವಿಭಿನ್ನ ಶೇಡ್‌ನ‌ಲ್ಲಿ ಕಾಣಿಸಿಕೊಳ್ಳಲಿರುವ ವಿಜಯ್‌, ನಿರ್ದೇಶನದ ಜೊತೆಗೆ ಪಾತ್ರ ಪೋಷಣೆಗೂಹೆಚ್ಚಿನ ತಯಾರಿ ನಡೆಸುತ್ತಿದ್ದಾರಂತೆ. ಚಿತ್ರಕ್ಕೆ ನಾಯಕಿ ಇನ್ನಷ್ಟೇ ಆಯ್ಕೆಯಾಗಬೇಕಿದೆ. ಉಳಿದಂತೆ ಚಿತ್ರದಲ್ಲಿ ಧನಂಜಯ್‌ ಪ್ರಮುಖ ಪಾತ್ರ ಮಾಡುತ್ತಿದ್ದಾರೆ. “ಟಗರು’ ಚಿತ್ರಕ್ಕೆ ಸಂಗೀತ ನೀಡಿದ ಚರಣ್‌ರಾಜ್‌ ಅವರ ಸಂಗೀತ ಚಿತ್ರಕ್ಕಿದೆ. ಜೂನ್‌ನಿಂದ “ಸಲಗ’ ಚಿತ್ರೀಕರಣಕ್ಕೆ ಹೊರಡಲಿದೆ.

ಟಾಪ್ ನ್ಯೂಸ್

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!

Exam

NEET ಟಾಪರ್‌ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!

1-assam

UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್‌?

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kannada Cinema; ರಾಜ್ಯಾದ್ಯಂತ “ಸಾಂಕೇತ್‌’ ಸಿನೆಮಾ ತೆರೆಗೆ

Kannada Cinema; ರಾಜ್ಯಾದ್ಯಂತ “ಸಾಂಕೇತ್‌’ ಸಿನೆಮಾ ತೆರೆಗೆ

Sandalwood; ಶೀಘ್ರದಲ್ಲಿ ತೆರೆಗೆ ಬರುತ್ತಿದೆ ‘ಕಬಂಧ’

Sandalwood; ಶೀಘ್ರದಲ್ಲಿ ತೆರೆಗೆ ಬರುತ್ತಿದೆ ‘ಕಬಂಧ’

bheema

Duniya Vijay; ‘ಭೀಮ’ನಿಗಾಗಿ ತೆರೆಯಲಿದೆ ಮುಚ್ಚಿದ 18 ಚಿತ್ರಮಂದಿರ

Kannada Movies: ಹಿಟ್‌ ರೇಟ್‌ ಮೇಲೆ; ಸ್ಯಾಟಲೈಟ್‌, ಓಟಿಟಿಯ ಹೊಸ ಧೋರಣೆ

Kannada Movies: ಹಿಟ್‌ ಮೇಲೆ ರೇಟ್‌; ಸ್ಯಾಟಲೈಟ್‌, ಓಟಿಟಿಯ ಹೊಸ ಧೋರಣೆ

Sandalwood; ಕನ್ನಡದಲ್ಲಿ ಇಂದು ತೆರೆಗೆ ಬರುತ್ತಿದೆ ನಾಲ್ಕು ಚಿತ್ರಗಳು

Sandalwood; ಕನ್ನಡದಲ್ಲಿ ಇಂದು ತೆರೆಗೆ ಬರುತ್ತಿದೆ ನಾಲ್ಕು ಚಿತ್ರಗಳು

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!

Exam

NEET ಟಾಪರ್‌ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!

1-assam

UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್‌?

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.