Kannada Cinema; ಖಡಕ್‌ ಖಾಕಿ ಮತ್ತು ಥ್ರಿಲ್ಲರ್‌ ‘ಮರೀಚಿ’: ಡಿ.8ಕ್ಕೆ ಚಿತ್ರ ತೆರೆಗೆ


Team Udayavani, Dec 7, 2023, 3:48 PM IST

ಖಡಕ್‌ ಖಾಕಿ ಮತ್ತು ಥ್ರಿಲ್ಲರ್‌ ‘ಮರೀಚಿ’: ಡಿ.8ಕ್ಕೆ ಚಿತ್ರ ತೆರೆಗೆ

ನಟ ವಿಜಯ ರಾಘವೇಂದ್ರ ಈಗ ಮತ್ತೂಮ್ಮೆ ಖಾಕಿ ತೊಟ್ಟು ಖಡಕ್‌ ಲುಕ್‌ನಲ್ಲಿ ಪ್ರೇಕ್ಷಕರ ಮುಂದೆ ಬರುವ ತಯಾರಿಯಲ್ಲಿದ್ದಾರೆ. ಹೌದು, ವಿಜಯ ರಾಘವೇಂದ್ರ ಪೊಲೀಸ್‌ ಅಧಿಕಾರಿಯಾಗಿ ಕಾಣಿಸಿಕೊಂಡಿರುವ ಹೊಸ ಸಿನಿಮಾ “ಮರೀಚಿ’ ಬಿಡುಗಡೆಗೆ ರೆಡಿಯಾಗಿದ್ದು, ಡಿಸೆಂಬರ್‌ 8ರಂದು ತೆರೆಕಾಣುತ್ತಿದೆ. ಮಿಸ್ಟರಿ ಕಂ ಕ್ರೈಂ-ಥ್ರಿಲ್ಲರ್‌ ಕಥಾಹಂದರದ ಔಟ್‌ ಆ್ಯಂಡ್‌ ಔಟ್‌ ಹೈಬ್ರಿಡ್‌ ಜಾನರ್‌ನ “ಮರೀಚಿ’ ಮೇಲೆ ಚಿತ್ರತಂಡಕ್ಕೆ ನಿರೀಕ್ಷೆ ಇದೆ.

“ಮರೀಚಿ’ ಸಿನಿಮಾವನ್ನು ತೆರೆಗೆ ತರುತ್ತಿರುವವರು ನಿರ್ದೇಶಕ ಸಿದ್ದ್ರುವ್. ಮೂಲತಃ ಇಂಜಿನಿಯರ್‌ ಆಗಿರುವ ಸುಮಾರು 12 ವರ್ಷಗಳಿಂದ ಕನ್ನಡ ಚಿತ್ರರಂಗದಲ್ಲಿ ತೊಡಗಿಸಿಕೊಂಡಿರುವ, ಒಂದಷ್ಟು ಸಿನಿಮಾಗಳಲ್ಲಿ ನಿರ್ದೇಶನ ವಿಭಾಗದಲ್ಲಿ ಕೆಲಸ ಮಾಡಿದ ಜೊತೆಗೆ ಒಂದಷ್ಟು ಶಾರ್ಟ್‌ ಫಿಲಂ ಮಾಡಿದ ಅನುಭವವಿರುವ ಸಿದ್ದ್ರುವ್ “ಮರೀಚಿ’ ಸಿನಿಮಾಕ್ಕೆ ಕಥೆ, ಚಿತ್ರಕಥೆ ಬರೆದು ಆ್ಯಕ್ಷನ್‌-ಕಟ್‌ಹೇಳುತ್ತಿದ್ದಾರೆ.

ತಮ್ಮ ಕನಸಿನ “ಮರೀಚಿ’ಯ ಬಗ್ಗೆ ಮಾತನಾಡುವ ನಿರ್ದೇಶಕ ಸಿದ್ದ್ರುವ್, “ಇದೊಂದು ಚೇಸ್‌ ಸಿನಿಮಾ. ಸರಣಿ ಕೊಲೆಗಳನ್ನು ಮಾಡುತ್ತಿರುವ ಸೈಕೋ ಕಿಲ್ಲರ್‌ ಒಬ್ಬನ ಬೆನ್ನತ್ತುವ ಪೊಲೀಸ್‌ ಅಧಿಕಾರಿಯ ಚೇಸ್‌ ಸುತ್ತ ಸಿನಿಮಾದ ಕಥೆ ಸಾಗುತ್ತದೆ. ಯಾಕೆ ಈ ಸರಣಿ ಕೊಲೆ ನಡೆಯುತ್ತದೆ. ಅದರ ಹಿಂದಿನ ಉದ್ದೇಶವೇನು? ಅಂತಿಮವಾಗಿ “ಮರೀಚಿ’ ಅಂದ್ರೆ ಯಾರು? ಎಂಬುದೇ ಸಿನಿಮಾದ ಕಥೆ. ಈ ಚೇಸಿಂಗ್‌ ಸ್ಟೋರಿ ಹೇಗೆಲ್ಲ ಸಾಗುತ್ತದೆ ಎಂಬುದನ್ನು ಥಿಯೇಟರ್‌ನಲ್ಲೇ ನೋಡಬೇಕು. ಈ ಸಿನಿಮಾದಲ್ಲಿ ಸಸ್ಪೆನ್ಸ್‌-ಥ್ರಿಲ್ಲರ್‌, ಲವ್‌ ಎಲ್ಲವೂ ಇದೆ’ ಎನ್ನುತ್ತಾರೆ.

“ಮರೀಚಿ’ ಸಿನಿಮಾದಲ್ಲಿ ನಾಯಕ ವಿಜಯ ರಾಘವೇಂದ್ರ ಖಡಕ್‌ ಪೊಲೀಸ್‌ ಅಧಿಕಾರಿಯಾಗಿ ಕಾಣಿಸಿಕೊಂಡಿದ್ದಾರೆ. ಸೈಕೋ ಕಿಲ್ಲರ್‌ ಬೆನ್ನತ್ತುವ ವಿಜಯ ರಾಘವೇಂದ್ರ ಆತನನ್ನು ಹೇಗೆ ಟ್ರ್ಯಾಪ್‌ ಮಾಡುತ್ತಾರೆ ಎಂಬುದೇ ಅವರ ಪಾತ್ರ. “ಇದೊಂದು ಅಪರೂಪದ ಕ್ರೈಂ-ಥ್ರಿಲ್ಲರ್‌ ಸಿನಿಮಾ. ತುಂಬ ವಿರಳ ಕಥೆಯನ್ನು ನಿರ್ದೇಶಕರು ತುಂಬ ಬುದ್ಧಿವಂತಿಕೆಯಿಂದ, ಅದ್ಭುತವಾಗಿ ಸ್ಕ್ರೀನ್‌ ಮೇಲೆ ಪ್ರಸೆಂಟ್‌ ಮಾಡಿದ್ದಾರೆ. ಕಥೆಗೆ ತಕ್ಕಂತೆ ಮೇಕಿಂಗ್‌ ಸಿನಿಮಾದಲ್ಲಿದೆ. “ಮರೀಚಿ’ ಪ್ರೇಕ್ಷಕರನ್ನು ಸೀಟಿನ ತುದಿಯಲ್ಲಿ ಕೂರಿಸುವಂಥ ಸಿನಿಮಾ. ಸಿನಿಮಾದಲ್ಲಿ ಪ್ರತಿ ದೃಶ್ಯಗಳಲ್ಲೂ ಬರುವ ಟ್ವಿಸ್ಟ್‌ ಆ್ಯಂಡ್‌ ಟರ್ನ್ಸ್ ಆಡಿಯನ್ಸ್‌ಗೆ ಥ್ರಿಲ್ಲಿಂಗ್‌ ಅನುಭವ ಕೊಡೋದು ಗ್ಯಾರೆಂಟಿ. ಸಿನಿಮಾದ ಮೇಲೆ ನನ್ನ ಪಾತ್ರದ ಮೇಲೆ ಸಾಕಷ್ಟು ನಿರೀಕ್ಷೆಯಿದೆ’ ಎಂದು  ವಿಶ್ವಾಸದ ಮಾತುಗಳನ್ನಾಡುತ್ತಾರೆ ವಿಜಯ ರಾಘವೇಂದ್ರ.

ಟಾಪ್ ನ್ಯೂಸ್

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kannada Cinema; ರಾಜ್ಯಾದ್ಯಂತ “ಸಾಂಕೇತ್‌’ ಸಿನೆಮಾ ತೆರೆಗೆ

Kannada Cinema; ರಾಜ್ಯಾದ್ಯಂತ “ಸಾಂಕೇತ್‌’ ಸಿನೆಮಾ ತೆರೆಗೆ

Sandalwood; ಶೀಘ್ರದಲ್ಲಿ ತೆರೆಗೆ ಬರುತ್ತಿದೆ ‘ಕಬಂಧ’

Sandalwood; ಶೀಘ್ರದಲ್ಲಿ ತೆರೆಗೆ ಬರುತ್ತಿದೆ ‘ಕಬಂಧ’

bheema

Duniya Vijay; ‘ಭೀಮ’ನಿಗಾಗಿ ತೆರೆಯಲಿದೆ ಮುಚ್ಚಿದ 18 ಚಿತ್ರಮಂದಿರ

Kannada Movies: ಹಿಟ್‌ ರೇಟ್‌ ಮೇಲೆ; ಸ್ಯಾಟಲೈಟ್‌, ಓಟಿಟಿಯ ಹೊಸ ಧೋರಣೆ

Kannada Movies: ಹಿಟ್‌ ಮೇಲೆ ರೇಟ್‌; ಸ್ಯಾಟಲೈಟ್‌, ಓಟಿಟಿಯ ಹೊಸ ಧೋರಣೆ

Sandalwood; ಕನ್ನಡದಲ್ಲಿ ಇಂದು ತೆರೆಗೆ ಬರುತ್ತಿದೆ ನಾಲ್ಕು ಚಿತ್ರಗಳು

Sandalwood; ಕನ್ನಡದಲ್ಲಿ ಇಂದು ತೆರೆಗೆ ಬರುತ್ತಿದೆ ನಾಲ್ಕು ಚಿತ್ರಗಳು

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

2-chithapura

Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.