‘ಒಂದು ಸರಳ ಪ್ರೇಮಕಥೆ’ಯಲ್ಲಿ ವಿನಯ್ ಕನಸು; ಇದು ಸುನಿ ಸಿನಿಮಾ


Team Udayavani, Mar 13, 2023, 4:18 PM IST

‘ಒಂದು ಸರಳ ಪ್ರೇಮಕಥೆ’ಯಲ್ಲಿ ವಿನಯ್ ಕನಸು; ಇದು ಸುನಿ ಸಿನಿಮಾ

ನಿರ್ದೇಶಕ ಸುನಿ ಸದ್ಯ “ಒಂದು ಸರಳ ಪ್ರೇಮಕಥೆ’ ಸಿನಿಮಾದ ಚಿತ್ರೀಕರಣದಲ್ಲಿ ಬಿಝಿಯಾಗಿದ್ದಾರೆ. ಈಗಾಗಲೇ ಸದ್ದಿಲ್ಲದೆ ತಮ್ಮ “ಒಂದು ಸರಳ ಪ್ರೇಮಕಥೆ’ಯ ಅರ್ಧದಷ್ಟು ಚಿತ್ರೀಕರಣ ಪೂರ್ಣಗೊಳಿಸಿರುವ ಸುನಿ, ಕಳೆದ ಕೆಲ ದಿನಗಳಿಂದ ಮೈಸೂರು ಸುತ್ತಮುತ್ತ ತಮ್ಮ ತಂಡದೊಂದಿಗೆ ಸಿನಿಮಾದ ಚಿತ್ರೀಕರಣ ನಡೆಸುತ್ತಿದ್ದಾರೆ. ನಾಯಕ ನಟ ವಿನಯ ರಾಜಕುಮಾರ್‌, ನಾಯಕಿಯರಾದ ಸ್ವಾತಿಷ್ಠ ಮತ್ತು ಮಲ್ಲಿಕಾ ಸಿಂಗ್‌ ಸೇರಿದಂತೆ ಹಲವು ಕಲಾವಿದರು ಈ ವೇಳೆ ಚಿತ್ರೀಕರಣದಲ್ಲಿ ಭಾಗಿಯಾಗಿದ್ದರು.

ಇದೇ ವೇಳೆ ಚಿತ್ರೀಕರಣ ನಡೆಯುತ್ತಿದ್ದ ಸ್ಥಳಕ್ಕೆ ಮಾಧ್ಯಮಗಳನ್ನು ಆಹ್ವಾನಿಸಿದ್ದ ಚಿತ್ರತಂಡ, “ಒಂದು ಸರಳ ಪ್ರೇಮಕಥೆ’ಯ ಪೋಸ್ಟರ್‌ ಬಿಡುಗಡೆ ಮಾಡಿ, ಚಿತ್ರದ ಬಗ್ಗೆ ಒಂದಷ್ಟು ವಿಷಯಗಳನ್ನು ಹಂಚಿಕೊಂಡಿತು.

ನಿರ್ದೇಶಕ ಸಿಂಪಲ್‌ ಸುನಿ ಮಾತನಾಡಿ, “”ಸಿಂಪಲ್ಲಾಗ್‌ ಒಂದ್‌ ಲವ್‌ ಸ್ಟೋರಿ’ ಗೆ ಇಟ್ಟ ಮೊದಲ ಟೈಟಲ್‌ “ಒಂದು ಸರಳ ಪ್ರೇಮಕಥೆ’. ಯಾವುದಾದರೂ ಸಿನಿಮಾಗೆ ಈ ಟೈಟಲ್‌ ಇಡೋಣ ಎಂದು ಹತ್ತು ವರ್ಷದಿಂದ ಟೈಟಲ್‌ ರಿನಿವಲ್‌ ಮಾಡಿಕೊಂಡು ಬಂದಿದ್ದೆ. ಈ ಚಿತ್ರದ ಕಥೆ ಕೇಳಿ ವಿನಯ್‌ ರಾಜಕುಮಾರ್‌ ಓ.ಕೆ ಮಾಡಿದ್ರು, ಚಿತ್ರಕ್ಕೆ ಎಂ. ಎಲ್‌ ಪ್ರಸನ್ನ ಕಥೆ, ಚಿತ್ರಕಥೆ ಬರೆದಿದ್ದಾರೆ. ಜನವರಿ 23ರಂದು ಸಿನಿಮಾ ಮುಹೂರ್ತ ಆಗಿತ್ತು, ಬೆಂಗಳೂರು, ಚಿಕ್ಕಪೇಟೆಯಲ್ಲಿ ಮೊದಲ ಹಂತದ ಚಿತ್ರೀಕರಣವಾಗಿದೆ. ಎರಡನೇ ಸರಳ ಪ್ರೇಮಕಥೆಯಲ್ಲಿ ಸಿಂಪಲ್‌ ಸುನಿ ವಿನಯ್‌ ಕನಸು ಏಪ್ರಿಲ್‌ನಲ್ಲಿ ತೆರೆಗೆ ಹಂತದಲ್ಲಿ ಮೈಸೂರಿನಲ್ಲಿ ಚಿತ್ರೀಕರಣ ನಡೆಯುತ್ತಿದ್ದು, ಈಗಾಗಲೇ ಶೇಕಡಾ 50ರಷ್ಟು ಚಿತ್ರೀಕರಣ ಮುಗಿದಿದೆ’ ಎಂದು ಸಿನಿಮಾ ಬಗ್ಗೆ ಮಾಹಿತಿ ನೀಡಿದರು.

ನಟ ವಿನಯ್‌ ರಾಜಕುಮಾರ್‌ ಮಾತನಾಡಿ, “ನನಗೆ ಮೊದಲಿನಿಂದಲೂ ರೊಮ್ಯಾಂಟಿಕ್‌ ಕಾಮಿಡಿ ಸಿನಿಮಾಗಳೆಂದರೆ ಇಷ್ಟ. ಸುನಿ ನಿರ್ದೇಶನದ ಹಿಂದಿನ ಸಿನಿಮಾಗಳೂ ಕೂಡ ತುಂಬಾ ಇಷ್ಟವಾಗಿದ್ದವು. ಸುನಿ ಹೇಳಿದ ಕಥೆ ಇಷ್ಟವಾಗಿ ಈ ಸಿನಿಮಾ ಮಾಡುತ್ತಿದ್ದೇನೆ. ಈ ಸಿನಿಮಾದಲ್ಲಿ ನಾನು ಅತಿಶಯ್‌ ಎಂಬ ಪಾತ್ರದಲ್ಲಿ

ಅಭಿನಯಿಸುತ್ತಿದ್ದೇನೆ’ ಎಂದು ತಮ್ಮ ಪಾತ್ರ ಪರಿಚಯ ಮಾಡಿ ಕೊಟ್ಟರು. ವಿನಯ್‌ ರಾಜಕುಮಾರ್‌ ಮೂಲಕ ತೆರೆಗೆ ತರುತ್ತಿದ್ದಾರೆ’ ಎಂಬ ಮಾಹಿತಿ ನೀಡಿದರು ಬರಹಗಾರ ಎಂ. ಎಲ್‌ ಪ್ರಸನ್ನ.

“ಸಿನಿಮಾ ಒಂದು ಸರಳ ಪ್ರೇಮಕಥೆ’ ಚಿತ್ರದಲ್ಲಿ ನಾಯಕಿಯರಾಗಿ ಸ್ವಾತಿಷ್ಠ ಕೃಷ್ಣನ್‌, “ರಾಧಾಕೃಷ್ಣ’ ಧಾರಾವಾಹಿ ಖ್ಯಾತಿಯ ಮಲ್ಲಿಕಾ ಸಿಂಗ್‌ ನಟಿಸುತ್ತಿದ್ದಾರೆ. ಮೊದಲ ಬಾರಿಗೆ ಇಬ್ಬರೂ ನಟಿಯರಿಗೂ ಇದು ಮೊದಲ ಸಿನಿಮಾವಾಗಿದ್ದು, ಇಬ್ಬರೂ ಕೂಡ ತಮ್ಮ ಪಾತ್ರದ ಬಗ್ಗೆ ಸಾಕಷ್ಟು ನಿರೀಕ್ಷೆಯ ಮಾತುಗಳನ್ನಾಡಿದರು. ನಿರ್ಮಾಪಕ ಮೈಸೂರು ರಮೇಶ್‌, ಛಾಯಾಗ್ರಹಕ ಕಾರ್ತಿಕ್‌ ಶರ್ಮ, ಸಂಗೀತ ನಿರ್ದೇಶಕ ವೀರ್‌ ಸಮರ್ಥ್ ಮೊದಲಾದವರು ಸಿನಿಮಾದ ಬಗ್ಗೆ ಮಾತನಾಡಿದರು.

ಟಾಪ್ ನ್ಯೂಸ್

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Moksha Kushal

Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.