‘ವಿಕ್ರಾಂತ ರೋಣ’ ಡಬ್ಬಿಂಗ್ ಶುರು ಮಾಡಿದ ಸುದೀಪ್
Team Udayavani, Jun 28, 2021, 8:04 PM IST
ಬೆಂಗಳೂರು: ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ನಟಿಸಿರುವ ಬಹುನಿರೀಕ್ಷಿತ ಸಿನಿಮಾ ವಿಕ್ರಾಂತ್ ರೋಣ ತೆರೆಗೆ ಬರುವುದನ್ನು ಕಾಯುತ್ತಿರುವ ಅಭಿಮಾನಿಗಳಿಗೆ ಇದೀಗ ಗುಡ್ ನ್ಯೂಸ್ ಸಿಕ್ಕಿದೆ.
ಬಹುಭಾಷೆಗಳಲ್ಲಿ ಬಿಡುಗಡೆಯಾಗಲಿರುವ ವಿಕ್ರಾಂತ್ ರೋಣ ಸಿನಿಮಾದ ಬಹುತೇಕ ಶೂಟಿಂಗ್ ಮುಕ್ತಾಯವಾಗಿದೆ. ಇದೀಗ ಮಾತಿನ ಜೋಡನೆ ಕಾರ್ಯ ಜೋರಾಗಿ ನಡೆದಿದೆ. ಇತ್ತೀಚಿಗಷ್ಟೆ ನಟ ರವಿಶಂಕರ್ ಗೌಡ್ ತಮ್ಮ ಪಾತ್ರಕ್ಕೆ ಡಬ್ಬಿಂಗ್ ಮಾಡಿ ಮುಗಿಸಿದ್ದರು. ಇದೀಗ ನಾಯಕ ನಟ ಕಿಚ್ಚು ಸುದೀಪ್ ಅವರು ಡಬ್ಬಿಂಗ್ ಕೆಲಸ ಶುರು ಮಾಡಿದ್ದಾರೆ.
ಈ ಬಗ್ಗೆ ತಮ್ಮ ಟ್ವಿಟರಿನಲ್ಲಿ ಬರೆದುಕೊಂಡಿರುವ ಸುದೀಪ್, ಬಹಳ ಸಮಯದ ನಂತರ ಸಿನಿಮಾಗೆ ಕಂಠದಾನ ಮಾಡುತ್ತಿದ್ದೇನೆ. ವಿಕ್ರಾಂತ್ ರೋಣ ಸಿನಿಮಾದ ಡಬ್ಬಿಂಗ್ ಮಾಡುತ್ತಿದ್ದೇನೆ. ಸಿನಿಮಾ ಕೆಲಸಗಳು ಆರಂಭವಾಗಿರುವುದನ್ನು ನೋಡಲು ತುಂಬಾ ಖುಷಿಯಾಗುತ್ತಿದೆ ಎಂದಿದ್ದಾರೆ.
ಇನ್ನು ಸುದೀಪ್ ಸದ್ಯ ಬಿಗ್ ಬಾಸ್ 8ರ ಸೆಕೆಂಡ್ ಇನ್ನಿಂಗ್ಸ್ನ ನಿರೂಪಣೆಯಲ್ಲೂ ಬ್ಯುಸಿಯಾಗಿದ್ದಾರೆ. ವಿಕ್ರಾಂತ್ ರೋಣ ಸಿನಿಮಾಗಿಂತ ಮೊದಲು ಕೋಟಿಗೊಬ್ಬ 3 ಚಿತ್ರ ರಿಲೀಸ್ ಆಗಬೇಕಿದೆ. ಈಗಾಗಲೇ ಎರಡೂ ಸಿನಿಮಾಗಳ ಚಿತ್ರೀಕರಣ ಮುಗಿದಿದ್ದು, ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ನಡೆಯುತ್ತಿವೆ. ಮೊದಲು ಕೋರಿಗೊಬ್ಬ 3 ಸಿನಿಮಾ ರಿಲೀಸ್ ಆಗಲಿದೆ ಎಂದು ಹೇಳಲಾಗುತ್ತಿದೆ. ಕೋಟಿಗೊಬ್ಬ 3 ಸಿನಿಮಾ ರಿಲೀಸ್ ಆದ ನಂತರವೇ ವಿಕ್ರಾಂತ್ ರೋಣ ತೆರೆ ಕಾಣಲಿದೆಯಂತೆ.
Seems so long that I gave my voice for a film. Finally starting my voice over for #VikrantRona.
Yeah,,,, supa happy to see it shaping well and the way we all wanted it to.@anupsbhandari @shaliniartss @AJANEESHB @nirupbhandari @neethaofficial @williamdaviddop #ShivuArt pic.twitter.com/JrWPJUCG3c— Kichcha Sudeepa (@KicchaSudeep) June 28, 2021
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ