ಪುಸ್ತಕವೇ ಆಹ್ವಾನ ಪತ್ರಿಕೆ!


Team Udayavani, Aug 31, 2017, 5:27 PM IST

Ananthu-Versus-Nusrath.jpg

ಈ ಕಾಲದಲ್ಲಿ ಆಹ್ವಾನ ಪತ್ರಿಕೆಗಳು ಅದೆಷ್ಟು ಡಿಫ‌ರೆಂಟ್‌ ಆಗಿರುತ್ತದೆ ಎಂದು ನಿಮಗೆ ಗೊತ್ತೇ ಇದೆ. ಅದೇ ರೀತಿ, “ಅನಂತು ವರ್ಸಸ್‌ ನುಸ್ರತ್‌’ ತಂಡವು ಒಂದು ಹೊಸ ಪ್ರಯೋಗ ಮಾಡಿದೆ. ಚಿತ್ರದ ಮುಹೂರ್ತವು ಮುಂದಿನ ಸೋಮವಾರ ಅಂದರೆ ಸೆಪ್ಟೆಂಬರ್‌ 4ರಂದು ಕಂಠೀರವ ಸ್ಟುಡಿಯೋದಲ್ಲಿ ನಡೆಯಲಿದೆ. ಆ ಮುಹೂರ್ತ ಸಮಾರಂಭಕ್ಕೆಂದು ಚಿತ್ರತಂಡವು, ಕಾನೂನು ಪುಸ್ತಕದ ರೂಪದಲ್ಲಿ ಆಹ್ವಾನ ಪತ್ರಿಕೆಯನ್ನು ಮಾಡಿಸಿದೆ.

ಹೌದು, “ಅನಂತು ವರ್ಸಸ್‌ ನುಸ್ರತ್‌’ ಚಿತ್ರದ ಆಹ್ವಾನ ಪತ್ರಿಕೆಯು ಲಾ ಬುಕ್‌ ಶೈಲಿಯಲ್ಲಿದೆ. ಚಿತ್ರತಂಡವು ಹಾಗೆ ಆಹ್ವಾನ ಪತ್ರಿಕೆ ಮಾಡಿಸುವುದಕ್ಕೂ ಕಾರಣವಿದೆ. ಅದೇನೆಂದರೆ, ಚಿತ್ರದಲ್ಲಿ ನಾಯಕ ಮತ್ತು ನಾಯಕಿ ಇಬ್ಬರೂ ಲಾಯರ್‌ ಪಾತ್ರ ಮಾಡುತ್ತಿದ್ದು, ನ್ಯಾಯಾಲಯದಲ್ಲಿ ಅವರಿಬ್ಬರ ಲವ್‌ ಆಗುತ್ತದಂತೆ. ಅದೇ ಕಾರಣಕ್ಕೆ ಆಹ್ವಾನ ಪತ್ರಿಕೆಯನ್ನೂ ಕಾನೂನು ಪುಸ್ತಕದ ರೀತಿ ಡಿಸೈನ್‌ ಮಾಡಲಾಗಿದೆ. ಅಂದ ಹಾಗೆ, ಈ ಮುಹೂರ್ತ ಸಮಾರಂಭಕ್ಕೆ ಶಿವರಾಜಕುಮಾರ್‌, ರಾಘವೇಂದ್ರ ರಾಜಕುಮಾರ್‌ ಮತ್ತು ಪುನೀತ್‌ ರಾಜಕುಮಾರ್‌ ವಿಶೇಷ ಆಹ್ವಾನಿತರಾಗಿ ಆಗಮಿಸಲಿದ್ದಾರೆ. ಮಿಕ್ಕಂತೆ ಡಾ. ರಾಜ್‌ ಕುಟುಂಬದ ಹಲವು ಸದಸ್ಯರು ಈ ಮುಹೂರ್ತದಲ್ಲಿ ಭಾಗವಹಿಸಲಿದ್ದಾರೆ. 

ಚಿತ್ರದಲ್ಲಿ ಅನುಂತು ಪಾತ್ರವನ್ನು ವಿನಯ್‌ ರಾಜಕುಮಾರ್‌ ಮಾಡಿದರೆ, ನುಸ್ರತ್‌ ಪಾತ್ರಕ್ಕೆ ಇನ್ನೂ ನಾಯಕಿಯ ಹುಡುಕಾಟ ನಡೆಯುತ್ತಿದ್ದು, ಸದ್ಯದಲ್ಲೇ ಆಯ್ಕೆ ಮಾಡಲಾಗುವುದು ಎನ್ನುತ್ತಾರೆ ಚಿತ್ರದ ನಿರ್ದೇಶಕ ಸುಧೀರ್‌ ಶಾನುಭೋಗ್‌. ಚಿತ್ರದ ಚಿತ್ರೀಕರಣ ಸೆಪ್ಟೆಂಬರ್‌ ಕೊನೆ ಅಥವಾ ಅಕ್ಟೋಬರ್‌ ನಿಂದ ನಡೆಯಲಿದೆ. ಚಿತ್ರಕ್ಕೆ ಸುನಾದ್‌ ಗೌತಮ್‌ ಸಂಗೀತ ಸಂಯೋಜಿಸಿದರೆ, ಅಭಿಷೇಕ್‌ ಕಾಸರಗೋಡು ಛಾಯಾಗ್ರಹಣ ಮಾಡುತ್ತಿದ್ದಾರೆ.

“ಅನಂತು ವರ್ಸಸ್‌ ನುಸ್ರತ್‌’ ಚಿತ್ರಕ್ಕೂ ಮುನ್ನ ಸುದ್ದಿಯಾದ ಇನ್ನೊಂದು ಚಿತ್ರವೆಂದರೆ, ಅದು “ಅಚ್ಚರಿ’. ವಿನಯ್‌ ರಾಜಕುಮಾರ್‌ ಅಭಿನಯದ ಈ ಚಿತ್ರ ಇಷ್ಟರಲ್ಲಾಗಲೇ ಶುರುವಾಗಬೇಕಿತ್ತು. ಆದರೆ, ಈ ಚಿತ್ರ ನಿಂತಿದೆ ಎಂಬಂತಹ ಸುದ್ದಿಯೊಂದು ಗಾಂಧಿನಗರದಲ್ಲಿ ಓಡಾಡುತ್ತಿದೆ. ಆದರೆ, ಈ ಸುದ್ದಿ ಸುಳ್ಳು ಎನ್ನುತ್ತಾರೆ ಆ ಚಿತ್ರದ ನಿರ್ದೇಶಕ ಸುನೀಲ್‌ ತಾಳ್ಯ.
“ನಮ್ಮ ಚಿತ್ರ ವಿನಯ್‌ ರಾಜಕುಮಾರ್‌ ಅವರ ಮೂರನೆಯ ಚಿತ್ರವಾಗಿ ಇಷ್ಟರಲ್ಲಾಗಲೇ ಶುರುವಾಗಬೇಕಿತ್ತು. ಆದರೆ, ಕಾರಣಾಂತರದಿಂದ ಸ್ವಲ್ಪ ತಡವಾಗಿದೆ ಅಷ್ಟೇ. “ಅನಂತು ವರ್ಸಸ್‌ ನುಸ್ರತ್‌’ ನಂತರ ನಮ್ಮ ಚಿತ್ರ  ರಂಭವಾಗಲಿದ್ದು, “ಅಚ್ಚರಿ’ಯು ವಿನಯ್‌ ರಾಜಕುಮಾರ್‌ ಅವರ 4ನೇ ಚಿತ್ರವಾಗಲಿದೆ’ ಎಂದು ಸ್ಪಷ್ಟಪಡಿಸುತ್ತಾರೆ ಸುನೀಲ್‌ ತಾಳ್ಯ.

ಟಾಪ್ ನ್ಯೂಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3-uv-fusion

Devotion: ಭಕ್ತಿಯ ಅರ್ಥವಾದರೂ ಏನು?

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.