ಕಿರಾತಕ ಸೆಟ್‌ಗೆ ಅಭಿಷೇಕ್‌ ಭೇಟಿ


Team Udayavani, Oct 8, 2018, 11:29 AM IST

kirataka.jpg

ಕೆಲ ಸ್ಟಾರ್‌ ಚಿತ್ರಗಳ ಚಿತ್ರೀಕರಣ ನಡೆಯುವ ಸಂದರ್ಭದಲ್ಲಿ ಹಲವು ಸ್ಟಾರ್‌ ನಟರುಗಳು ಭೇಟಿ ನೀಡಿ, ಒಂದಷ್ಟು ಮಾತುಕತೆ ನಡೆಸಿ ಬರುತ್ತಿರುವುದು ಹೊಸದೇನಲ್ಲ. ಈಗಾಗಲೇಹಲವು ಸ್ಟಾರ್‌ ನಟರು, ಸ್ಟಾರ್‌ ನಟರ ಚಿತ್ರೀಕರಣ ಸ್ಥಳಕ್ಕೆ ಭೇಟಿ ನೀಡಿ, ಕೆಲಹೊತ್ತು ಕಾಲ ಕಳೆದು ಬಂದಿರುವ ಉದಾಹರಣೆಗಳು ಸಾಕಷ್ಟು ಇವೆ. ಈಗ ಹೊಸ ಸುದ್ದಿಯೆಂದರೆ, ಯಶ್‌ ಅಭಿನಯದ “ಮೈ ನೇಮ್‌ ಈಸ್‌ ಕಿರಾತಕ’ ಚಿತ್ರದ ಚಿತ್ರೀಕರಣ ಸ್ಥಳಕ್ಕೆ ಯುವ ನಟ ಅಭಿಷೇಕ್‌ ಅಂಬರೀಶ್‌ ಅವರು ಭೇಟಿ ನೀಡಿದ್ದಾರೆ.

ಶನಿವಾರ “ಮೈ ನೇಮ್‌ ಈಸ್‌ ಕಿರಾತಕ’ ಚಿತ್ರದ ಚಿತ್ರೀಕರಣದಲ್ಲಿ ಯಶ್‌ ಪಾಲ್ಗೊಂಡಿದ್ದರು. ಈ ಮಧ್ಯೆ ಬಿಡುವು ಮಾಡಿಕೊಂಡ ಅಭಿಷೇಕ್‌ ಅಂಬರೀಶ್‌ ಅವರು, ಸೆಟ್‌ಗೆ ಭೇಟಿ ನೀಡಿ, ಕೆಲ ಹೊತ್ತು ಚಿತ್ರೀಕರಣ ವೀಕ್ಷಿಸಿದ ಬಳಿಕ ಯಶ್‌ ಜೊತೆಗೆ ಒಂದಷ್ಟು ಮಾತುಕತೆ ನಡೆಸಿದ್ದಾರೆ. “ಮೈ ನೇಮ್‌ ಈಸ್‌ ಕಿರಾತಕ’ ಚಿತ್ರೀಕರಣ ಸ್ಥಳಕ್ಕೆ ಹೋಗಿದ್ದ ಅಭಿಷೇಕ್‌ ಅಂಬರೀಶ್‌, ಯಶ್‌ ಜೊತೆ ಕಳೆದ ಖುಷಿಯ ಕ್ಷಣವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ಅಭಿಷೇಕ್‌ ಅಂಬರೀಶ್‌ ಅವರ ಹುಟ್ಟು ಹಬ್ಬದ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಯಶ್‌, ತಮ್ಮ ಚಿತ್ರೀಕರಣ ಸೆಟ್‌ಗೆ ಬರುವಂತೆ ಅಭಿಷೇಕ್‌ ಅಂಬರೀಶ್‌ ಅವರಿಗೆ ಆಹ್ವಾನಿಸಿದ್ದರಿಂದ, ಅಭಿಷೇಕ್‌, ಚಿತ್ರೀಕರಣ ಸ್ಥಳಕ್ಕೆ ಭೇಟಿ ಕೊಟ್ಟಿದ್ದಾರೆ. ಈ ಚಿತ್ರಕ್ಕೆ ಅನಿಲ್‌ ನಿರ್ದೇಶಕರು. ಜಯಣ್ಣ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಚಿತ್ರದಲ್ಲಿ ಯಶ್‌ಗೆ ಜೋಡಿಯಾಗಿ “ನಂದ ಲವ್ಸ್‌ ನಂದಿತಾ’ ಖ್ಯಾತಿಯ ಶ್ವೇತಾ ನಾಯಕಿಯಾಗಿ ನಟಿಸುತ್ತಿದ್ದಾರೆ. ಇನ್ನೊಬ್ಬ ನಾಯಕಿಯ ಆಯ್ಕೆ ಇನ್ನಷ್ಟೇ ನಡೆಯಬೇಕಿದೆ.

ಆರಂಭದಲ್ಲಿ ಈ ಚಿತ್ರದ ಶೀರ್ಷಿಕೆ ವಿವಾದ ಎದ್ದಿತ್ತು. ಈ ಹಿಂದೆ ಯಶ್‌ ಅವರಿಗೆ “ಕಿರಾತಕ’ ಚಿತ್ರವನ್ನು ನಿರ್ದೇಶಿಸಿದ್ದ ಪ್ರದೀಪ್‌ರಾಜ್‌, “ಕಿರಾತಕರು’ ಎಂಬ ಶೀರ್ಷಿಕೆಯಡಿ ಇನ್ನೊಂದು ಚಿತ್ರ ನಿರ್ದೇಶಿಸುತ್ತಿದ್ದು, ಯಶ್‌ ಅಭಿನಯದ ಚಿತ್ರಕ್ಕೂ “ಕಿರಾತಕರು’ ಎಂದು ನಾಮಕರಣ ಮಾಡಲಾಗಿತ್ತು. ಕೊನೆಗೆ, ಆ ಶೀರ್ಷಿಕೆ ಬಿಟ್ಟುಕೊಡುವುದಿಲ್ಲ ಎಂದು ಪ್ರದೀಪ್‌‌ರಾಜ್‌ ಅವರು ಪಟ್ಟು ಹಿಡಿದಿದ್ದರಿಂದ, ಯಶ್‌ ಚಿತ್ರಕ್ಕೆ “ಮೈ ನೇಮ್‌ ಈಸ್‌ ಕಿರಾತಕ’ ಎಂದು ನಾಮಕರಣ ಮಾಡಿ ಚಿತ್ರೀಕರಣ ಶುರುಮಾಡಲಾಗಿದೆ.

ಟಾಪ್ ನ್ಯೂಸ್

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.