ಸಿಂಹಪ್ರಿಯಾ ಮದುವೆಗೆ ʼಯದಾ ಯದಾ ಹಿʼ ಮೋಷನ್ ಪೋಸ್ಟರ್ ಗಿಫ್ಟ್


Team Udayavani, Jan 26, 2023, 4:27 PM IST

ಸಿಂಹಪ್ರಿಯಾ ಮದುವೆಗೆ ʼಯದಾ ಯದಾ ಹಿʼ ಮೋಷನ್ ಪೋಸ್ಟರ್ ಗಿಫ್ಟ್

ಬೆಂಗಳೂರು:  ವಸಿಷ್ಠಸಿಂಹ, ಹರಿಪ್ರಿಯ ಹಾಗೂ ದಿಗಂತ್ ಮಂಚಾಲೆ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿರುವ,  ಮರ್ಡರ್ ಮಿಸ್ಟ್ರಿ ಸುತ್ತ ನಡೆಯೋ  ಕಥಾಹಂದರ ಒಳಗೊಂಡ  ‘ಯದಾ ಯದಾ ಹಿ’ ಚಿತ್ರವು ಸದ್ಯದಲ್ಲೇ ಬಿಡುಗಡೆಗೆ ಸಿದ್ದವಾಗಿದೆ.

ಜ.26 ರಂದು ವೈವಾಹಿಕ ಜೀವನಕ್ಕೆ ಕಾಲಿಟ್ಟ ವಸಿಷ್ಠ, ಹರಿಪ್ರಿಯ  ಜೋಡಿಗೆ ಮದುವೆ ಗಿಫ್ಟ್ ಆಗಿ ಈ  ಚಿತ್ರದ ವಿಶೇಷ ಮೋಷನ್ ಪೋಸ್ಟರ್ ನ್ನು ಚಿತ್ರತಂಡ ಬಿಡುಗಡೆ ಮಾಡಿದೆ.

ತೆಲುಗಿನ ʼಎವುರುʼ ಚಿತ್ರದ ರೀಮೇಕ್ ಇದಾಗಿದ್ದು, ತೆಲುಗಿನಲ್ಲಿ 2 ಚಿತ್ರ ನಿರ್ದೇಶಿಸಿರುವ ಅಶೋಕ್‌ ತೇಜ  ಈ ಸಿನಿಮಾ  ಮೂಲಕ ನಿರ್ದೇಶಕರಾಗಿ ಕನ್ನಡಕ್ಕೆ ಆಗಮಿಸುತ್ತಿದ್ದಾರೆ. ಹರಿಪ್ರಿಯಾ, ದಿಗಂತ್ ಹಾಗೂ ವಸಿಷ್ಠಸಿಂಹ ಮೂರು ಪ್ರಮುಖ ಪಾತ್ರಗಳಲ್ಲಿ ನಟಿಸಿರುವ ಈ ಚಿತ್ರದಲ್ಲಿ ಒಂದು ಮರ್ಡರ್ ಮಿಸ್ಟರಿ ಸುತ್ತ ನಡೆಯುವ ತನಿಖೆಯನ್ನು ರೋಚಕವಾಗಿ ಹೇಳಲಾಗಿದೆ.

ಇದನ್ನೂ ಓದಿ: ದಾಂಪತ್ಯ ಜೀವನಕ್ಕೆ ಕಾಲಿಟ್ಟ ವಸಿಷ್ಠ – ಹರಿಪ್ರಿಯಾ; ಶಿವಣ್ಣ, ಡಾಲಿ ಸೇರಿ ಅನೇಕ ಗಣ್ಯರು ಭಾಗಿ

ತೆಲುಗಿನಲ್ಲಿ ನಟಿ ರೆಜಿನಾ ನಿರ್ವಹಿಸಿದ್ದ  ಪಾತ್ರವನ್ನು ಹರಿಪ್ರಿಯಾ ಹಾಗೂ ಅದ್ವಿಶೇಷ್ ಪಾತ್ರವನ್ನು ದಿಗಂತ್ ಮಾಡಿದ್ದಾರೆ. ಈ ಚಿತ್ರಕ್ಕೆ ರೈಸ್ ಅಂಡ್ ಡಾಲ್ಸ್ ಕ್ರಿಯೇಶನ್ಸ್ ಮೂಲಕ ಹೈದ್ರಾಬಾದ್‌ನ ರಾಜೇಶ್ ಅಗರವಾಲ್  ಬಂಡವಾಳ ಹೂಡಿದ್ದಾರೆ.

ಇಂಗ್ಲೀಷ್ ಭಾಷೆಯಲ್ಲಿ ದಿ ಇನ್ವಿಸಿಬಲ್ ಗೆಸ್ಟ್ ಹೆಸರಿನಲ್ಲಿ  ತಯಾರಾಗಿದ್ದ ಈ ಚಿತ್ರ ಹಿಂದಿ  ಭಾಷೆಯಲ್ಲೂ ನಿರ್ಮಾಣವಾಗಿತ್ತು, ಕೊಲೆಗಾರನನ್ನು ಪತ್ತೆ ಹಚ್ಚುವುದೇ ಚಿತ್ರದ ಕುತೂಹಲಕರ ಜರ್ನಿ ಆಗಿದೆ.   ಚರಣ್‌ ಪಕಡ ಅವರ  ಸಂಗೀತ ನಿರ್ದೇಶನ,  ಯೋಗಿ ಅವರ ಕ್ಯಾಮೆರಾವರ್ಕ್, ಶ್ರೀಕಾಂತ್ ಅವರ ಸಂಕಲನ ಈ ಚಿತ್ರಕ್ಕಿದೆ.

ಟಾಪ್ ನ್ಯೂಸ್

arrest 3

ಹೆತ್ತವರನ್ನೇ ಹತ್ಯೆಗೈದಿದ್ದ 15ರ ಬಾಲಕಿ ಖಾಕಿ ಬಲೆಗೆ

1-asdssa-dsa

ತೆನೆ ಹೊತ್ತ ಹೆಚ್.ಆರ್.ಚನ್ನಕೇಶವ ; ಗಂಗಾವತಿಯಿಂದ ಕಣಕ್ಕೆ

1-fsadsdsd

ಉಪನಾಮ ವಿವಾದ:ರಾಹುಲ್ ಗಾಂಧಿ ವಿರುದ್ಧ ಆಕ್ರೋಶ ಹೊರ ಹಾಕಿದ ಲಲಿತ್ ಮೋದಿ

tdy-19

ಉಳ್ಳಾಲ: ಹೆಜ್ಜೇನು ದಾಳಿಗೆ ಬಾವಿಯಲ್ಲಿ ಅಡಗಿ ಕುಳಿತ 79 ರ ವೃದ್ಧ

TDY-18

ಬುಡಕಟ್ಟು ಕುಟುಂಬಕ್ಕೆ ಥಿಯೇಟರ್ ಪ್ರವೇಶ ನಿರಾಕರಣೆ: ಥಿಯೇಟರ್‌ ವಿರುದ್ದ ನೆಟ್ಟಿಗರು ಗರಂ

Arjun Tendulkar To Debut For Mumbai Indians In IPL 2023?

ಈ ಬಾರಿಯಾದರೂ ಅರ್ಜುನ್ ತೆಂಡೂಲ್ಕರ್ ಗೆ ಸಿಗುತ್ತಾ ಚಾನ್ಸ್?: ಉತ್ತರ ನೀಡಿದ ರೋಹಿತ್

1-asd-adas-d

ರಾಜಕೀಯ ವಿವಾದ; ಮೊಸರು ಪ್ಯಾಕೆಟ್‌ಗಳ ಮೇಲೆ ಪ್ರಾದೇಶಿಕ ಹೆಸರು!



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

madhu

ತಮಿಳಿನತ್ತ ಮಧು ಗುರುಸ್ವಾಮಿ; ಮಫ್ತಿ ರೀಮೇಕ್‌ ನಲ್ಲಿ ನಟನೆ

sushmita bhat is in kannada movie chow chow bath

‘ಚೌಚೌ ಬಾತ್‌’ ನಲ್ಲಿ ರೊಮ್ಯಾಂಟಿಕ್ ಡ್ರಾಮಾ

ರಾಮನ ಅವತಾರ ತಾಳಿದ ರಿಷಿ; ಫ‌ಸ್ಟ್‌ ಲುಕ್‌ ಪೋಸ್ಟರ್‌ ಬಂತು

ರಾಮನ ಅವತಾರ ತಾಳಿದ ರಿಷಿ; ಫ‌ಸ್ಟ್‌ ಲುಕ್‌ ಪೋಸ್ಟರ್‌ ಬಂತು

ಸಿನಿಮಾಕ್ಕೆ ಭಾಷೆಗಳ ಗಡಿ ಸಲ್ಲದು…: ಕನ್ನಡಕ್ಕೆ ಬಂದ ಅನುಪಮ್ ಖೇರ್

ಸಿನಿಮಾಕ್ಕೆ ಭಾಷೆಗಳ ಗಡಿ ಸಲ್ಲದು…: ಕನ್ನಡಕ್ಕೆ ಬಂದ ಅನುಪಮ್ ಖೇರ್

ತೆರೆಗೆ ಬಂತು ಡಾಲಿ ಧನಂಜಯ ಅಭಿನಯದ ‘ಗುರುದೇವ್ ಹೊಯ್ಸಳ’

ತೆರೆಗೆ ಬಂತು ಡಾಲಿ ಧನಂಜಯ ಅಭಿನಯದ ‘ಗುರುದೇವ್ ಹೊಯ್ಸಳ’

MUST WATCH

udayavani youtube

ಸ್ನೇಕ್ ಶಾಮ್ ಹಾವುಗಳ ರಕ್ಷಣೆಗೆ ಮುಂದಾಗಲು ಇದೇ ಕಾರಣ | ಸ್ನೇಕ್ ಶ್ಯಾಮ್ ಮನದಾಳದ ಮಾತು

udayavani youtube

ಎವರೆಸ್ಟ್ ಹತ್ತುವವರ ಊಟ ತಿಂಡಿ ಕ್ರಮ ಹೇಗಿರುತ್ತೆ ನೋಡಿ !

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

ಹೊಸ ಸೇರ್ಪಡೆ

1-csa-dsasad

ಮಿಸ್ಟರ್ ಹಾಲಪ್ಪ… ಅಭಿವೃದ್ಧಿ ಸಂಬಂಧ ಬಹಿರಂಗ ಚರ್ಚೆ; ಬೇಳೂರು ಸವಾಲು

arrest 3

ಹೆತ್ತವರನ್ನೇ ಹತ್ಯೆಗೈದಿದ್ದ 15ರ ಬಾಲಕಿ ಖಾಕಿ ಬಲೆಗೆ

madhu

ತಮಿಳಿನತ್ತ ಮಧು ಗುರುಸ್ವಾಮಿ; ಮಫ್ತಿ ರೀಮೇಕ್‌ ನಲ್ಲಿ ನಟನೆ

1-asdssa-dsa

ತೆನೆ ಹೊತ್ತ ಹೆಚ್.ಆರ್.ಚನ್ನಕೇಶವ ; ಗಂಗಾವತಿಯಿಂದ ಕಣಕ್ಕೆ

ಬೆಳ್ತಂಗಡಿ: ಸವಣಾಲು ಬಳಿ ಎರಡು ಬೈಕ್‌ಗಳ ಮಧ್ಯೆ ಅಪಘಾತ; ಓರ್ವ ಸಾವು

ಬೆಳ್ತಂಗಡಿ: ಸವಣಾಲು ಬಳಿ ಎರಡು ಬೈಕ್‌ಗಳ ಮಧ್ಯೆ ಅಪಘಾತ; ಓರ್ವ ಸಾವು