ಹೊಸ ಚಿತ್ರಕ್ಕೆ ವಿಕ್ರಮ್‌ ರೆಡಿ


Team Udayavani, Nov 24, 2018, 10:47 AM IST

vikram.jpg

ಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ, ರವಿಚಂದ್ರನ್‌ ಅವರ ಎರಡನೇ ಪುತ್ರ ವಿಕ್ರಮ್‌ ಅಭಿನಯದ “ನವೆಂಬರ್‌ನಲ್ಲಿ ನಾನು ಅವಳು’ ಚಿತ್ರ ಶುರುವಾಗಬೇಕಿತ್ತು. ಆದರೆ, ಹಲವು ಕಾರಣಗಳಿಂದ ಆ ಚಿತ್ರ ಸೆಟ್ಟೇರಲಿಲ್ಲ. ನಾಗಶೇಖರ್‌ ನಿರ್ದೇಶಿಸಬೇಕಿದ್ದ “ನವೆಂಬರ್‌ನಲ್ಲಿ ನಾನು ಅವಳು’ ಚಿತ್ರಕ್ಕೆ ಭರ್ಜರಿ ಫೋಟೋ ಶೂಟ್‌ ನಡೆಸಲಾಗಿತ್ತು. ಅಷ್ಟೇ ಅಲ್ಲ, ಫ‌ಸ್ಟ್‌ಲುಕ್‌ ಕೂಡ ಬಿಡುಗಡೆಯಾಗಿತ್ತು.

ಇನ್ನೇನು ಚಿತ್ರ ಶುರುವಾಗುತ್ತೆ ಅಂದುಕೊಳ್ಳುವಷ್ಟರಲ್ಲಿ, ನಾಗಶೇಖರ್‌ ಅಭಿಷೇಕ್‌ ಅಂಬರೀಶ್‌ಗೆ “ಅಮರ್‌’ ಚಿತ್ರ ಶುರುಮಾಡಿದರು. ಈಗೇಕೆ ವಿಕ್ರಮ್‌ ಚಿತ್ರದ ವಿಷಯ ಎಂಬ ಸಣ್ಣ ಪ್ರಶ್ನೆ ಎದುರಾಗಬಹುದು. ವಿಷಯ ಇದೆ. ವಿಕ್ರಮ್‌ ಈಗ ಹೊಸ ಚಿತ್ರ ಒಪ್ಪಿಕೊಂಡಿದ್ದಾರೆ. ಸ್ವತಃ ರವಿಚಂದ್ರನ್‌ ಅವರೇ ಆ ಚಿತ್ರದ ಕಥೆ ಕೇಳಿ, ವಿಕ್ರಮ್‌ಗೆ ಸರಿಹೊಂದುವ ಕಥೆ ಎಂದು ಗ್ರೀನ್‌ಸಿಗ್ನಲ್‌ ಕೊಟ್ಟ ಬಳಿಕ ಸಿನಿಮಾ ಚಟುವಟಿಕೆಗಳು ಜೋರಾಗಿ ನಡೆದಿವೆ.

ಅಂದಹಾಗೆ, ವಿಕ್ರಮ್‌ ಅಭಿನಯಿಸುತ್ತಿರುವ ಚಿತ್ರಕ್ಕೆ ಸಹನಾ ಮೂರ್ತಿ ನಿರ್ದೇಶಕರು. ಈ ಹಿಂದೆ “ರೋಜ್‌’ ಹಾಗೂ “ಮಾಸ್‌ ಲೀಡರ್‌’ ಚಿತ್ರ ನಿರ್ದೇಶಿಸಿದ್ದ ಸಹನಾಮೂರ್ತಿ ಅವರಿಗೆ ಇದು ಮೂರನೇ ಚಿತ್ರ. ವಿಕ್ರಮ್‌ಗೆ ಮೊದಲ ಚಿತ್ರವಿದು. ಚಿತ್ರಕ್ಕಿನ್ನೂ ಶೀರ್ಷಿಕೆ ಪಕ್ಕಾ ಆಗಿಲ್ಲ. ಸ್ಕ್ರಿಪ್ಟ್ ಕೆಲಸಗಳು ನಡೆಯುತ್ತಿದ್ದು, ಫೆಬ್ರವರಿ 14 ರ ಪ್ರೇಮಿಗಳ ದಿನದಂದು ಚಿತ್ರ ಘೋಷಣೆ ಮಾಡುವ ಯೋಚನೆ ನಿರ್ದೇಶಕರದ್ದು.

ಮುಂದಿನ ಯುಗಾದಿಗೆ ಚಿತ್ರಕ್ಕೆ ಚಾಲನೆ ಕೊಡುವ ತಯಾರಿ ಮಾಡಿಕೊಳ್ಳುತ್ತಿದ್ದಾರೆ ನಿರ್ದೇಶಕರು. ಅಂದಹಾಗೆ, ಇದೊಂದು ಸ್ವಮೇಕ್‌ ಕಥೆ. ಪಕ್ಕಾ ಲವ್‌ಸ್ಟೋರಿ ಚಿತ್ರ ಇದಾಗಿದ್ದು, ವಿಕ್ರಮ್‌ ಅವರನ್ನು ಈ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಪರಿಚಯಿಸುವ ಉತ್ಸಾಹ ಚಿತ್ರತಂಡಕ್ಕಿದೆ. ಆ ನಿಟ್ಟಿನಲ್ಲಿ ವಿಕ್ರಮ್‌ಗೆ ಇಲ್ಲಿ ಹೊಸ ಗೆಟಪ್‌ ಇರಲಿದ್ದು, ಅದಕ್ಕಾಗಿ ಬಾಲಿವುಡ್‌ನ‌ಲ್ಲಿ ಹೇರ್‌ಸ್ಟೈಲರ್ ಕರೆಸಿ ಹೊಸ ಲುಕ್‌ ಕೊಡುವ ಬಗ್ಗೆಯೂ ಮಾತುಕತೆ ನಡೆಸಲಾಗುತ್ತಿದೆ.

ಇಲ್ಲಿ ಲವ್ವು, ತಾಯಿ ಸೆಂಟಿಮೆಂಟ್‌, ಎಮೋಷನ್ಸ್‌ ಹಾಗು ಒಂದಷ್ಟು ಗೆಳೆತನ ಇತ್ಯಾದಿ ವಿಷಯಗಳು ಹೈಲೈಟ್‌ ಆಗಿದ್ದು, ಎಮೋಷನ್ಸ್‌ ಆಳವಾಗಿರಲಿದೆಯಂತೆ. ಇನ್ನು, ಚಿತ್ರದ ಪಾತ್ರಕ್ಕಾಗಿ ವಿಕ್ರಮ್‌ ಸಾಕಷ್ಟು ತಯಾರಿಯನ್ನೂ ಮಾಡಿಕೊಳ್ಳುತ್ತಿದ್ದಾರಂತೆ. ಅವರಿಗೆ ವರ್ಕ್‌ಶಾಪ್‌ ಕೂಡ ನಡೆಸಲಾಗುತ್ತಿದ್ದು, ಅಭಿನಯ ತರಂಗದಲ್ಲಿ ನಟನೆ ತರಬೇತಿ, ಡ್ಯಾನ್ಸ್‌ ಮಾಸ್ಟರ್‌ ಕಲೈ ಅವರ ಬಳಿ ನೃತ್ಯ ತರಬೇತಿ, ರವಿವರ್ಮ ಅವರಿಂದ ಸ್ಟಂಟ್ಸ್‌ ಟಿಪ್ಸ್‌ ಸೇರಿದಂತೆ ಜಿಮ್ನಾಸ್ಟಿಕ್‌ ಕೂಡ ಮಾಡುತ್ತಿದ್ದಾರೆ.

ವಿಶೇಷವೆಂದರೆ, ವಿಕ್ರಮ್‌ ಅವರಿಲ್ಲಿ ಸಿಕ್ಸ್‌ ಪ್ಯಾಕ್‌ ಮಾಡುತ್ತಿದ್ದಾರೆಂಬುದು ಸುದ್ದಿ. ರವಿಚಂದ್ರನ್‌ ಅವರ ಪುತ್ರ ಎಂಬ ಕಾರಣಕ್ಕೆ, ಚಿತ್ರದಲ್ಲಿ ರವಿಚಂದ್ರನ್‌ ಅವರ ಯಾವುದೇ ಶೇಡ್‌ ಇಲ್ಲಿರುವುದಿಲ್ಲ. ಇಲ್ಲಿ ಎಲ್ಲವೂ ರಿಯಾಲಿಟಿಯಾಗಿ ಇರಲಿದೆ. ಆ್ಯಕ್ಷನ್‌ ಸಿನಿಮಾದ ಇನ್ನೊಂದು ವಿಶೇಷ. ಚಿತ್ರಕ್ಕೆ ಸೋಮಶೇಖರ್‌ ಮತ್ತು ಸುರೇಶ್‌ ನಿರ್ಮಾಣದ ಜವಾಬ್ದಾರಿ ವಹಿಸಿಕೊಂಡಿದ್ದಾರೆ. ಕಥೆ ಏನೆಲ್ಲಾ ಕೇಳಲಿದೆಯೋ, ಅಷ್ಟು ಹಣ ಹಾಕಿ ದೊಡ್ಡ ಬಜೆಟ್‌ನಲ್ಲಿ ಚಿತ್ರ ನಿರ್ಮಿಸುವ ಉತ್ಸಾಹದಲ್ಲಿದ್ದಾರೆ ನಿರ್ಮಾಪಕರು.

ಇನ್ನು, ಸುಮಾರು 70 ದಿನಗಳ ಕಾಲ ಚಿತ್ರೀಕರಣ ನಡೆಸುವ ಯೋಚನೆಯಲ್ಲಿರುವ ನಿರ್ದೇಶಕರು, ಈ ಬಾರಿ ಹೊಸ ಪ್ರಯತ್ನದೊಂದಿಗೆ ಹೊಸತನ್ನು ಕೊಡುವ ಹುಮ್ಮಸ್ಸಿನಲ್ಲಿದ್ದಾರೆ. ಚಿತ್ರಕ್ಕೆ ಸಂತೋಷ್‌ ರೈ ಪಾತಾಜೆ ಛಾಯಾಗ್ರಹಣ ಮಾಡಲಿದ್ದು, ಸಂಗೀತ ನೀಡುವ ಕುರಿತು ಅರ್ಜುನ್‌ ಜನ್ಯ ಬಳಿ ಮಾತುಕತೆ ನಡೆಯುತ್ತಿದೆ.  ಸದ್ಯಕ್ಕೆ ನಾಯಕಿಯ ಆಯ್ಕೆ ನಡೆಯಬೇಕಿದೆ. ಕನ್ನಡದ ಹುಡುಗಿಯೇ ಇರಬೇಕೆಂಬುದು ತಂಡದ ಯೋಚನೆ. ಇಷ್ಟರಲ್ಲೇ ಆಡಿಷನ್‌ ನಡೆಸಿ, ಆ ಮೂಲಕ ಆಯ್ಕೆ ನಡೆಸಲಿದೆ.

ಟಾಪ್ ನ್ಯೂಸ್

Dhruva Sarja ಮಾರ್ಟಿನ್‌ ರಿಸಲ್ಟ್ ಚಂದನವನಕ್ಕೆ ಹೆಮ್ಮೆ ತರಲಿದೆ…ನಿರ್ಮಾಪಕ ಉದಯ್‌ ಮೆಹ್ತಾ

Dhruva Sarja ಮಾರ್ಟಿನ್‌ ರಿಸಲ್ಟ್ ಚಂದನವನಕ್ಕೆ ಹೆಮ್ಮೆ ತರಲಿದೆ…ನಿರ್ಮಾಪಕ ಉದಯ್‌ ಮೆಹ್ತಾ

Nomination: ಕೊನೆಯ ಕ್ಷಣದಲ್ಲಿ ಓಡೋಡಿ ಬಂದು ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ…

Nomination: ಕೊನೆಯ ಕ್ಷಣದಲ್ಲಿ ಓಡೋಡಿ ಬಂದು ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ…

arvind kejriwal

Delhi Excise Policy Case: ಕೇಜ್ರಿಗೆ ಅಲ್ಪ ರಿಲೀಫ್; ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

prashanth neel

KGF-3 ಸ್ಕ್ರಿಪ್ಟ್ ಸಿದ್ದವಿದೆ, ಆದರೆ….: ಬಿಗ್ ಅಪ್ಡೇಟ್ ನೀಡಿದ ಪ್ರಶಾಂತ್ ನೀಲ್

2013ರಲ್ಲಿ ನಡೆದ ನರೇಂದ್ರ ದಾಭೋಲ್ಕರ್ ಹತ್ಯೆ ಪ್ರಕರಣ: ಇಬ್ಬರಿಗೆ ಜೀವಾವಧಿ, 3 ಮಂದಿ ಖುಲಾಸೆ

2013ರಲ್ಲಿ ನಡೆದ ನರೇಂದ್ರ ದಾಭೋಲ್ಕರ್ ಹತ್ಯೆ ಪ್ರಕರಣ: ಇಬ್ಬರಿಗೆ ಜೀವಾವಧಿ, ಮೂವರು ಖುಲಾಸೆ

Colin Munro Announced International Retirement

Retired; ಟಿ20 ವಿಶ್ವಕಪ್ ನಲ್ಲಿ ಸಿಗದ ಸ್ಥಾನ; ವೃತ್ತಿಜೀವನಕ್ಕೆ ತೆರೆಎಳೆದ ಕಿವೀಸ್ ಬ್ಯಾಟರ್

pralhad joshi

Hubli; ಕಾಂಗ್ರೆಸ್ ಅಧಿಕಾರಕ್ಕಾಗಿ ದೇಶವನ್ನು ಒಡೆಯಲೂ ಹೇಸುವುದಿಲ್ಲ: ಪ್ರಹ್ಲಾದ ಜೋಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

prashanth neel

KGF-3 ಸ್ಕ್ರಿಪ್ಟ್ ಸಿದ್ದವಿದೆ, ಆದರೆ….: ಬಿಗ್ ಅಪ್ಡೇಟ್ ನೀಡಿದ ಪ್ರಶಾಂತ್ ನೀಲ್

movies

Sandalwood; ಇಂದು ತೆರೆಗೆ ಬರುತ್ತಿದೆ ನಾಲ್ಕು ಸಿನಿಮಾಗಳು

the suit kannada movie

Sandalwood; ಬದುಕು – ಭಾವನೆಗಳ ಸಂಗಮ ‘ದಿ ಸೂಟ್’

Jyothi Rai: ನಟಿ ಜ್ಯೋತಿ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ವೈರಲ್; ಮೌನ ಮುರಿದ ನಟಿ

Jyothi Rai: ನಟಿ ಜ್ಯೋತಿ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ವೈರಲ್; ಮೌನ ಮುರಿದ ನಟಿ

Kannada Cinema; ರಾಜಕಾರಣದ ಸುತ್ತ ‘ಭಗೀರಥ’; ಟೀಸರ್ ರಿಲೀಸ್

Kannada Cinema; ರಾಜಕಾರಣದ ಸುತ್ತ ‘ಭಗೀರಥ’; ಟೀಸರ್ ರಿಲೀಸ್

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Dhruva Sarja ಮಾರ್ಟಿನ್‌ ರಿಸಲ್ಟ್ ಚಂದನವನಕ್ಕೆ ಹೆಮ್ಮೆ ತರಲಿದೆ…ನಿರ್ಮಾಪಕ ಉದಯ್‌ ಮೆಹ್ತಾ

Dhruva Sarja ಮಾರ್ಟಿನ್‌ ರಿಸಲ್ಟ್ ಚಂದನವನಕ್ಕೆ ಹೆಮ್ಮೆ ತರಲಿದೆ…ನಿರ್ಮಾಪಕ ಉದಯ್‌ ಮೆಹ್ತಾ

Nomination: ಕೊನೆಯ ಕ್ಷಣದಲ್ಲಿ ಓಡೋಡಿ ಬಂದು ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ…

Nomination: ಕೊನೆಯ ಕ್ಷಣದಲ್ಲಿ ಓಡೋಡಿ ಬಂದು ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ…

Vijayapura ಬಸವ ಜಯಂತಿ ದಿನ ಮಾದರಿ ಕಾರ್ಯ; ಹೆತ್ತವರಿಲ್ಲದ ವಿದ್ಯಾರ್ಥಿಗೆ ಶೈಕ್ಷಣಿಕ ದತ್ತು

Vijayapura ಬಸವ ಜಯಂತಿ ದಿನ ಮಾದರಿ ಕಾರ್ಯ; ಹೆತ್ತವರಿಲ್ಲದ ವಿದ್ಯಾರ್ಥಿಗೆ ಶೈಕ್ಷಣಿಕ ದತ್ತು

arvind kejriwal

Delhi Excise Policy Case: ಕೇಜ್ರಿಗೆ ಅಲ್ಪ ರಿಲೀಫ್; ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

7-kundapura

Rank: ಕುಂದಾಪುರ ತಾಲೂಕಿಗೆ ಪ್ರಥಮ ಹಾಗೂ ರಾಜ್ಯಕ್ಕೆ 5ನೇ ರ್‍ಯಾಂಕ್ ಪಡೆದ ಶುಕ್ತಿಜಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.