ಸಾಂಗ್‌ ರಿಲೀಸ್‌ ಮಾಡಿದ ‘ವಿಜಯಾನಂದ’ ಚಿತ್ರತಂಡ


Team Udayavani, Nov 8, 2022, 3:24 PM IST

ಸಾಂಗ್‌ ರಿಲೀಸ್‌ ಮಾಡಿದ ‘ವಿಜಯಾನಂದ’ ಚಿತ್ರತಂಡ

ಖ್ಯಾತ ಉದ್ಯಮಿ ವಿಜಯ ಸಂಕೇಶ್ವರ ಅವರ ಜೀವನಾಧಾರಿತ ಚಿತ್ರ “ವಿಜಯಾನಂದ’ ಈಗ ಬಿಡುಗಡೆಯ ಹಂತಕ್ಕೆ ಬಂದಿದೆ. ಮೊದಲ ಹಂತವಾಗಿ ಚಿತ್ರತಂಡ ಚಿತ್ರದ ಹಾಡೊಂದನ್ನು ಬಿಡುಗಡೆ ಮಾಡಿದೆ.

ಧನಂಜಯ್‌ ರಂಜನ್‌ ಸಾಹಿತ್ಯ, ಸಂಗೀತ ನಿರ್ದೇಶಕ ಗೋಪಿ ಸುಂದರ್‌ ಸಂಗೀತ ಸಂಯೋಜನೆ, ವಿಜಯ್‌ ಪ್ರಕಾಶ್‌ ಹಾಗೂ ಕೀರ್ತನಾ ವೈದ್ಯನಾಥನ್‌ ಕಂಠ ಸಿರಿಯಲ್ಲಿ ಮೂಡಿಬಂದಿರುವ “ಹಾಗೆ ಆದ ಆಲಿಂಗನ’ ಎಂಬ ಹಾಡು ಬಿಡುಗಡೆಯಾಗಿದೆ. ಕನ್ನಡ ಹಾಗೂ ಹಿಂದಿ ಭಾಷೆಗಳಲ್ಲಿ ಈ ಹಾಡನ್ನು ಹೊರತರಲಾಗಿದೆ. ಇಮ್ರಾನ್‌ ಸರ್ದಾರಿಯಾ ಈ ಹಾಡಿಗೆ ನೃತ್ಯ ನಿರ್ದೇಶನ ಮಾಡದ್ದಾರೆ.

ಈ ಸಂದರ್ಭದಲ್ಲಿ ಮಾತನಾಡಿದ ವಿಜಯ ಸಂಕೇಶ್ವರ, “ನನ್ನ ಜೀವನಾಧಾರಿತ ಸಿನಿಮಾ ಮಾಡುವುದಾಗಿ ನಿರ್ದೇಶಕಿ ರಿಶಿಕಾ ಶರ್ಮಾ ಕೇಳಿದಾಗ, ಈ ಚಿಕ್ಕ ಹುಡಗಿ ಏನು ಮಾಡುತ್ತಾಳೆ ಅನಿಸಿತು. ಆದರೆ ಈಗ, ಆ ಪ್ರಶ್ನೆಗೆ ಉತ್ತರ ಸಿಕ್ಕಿದೆ. ರಿಶಿಕಾ ಬಹಳ ಚೆನ್ನಾಗಿ ಸಿನಿಮಾ ಮಾಡಿದ್ದಾರೆ. ನನ್ನ ಮಗ ಆನಂದ್‌ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ನಾನು ಹದಿನೈದನೇ ವಯಸ್ಸಿಗೆ ಕೆಲಸ ಶುರು ಮಾಡಿದೆ. ಅಂದು ಒಂದು ಲಾರಿಯಿಂದ ಆರಂಭವಾದ ನನ್ನ ಉದ್ಯಮ, ಇಂದು ಬೃಹತ್ತಾಗಿ ಬೆಳೆದಿದೆ. ನನ್ನ ಹಿಂದಿನ ಶಕ್ತಿ ನನ್ನ ಪತ್ನಿ ಲಲಿತಾ ಎಂದರೆ ತಪ್ಪಾಗಲಾರದು. ಈ ಚಿತ್ರ ಮಾಡಬೇಕಾದರೆ ನಾನು ನಿರ್ದೇಶಕರಿಗೆ ಹೇಳಿದ್ದೆ, ನನ್ನ ಜೀವನ ಹೇಗಿತ್ತೂ ಹಾಗೆ ತೋರಿಸಬೇಕು. ಬೇರೆ ಏನು ಸೇರಿಸಬಾರದು ಅಂತ. ನಾನು ಚಿಕ್ಕ ವಯಸ್ಸಿನಲ್ಲಿ ಹೇಗಿದ್ದೆನೋ, ನಾಯಕ ನಿಹಾಲ್‌ ಹಾಗೆ ಕಾಣುತ್ತಾರೆ. ನಾಯಕಿ ಸಿರಿ ಪ್ರಹ್ಲಾದ್‌ ಕೂಡ ನನ್ನ ಹೆಂಡತಿಯನ್ನೇ ಹೋಲುತ್ತಾರೆ. ಈ ಚಿತ್ರ ಯುವಕರಿಗೆ ಸ್ಫೂರ್ತಿಯಾಗಲಿ. ಡಿಸೆಂಬರ್‌ ಒಂಭತ್ತರಂದು ನಮ್ಮ ಚಿತ್ರ ಬಿಡುಗಡೆಯಾಗಲಿದೆ. ಕನ್ನಡ, ತೆಲುಗು, ತಮಿಳು, ಹಿಂದಿ ಹಾಗೂ ಮಲೆಯಾಳಂ ಐದು ಭಾಷೆಗಳಲ್ಲಿ ನಿರ್ಮಾಣವಾಗಿದೆ. ಎಲ್ಲರೂ ಚಿತ್ರ ನೋಡಿ ಪ್ರೋತ್ಸಾಹಿಸಿ’ ಎಂದರು ವಿಜಯ ಸಂಕೇಶ್ವರ.

ಕಾರ್ಯಕ್ರಮಕ್ಕೆ ನಟ ಶರಣ್‌, ನಟಿ ಹರ್ಷಿಕಾ ಪೂಣತ್ಛ ಅತಿಥಿಗಳಾಗಿ ಆಗಮಿಸಿ ಚಿತ್ರತಂಡಕ್ಕೆ ಶುಭ ಕೋರಿದರು. ಚಿತ್ರ ಸಾಗಿ ಬಂದ ಬಗ್ಗೆ ನಿರ್ದೇಶಕಿ ರಿಶಿಕಾ ಶರ್ಮ ಮಾಹಿತಿ ನೀಡಿದರು. ಹಾಡುಗಳ ಬಗ್ಗೆ ಗೋಪಿ ಸುಂದರ್‌ ಮಾಹಿತಿ ನೀಡಿದರು. ಚಿತ್ರದ ಅನುಭವದ ಕುರಿತು ಕಲಾವಿದರಾದ, ನಾಯಕ ನಿಹಾಲ್‌, ನಾಯಕಿ ಸಿರಿ ಪ್ರಹ್ಲಾದ್‌, ಭರತ್‌ ಬೋಪ್ಪಣ್ಣ, ಅರ್ಚನಾ ಕೊಟ್ಟಿಗೆ, ರಾಜೇಶ್‌ ನಟರಂಗ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡರು.

ಅನಂತನಾಗ್‌, ರವಿಚಂದ್ರನ್‌, ವಿನಯಾ ಪ್ರಸಾದ್‌, ಪ್ರಕಾಶ್‌ ಬೆಳವಾಡಿ, ರಮೇಶ್‌ ಭಟ್‌, ಶೈನ್‌ ಶೆಟ್ಟಿ, ದಯಾಳ್‌ ಪದ್ಮನಾಭನ್‌ ಮುಂತಾದವರು ಈ ಚಿತ್ರದಲ್ಲಿ ಅಭಿನಯಿಸಿದ್ದಾರೆ.

ಟಾಪ್ ನ್ಯೂಸ್

PM Modi: ಕೊರೊನಾ ಲಸಿಕೆ ಪ್ರಮಾಣಪತ್ರದಲ್ಲಿ ಮೋದಿ ಫೋಟೋ ಕಣ್ಮರೆಯಾಗಿದ್ದೇಕೆ?

PM Modi: ಕೊರೊನಾ ಲಸಿಕೆ ಪ್ರಮಾಣಪತ್ರದಲ್ಲಿ ಮೋದಿ ಫೋಟೋ ಕಣ್ಮರೆಯಾಗಿದ್ದೇಕೆ?

IMD

IMD; ರಾಜ್ಯದ 19 ಜಿಲ್ಲೆಗಳಿಗೆ ಬಿಸಿ ಗಾಳಿ ಮುನ್ಸೂಚನೆ : ಬೆಂಗಳೂರಿನಲ್ಲಿ ಮಳೆ

Bommai BJP

Haveri; ಕಮಲ-ಕೈ ನಡುವೆ ನೇರ ಸ್ಪರ್ಧೆ: ಯಾರ ಕೊರಳಿಗೆ ಏಲಕ್ಕಿ ಹಾರ?

bjp-congress

Bagalkote: ಒಬ್ಬರಿಗೆ ಮೊದಲನೆಯದು, ಇನ್ನೊಬ್ಬರಿಗೆ ‘ಕಡೇ’ ಚುನಾವಣೆ!

vidhana-soudha

ಜೂ.3: ಶಿಕ್ಷಕ, ಪದವೀಧರ ಕ್ಷೇತ್ರಗಳಿಗೆ ಚುನಾವಣೆ : ಯಾವ ಕ್ಷೇತ್ರದಲ್ಲಿ ಯಾರಿದ್ದರು?

sunil kumar

Interview; ಮುಸ್ಲಿಂ ಲೀಗ್‌ನ ‘ಬಿ’ ಟೀಂ ಕಾಂಗ್ರೆಸ್‌: ಸುನಿಲ್‌ ಕುಮಾರ್‌

MOdi (3)

I.N.D.I.A. ಯಿಂದ ವೋಟ್‌ ಜೆಹಾದ್‌: ಪ್ರಧಾನಿ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

rangasthala kannada movie

Kannada Cinema; ರಂಗಮಂಟಪ ಸುತ್ತ ‘ರಂಗಸ್ಥಳ’; ಹೊಸ ಚಿತ್ರದ ಟೈಟಲ್‌ ಲಾಂಚ್‌

jasti preethi kannada movie

Jasti Preethi; ಫೇಸ್ ಬುಕ್ ಪೋಸ್ಟ್ ಸಿನಿಮಾವಾಯಿತು..

Sandalwood: ಪ್ರೇಕ್ಷಕಳಾಗಿ ಕಾಂಗರೂ ನನಗೆ ಇಷ್ಟವಾಯಿತು..

Sandalwood: ಪ್ರೇಕ್ಷಕಳಾಗಿ ಕಾಂಗರೂ ನನಗೆ ಇಷ್ಟವಾಯಿತು..

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ

Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

19

Fraud: ಬೆಳಪು; ಹಣ ಪಡೆದು ಕಾಯಿಲ್‌ ನೀಡದೆ ವಂಚನೆ; ದೂರು ದಾಖಲು

CBI ಏಜೆನ್ಸಿ ನಮ್ಮ ನಿಯಂತ್ರಣದಲ್ಲಿಲ್ಲ: ಸುಪ್ರೀಂಗೆ ಕೇಂದ್ರ ಮಾಹಿತಿ

CBI ಏಜೆನ್ಸಿ ನಮ್ಮ ನಿಯಂತ್ರಣದಲ್ಲಿಲ್ಲ: ಸುಪ್ರೀಂಗೆ ಕೇಂದ್ರ ಮಾಹಿತಿ

22

Udupi: ಆಕಸ್ಮಿಕವಾಗಿ ಬಾವಿಗೆ ಬಿದ್ದವರ ರಕ್ಷಣೆ

Prajwal Revanna ಲೈಂಗಿಕ ದೌರ್ಜನ್ಯ ಪ್ರಕರಣ: ಪೊಲೀಸರ  ಕಾರ್ಯವೈಖರಿ ಬಗ್ಗೆ ವಕೀಲರ ಸಂಶಯ

Prajwal Revanna ಲೈಂಗಿಕ ದೌರ್ಜನ್ಯ ಪ್ರಕರಣ: ಪೊಲೀಸರ  ಕಾರ್ಯವೈಖರಿ ಬಗ್ಗೆ ವಕೀಲರ ಸಂಶಯ

PM Modi: ಕೊರೊನಾ ಲಸಿಕೆ ಪ್ರಮಾಣಪತ್ರದಲ್ಲಿ ಮೋದಿ ಫೋಟೋ ಕಣ್ಮರೆಯಾಗಿದ್ದೇಕೆ?

PM Modi: ಕೊರೊನಾ ಲಸಿಕೆ ಪ್ರಮಾಣಪತ್ರದಲ್ಲಿ ಮೋದಿ ಫೋಟೋ ಕಣ್ಮರೆಯಾಗಿದ್ದೇಕೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.