Vishnu Priya; ಶ್ರೇಯಸ್‌-ಪ್ರಿಯಾ ವಾರಿಯರ್ ಜೋಡಿಯ ಪ್ರೇಮಗೀತೆ


Team Udayavani, Jan 29, 2024, 3:34 PM IST

vishnu priya movie

ನಟ ಶ್ರೇಯಸ್‌ ಮಂಜು ಮತ್ತು ಮಲೆಯಾಳಂನ ಕಣ್ಸನ್ನೆ ಬೆಡಗಿ ಪ್ರಿಯಾ ಪ್ರಕಾಶ್‌ ವಾರಿಯರ್‌ ಜೋಡಿಯಾಗಿ ಅಭಿನಯಿಸಿರುವ “ವಿಷ್ಣುಪ್ರಿಯ’ ಸಿನಿಮಾ ತೆರೆಗೆ ಬರಲು ತಯಾರಾಗುತ್ತಿದೆ. ಸದ್ಯ ನಿಧಾನವಾಗಿ “ವಿಷ್ಣುಪ್ರಿಯ’ ಸಿನಿಮಾದ ಪ್ರಚಾರ ಕಾರ್ಯಗಳಿಗೆ ಚಾಲನೆ ನೀಡಿರುವ ಚಿತ್ರತಂಡ ಇದೀಗ “ಚಿಗುರು ಚಿಗುರು ಸಮಯ ಹಿತವಾದ ಒಂದು ಮೌನ…’ ಎಂಬ ಪ್ರೇಮಗೀತೆಯನ್ನು ಬಿಡುಗಡೆ ಮಾಡಿದೆ.

ಇತ್ತೀಚೆಗೆ ನಡೆದ ಸಮಾರಂಭದಲ್ಲಿ ನಟ ಶರಣ್‌, ನಟಿ ರುಕ್ಮಿಣಿ ವಸಂತ್‌, ಚಿತ್ರಸಾಹಿತಿ ಡಾ. ವಿ. ನಾಗೇಂದ್ರ ಪ್ರಸಾದ್‌, ನಿರ್ಮಾಪಕರಾದ ರಮೇಶ್‌ ರೆಡ್ಡಿ, ನಿರ್ದೇಶಕರಾದ ಗುರು ದೇಶಪಾಂಡೆ, ದಯಾಳ್‌ ಪದ್ಮನಾಭನ್‌, ಚೇತನ್‌ ಕುಮಾರ್‌, ಸತ್ಯ ಪ್ರಕಾಶ್‌, ನಟ ವಿಕ್ರಂ ರವಿಚಂದ್ರನ್‌ ಮುಂತಾದವರು ಕಾರ್ಯಕ್ರಮದಲ್ಲಿ ಹಾಜರಿದ್ದು, “ವಿಷ್ಣುಪ್ರಿಯ’ ಸಿನಿಮಾದ ಪ್ರೇಮಗೀತೆಯನ್ನು ಬಿಡುಗಡೆ ಮಾಡಿ, ಚಿತ್ರತಂಡಕ್ಕೆ ಶುಭ ಹಾರೈಸಿದರು.

ಇದೇ ವೇಳೆ ಮಾತನಾಡಿದ ನಟ ಶರಣ್‌, “ಕೆಲವು ಹಾಡುಗಳು ಥಟ್‌ ಅಂತ ಮೆದುಳಿಗೇ ನಾಟುತ್ತವೆ. ಇದು ಆ ಸಾಲಿಗೆ ಸೇರುವ ಹಾಡು. ಇದೊಂದು ಫೀಲ್‌ ಗುಡ್‌ ಸಿನಿಮಾ. ನಿರ್ದೇಶಕರು ಪ್ರತಿ ಫ್ರೆàಮ್‌ನಲ್ಲೂ ಕಾಣಿಸ್ತಾರೆ. ಸಿನಿಮಾದ ಟೈಟಲ್‌ನಲ್ಲೇ ವಿಷ್ಣು ಸರ್‌ ಇದ್ದಾರೆ. 2024ನ್ನು ಸ್ಟಾರ್ಟ್‌ ಮಾಡಲು ಅದ್ಭುತವಾದ ಸಾಂಗ್‌ ಸಿಕ್ಕಿದೆ’ ಎಂದು ಹಾಡಿನ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ನಿರ್ಮಾಪಕ ಕೆ. ಮಂಜು ಮಾತನಾಡಿ, “ಚಿತ್ರರಂಗ ನನಗೆ ಹಣ, ಗೌರವ ಎಲ್ಲವನ್ನೂ ಕೊಟ್ಟಿದೆ. ಒಬ್ಬ ರೈತ ಒಳ್ಳೆ ಬೆಳೆ ಬೆಳೆಯಬೇಕಾದರೆ ಮಳೆಯನ್ನ ನಂಬುತ್ತಾನೆ, ಆದೇ ರೀತಿ ನನ್ನ ಮಗನನ್ನು ಚಿತ್ರರಂಗದಲ್ಲಿ ಬೆಳೆಸಲು ನಿರ್ದೇಶಕರನ್ನು ನಂಬಿದ್ದೇನೆ. ಚೆನ್ನಾಗಿ ಬರಬೇಕೆಂಬ ಕಾರಣದಿಂದ ಸಿನಿಮಾ ಸ್ವಲ್ಪ ತಡವಾಗಿದೆ. ಮುಂಬರುವ ಶಿವರಾತ್ರಿಗೆ ಅಥವಾ ಏಪ್ರಿಲ್‌ 5ಕ್ಕೆ “ವಿಷ್ಣುಪ್ರಿಯ’ ಸಿನಿಮಾ ರಿಲೀಸ್‌ ಮಾಡಬೇಕೆನ್ನುವ ಯೋಚನೆಯಿದೆ’ ಎಂದರು.

ಇನ್ನು “ವಿಷ್ಣುಪ್ರಿಯ’ 1990ರ ಕಾಲದಲ್ಲಿ ನಡೆದಂಥ ಪ್ರೇಮಕಥಾ ಹಂದರದ ಸಿನಿಮಾವಾಗಿದೆ. ನಟ ಶ್ರೇಯಸ್‌ ಮಂಜು ಸಿನಿಮಾದಲ್ಲಿ ಲವರ್‌ ಬಾಯ್‌ “ವಿಷ್ಣು’ ಪಾತ್ರದಲ್ಲಿ ಮತ್ತು “ಪ್ರಿಯಾ’ ಪಾತ್ರದಲ್ಲಿ ಮಲಯಾಳಂನ ಪ್ರಿಯಾ ಪ್ರಕಾಶ್‌ ವಾರಿಯರ್‌ ಅಭಿನಯಿಸಿದ್ದಾರೆ.

ನಿರ್ದೇಶಕ ವಿ. ಕೆ. ಪ್ರಕಾಶ್‌ “ವಿಷ್ಣುಪ್ರಿಯ’ ಸಿನಿಮಾಕ್ಕೆ ಆ್ಯಕ್ಷನ್‌-ಕಟ್‌ ಹೇಳಿದ್ದಾರೆ. “ಬಿಂದಿಯಾ ಪೊ›ಡಕ್ಷನ್ಸ್‌’ ಬ್ಯಾನರ್‌ನಲ್ಲಿ ರಾಷ್ಟ್ರಪ್ರಶಸ್ತಿ ವಿಜೇತ ವಿ. ಕೆ. ಪ್ರಕಾಶ್‌ ನಿರ್ದೇಶನದಲ್ಲಿ ಮೂಡಿಬಂದಿರುವ “ವಿಷ್ಣುಪ್ರಿಯ’ ಸಿನಿಮಾದ ಹಾಡುಗಳಿಗೆ ಮಲೆಯಾಳಂನ ಗೋಪಿ ಸುಂದರ್‌ ಸಂಗೀತ ಸಂಯೋಜಿಸಿದ್ದಾರೆ. ಸಿನಿಮಾಕ್ಕೆ

ವಿನೋದ್‌ ಭಾರತಿ ಛಾಯಾಗ್ರಹಣವಿದೆ. “ವಿಷ್ಣುಪ್ರಿಯ’ ಸಿನಿಮಾದಲ್ಲಿ ಶ್ರೇಯಸ್‌, ಪ್ರಿಯಾ ಜೊತೆಗೆ ಸುಚೇಂದ್ರ ಪ್ರಸಾದ್‌, ಅಚ್ಯುತ್‌ ಕುಮಾರ್‌, ನಿಹಾಲ್‌ ರಾಜ್‌ ಮತ್ತಿತರರು ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ.

ಟಾಪ್ ನ್ಯೂಸ್

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Moksha Kushal

Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.