ವಿಕ್ರಾಂತ್ ರೋಣ ಚೆಲುವೆಗೆ ಕಂಕಣ ಭಾಗ್ಯ
Team Udayavani, Dec 21, 2022, 11:10 AM IST
ಸ್ಯಾಂಡಲ್ವುಡ್ ನಟಿ ನೀತಾ ಅಶೋಕ್ ಹಸೆಮಣೆ ಏರಲು ತಯಾರಾಗಿದ್ದಾರೆ. ತಮ್ಮ ಬಹುಕಾಲದ ಗೆಳೆಯ ಸತೀಶ್ ಜೊತೆ ನೀತಾ ಇತ್ತೀಚೆಗಷ್ಟೇ ಎಂಗೇಜ್ಮೆಂಟ್ ಮಾಡಿಕೊಂಡಿದ್ದಾರೆ.
ತಮ್ಮ ನಿಶ್ಚಿತಾರ್ಥ ವಿಷಯವನ್ನು ಸೋಶಿಯಲ್ ಮೀಡಿಯಾ ಮೂಲಕ ತಿಳಿಸಿರುವ ನೀತಾ, “ಕ್ಲಾಸ್ಮೇಟ್ ಟು ಸೋಲ್ಮೇಟ್’ ಎಂಬ ಪೋಸ್ಟ್ ಹಾಕುವ ಮೂಲಕ ತಮ್ಮ ನಿಶ್ಚಿತಾರ್ಥದ ಪೋಟೋಗಳನ್ನು ಹಂಚಿಕೊಂಡಿದ್ದಾರೆ.
ಖಾಸಗಿ ವಾಹಿನಿಯ “ಯಶೋದೆ’ ಸೀರಿಯಲ್ ಮೂಲಕ ನಟನಾ ಕ್ಷೇತ್ರಕ್ಕೆ ಕಾಲಿಟ್ಟ ಕರಾವಳಿ ಚೆಲುವೆ ನೀತಾ ಅಶೋಕ್, ಆ ನಂತರ ಹಿರಿತೆರೆಯತ್ತ ಮುಖ ಮಾಡಿದ್ದರು. “ಜಬರ್ದಸ್ತ್ ಶಂಕರ’ ತುಳು ಸಿನಿಮಾದ ಮೂಲಕ ಚಿತ್ರರಂಗಕ್ಕೆ ಪರಿಚಯವಾಗಿದ್ದ ನೀತಾ ಅಶೋಕ್, ಅದಾದ ಬಳಿಕ ಸುದೀಪ್ ನಟನೆಯ “ವಿಕ್ರಾಂತ್ ರೋಣ’ ಚಿತ್ರದಲ್ಲಿ ನಾಯಕಿಯಾಗಿ ಕಾಣಿಸಿಕೊಂಡಿದ್ದರು.
“ವಿಕ್ರಾಂತ್ ರೋಣ’ ಸಿನಿಮಾದ ನಂತರ ಒಂದಷ್ಟು ಸಿನಿಮಾಗಳಲ್ಲಿ ನೀತಾ ಹೆಸರು ಕೇಳಿಬಂದಿದ್ದರೂ, ಆ ಸಿನಿಮಾಗಳು ಅಧಿಕೃತವಾಗಿ ಘೋಷಣೆಯಾಗುವ ಮೊದಲೇ ನೀತಾ ಹಸೆಮಣೆ ಏರುವ ಸುದ್ದಿ ಹೊರಬಿದ್ದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ