ಯಜಮಾನ ಚಿತ್ರಕ್ಕೆ ಇಬ್ಬರು ನಿರ್ದೇಶಕರು


Team Udayavani, Oct 15, 2018, 11:37 AM IST

yajamana.jpg

ದರ್ಶನ್‌ ನಾಯಕರಾಗಿರುವ “ಯಜಮಾನ’ ಚಿತ್ರಕ್ಕೆ ಇಬ್ಬರು ನಿರ್ದೇಶಕರು! ಹೀಗೆಂದರೆ ನಿಮಗೆ ಆಶ್ಚರ್ಯವಾಗಬಹುದು. ಆದರೂ ನಿಜ. “ಯಜಮಾನ’ ಚಿತ್ರದ ನಿರ್ದೇಶಕರು ಪೊನ್‌ಕುಮಾರ್‌ ಅಲ್ವಾ ಎಂದು ನೀವು ಹೇಳಬಹುದು. ಖಂಡಿತಾ ಹೌದು, ಪೊನ್‌ಕುಮಾರ್‌ ಈ ಚಿತ್ರದ ನಿರ್ದೇಶಕರು ನಿಜ. ಅವರ ಜೊತೆಗೆ ಇನ್ನೊಬ್ಬರು ಕೂಡ ಇರುತ್ತಾರೆ. ಅದು ವಿ.ಹರಿಕೃಷ್ಣ. ಸಂಗೀತ ನಿರ್ದೇಶಕ ವಿ.ಹರಿಕೃಷ್ಣ ಅವರು “ಯಜಮಾನ’ ಚಿತ್ರದ ಮೂಲಕ ನಿರ್ದೇಶಕರಾಗುತ್ತಿದ್ದಾರೆ.

ಚಿತ್ರದ ಟೈಟಲ್‌ ಕಾರ್ಡ್‌ನಲ್ಲಿ ಇಬ್ಬರು ನಿರ್ದೇಶಕರಿಗೂ ಕ್ರೆಡಿಟ್‌ ಸಿಗಲಿದೆ – ಕಥೆ, ಚಿತ್ರಕಥೆ, ನಿರ್ದೇಶನ – ವಿ.ಹರಿಕೃಷ್ಣ- ಪೊನ್‌ಕುಮಾರ್‌. ಹಾಗಂತ ವಿ.ಹರಿಕೃಷ್ಣ ಸುಖಾಸುಮ್ಮನೆ ನಿರ್ದೇಶನದ ಕ್ರೆಡಿಟ್‌ ತೆಗೆದುಕೊಂಡಿಲ್ಲ. “ಯಜಮಾನ’ ಚಿತ್ರದ ಕಥೆ, ಚಿತ್ರಕಥೆ, ನಿರ್ದೇಶನದಲ್ಲಿ ಹರಿಕೃಷ್ಣ ಸಂಪೂರ್ಣವಾಗಿ ಪಾಲ್ಗೊಂಡಿದ್ದಾರೆ. ಅದೇ ಕಾರಣದಿಂದ ಅವರು ಹೆಚ್ಚು ಸಿನಿಮಾಗಳನ್ನು ಒಪ್ಪಿಕೊಳ್ಳದೇ “ಯಜಮಾನ’ದಲ್ಲಿ ತೊಡಗಿಸಿಕೊಂಡಿದ್ದಾರೆ.

ಚಿತ್ರದ ಸಂಭಾಷಣೆಯಲ್ಲೂ ಹರಿಕೃಷ್ಣ ಭಾಗಿಯಾಗಿದ್ದು, ಚೇತನ್‌ ಕುಮಾರ್‌ ಹಾಗೂ ಹರಿಕೃಷ್ಣ ಸೇರಿಕೊಂಡು ಚಿತ್ರಕ್ಕೆ ಸಂಭಾಷಣೆ ಬರೆದಿದ್ದಾರೆ. ಈ ಎಲ್ಲಾ ಕಾರಣಗಳಿಂದಾಗಿ ಚಿತ್ರದ ನಿರ್ದೇಶನದ ಕ್ರೆಡಿಟ್‌ನಲ್ಲೂ ಅವರಿಗೆ ಸಮಪಾಲು ಸಿಗಲಿದೆ. ಈ ಬಗ್ಗೆ ಮಾತನಾಡುವ ನಿರ್ಮಾಪಕಿ ಶೈಲಜಾ ನಾಗ್‌, “ಹೌದು, ಚಿತ್ರದ ಕಥೆ, ಚಿತ್ರಕಥೆ ನಿರ್ದೇಶನದಲ್ಲಿ ಇಬ್ಬರಿಗೆ ಕ್ರೆಡಿಟ್‌ ಇದೆ. ಆರಂಭದಿಂದಲೂ ಹರಿಕೃಷ್ಣ ಅವರು “ಯಜಮಾನ’ದಲ್ಲಿ ತಮ್ಮನ್ನು ಸಂಪೂರ್ಣವಾಗಿ ತೊಡಗಿಸಿಕೊಂಡಿದ್ದಾರೆ.

ಅವರ ಇಷ್ಟು ವರ್ಷದ ಸಂಗೀತದ ಅನುಭವ ಜೊತೆಗೆ ನಿರ್ದೇಶನದ ಕನಸು ಇಲ್ಲಿ ಸಾಕಾರಗೊಂಡಿದೆ’ ಎನ್ನುವುದು ಶೈಲಜಾ ನಾಗ್‌ ಅವರ ಮಾತು. ಚಿತ್ರಕ್ಕೆ ಹರಿಕೃಷ್ಣ ಸಂಗೀತ ನೀಡಿದ್ದು, ಶ್ರೀಶ ಕೂದುವಳ್ಳಿ ಅವರ ಛಾಯಾಗ್ರಹಣವಿದೆ. ಈಗಾಗಲೇ ಮಾತಿನ ಹಾಗೂ ಮೂರು ಹಾಡುಗಳ ಚಿತ್ರೀಕರಣ ಮುಗಿದಿದ್ದು, ಎರಡು ಹಾಡುಗಳ ಚಿತ್ರೀಕರಣಕ್ಕಾಗಿ ಚಿತ್ರ ಯುರೋಪ್‌ಗೆ ಪ್ರಯಾಣ ಬೆಳೆಸಲಿದೆ. ಚಿತ್ರತಂಡ ಅಕ್ಟೋಬರ್‌ನಲ್ಲೇ ಯುರೋಪ್‌ಗೆ ಹೋಗಬೇಕಿತ್ತು.

ಆದರೆ, ಅಪಘಾತದಲ್ಲಿ ದರ್ಶನ್‌ ಅವರ ಕೈಗೆ ಏಟಾಗಿರುವುದರಿಂದ ನವೆಂಬರ್‌ ಕೊನೆಯ ವಾರದಲ್ಲಿ ಯುರೋಪ್‌ಗೆ ತೆರಳಲಿದೆ. ಚಿತ್ರದ ಡಬ್ಬಿಂಗ್‌ ಕೆಲಸ ಆರಂಭವಾಗುತ್ತಿದ್ದು, ಈ ವಾರದಲ್ಲಿ ದರ್ಶನ್‌ ಡಬ್ಬಿಂಗ್‌ನಲ್ಲಿ ಭಾಗಿಯಾಗಲಿದ್ದಾರೆ. ಚಿತ್ರದಲ್ಲಿ ಅನೂಪ್‌ ಸಿಂಗ್‌ ಠಾಕೂರ್‌, ರವಿಶಂಕರ್‌, ದೇವರಾಜ್‌ ಸೇರಿದಂತೆ ಅನೇಕರು ನಟಿಸಿದ್ದಾರೆ. ಈ ಚಿತ್ರವನ್ನು ಮೀಡಿಯಾ ಹೌಸ್‌ನಡಿ ಬಿ.ಸುರೇಶ್‌ ಹಾಗೂ ಶೈಲಜಾ ನಾಗ್‌ ನಿರ್ಮಿಸುತ್ತಿದ್ದಾರೆ. 

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Actor Dwarakish: ಸಕಲ ಗೌರವಗಳೊಂದಿಗೆ ನಟ ದ್ವಾರಕೀಶ್‌ ಅಂತ್ಯಕ್ರಿಯೆ

Actor Dwarakish: ಸಕಲ ಗೌರವಗಳೊಂದಿಗೆ ನಟ ದ್ವಾರಕೀಶ್‌ ಅಂತ್ಯಕ್ರಿಯೆ

choo mantar kannada movie

Sharan; ಮೇ 10ಕ್ಕೆ ‘ಛೂ ಮಂತರ್‌’ ತೆರೆಗೆ ಸಿದ್ಧ

aditya;s kangaroo movie

Aditya; ಟ್ರೇಲರ್ ನಲ್ಲಿ ‘ಕಾಂಗರೂ’ ದರ್ಶನ; ಮೇ.3ರಂದು ತೆರೆಗೆ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.