![1-24-saturday](https://www.udayavani.com/wp-content/uploads/2024/07/1-24-saturday-2-415x249.jpg)
“ವಿರಾಟಪರ್ವ’ ಟೀಸರ್ ಬಂತು
ಹೊಸಬರಿಗೆ ಮೆಚ್ಚುಗೆ
Team Udayavani, Mar 16, 2020, 7:01 AM IST
![Virata-parwa](https://www.udayavani.com/wp-content/uploads/2020/03/Virata-parwa-620x324.jpg)
ಕನ್ನಡದಲ್ಲಿ ದಿನದಿಂದ ದಿನಕ್ಕೆ ಹೊಸಬರ ಸಿನಿಮಾಗಳು ಬರುತ್ತಲೇ ಇವೆ. ಹೀಗೆ ಬರುವ ಒಂದಷ್ಟು ಮಂದಿ ಹೊಸಬರು ಕಂಟೆಂಟ್ ನಂಬಿಕೊಂಡು ಬರುತ್ತಾರೆ. ಅದೇ ಕಾರಣದಿಂದ ಸ್ಟಾರ್ಗಳ ಕಮರ್ಷಿಯಲ್ ಸಿನಿಮಾಗಳ ಮಧ್ಯೆ ಹೊಸಬರ ಕಂಟೆಂಟ್ ಆಧರಿತ ಚಿತ್ರಗಳು ಕೂಡಾ ಸದ್ದು ಮಾಡುತ್ತಿವೆ. ಈಗ ಈ ಸಾಲಿಗೆ ಹೊಸ ಸೇರ್ಪಡೆ “ವಿರಾಟಪರ್ವ’. ಹೀಗೊಂದು ಸಿನಿಮಾ ಬರುತ್ತಿರುವ ವಿಚಾರ ನಿಮಗೆ ಗೊತ್ತಿರಬಹುದು.
ಈಗ ಈ ಚಿತ್ರ ಬಿಡುಗಡೆಯ ಹಂತಕ್ಕೆ ಬಂದಿದ್ದು, ಮೊದಲ ಹಂತವಾಗಿ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಟೀಸರ್ ಚಿತ್ರದ ಮೇಲಿನ ಭರವಸೆಯನ್ನು ಹೆಚ್ಚಿಸುವಂತಿದ್ದು, ಸಾಕಷ್ಟು ಕುತೂಹಲಕಾರಿ ಅಂಶಗಳನ್ನು ಒಳಗೊಂಡಿದೆ. ಈ ಚಿತ್ರವನ್ನು ಅನಂತ್ ಶೈನ್ ನಿರ್ದೇಶಿಸಿದ್ದಾರೆ. ಈ ಹಿಂದೆ “ಮುದ್ದು ಮನಸೇ’ ಎಂಬ ಸಿನಿಮಾ ಮಾಡಿದ್ದ ಅನಂತ್ ಅವರಿಗೆ ಇದು ಎರಡನೇ ಸಿನಿಮಾ. ಈ ಚಿತ್ರವನ್ನು ಸುನೀಲ್ ರಾಜ್ ಅವರು ನಿರ್ಮಾಣ ಮಾಡುತ್ತಿದ್ದಾರೆ. ವಿನೀತ್ ರಾಜ್ ಮೆನನ್ ಅವರು ಚಿತ್ರಕ್ಕೆ ಸಂಗೀತ ನೀಡುತ್ತಿದ್ದಾರೆ.
ಶಿವು ಬಿ.ಕೆ.ಕುಮಾರ್ ಹಾಗು ಶಿವಸೀನ ಚಿತ್ರಕ್ಕೆ ಛಾಯಾಗ್ರಾಹಕರು. ವೆಂಕಿ, ಜ್ಞಾನೇಶ್, ವಿಜಯ್ ಸಂಕಲನವಿದೆ. ಮೋಹನ್ ಅವರ ನೃತ್ಯ ನಿರ್ದೇಶನವಿದೆ. ಮಾಸ್ ಮಾದ ಹಾಗು ವಿಕ್ರಮ್ ಅವರ ಆ್ಯಕ್ಷನ್ ಚಿತ್ರಕ್ಕಿದೆ. ಇನ್ನು, ನಾಗೇಂದ್ರ ಪ್ರಸಾದ್,ಕವಿರಾಜ್, ಯೋಗರಾಜ್ಭಟ್ ಅವರು ಗೀತೆಗಳನ್ನು ರಚಿಸಿದ್ದಾರೆ. ಸಂದೀಪ್ ಮತ್ತು ರಘು ಸಂಭಾಷಣೆ ಬರೆದಿದ್ದಾರೆ. ಹಿನ್ನೆಲೆ ಸಂಗೀತವನ್ನು ರಿತ್ವಿಕ್ ಮಾಡುತ್ತಿದ್ದಾರೆ. ಚಿತ್ರದಲ್ಲಿ ಅರು ಗೌಡ, ಯಶ್ ಶೆಟ್ಟಿ ಸೇರಿದಂತೆ ಅನೇಕರು ನಟಿಸುತ್ತಿದ್ದಾರೆ. ಚಿತ್ರ ಏಪ್ರಿಲ್ನಲ್ಲಿ ತೆರೆಕಾಣುವ ಸಾಧ್ಯತೆ ಇದೆ.
ಟಾಪ್ ನ್ಯೂಸ್
![1-24-saturday](https://www.udayavani.com/wp-content/uploads/2024/07/1-24-saturday-2-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![1-24-saturday](https://www.udayavani.com/wp-content/uploads/2024/07/1-24-saturday-2-150x90.jpg)
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.