ಇವರು ಯಾರು ಬಲ್ಲಿರೇನು?


Team Udayavani, Mar 25, 2017, 11:11 AM IST

mamatha-shenoy.jpg

ಮಮತಾ ಶೆಣೈ ನೆನಪಿದೆಯಾ? ಹಳಬರಿಗೂ ಅಷ್ಟೇ, ಬಹಳಷ್ಟು ಜನರಿಗೆ ಆ ಹೆಸರು ಮರೆತೇ ಹೋಗಿರಬಹುದು. ಏಕೆಂದರೆ, ಮಮತಾ ಶೆಣೈ ಅಭಿನಯದ ಕೊನೆಯ ಚಿತ್ರ ಬಿಡುಗಡೆಯಾಗಿಯೇ 35 ವರ್ಷಗಳಾಗಿವೆ. ಇನ್ನು ಆಕೆ ಚಿತ್ರರಂಗದಿಂದ ದೂರವಾಗಿಯೂ ಸಹ ಅಷ್ಟೇ ವರ್ಷಗಳಾಗಿವೆ. ಹಾಗಾಗಿ ಹೆಸರು ನೆನಪಿನ ಬುತ್ತಿಯಿಂದ ಮರೆಯಾಗಿದ್ದರೆ ಆಶ್ಚರ್ಯವಿಲ್ಲ. ಮಮತಾ ಶಣೈ ಅವರು ಒಂದು ಕಾಲದಲ್ಲಿ ಕನ್ನಡದಲ್ಲಿ ಜನಪ್ರಿಯ ನಟಿ. 56 ಚಿತ್ರಗಳಲ್ಲಿ ನಟಿಸಿದವರು.

1978ರಲ್ಲಿ ಬಿಡುಗಡೆಯಾದ “ಅಪರೂಪದ ಅತಿಥಿಗಳು’ ಚಿತ್ರದಲ್ಲಿ ನಟಿಸುವ ಮೂಲಕ ಕನ್ನಡ ಚಿತ್ರರಂಗಕ್ಕೆ ಬಂದ ಅವರು, ನಂತರದ ದಿನಗಳಲ್ಲಿ “ಭಾವ ತರಂಗ’, “ಕುಂಕುಮ ರಕ್ಷೆ’, “ಮಧುಚಂದ್ರ’, “ಅಪರಾಧಿ’, “ಮಂಜಿನ ತೆರೆ’ ಮುಂತಾದ ಚಿತ್ರಗಳಲ್ಲಿ ನಟಿಸಿದ್ದರು. ಡಾ. ರಾಜಕುಮಾರ್‌ ಅವರೊಂದಿಗೆ “ಆಪರೇಷನ್‌ ಡೈಮೆಂಡ್‌ ರಾಕೆಟ್‌’, “ತಾಯಿಗೆ ತಕ್ಕ ಮಗ’ ಮತ್ತು “ಚಲಿಸುವ ಮೋಡಗಳು’ ಚಿತ್ರದಲ್ಲಿ ನಟಿಸಿದವರು.

“ತಾಯಿಗೆ ತಕ್ಕ ಮಗ’ ಚಿತ್ರದಲ್ಲಿ ಡಾ. ರಾಜ್‌ ಮತ್ತು ಮಮತಾ ಶೆಣೈ ಅಭಿನಯದ “ಎಂಥಾ ಸೊಗಸು ಮಗುವಿನ ಮನಸು …’ ಹಾಡು ಇಂದಿಗೂ ಜನಪ್ರಿಯ. ಅಂಥ ನಟಿ 35 ವರ್ಷಗಳ ನಂತರ ಮತ್ತೆ ಮಾಧ್ಯಮದವರೆದುರು ಶುಕ್ರವಾರ ಕಾಣಿಸಿಕೊಂಡರು. ಅದೂ “ಮದುವೆ ದಿಬ್ಬಣ’ ಎಂಬ ಚಿತ್ರದ ಮುಹೂರ್ತ ಸಮಾರಂಭದಲ್ಲಿ. ಈ ಚಿತ್ರದಲ್ಲಿ ಮಮತಾ ಅವರು ನಟಿಸುತ್ತಿಲ್ಲ. ಆದರೆ, ತಮ್ಮ ಸಹೋದರನ ಮಗಳಿಗೆ ಅವಕಾಶ ಕೇಳುವ ಕಾರಣದಿಂದಾಗಿ ಅವರು ಚಿತ್ರದ ಮುಹೂರ್ತಕ್ಕೆ ಬಂದಿದ್ದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, “ನನ್ನ ಕೊನೆಯ ಸಿನಿಮಾ “ಚಲಿಸುವ ಮೋಡಗಳು’. ಆ ನಂತರ ಮದುವೆಯಾಯಿತು. ಮದುವೆಯಾದ ಮೇಲೆ ಯಾವುದೇ ಸಿನಿಮಾದಲ್ಲಿ ನಟಿಸಲಿಲ್ಲ. ಅಷ್ಟೇ ಅಲ್ಲ, ಚಿತ್ರರಂಗದವರ ಸಂಪರ್ಕವೇ ಇರಲಿಲ್ಲ. ಹಾಗಂತ ನಾನು ಎಲ್ಲೋ ಹೋಗಿರಲಿಲ್ಲ. ಇದೇ ಬೆಂಗಳೂರಿನಲ್ಲಿದ್ದೆ. ಆದರೆ, ಚಿತ್ರರಂಗದಿಂದ ದೂರ ಇದ್ದೆ ಅಷ್ಟೇ. ತಮ್ಮನ ಮಗಳಿಗೆ ನಟಿಸುವ ಇಚ್ಛೆ ಇದೆ. ನಿರ್ದೇಶಕ ಉಮೇಶ್‌ ಅವರಿಗೆ ಪರಿಚಯಿಸುವ ದೃಷ್ಟಿಯಿಂದ ಬಂದೆ’ ಎನ್ನುತ್ತಾರೆ ಅವರು.

ಹಾಗಾದರೆ, ಈ ಚಿತ್ರದಲ್ಲಿ ಅವರೂ ನಟಿಸುತ್ತಾರಾ? ಈ ಚಿತ್ರದ ಮೂಲಕ ಮತ್ತೆ ಚಿತ್ರರಂಗಕ್ಕೆ ಎಂಟ್ರಿ ಕೊಡುತ್ತಾರಾ ಎಂಬ ಪ್ರಶ್ನೆಗಳು ಬರಬಹುದು. ಆ ಬಗ್ಗೆ ಅವರಿಗೆ ಸದ್ಯಕ್ಕೆ ಯೋಚನೆಯಿಲ್ಲ. “ಕಂಬ್ಯಾಕ್‌ ಬಗ್ಗೆ ಯೋಚನೆ ಮಾಡಿಲ್ಲ. ಒಳ್ಳೆಯ ಅವಕಾಶ ಸಿಕ್ಕರೆ ನೋಡಬಹುದು. ನಾನು ಈ ಹಿಂದೆ ನಟಿಸಿದ ಚಿತ್ರಗಳಲ್ಲಿ, ನಾಲ್ಕು ಜನ ನೋಡೋ ಹಾಗೆ ಮಾಡಿದ್ದೆ. ಹಾಗಾಗಿ ಒಳ್ಳೆಯ ಅವಕಾಶಗಳು ಸಿಕ್ಕರೆ ನಟಿಸುವ ಆಸೆ ಇದೆ’ ಎನ್ನುತ್ತಾರೆ ಅವರು. 

ಟಾಪ್ ನ್ಯೂಸ್

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Actor Dwarakish: ಸಕಲ ಗೌರವಗಳೊಂದಿಗೆ ನಟ ದ್ವಾರಕೀಶ್‌ ಅಂತ್ಯಕ್ರಿಯೆ

Actor Dwarakish: ಸಕಲ ಗೌರವಗಳೊಂದಿಗೆ ನಟ ದ್ವಾರಕೀಶ್‌ ಅಂತ್ಯಕ್ರಿಯೆ

choo mantar kannada movie

Sharan; ಮೇ 10ಕ್ಕೆ ‘ಛೂ ಮಂತರ್‌’ ತೆರೆಗೆ ಸಿದ್ಧ

aditya;s kangaroo movie

Aditya; ಟ್ರೇಲರ್ ನಲ್ಲಿ ‘ಕಾಂಗರೂ’ ದರ್ಶನ; ಮೇ.3ರಂದು ತೆರೆಗೆ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.