ವಿನೋದ್‌ ಹೊಸ ಚಿತ್ರ ರಗಡ್‌!


Team Udayavani, Sep 20, 2017, 10:33 AM IST

Vinod-Prabhakar-(3).jpg

ವಿನೋದ್‌ ಪ್ರಭಾಕರ್‌ ಅಭಿನಯದ “ಕ್ರ್ಯಾಕ್‌’ ರಿಲೀಸ್‌ ಆಗಿದೆ. ಅಬ್ಬರ ಅಲ್ಲದಿದ್ದರೂ, ದಿನ ಕಳೆದಂತೆ ಮೆಚ್ಚುಗೆ ಪಡೆದುಕೊಳ್ಳುತ್ತಿದೆ. ಈಗ ಹೊಸ ವಿಷಯವೇನೆಂದರೆ, ವಿನೋದ್‌ ಪ್ರಭಾಕರ್‌ “ಕ್ರ್ಯಾಕ್‌’ ಬಳಿಕ ಯಾವ ಸಿನಿಮಾ ಮಾಡುತ್ತಾರೆ ಎಂಬ ಪ್ರಶ್ನೆ ಇತ್ತು. ಅದಕ್ಕೀಗ ಸ್ವತಃ ವಿನೋದ್‌ ಪ್ರಭಾಕರ್‌ ಅವರೇ ಉತ್ತರಿಸಿದ್ದಾರೆ. ವಿನೋದ್‌ ಹೊಸ ಚಿತ್ರಕ್ಕೆ ಸದ್ಯಕ್ಕೆ “ರಗಡ್‌’ ಎಂದು ನಾಮಕರಣ ಮಾಡಲಾಗಿದ್ದು, ಅಕ್ಟೋಬರ್‌ 13 ರಂದು ಚಿತ್ರಕ್ಕೆ ಚಾಲನೆ ಸಿಗಲಿದೆ. 

ದರ್ಶನ್‌ ಅವರ ಹಲವು ಚಿತ್ರಗಳಿಗೆ ಅಸೋಸಿಯೇಟ್‌ ಆಗಿ ಕೆಲಸ ಮಾಡಿದ್ದ ಮಹೇಶ್‌ ಗೌಡ ಅವರೊಂದು ಕಥೆ ಹೇಳಿದ್ದು, ಅದೊಂದು ಬೇರೆ ಜಾನರ್‌ನ ಸಿನಿಮಾ ಅಂತೆ. “ಇಲ್ಲಿ ಲವ್‌ ಮತ್ತು ಆ್ಯಕ್ಷನ್‌ ವಿಶೇಷವಾಗಿದೆ. ಸಾಕಷ್ಟು ಟ್ವಿಸ್ಟ್‌, ಟರ್ನ್ ಆ ಕಥೆಯಲ್ಲಿದೆ. ಅಲ್ಲಿ ನನ್ನದು ಮುಗ್ಧತೆಯ ಪಾತ್ರ. ಆದರೂ ಸಖತ್‌ ಆ್ಯಕ್ಷನ್‌ ಇರಲಿದೆ. ಅಂದಹಾಗೆ, ಆ ಚಿತ್ರಕ್ಕೆ “ರಗಡ್‌’ ಎಂಬ ಶೀರ್ಷಿಕೆ ಇಡಬೇಕು ಎಂದು ನಿರ್ದೇಶಕರು ನಿರ್ಧರಿಸಿದ್ದಾರೆ.

ಅದಿನ್ನೂ ನೋಂದಣಿಯಾಗಿಲ್ಲ. ಇಷ್ಟರಲ್ಲೇ ಶೀರ್ಷಿಕೆ ಪಕ್ಕಾ ಆಗಲಿದೆ. ಈ ಚಿತ್ರವನ್ನು ಅರುಣ್‌ ಕುಮಾರ್‌ ಎಂಬುವರು ನಿರ್ಮಾಣ ಮಾಡುತ್ತಿದ್ದಾರೆ. ಮಹೇಶ್‌ಗೌಡ ಅವರಿಗೆ ಇದು ಮೊದಲ ನಿರ್ದೇಶನದ ಚಿತ್ರ. ಚಿತ್ರಕ್ಕೆ ಅಭಿಮನ್‌ ರಾಯ್‌ ಸಂಗೀತವಿದೆ. ಈಗಾಗಲೇ ರಾಗ ಸಂಯೋಜನೆಗೆ ಚಾಲನೆ ಸಿಕ್ಕಿದೆ. ಇನ್ನು “ಮರಿ ಟೈಗರ್‌’ ಚಿತ್ರ ಕೂಡ ರಿಲೀಸ್‌ಗೆ ರೆಡಿಯಾಗಿದೆ. ಇಷ್ಟರಲ್ಲೇ ಅದು ಪ್ರೇಕ್ಷಕರ ಮುಂದೆ ಬರಲಿದೆ’ ಎಂಬುದು ವಿನೋದ್‌ ಮಾತು.

ಓಂಪ್ರಕಾಶ್‌ ರಾವ್‌ ನಿರ್ದೇಶನದ ಒಂದು ಚಿತ್ರದಲ್ಲಿ ವಿನೋದ್‌ ನಟಿಸುತ್ತಿದ್ದಾರೆ ಎಂಬ ಸುದ್ದಿ ಇದೇ “ಬಾಲ್ಕನಿ’ಯಲ್ಲಿ ಓದಿರುತ್ತೀರಿ. ಆ ಚಿತ್ರಕ್ಕೂಚಾಲನೆ ಸಿಕ್ಕಿದ್ದು, ನವೆಂಬರ್‌ನಲ್ಲಿ ಚಿತ್ರ ಪ್ರಾರಂಭವಾಗಲಿದೆ. ಶೀರ್ಷಿಕೆ ನೋಡಿದರೆ, ಅದೊಂದು ಹಿಂದು, ಮುಸ್ಲಿಂ ಭಾವೈಕ್ಯತೆಯ ಸಿನಿಮಾ ಇರಬಹುದಾ ಎಂಬ ಪ್ರಶ್ನೆ ಮೂಡುವುದು ಸಹಜ. ಇಲ್ಲಿ “ಹಿಂದುಸ್ಥಾನ್‌ ಮೇರಾ ಜಾನ್‌’ ಎಂಬ ಅಡಿಬರಹವಿದೆ.

ಅಲ್ಲಿಗೆ ಇದೊಂದು ಪಕ್ಕಾ ದೇಶಪ್ರೇಮದ ಕಥೆ ಎಂಬುದನ್ನು ಸೂಚಿಸುತ್ತದೆ. ಇಲ್ಲಿ “786′ ಎಂಬುದು ಹೀರೋಗೆ ಲಕ್ಕಿ ನಂಬರ್‌. ಅದರಲ್ಲೂ ದೇಶದ ಯೋಧನ ರೀತಿಯ ಕಥೆ ಅದು. ಒಂದು ಪಕ್ಕಾ ಆ್ಯಕ್ಷನ್‌ ಸಿನಿಮಾ ಆಗಿರುವುದರಿಂದ ಫ‌ುಲ್‌ ತಯಾರಿ ಮಾಡಿಕೊಂಡೇ ಕ್ಯಾಮೆರಾ ಮುಂದೆ ನಿಲ್ಲಲು ನಿರ್ಧರಿಸಿದ್ದಾರೆ ವಿನೋದ್‌ ಪ್ರಭಾಕರ್‌. “ಟೈಸನ್‌’ ಬಳಿಕ ಓಂ ಪ್ರಕಾಶ್‌ ರಾವ್‌, ಎರಡು ಕಥೆಗಳನ್ನು ಹೇಳಿದ್ದರು.

ಎರಡು ಕಥೆಗಳು ಚೆನ್ನಾಗಿದ್ದವು. ಆಮೇಲೆ, “786′ ಕಥೆ ಹೇಳಿದಾಗ, ಅದನ್ನು ಮಾಡುವ ಬಗ್ಗೆ ನಿರ್ಧರಿಸಿದೆವು. ದೊಡ್ಡ ಕ್ಯಾನ್ವಾಸ್‌ನಲ್ಲಿ ಆ ಸಿನಿಮಾ ಶುರುವಾಗಲಿದೆ. ಈ ಚಿತ್ರಕ್ಕೆ ಉಮೇಶ್‌ರೆಡ್ಡಿ ನಿರ್ಮಾಪಕರು. ಸದ್ಯಕ್ಕೆ ಸ್ಕ್ರಿಪ್ಟ್ ಕೆಲಸಗಳು ಮುಗಿದಿವೆ. ನವೆಂಬರ್‌ನಲ್ಲಿ ಸಿನಿಮಾಗೆ ಚಾಲನೆ ಸಿಗಲಿದೆ ಎಂದು ವಿವರ ಕೊಡುತ್ತಾರೆ ವಿನೋದ್‌.

ಟಾಪ್ ನ್ಯೂಸ್

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.