ಚಿತ್ರಮಂದಿರ ಕಾರ್ಮಿಕರ ಗೋಳು ಕೇಳುವವರು ಯಾರು..?


Team Udayavani, Apr 20, 2020, 10:38 AM IST

ಚಿತ್ರಮಂದಿರ ಕಾರ್ಮಿಕರ ಗೋಳು ಕೇಳುವವರು ಯಾರು..?

ಕೋವಿಡ್ 19 ಬಂದು ಇಡೀ ಜಗತ್ತನ್ನೇ ನಲುಗಿಸಿದೆ. ಆದೆಷ್ಟೋ ಜೀವಗಳು ಪ್ರಾಣತೆತ್ತಿವೆ. ಚಿತ್ರರಂಗದಲ್ಲಂತೂ ದುಡಿಯುವ ಮನಸ್ಸುಗಳ ಸ್ಥಿತಿ ಹೇಳತೀರದು. ಅದರಲ್ಲೂ ಚಿತ್ರಮಂದಿರಗಳಲ್ಲಿ ನಿತ್ಯ ಕೆಲಸ ಮಾಡುತ್ತಿದ್ದ ಸಾವಿರಾರು ಕಾರ್ಮಿಕರ ಸಮಸ್ಯೆಗೆ ಸ್ಪಂದಿಸುವ ಅಗತ್ಯವಿದೆ.

ಹೌದು, ಪ್ರಸ್ತುತ ಕರ್ನಾಟಕದಲ್ಲಿ ಹೆಚ್ಚು ಕಮ್ಮಿ ದೊಡ್ಡ, ಸಣ್ಣ ಚಿತ್ರಮಂದಿರಗಳನ್ನೂ ಲೆಕ್ಕ ಹಾಕಿದರೆ, ಸಂಖ್ಯೆ 900 ದಾಟುತ್ತದೆ. ಒಂದೊಂದು ಚಿತ್ರಮಂದಿರಗಳಲ್ಲಿ ಹೆಚ್ಚು ಕಮ್ಮಿ 10 ಜನ ಕಾರ್ಮಿಕರಂತೂ ಕೆಲಸ ಮಾಡುತ್ತಿದ್ದಾರೆ. ಇದರಲ್ಲಿ ಕಸಗೂಡಿಸುವವರಿಂದ ಹಿಡಿದು, ಟಿಕೆಟ್‌ ಹರಿಯುವವನು, ಸೀಟಿಗೆ ಪ್ರೇಕ್ಷಕರನ್ನ ಕೂರಿಸುವವನು, ಪಾರ್ಕಿಂಗ್‌ ವ್ಯವಸ್ಥೆ ಮಾಡುವವನು, ಪ್ರೊಜೆಕ್ಟರ್‌ನಲ್ಲಿ ಕೆಲಸ ಮಾಡುವವನು, ಟಾಯ್ಲೆಟ್‌ ಇತ್ಯಾದಿ ಕ್ಲೀನ್‌ ಮಾಡುವವನು, ಕ್ಯಾಂಟೀನ್‌ ನೋಡಿಕೊಳ್ಳುವವನು ಹೀಗೆ ಇಲ್ಲಿ ಕೆಲಸ ಮಾಡುವ ಕಾರ್ಮಿಕರ ಸಂಖ್ಯೆ ಏನಿಲ್ಲವೆಂದರೂ 10 ಸಾವಿರ ಇದೆ.

ಇವರೀಗ ತೊಂದರೆಯಲ್ಲಿದ್ದಾರೆ. ಚಿತ್ರರಂಗದ ಒಕ್ಕೂಟದ ಕಾರ್ಮಿಕರ ಸಹಾಯಕ್ಕೆ ಅಲ್ಲಿನ ಒಕ್ಕೂಟದ ಅಂಗ ಸಂಸ್ಥೆಗಳು ದಿನಸಿ, ಸಾಲ ಇತ್ಯಾದಿ ಅಗತ್ಯತೆ ಪೂರೈಸಿವೆ. ಸ್ಟಾರ್‌ಗಳು ಅವರ ನೆರವಿಗೆ ಬಂದಿವೆ. ಆದರೆ, ಚಿತ್ರಮಂದಿರಗಳಲ್ಲಿ ದುಡಿಯುವ ವರ್ಗಕ್ಕೆ ಯಾರು ಸಹಾಯಹಸ್ತ ಚಾಚಿದ್ದಾರೆ? ಕೆಲವು ಬೆರಳೆಣಿಕೆ ಚಿತ್ರಮಂದಿರಗಳ ಮಾಲಿಕರು ಸ್ವತಃ ತಮ್ಮ ಚಿತ್ರಮಂದಿರಗಳಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ದಿನಸಿ ಸೇರಿದಂತೆ ಅಗತ್ಯ ವಸ್ತುಗಳನ್ನು ಪೂರೈಸುವ ಮೂಲಕ ನೆರವಿಗೆ ಧಾವಿಸಿದ್ದಾರೆ. ಆದರೆ, ಕೆಲವು ಚಿತ್ರಮಂದಿರಗಳಲ್ಲಿ ದುಡಿಯುತ್ತಿರುವ ಕಾರ್ಮಿಕರ ನೆರವಿಗೆ ಯಾರೂ ಆಗಿಲ್ಲ ಎಂಬ ಕೂಗು ಕೇಳಿಬರುತ್ತಿದೆ.

ಹಾಗೆ ನೋಡಿದರೆ, ಚಿತ್ರಮಂದಿರಗಳಲ್ಲಿ ದುಡಿಯುವ ವರ್ಗಕ್ಕೆ ಚಿತ್ರಮಂದಿರಗಳ ಮಾಲಿಕರೇ ದೊರೆ. ಅವರೇ ಅವರಿಗೆ ದೇವರು. ಅವರ ಮನಸ್ಸಲ್ಲಿ ನಮ್ಮ ದೊರೆ ನಮ್ಮ ಕಷ್ಟಕ್ಕೆ ಸ್ಪಂದಿಸುತ್ತಾರೆ, ಇಂದು ದಿನಸಿಗೆ ವ್ಯವಸ್ಥೆ ಮಾಡುತ್ತಾರೆ. ನಾಳೆ ಕಾಸು ಕೊಡಬಹುದು ಎಂಬ ಆಸೆಯ ಕಂಗಳಿಂದ ಕಾಯುತ್ತಿರುತ್ತಾರೆ. ಎಷ್ಟೋ ಚಿತ್ರಮಂದಿರಗಳ ಮಾಲಿಕರು ಕಾರ್ಮಿಕರ ನೆರವಿಗೆ ಆಗಿದ್ದಾರೆ. ಕೆಲವು ಆ ಕಡೆ ಗಮನಿಸಿಲ್ಲ. ಅಂತಹವರಿಗೆ ಸಹಾಯ ಮಾಡಬೇಕಾದ ಅನಿವಾರ್ಯತೆ ಇದೆ.

ಈಗಾಗಲೇ ಚಿತ್ರದುರ್ಗ ಜಿಲ್ಲೆ ಹೊಸದುರ್ಗದಲ್ಲಿ ರುವ ಚಿತ್ರಮಂದಿರಗಳ ಕಾರ್ಮಿಕರಿಗೆ ಶಾಸಕ ಗೂಳಿ ಹಟ್ಟಿ ಶೇಖರ್‌ ದಿನಸಿ ವಿತರಿಸಿ, ಅವರ ಸಹಾಯಕ್ಕೆ ಮುಂದಾಗಿದ್ದಾರೆ. ಅವರಿಗೂ ಸಿನಿಮಾರಂಗಕ್ಕೂ ಸಂಬಂಧವೇ ಇಲ್ಲ. ಆದರೂ, ಕಾರ್ಮಿಕರಿಗೂ ಕಷ್ಟ ಇದೆ. ಅವರಿಗೂ ಮಕ್ಕಳು, ಮನೆ ಇದೆ ಅವರ ಸಂಕಷ್ಟಕ್ಕೆ ಸ್ಪಂದಿಸಬೇಕು ಎಂಬ ಉದ್ದೇಶದಿಂದ ದಿನಸಿ ವ್ಯವಸ್ಥೆ ಮಾಡಿದ್ದಾರೆ. ಚಿತ್ರಮಂದಿರಗಳಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ಸಹಾಯ ಮಾಡಬೇಕು ಎಂದು ಮನವಿ ಮಾಡಿರುವ ನಿರ್ದೇಶಕ ಮರಡಿಹಳ್ಳಿ ನಾಗಚಂದ್ರ, ಚಿತ್ರರಂಗದ ಇತರೆ ಕಾರ್ಮಿಕ ವರ್ಗಕ್ಕೆ ಫ‌ಂಡ್‌ ಇರುತ್ತೆ. ಆದರೆ, ಚಿತ್ರಮಂದಿರದ ಕಾರ್ಮಿಕರಿಗೆ ಯಾವುದೇ ಫ‌ಂಡ್‌ ಇಲ್ಲ. ಹಾಗಾಗಿ ಮಾಲಿಕರು ತಮ್ಮ ಕಾರ್ಮಿ ಕರ ನೋವಿಗೆ ಸ್ಪಂದಿಸಬೇಕು ಎಂಬುದು ಅವರ ಮನವಿ.

ಅದೇನೆ ಇರಲಿ, ಚಿತ್ರಮಂದಿರವನ್ನು ಪ್ರತಿನಿತ್ಯ ಸ್ವಚ್ಛಗೊಳಿಸಿ, ಬರುವ ಪ್ರೇಕ್ಷಕರನ್ನು ಪ್ರೀತಿಯಿಂದಲೇ ಎಲ್ಲವನ್ನೂ ವ್ಯವಸ್ಥೆಗೊಳಿಸಿ, ಖುಷಿಪಡಿಸುವ ಕಾರ್ಮಿಕರ ಸಮಸ್ಯೆಗೆಎಲ್ಲರೂ ಸ್ಪಂದಿಸುವಂತಾಗಲಿ ಎಂಬುದೇ ಆಶಯ.

ಟಾಪ್ ನ್ಯೂಸ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Rahul Gandhi 3

U-turn ಹೊಡೆದ ರಾಹುಲ್: ಸಂಪತ್ತು ಹಂಚಿಕೆ ಬಗ್ಗೆ ಹೇಳಿಲ್ಲ,ಅನ್ಯಾಯ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

nenapirali prem as police in new movie

Kannada Cinema; ಹೊಸ ಚಿತ್ರದಲ್ಲಿ ಖಡಕ್ ಪೊಲೀಸ್ ಆದ ನೆನಪಿರಲಿ ಪ್ರೇಮ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್‌ ದಾಖಲು

Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್‌ ದಾಖಲು

ramarasa kannada movie

Kannada Cinema; ‘ರಾಮರಸ’ ಹಿಂದೆ ಗುರು ಆ್ಯಂಡ್‌ ಟೀಂ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

12-uv-fusion

UV Fusion: ಮಕ್ಕಳ ಆಸಕ್ತಿ ಹುಡುಕುವ ಕೆಲಸವಾಗಲಿ

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

11-mallige

Bappanadu Durgaparameshwari: ಮಲ್ಲಿಗೆ ಪ್ರಿಯೆ ದೇವಿಗೆ ಲಕ್ಷ ಮಲ್ಲಿಗೆ ಶಯನೋತ್ಸವ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.