ಕನ್ನಡ ಚಿತ್ರರಂಗಕ್ಕೆ ವಿಷ್ಣು ಒಬ್ಬರೇ ರಾಮಾಚಾರಿ


Team Udayavani, Nov 19, 2017, 5:40 PM IST

yash.jpg

ಯಶ್‌ ಕೆರಿಯರ್‌ನಲ್ಲಿ ಮೊದಲು ಸಿಕ್ಕ ದೊಡ್ಡ ಯಶಸ್ಸು “ಮಿಸ್ಟರ್‌ ಅಂಡ್‌ ಮಿಸಸ್‌ ರಾಮಾಚಾರಿ’ ಚಿತ್ರದ್ದು ಎಂದರೆ ತಪ್ಪಲ್ಲ. ವಿಷ್ಣುವರ್ಧನ್‌ ಅವರನ್ನು ಎದೆಮೇಲೆ ಹಚ್ಚೆಹಾಕಿಸಿಕೊಂಡು ಸಖತ್‌ ರಗಡ್‌ ಆಗಿ ಕಾಣಿಸಿಕೊಂಡ ಯಶ್‌ಗೆ ಆ ಚಿತ್ರ ದೊಡ್ಡ ಮಟ್ಟದ ಯಶಸ್ಸನ್ನು ತಂದುಕೊಟ್ಟಿತು. ಆ ಚಿತ್ರದ ನಂತರ ಯಶ್‌ ಹೋದಲ್ಲೆಲ್ಲಾ ಅಭಿಮಾನಿಗಳು ಅವರನ್ನು “ರಾಮಾಚಾರಿ …’ ಎಂದು ಕೂಗಲಾರಂಭಿಸಿದರು. ಈಗ ಯಶ್‌ “ನಾನು ರಾಮಾಚಾರಿಯಲ್ಲ.

ರಾಮಾಚಾರಿ ಯಾವತ್ತಿದ್ದರೂ ಸಾಹಸ ಸಿಂಹ ವಿಷ್ಣುವರ್ಧನ್‌. ನಾನು ಆ ರಾಮಾಚಾರಿಯ ಅಭಿಮಾನಿಯಷ್ಟೇ. ಕನ್ನಡ ಚಿತ್ರರಂಗಕ್ಕೆ ಒಬ್ಬರೇ ರಾಮಾಚಾರಿ. ಅದು ನಮ್ಮ ಸಾಹಸ ಸಿಂಹ’ ಎಂದಿದ್ದಾರೆ. ಅಷ್ಟಕ್ಕೂ ಈ ಮಾತನ್ನು ಯಶ್‌ ಈಗ ಹೇಳಲು ಕಾರಣವೇನೆಂದು ನೀವು ಕೇಳಿದರೆ ಅದಕ್ಕೆ ಉತ್ತರ “ರಾಜಾಸಿಂಹ’. ಅನಿರುದ್ಧ್ ಅವರು “ರಾಜಾಸಿಂಹ’ ಎಂಬ ಚಿತ್ರದಲ್ಲಿ ನಟಿಸಿದ್ದಾರೆ. ಈ ಚಿತ್ರದಲ್ಲಿ ವಿಷ್ಣುವರ್ಧನ್‌ ಅವರ ಪಾತ್ರವನ್ನು ರೀಕ್ರಿಯೇಟ್‌ ಮಾಡಲಾಗಿದೆ.

ಭಾನುವಾರ ನಡೆದ ಈ ಚಿತ್ರದ ಆಡಿಯೋ ಬಿಡುಗಡೆಗೆ ಯಶ್‌ ಅತಿಥಿಯಾಗಿ ಬಂದಿದ್ದರು. ಈ ಸಂದರ್ಭದಲ್ಲಿ ಅವರು “ನಾನು ಯಾವ ಕಾರಣಕ್ಕೂ ರಾಮಾಚಾರಿ ಅಲ್ಲ. ನಾನು ಕೂಡಾ ವಿಷ್ಣುವರ್ಧನ್‌ ಅವರ ಅಭಿಮಾನಿ. ಹಾಗಾಗಿ, “ಮಿಸ್ಟರ್‌ ಅಂಡ್‌ ಮಿಸಸ್‌ ರಾಮಾಚಾರಿ’ಯಲ್ಲಿ ರಾಮಾಚಾರಿಯ ಅಭಿಮಾನಿಯಾಗಿ ಕಾಣಿಸಿಕೊಂಡಿದ್ದೇನೆ’ ಎಂದರು. ಇನ್ನು, ಯಶ್‌ ಅವರಿಗೆ “ಮಿಸ್ಟರ್‌ ಅಂಡ್‌ ಮಿಸಸ್‌ ರಾಮಾಚಾರಿ’ ಚಿತ್ರ ಬಯಸದೇ ಬಂದ ಭಾಗ್ಯವಂತೆ.

“ಆ ತರಹದ ಒಂದು ಸಿನಿಮಾ ಮಾಡುತ್ತೇನೆಂದು ನಾನಂದುಕೊಂಡಿರಲಿಲ್ಲ. ಆದರೆ, ಸಂತೋಷ್‌ ಆನಂದರಾಮ್‌ ಬಂದು ಕಥೆ ಕೇಳಿದಾಗ ರೋಮಾಂಚನವಾಯಿತು. ಹಾಗಾಗಿ, ವಿಷ್ಣುವರ್ಧನ್‌ ಅವರನ್ನು ಎದೆಮೇಲೆ ಹಚ್ಚೆ ಹಾಕಿಸಿಕೊಂಡೆ. ಏಕೆಂದರೆ ಅವರಿರಬೇಕಾದ ಜಾಗ ಅದು. ಆ ಚಿತ್ರವನ್ನು ಜನ ಇಷ್ಟಪಡುವ ಮೂಲಕ ನನಗೂ ದೊಡ್ಡ ಯಶಸ್ಸು ಕೊಟ್ಟಿತು’ ಎಂದು ರಾಮಾಚಾರಿಯ ದಿನಗಳನ್ನು ಮೆಲುಕು ಹಾಕಿದರು ಯಶ್‌. 

ಸ್ಮಾರಕ ಬಿಕ್ಕಟ್ಟು ಬಗೆಹರಿಸಿ: ಸರ್ಕಾರಕ್ಕೆ ಯಶ್‌ ಮನವಿ: ವಿಷ್ಣುವರ್ಧನ್‌ ಅವರ ಸ್ಮಾರಕದ ವಿಷಯದಲ್ಲಿ ಸಾಕಷ್ಟು ಗೊಂದಲಗಳು ನಡೆಯುತ್ತಿರುವುದನ್ನು ಗಮನಿಸಿರುವ ಯಶ್‌, ವಿಷ್ಣುವರ್ಧನ್‌ ಸ್ಮಾರಕ ಬಿಕ್ಕಟ್ಟನ್ನು ಕೂಡಲೇ ಬಗೆಹರಿಸಬೇಕೆಂದು ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

“ವಿಷ್ಣುವರ್ಧನ್‌ ಅವರಿಗೆ ಅವರದ್ದೇ ಆದ ಗೌರವವಿದೆ, ದೊಡ್ಡ ಅಭಿಮಾನಿ ವರ್ಗವಿದೆ. ಕೂಡಲೇ ಸರ್ಕಾರ ಗಮನಹರಿಸಿ, ಸ್ಮಾರಕ ವಿಚಾರದಲ್ಲಿನ ಬಿಕ್ಕಟ್ಟನ್ನು ಬಗೆಹರಿಸಿಬೇಕು. ಒಂದು ವೇಳೆ ಆಗಲ್ಲ ಎಂದಾದರೆ ನಾವು ಅಭಿಮಾನಿಗಳು ಸೇರಿ ಮಾಡುತ್ತೇವೆ’ ಎಂದರು. 

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

nalkane ayama kannada movie

Sandalwood; ‘ನಾಲ್ಕನೇ ಆಯಾಮ’ ಮೇಲೆ ಗೌತಮ್‌ ಕನಸು: ಇಂದು ತೆರೆಗೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.