ಯಜಮಾನ ಭರ್ಜರಿ ಕುಣಿತ


Team Udayavani, Dec 12, 2018, 11:35 AM IST

yajamaa.jpg

ಆರಂಭದಲ್ಲಿ ಅದ್ದೂರಿಯಾಗಿ ಮುಹೂರ್ತವನ್ನು ಆಚರಿಸಿಕೊಂಡು ಸೆಟ್ಟೇರಿದ್ದ ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ಅಭಿನಯದ “ಯಜಮಾನ’ ಚಿತ್ರ ಭರದಿಂದ ಚಿತ್ರೀಕರಣವನ್ನು ನಡೆಸಿಕೊಂಡು ಸಾಗಿತ್ತು. ಹೀಗಿರುವಾಗಲೇ ನಟ ದರ್ಶನ್‌ ಅವರಿಗೆ ಅಪಘಾತವಾಗಿ ವೈದ್ಯರು ಕೆಲ ಸಮಯ ವಿಶ್ರಾಂತಿಗೆ ಸೂಚಿಸಿದ್ದರಿಂದ ಚಿತ್ರತಂಡ ಕೂಡ ಚಿತ್ರೀಕರಣಕ್ಕೆ ಕೆಲ ಕಾಲ ಬ್ರೇಕ್‌ ನೀಡಿತ್ತು.

ಇನ್ನೇನು ದರ್ಶನ್‌ ಚೇತರಿಕೆ ಕಂಡು ಚಿತ್ರತಂಡ ಚಿತ್ರೀಕರಣಕ್ಕೆ ವಿದೇಶಕ್ಕೆ ಹೋಗಿ ಅಲ್ಲಿ ಚಿತ್ರೀಕರಣ ಆರಂಭಿಸಬೇಕು ಎನ್ನುವಷ್ಟರಲ್ಲಿ ನಟ ರೆಬಲ್‌ ಸ್ಟಾರ್‌ ಅಂಬರೀಶ್‌ ನಿಧನದಿಂದಾಗಿ, ಸ್ವೀಡನ್‌ಗೆ ತೆರಳಿದ್ದ ಚಿತ್ರತಂಡ ಚಿತ್ರೀಕರಣವನ್ನು ಮುಂದೂಡಿ ಅಂಬಿ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ಸ್ವದೇಶಕ್ಕೆ ವಾಪಾಸ್ಸಾಯಿತು. ಹೀಗಾಗಿ ಚಿತ್ರೀಕರಣ ಮತ್ತೆ ಕೆಲಕಾಲ ಮುಂದಕ್ಕೆ ಹೋಯಿತು. 

ಈಗ ಮತ್ತೆ “ಯಜಮಾನ’ನ ಚಿತ್ರೀಕರಣ ಮತ್ತೆ ಪ್ರಾರಂಭವಾಗಿದೆ. ನಟ ದರ್ಶನ್‌ ಮತ್ತೆ ಚಿತ್ರೀಕರಣದಲ್ಲಿ ತೊಡಗಿಕೊಂಡಿದ್ದಾರೆ. ಸದ್ಯ “ಯಜಮಾನ’ ಚಿತ್ರದ ಮಾಸ್‌ ಹಾಡೊಂದರ ಚಿತ್ರೀಕರಣ ನಡೆಯುತ್ತಿದ್ದು ದರ್ಶನ್‌ ಪಕ್ಕಾ ಔಟ್‌ ಆ್ಯಂಡ್‌ ಔಟ್‌ ಮಾಸ್‌ ಲುಕ್‌ನಲ್ಲಿ ಮಿಂಚುತ್ತಿದ್ದಾರೆ.

ಬೃಹತ್ತಾದ ಅದ್ಧೂರಿ ಸೆಟ್‌ನಲ್ಲಿ ವಿ. ಹರಿಕೃಷ್ಣ ಸಂಗೀತ ಸಂಯೋಜಿಸಿರುವ ಮಾಸ್‌ ಮ್ಯೂಸಿಕ್‌ ಬಿಟ್ಸ್‌ಗೆ ಅಷ್ಟೇ ಮಾಸ್‌ ಆಗಿ ನೂರಾರು ಸಹ ನೃತ್ಯ ಕಲಾವಿದರ ಜೊತೆಗೆ ಹೆಜ್ಜೆ ಹಾಕಿದ್ದಾರೆ. ಅಂದಹಾಗೆ ದರ್ಶನ್‌ ಹಾಡಿಗೆ ಭರ್ಜರಿಯಾಗಿ ಸ್ಟೆಪ್ಸ್‌ ಹಾಕುತ್ತಿರುವ ಕೆಲವು ಪೋಟೋಗಳು ಹೊರಬಿದ್ದಿದ್ದು, ಸೋಷಿಯಲ್‌ ಮೀಡಿಯಾಗಳಲ್ಲಿ ಜೋರಾಗಿ ಹರಿದಾಡುತ್ತಿದೆ.

ಇನ್ನು ಈ ಹಾಡು ಎಷ್ಟರ ಮಟ್ಟಿಗೆ ಮಾಸ್‌ ಆಡಿಯನ್ಸ್‌ ಮನಗೆಲ್ಲಲಿದೆ ಎಂಬುದು ಗೊತ್ತಾಗಬೇಕಾದರೆ ಕೆಲ ತಿಂಗಳು ಕಾಯಲೇ ಬೇಕು. ಪಿ. ಕುಮಾರ್‌ ಹಾಗೂ ವಿ. ಹರಿಕೃಷ್ಣ  ಜಂಟಿಯಾಗಿ ನಿರ್ದೇಶನ ಮಾಡುತ್ತಿರುವ “ಯಜಮಾನ’ ಚಿತ್ರವನ್ನು ಬಿ. ಸುರೇಶ್‌ ನಿರ್ಮಿಸುತ್ತಿದ್ದಾರೆ. ಸದ್ಯ ಚಿತ್ರದ ಚಿತ್ರೀಕರಣ ಭರದಿಂದ ಸಾಗಿದ್ದು, ಚಿತ್ರತಂಡದ ಪ್ಲಾನ್‌ ಪ್ರಕಾರ ನಡೆದರೆ ಇದೇ ತಿಂಗಳಾಂತ್ಯಕ್ಕೆ ಚಿತ್ರೀಕರಣ ಪೂರ್ಣಗೊಳ್ಳಲಿದೆ ಎನ್ನಲಾಗುತ್ತಿದೆ. 

ಟಾಪ್ ನ್ಯೂಸ್

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.