ಹೊಸ ಪ್ರತಿಭೆಗಳ “ವಿಜಯರಥ’ ಯಾತ್ರೆ
ಆ.23 ರಿಲೀಸ್
Team Udayavani, Aug 15, 2019, 3:01 AM IST
ಬಹುತೇಕ ಹೊಸ ಪ್ರತಿಭೆಗಳು ಸೇರಿ ನಿರ್ಮಿಸಿರುವ “ವಿಜಯರಥ’ ತೆರೆಗೆ ಬರಲು ಸಿದ್ಧವಾಗಿದೆ. ಇತ್ತೀಚೆಗೆ ಪ್ರಾದೇಶಿಕ ಸೆನ್ಸಾರ್ ಮಂಡಳಿಯಿಂದ ಬಿಡುಗಡೆಗೆ ಗ್ರೀನ್ ಸಿಗ್ನಲ್ ಪಡೆದುಕೊಂಡಿರುವ “ವಿಜಯರಥ’ ಇದೇ ಆಗಸ್ಟ್ 23ರಂದು ರಾಜ್ಯಾದ್ಯಂತ ತೆರೆ ಕಾಣುತ್ತಿದೆ. ನವನಟ ವಸಂತ್ ಕಲ್ಯಾಣ್ “ವಿಜಯರಥ’ ಚಿತ್ರದ ಮೂಲಕ ನಾಯಕ ನಟನಾಗಿ ಚಂದನವನಕ್ಕೆ ಪರಿಚಯವಾಗುತ್ತಿದ್ದಾರೆ.
ಚಿತ್ರದಲ್ಲಿ ವಸಂತ್ “ರಥ’ ಎನ್ನುವ ಹೆಸರಿನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಇವರಿಗೆ ಅರ್ಪಿತಾ ಗೌಡ ಮತ್ತು ಅರ್ಚನಾ ಜೋಯ್ಸ ನಾಯಕಿಯರಾಗಿ ಜೋಡಿಯಾಗಿದ್ದಾರೆ. ಉಳಿದಂತೆ ರಾಜೇಶ್ ನಟರಂಗ, ಮಂಜು ಮೊದಲಾದವರು ಚಿತ್ರದ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. ಕಳೆದ ವರ್ಷ ಸೆಟ್ಟೇರಿದ್ದ “ವಿಜಯರಥ’ ಚಿತ್ರವನ್ನು ಮಧುಗಿರಿ, ಬೆಂಗಳೂರು ಸುತ್ತಮುತ್ತ ಚಿತ್ರೀಕರಿಸಲಾಗಿದೆ.
ಲವ್ ಕಂ ಸೆಂಟಿಮೆಂಟ್ ಕಥಾಹಂದರಹೊಂದಿರುವ ಈ ಚಿತ್ರವನ್ನು “ವೃಕ್ಷ ಕ್ರಿಯೇಷನ್ಸ್’ ಬ್ಯಾನರ್ನಲ್ಲಿ ರಮೇಶ್ ಆರ್.ಮಧುಗಿರಿ ನಿರ್ಮಿಸಿದ್ದಾರೆ. ಕಳೆದ ಕೆಲ ವರ್ಷಗಳಿಂದ ಹಲವು ಚಿತ್ರಗಳಿಗೆ ನಿರ್ದೇಶನ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿರುವ ಅಜಯ್ ಸೂರ್ಯ. ಕೆ ಈ ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ. “ಈಗಾಗಲೇ ಚಿತ್ರದ ಪ್ರಮೋಶನ್ ಕೆಲಸಗಳನ್ನು ನಡೆಸುತ್ತಿದ್ದು,
ಬಿಡುಗಡೆಯಾಗಿರುವ ಚಿತ್ರದ ಹಾಡುಗಳು ಮತ್ತು ಟ್ರೇಲರ್ಗಳಿಗೆ ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ. ಹಾಗಾಗಿ ಇದೇ ತಿಂಗಳು ಚಿತ್ರವನ್ನು ಪ್ರೇಕ್ಷಕರ ಮುಂದೆ ತರುತ್ತಿದ್ದೇವೆ’ ಎನ್ನುವುದು ಚಿತ್ರತಂಡದ ಮಾತು. “ವಿಜಯ್ ಸಿನಿಮಾಸ್’ ಚಿತ್ರದ ಹಂಚಿಕೆಯನ್ನು ಪಡೆದುಕೊಂಡಿದ್ದು ಮುಂದಿನವಾರ ಚಿತ್ರ ಸುಮಾರು 40-50 ಕೇಂದ್ರಗಳಲ್ಲಿ ತೆರೆ ಕಾಣುವ ಸಾಧ್ಯತೆ ಇದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್