ದಾಖಲೆ ಬರೆದ ನಟ ಅನಿರುದ್ಧ


Team Udayavani, Dec 30, 2018, 5:47 AM IST

anirudh-copy.jpg

ನಟ ಕಮ್‌ ನಿರ್ದೇಶಕ ಅನಿರುದ್ಧ ಜತಕರ ಇದೀಗ ಖುಷಿಯ ಮೂಡ್‌ನ‌ಲ್ಲಿದ್ದಾರೆ. ಅವರ ಖುಷಿಗೆ ಕಾರಣ, ಅವರ ಹೆಸರಿಗೆ ಒಂದಲ್ಲ, ಎರಡಲ್ಲ, ನಾಲ್ಕು “ಇಂಡಿಯಾ ಬುಕ್‌ ಆಫ್ ರೆಕಾರ್ಡ್ಸ್‌’ ಆಗಿರೋದು. ಹೌದು. ಅವರು ಇತ್ತೀಚೆಗೆ ಕಿರುಚಿತ್ರಗಳನ್ನು ನಿರ್ದೇಶಿಸಿ, ಪ್ರದರ್ಶನ ಮಾಡಿದ್ದು ಎಲ್ಲರಿಗೂ ಗೊತ್ತು. ಆ ಕಿರುಚಿತ್ರಗಳಿಗೆ ಈ ದಾಖಲೆ ಸೇರಿಕೊಂಡಿದೆ. ಅಷ್ಟಕ್ಕೂ “ಇಂಡಿಯಾ ಬುಕ್‌ ಆಫ್ ರೆಕಾರ್ಡ್ಸ್‌’ಗೆ ಕಾರಣವೇನೆಂದರೆ, ಮೊದಲನೆಯದು ಅವರು ಕೀರ್ತಿ ಇನ್ನೋವೇಶನ್ಸ್‌ ಬ್ಯಾನರ್‌ನಡಿ ನಿರ್ಮಾಣಗೊಂಡ ಆರು ಕಿರುಚಿತ್ರಗಳನ್ನು ರಚಿಸಿ, ನಿರ್ದೇಶಿಸಿ, ಒಂದೇ ದಿನ ಬಿಡುಗಡೆ ಮಾಡಿದ್ದು.

ಎರಡನೆಯದು ಸಾಮಾಜಿಕ ಸಮಸ್ಯೆ ಬಿಂಬಿಸುವ ಆರು ಕಿರುಚಿತ್ರಗಳನ್ನು ಒಂದೇ ದಿನ ಪ್ರದರ್ಶನ ಮಾಡಿದ್ದು. ಮೂರನೆಯದ್ದು, ಅವರು ನಿರ್ದೇಶಿಸಿದ ಆರು ಕಿರುಚಿತ್ರಗಳಲ್ಲಿ ಯಾವುದೇ ಸಂಭಾಷಣೆ ಇಲ್ಲದೆ, ಕೇವಲ ದೃಶ್ಯರೂಪವನ್ನು ತೆರೆಮೇಲೆ ಅನಾವರಣಗೊಳಿಸಿದ್ದು. ಇನ್ನು, ಒಂದೇ ದಿನ ಬೇರೆ ಬೇರೆ ಶೈಲಿಯ ಆರು ಕಿರುಚಿತ್ರಗಳನ್ನು ಚಿತ್ರೀಕರಿಸಿ, ಅವುಗಳನ್ನು ಒಂದೇ ದಿನ ಬಿಡುಗಡೆ ಮಾಡಿದ್ದರ ಹಿನ್ನೆಲೆಯಲ್ಲಿ “ಇಂಡಿಯಾ ಬುಕ್‌ ಆಫ್ ರೆಕಾರ್ಡ್ಸ್‌’ಗೆ ಅನಿರುದ್ಧ ಹೆಸರು ದಾಖಲಾಗಿದೆ.

ಈ ಕುರಿತು “ಉದಯವಾಣಿ’ ಜೊತೆ ಮಾತನಾಡಿದ ಅನಿರುದ್ಧ, “ನಿಜವಾಗಿಯೂ ನಾನು ಇದನ್ನೆಲ್ಲಾ ನಿರೀಕ್ಷಿಸಿರಲಿಲ್ಲ. ನನ್ನ ಹೆಸರು “ಇಂಡಿಯಾ ಬುಕ್‌ ಆಫ್ ರೆಕಾರ್ಡ್ಸ್‌’ಗೆ ಸೇರಿಕೊಂಡಿದ್ದಕ್ಕೆ ಕನ್ನಡಿಗನಾಗಿ, ಕನ್ನಡ ಕಲಾವಿದನಾಗಿ ಹೆಮ್ಮೆ ಆಗುತ್ತಿದೆ. ಡಾ.ವಿಷ್ಣುವರ್ಧನ್‌ ಅವರ ಆಶೀರ್ವಾದ, ಕೀರ್ತಿ ಇನ್ನೋವೇಶನ್ಸ್‌ ತಂಡದ ಬೆಂಬಲ ಹಾಗೂ ಕುಟುಂಬದ ಪ್ರೋತ್ಸಾಹದಿಂದ ಇದೆಲ್ಲಾ ಸಾಧ್ಯವಾಗಿದೆ.  

ನಾನು ಕನ್ನಡ ಮಾತ್ರವಲ್ಲ, ಇಂಗ್ಲೀಷ್‌ನಲ್ಲೂ ಕಿರುಚಿತ್ರಗಳನ್ನು ನಿರ್ದೇಶಿಸಿದ್ದೇನೆ. ನಾನು ಮಾಡಿದ ಕಿರುಚಿತ್ರಗಳಲ್ಲಿ ಸಂಭಾಷಣೆಯ ಅಗತ್ಯ ಇರಲಿಲ್ಲ. ಎಲ್ಲವನ್ನೂ ದೃಶ್ಯರೂಪವೇ ಕಟ್ಟಿಕೊಡುವಂತಿದ್ದರಿಂದ ಮಾತುಗಳನ್ನು ಕಟ್ಟಿಕೊಡದೆ, ಚಿತ್ರೀಕರಿಸಿದ್ದೇನೆ. ಇನ್ನು, ಸಾಮಾಜಿಕ ಸಮಸ್ಯೆ ಬಿಂಬಿಸುವ ವಿಷಯ ಇಟ್ಟುಕೊಂಡು ಮಾಡಿದ್ದು ಪ್ಲಸ್‌ ಎನಿಸಿದೆ. ಮುಂದಿನ ದಿನಗಳಲ್ಲಿ ಸಿನಿಮಾ ನಿರ್ದೇಶನ ಮಾಡುವ ಯೋಚನೆಯೂ ಇದೆ. ಎಲ್ಲದ್ದಕ್ಕೂ ಕಾಲ ಕೂಡಿ ಬರಬೇಕಿದೆ’ ಎನ್ನುತ್ತಾರೆ ಅನಿರುದ್ಧ.

ಟಾಪ್ ನ್ಯೂಸ್

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’

Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’

ʼToxicʼನಲ್ಲಿ ಯಶ್‌ ಜೊತೆ ಕರೀನಾ ನಟಿಸೋದು ಪಕ್ಕಾ ಆದರೆ ನಾಯಕಿಯಾಗಿ ಅಲ್ಲ,ಮತ್ಯಾವ ಪಾತ್ರ?

ʼToxicʼನಲ್ಲಿ ಯಶ್‌ ಜೊತೆ ಕರೀನಾ ನಟಿಸೋದು ಪಕ್ಕಾ ಆದರೆ ನಾಯಕಿಯಾಗಿ ಅಲ್ಲ,ಮತ್ಯಾವ ಪಾತ್ರ?

Kannada Cinema; ಸದ್ದು ಮಾಡುತ್ತಿದೆ ‘ಖಾಲಿ ಡಬ್ಬ’

Kannada Cinema; ಸದ್ದು ಮಾಡುತ್ತಿದೆ ‘ಖಾಲಿ ಡಬ್ಬ’

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

RC 17: ಮತ್ತೆ ಒಂದಾದ ರಂಗಸ್ಥಳಂ ತಂಡ

RC 17: ಮತ್ತೆ ಒಂದಾದ ರಂಗಸ್ಥಳಂ ತಂಡ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.