ಇನ್ನು ಯಾವುದೇ ಸೀರಿಯಲ್ ನಲ್ಲಿ ನಟಿಸುವುದಿಲ್ಲ: ಜೊತೆ ಜೊತೆಯಲಿ ನಟಿ Megha Shetty


Team Udayavani, May 22, 2023, 9:36 AM IST

megha shetty

“ನನ್ನನ್ನು ಒಬ್ಬಳು ನಟಿಯಾಗಿ ಜನರಿಗೆ ಪರಿಚಯಿಸಿದ್ದು “ಜೊತೆ ಜೊತೆಯಲಿ’ ಸೀರಿಯಲ್‌. ಈ ಸೀರಿಯಲ್‌ನ ಮೊದಲ ಶಾಟ್‌ ನನ್ನ ಮೇಲೆ ಶುರುವಾಗಿ, ಕೊನೆಯ ಶಾಟ್‌ ನನ್ನಿಂದಲೇ ಮುಗಿದಿದೆ. ಪರಿಚಯವಿಲ್ಲದೆ, ಈ ತಂಡದ ಜೊತೆ ಸೇರಿಕೊಂಡ ನನಗೆ, ಅದೇ ತಂಡ ಇದೀಗ ಮತ್ತೂಂದು ಫ್ಯಾಮಿಲಿಯಂತಾಗಿತ್ತು. ಸುಮಾರು ನಾಲ್ಕು ವರ್ಷಗಳ ಈ ಧಾರಾವಾಹಿಯ ನಂಟು ಇದೀಗ ಕೊನೆಯಾಗಿದೆ. ತುಂಬ ಬೇಸರಿಂದಲೇ ಇದನ್ನು ಒಪ್ಪಿಕೊಳ್ಳಬೇಕಾಗಿದೆ’ ಇದು “ಜೊತೆ ಜೊತೆಯಲಿ…’ ಧಾರಾವಾಹಿಯ ಬಗ್ಗೆ ನಟಿ ಮೇಘಾ ಶೆಟ್ಟಿ ಮಾತು.

“ಇಡೀ ಧಾರಾವಾಹಿ ಮತ್ತು ಅದರ ತಂಡದ ಪ್ರತಿಯೊಬ್ಬರ ಜೊತೆಗೂ ಒಂದು ಭಾವನಾತ್ಮಕ ನಂಟಿದೆ. ನಿರ್ದೇಶಕರಿಂದ ಹಿಡಿದು ಕಲಾವಿದರು, ತಂತ್ರಜ್ಞರ ಜೊತೆ ಓಡಾಡಿದ್ದೇನೆ, ಒಟ್ಟಿಗೆ ಕುಳಿತು ಊಟ ಮಾಡಿದ್ದೇನೆ. ಅದೆಲ್ಲವನ್ನು ಎಂದಿಗೂ ಮರೆಯಲಾಗದು. ಅನು ಸಿರಿಮನೆ ಪಾತ್ರ ನನಗೆ ಎಲ್ಲವನ್ನು ನೀಡಿದೆ. ಹೆಸರು, ಅವಕಾಶ, ಜನರ ಪ್ರೀತಿ ಇವೆಲ್ಲದಕ್ಕೂ “ಜೊತೆ ಜೊತೆಯಲಿ…’ ಸೀರಿಯಲ್‌ ಮಾತ್ರ ಕಾರಣ’ ಎನ್ನುವುದು ಮೇಘಾ ಶೆಟ್ಟಿ ಅಭಿಪ್ರಾಯ.

ಇನ್ನು “ಜೊತೆ ಜೊತೆಯಲಿ…’ ಧಾರಾವಾಹಿ ನಂತರ ಮುಂದೇನು? ಎಂಬ ಪ್ರಶ್ನೆಗೆ ಮೇಘಾ ಶೆಟ್ಟಿ ಉತ್ತರ ಹೀಗಿದೆ. “ಸದ್ಯಕ್ಕೆ ಮುಂದೆ ಯಾವುದೇ ಸೀರಿಯಲ್‌ನಲ್ಲಿ ನಟಿಸದಿರಲು ನಿರ್ಧರಿಸಿದ್ದೇನೆ. ಸುಮಾರು ನಾಲ್ಕು ವರ್ಷಗಳ ಸೀರಿಯಲ್‌ ಸಾಕಷ್ಟು ಅನುಭವ ಕೊಟ್ಟಿದೆ. ಅದೇ ಅನುಭವವನ್ನು ಇಟ್ಟುಕೊಂಡು, ಮುಂದೆ ಸಿನಿಮಾಗಳತ್ತ ಮಾತ್ರ ಗಮನ ಹರಿಸುವ ಯೋಚನೆ ಮಾಡಿದ್ದೇನೆ’ ಎನ್ನುತ್ತಾರೆ. ಈಗಾಗಲೇ ಸಿನಿಮಾಕ್ಕೆ ಒಂದಷ್ಟು ತಯಾರಿಗಳನ್ನೂ ಮಾಡಿಕೊಳ್ಳುತ್ತಿರುವ ಮೇಘಾ ಶೆಟ್ಟಿ, “ಈಗ ಸಿನಿಮಾ ಮಾಡಬಹುದಾದ ಒಂದಷ್ಟು ಒಳ್ಳೆಯ ಕಥೆಗಳನ್ನು ಕೇಳುತ್ತಿದ್ದೇನೆ. ಆದರೆ ಇನ್ನೂ ಯಾವುದನ್ನೂ ಫೈನಲ್‌ ಮಾಡಿಲ್ಲ. ಸದ್ಯಕ್ಕೆ ನಾನು ಈಗಾಗಲೇ ಅಭಿನಯಿಸಿರುವ “ಕೈವ’ ಮತ್ತು “ಆಪರೇಷನ್‌ ಲಂಡನ್‌ ಕೆಫೆ’ ಸಿನಿಮಾಗಳು ಪೋಸ್ಟ್‌ ಪ್ರೊಡಕ್ಷನ್‌ ಹಂತದಲ್ಲಿದೆ. ಶೀಘ್ರದಲ್ಲಿಯೇ ಈ ಎರಡೂ ಸಿನಿಮಾಗಳು ಬಿಡುಗಡೆಯಾಗಲಿವೆ. ಇದರ ನಡುವೆ ಸಿನಿಮಾಗಳಿಂದಲೂ ಒಂದಷ್ಟು ಆಫ‌ರ್ ಬರುತ್ತಿದ್ದು, ಅವುಗಳ ಬಗ್ಗೆಯೂ ಮುಂದಿನ ದಿನಗಳಲ್ಲಿ ಮಾಹಿತಿ ನೀಡಲಿದ್ದೇನೆ’ ಎನ್ನುತ್ತಾರೆ.

ಟಾಪ್ ನ್ಯೂಸ್

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾಶ್ರೀ: ಮೇ 27ರವರೆಗೆ ನ್ಯಾಯಾಂಗ ಬಂಧನ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

11

Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.