ವಿನೋದ್‌ ಪ್ರಭಾಕರ್‌ ಈಗ ನಿರ್ಮಾಪಕ


Team Udayavani, Jan 18, 2022, 11:05 AM IST

vinod prabhakar

ಕನ್ನಡ ಚಿತ್ರರಂಗದಲ್ಲಿ ಈಗಾಗಲೇ ಹಲವು ನಟರು ತೆರೆಮುಂದೆ ನಾಯಕನಾಗಿ ಗುರುತಿಸಿಕೊಂಡು ಯಶಸ್ವಿಯಾದರೆ, ತೆರೆಹಿಂದೆ ನಿರ್ಮಾಪಕರಾಗಿಯೂ ಯಶಸ್ವಿಯಾಗಿದ್ದಾರೆ. ಕನ್ನಡ ಚಿತ್ರರಂಗದಲ್ಲಿ ಹೀಗೆ ಹುಡುಕಿದರೆ ನೂರಾರು ಹೆಸರುಗಳು ಸಿಗುತ್ತವೆ. ಇತ್ತೀಚಿನ ವರ್ಷಗಳಲ್ಲಿ ಹೀರೋ ಆಗಿ ಮತ್ತು ಪ್ರೊಡ್ನೂಸರ್‌ ಆಗಿ ತೆರೆಮುಂದೆ ಮತ್ತು ತೆರೆಹಿಂದೆ ಹೀಗೆ “ಡಬಲ್‌ ರೋಲ್‌’ನಲ್ಲಿ ಸೈ ಎನಿಸಿಕೊಂಡ ಪ್ರಮುಖರೆಂದರೆ, ಉಪೇಂದ್ರ, ದರ್ಶನ್‌, ಅರ್ಜುನ್‌ ಸರ್ಜಾ, ಶರಣ್‌, ಅಜೇಯ್‌ ರಾವ್‌, ಡಾರ್ಲಿಂಗ್‌ ಕೃಷ್ಣ, ಅನೀಶ್‌ ತೇಜೇಶ್ವರ್‌, ಡಾಲಿ ಧನಂಜಯ್‌ ಹೀಗೆ ಹಲವರು. ಈಗ ಈ ಸಾಲಿಗೆ ಮತ್ತೂಂದು ಹೊಸ ಹೆಸರು ಸೇರ್ಪಡೆಯಾಗುತ್ತಿದೆ.  ಆ ಹೆಸರೇ “ಮರಿ ಟೈಗರ್‌’ ಖ್ಯಾತಿಯ ವಿನೋದ್‌ ಪ್ರಭಾಕರ್‌ ಅವರದು.

ಹೌದು, ಸ್ಯಾಂಡಲ್‌ವುಡ್‌ನ‌ಲ್ಲಿ ಮಾಸ್‌ ಕಂ ಆ್ಯಕ್ಷನ್‌ ಹೀರೋ ಎಂದೇ ಗುರುತಿಸಿಕೊಂಡಿರುವ ನಟ ವಿನೋದ್‌ ಪ್ರಭಾಕರ್‌, ಅವರೀಗ ಸಿನಿಮಾ ನಿರ್ಮಾಣಕ್ಕೂ ಮುಂದಾಗಿದ್ದಾರೆ. “ಟೈಗರ್‌ ಟಾಕೀಸ್‌’ ಎಂಬ ಹೆಸರಿನಲ್ಲಿ ತಮ್ಮದೇ ಪ್ರೊಡಕ್ಷನ್‌ ಹೌಸ್‌ ಶುರು ಮಾಡಿರುವ ವಿನೋದ್‌ ಪ್ರಭಾಕರ್‌, ಪತ್ನಿ ನಿಶಾ ವಿನೋದ್‌ ಪ್ರಭಾಕರ್‌ ಅವರ ಮೂಲಕ ಈ ಬ್ಯಾನರ್‌ನಲ್ಲಿ ಚಿತ್ರಗಳನ್ನು ನಿರ್ಮಿಸಲು ಮುಂದಾಗಿದ್ದಾರೆ.

ಇದನ್ನೂ ಓದಿ:ಮತ್ತೆ ಹಾಡಲು ಬಂದ್ರು ಸಿದ್ದಿ ಸಿಸ್ಟರ್!

ಸದ್ಯ “ಟೈಗರ್‌ ಟಾಕೀಸ್‌’ ಬ್ಯಾನರ್‌ನಲ್ಲಿ ವಿನೋದ್‌ ಪ್ರಭಾಕರ್‌ ಅಭಿನಯದ “ಲಂಕಾಸುರ’ ಚಿತ್ರ ನಿರ್ಮಾಣವಾಗುತ್ತಿದ್ದು, ಈ ಆ್ಯಕ್ಷನ್‌ ಕಥಾಹಂದರದ ಚಿತ್ರಕ್ಕೆ ಡಿ. ಪ್ರಮೋದ್‌ ಕುಮಾರ್‌ ಆ್ಯಕ್ಷನ್‌-ಕಟ್‌ ಹೇಳುತ್ತಿದ್ದಾರೆ. ಇನ್ನು ಈ ಚಿತ್ರದಲ್ಲಿ ಲೂಸ್‌ ಮಾದ ಯೋಗಿ ಕೂಡ ವಿಶೇಷ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದು, ಉಳಿದಂತೆ ಹಿರಿಯ ನಟ ದೇವರಾಜ್‌, ರವಿಶಂಕರ್‌ ಮೊದಲಾದವರು ಚಿತ್ರದ ಇತರ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸುತ್ತಿದ್ದಾರೆ.

ಅಂದಹಾಗೆ, ವಿನೋದ್‌ ಪ್ರಭಾಕರ್‌ ತಮ್ಮ ನಿರ್ಮಾಣ ಸಂಸ್ಥೆಗೆ “ಟೈಗರ್‌ ಟಾಕಿಸ್‌’ ಎಂದು ಹೆಸರಿಡಲು ಕಾರಣ ಅವರ ತಂದೆ ಟೈಗರ್‌ ಪ್ರಭಾಕರ್‌. ಕನ್ನಡ ಚಿತ್ರರಂಗದಲ್ಲಿ ಆ್ಯಕ್ಷನ್‌ ಚಿತ್ರಗಳ ಮೂಲಕವೇ ಹೆಚ್ಚಾಗಿ ಗುರುತಿಸಿಕೊಂಡಿದ್ದ ಟೈಗರ್‌ ಪ್ರಭಾಕರ್‌ ನೆನಪಿನಲ್ಲಿಯೇ ವಿನೋದ್‌ ಪ್ರಭಾಕರ್‌ ತಮ್ಮ ಬ್ಯಾನರ್‌ಗೆ ಇಂಥದ್ದೊಂದು ಹೆಸರಿಟ್ಟು, ಮೊದಲ ಬಾರಿಗೆ ಆ್ಯಕ್ಷನ್‌ ಚಿತ್ರದ ಮೂಲಕವೇ ನಿರ್ಮಾಣ ಕಾರ್ಯ ಶುರು ಮಾಡುತ್ತಿದ್ದಾರೆ. ಸದ್ಯ ಈ ಚಿತ್ರದ ಚಿತ್ರೀಕರಣ ಭರದಿಂದ ಸಾಗಿದ್ದು, ಇತ್ತೀಚೆಗೆ “ಲಂಕಾಸುರ’ ಪೋಸ್ಟರ್‌ ಕೂಡ ಬಿಡುಗಡೆಯಾಗಿ ಗಮನ ಸೆಳೆಯುತ್ತಿದೆ.

ಟಾಪ್ ನ್ಯೂಸ್

1-jagan

Jagan ಮೋದಿಗೆ ದೂರು, ಸುಪ್ರೀಂ ಮೊರೆ: ನಾಯ್ಡು ವಿರುದ್ಧ ಕ್ರಮ ಏಕೆ ಕೈಗೊಳ್ಳಬಾರದು?

congress

Maharashtra ಮುಂದಿನ ಸಿಎಂ ಕಾಂಗ್ರೆಸ್ಸಿಗ: ಬಾಳಾ ಸಾಹೇಬ್‌ ಥೋರಾಟ್‌

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

gold 2

FATF; ಭಾರತದ ಚಿನ್ನೋದ್ಯಮ ಮೂಲಕ ಉಗ್ರರಿಗೆ ನೆರವು

1-uu

‘U-WIN’ ಪೋರ್ಟ್‌ಲ್‌ಗೆ ಅಕ್ಟೋಬರ್‌ನಲ್ಲಿ ಚಾಲನೆ

MASIDI

Fiscal Crisis: ಅಯೋಧ್ಯೆ ಮಸೀದಿ ಟ್ರಸ್ಟ್‌ ಸಮಿತಿಗಳ ವಿಸರ್ಜನೆ

ಭಕ್ತರ ನಂಬಿಕೆಗೆ ದ್ರೋಹ ಬಗೆದವರಿಗೆ ಶಿಕ್ಷೆಯಾಗಲಿ

ಭಕ್ತರ ನಂಬಿಕೆಗೆ ದ್ರೋಹ ಬಗೆದವರಿಗೆ ಶಿಕ್ಷೆಯಾಗಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Priya Shatamarshan spoke about her fame after Bheema movie

Priya Shatamarshan: ಇನ್ಸ್ ಪೆಕ್ಟರ್‌ ಗಿರಿಜಾ ರಿಪೋರ್ಟಿಂಗ್‌ ಸಾರ್‌..

Vijaya Bhaskar: ಹೊಸತನಕ್ಕೆ ಹಂಬಲಿಸಿದ ಸ್ವರ ಸಾಮ್ರಾಟ

Vijaya Bhaskar: ಹೊಸತನಕ್ಕೆ ಹಂಬಲಿಸಿದ ಸ್ವರ ಸಾಮ್ರಾಟ

Karki kananda movie

Karki Movie: ಹಳ್ಳಿ ಹುಡುಗನ ಹೋರಾಟದ ಹಾದಿ

Family drama ‘Langoti Man’ hits screens today

Langoti Man: ಫ್ಯಾಮಿಲಿ ಡ್ರಾಮಾ ʼಲಂಗೋಟಿ ಮ್ಯಾನ್‌ʼ ಇಂದು ತೆರೆಗೆ

Hagga Movie: ʼಹಗ್ಗʼವೇ ಆಯುಧ; ಅನುಕ್ಷಣ ಹಾರರ್

Hagga Movie: ʼಹಗ್ಗʼವೇ ಆಯುಧ; ಅನುಕ್ಷಣ ಹಾರರ್

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

1-jagan

Jagan ಮೋದಿಗೆ ದೂರು, ಸುಪ್ರೀಂ ಮೊರೆ: ನಾಯ್ಡು ವಿರುದ್ಧ ಕ್ರಮ ಏಕೆ ಕೈಗೊಳ್ಳಬಾರದು?

Mysuru Dasara ಉದ್ಘಾಟಕರಾಗಿ ಪ್ರೊ| ಹಂಪನಾ: ಮೈಸೂರಿನಲ್ಲಿ ಮುಖ್ಯಮಂತ್ರಿ ಘೋಷಣೆ

Mysuru Dasara ಉದ್ಘಾಟಕರಾಗಿ ಪ್ರೊ| ಹಂಪನಾ: ಮೈಸೂರಿನಲ್ಲಿ ಮುಖ್ಯಮಂತ್ರಿ ಘೋಷಣೆ

congress

Maharashtra ಮುಂದಿನ ಸಿಎಂ ಕಾಂಗ್ರೆಸ್ಸಿಗ: ಬಾಳಾ ಸಾಹೇಬ್‌ ಥೋರಾಟ್‌

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

gold 2

FATF; ಭಾರತದ ಚಿನ್ನೋದ್ಯಮ ಮೂಲಕ ಉಗ್ರರಿಗೆ ನೆರವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.