ಗೋರಿಯಿಂದ ಹಾಡು ಬಂತು; ಹುಟ್ಟು ಸಾವಿನ ನಡುವಿನ ಸಿನಿಮಾ 


Team Udayavani, Apr 12, 2018, 3:52 PM IST

Yar-Yaro-Gori-Mele_(108).jpg

ಕನ್ನಡದಲ್ಲಿ ಈಗಾಗಲೇ ಸಾಕಷ್ಟು ತರಹೇವಾರಿ ಶೀರ್ಷಿಕೆವುಳ್ಳ ಚಿತ್ರಗಳು ಮೂಡಿಬಂದಿವೆ. ಆ ಸಾಲಿಗೆ “ಯಾರ್‌ ಯಾರೋ ಗೋರಿ ಮೇಲೆ …’ ಎಂಬ ಚಿತ್ರವೂ ಒಂದು. ಈಗಾಗಲೇ ಚಿತ್ರದ ಚಿತ್ರೀಕರಣ ಮುಗಿಸಿರುವ ಚಿತ್ರತಂಡ. ಇತ್ತೀಚೆಗೆ ಚಿತ್ರದ ಆಡಿಯೋ ಸಿಡಿ ಬಿಡುಗಡೆ ಮಾಡುವ ಮೂಲಕ ಚಿತ್ರದ ಪ್ರಚಾರ ಕಾರ್ಯಕ್ಕೆ ಚಾಲನೆ ನೀಡಿದೆ. ಅಂದು ನಿರ್ದೇಶಕ ಹೆಚ್‌.ವಾಸು, ಎಂ.ಡಿ.ಶ್ರೀಧರ್‌ ಹಾಗೂ ತೆಲುಗು ನಟ ಶಫಿ ಆಡಿಯೋ ಸಿಡಿ ಬಿಡುಗಡೆ ಮಾಡಿದರು.
 
ರಾಘುಚಂದ್‌ ಈ ಚಿತ್ರದ ನಿರ್ದೇಶಕರು. ಕಥೆ, ಚಿತ್ರಕಥೆಯ ಜವಾಬ್ದಾರಿಯೂ ಇವರದೇ. ಇದೊಂದು ಪಕ್ಕಾ ಯುವಕರಿಗೆ ಸಂಬಂಧಿಸಿದ ಚಿತ್ರ. ಹಳ್ಳಿಯಿಂದ ಸಿಟಿಗೆ ಬರುವ ಹುಡುಗರಿಬ್ಬರು ಆ ಸಿಟಿಯಲ್ಲಿ ಯಾವ ರೀತಿ ಸಮಸ್ಯೆ ಎದುರಿಸುತ್ತಾರೆ. ಕೆಲ ಸಮಸ್ಯೆಯಿಂದ ಹೇಗೆ ಹೊರಬರುತ್ತಾರೆ ಎಂಬ ಅಂಶ ಚಿತ್ರದ ಹೈಲೈಟ್‌. ಇಡೀ ಚಿತ್ರದ ಕಥೆ ಇಬ್ಬರು ನಾಯಕರ ಸುತ್ತ ನಡೆಯಲಿದೆ.

ನಿರ್ದೇಶಕ ರಾಘುಚಂದ್‌ ಅವರಿಗೆ ತಾನೊಬ್ಬ ನಿರ್ದೇಶಕ ಎನಿಸಿಕೊಳ್ಳಬೇಕು ಎಂಬುದು ಅವರ ಬಹುದಿನಗಳ ಕನಸಂತೆ. ಅದು ಅವರ ಗೆಳೆಯನ ಮೂಲಕ ಈಡೇರಿದೆಯಂತೆ. ಇದೊಂದು ಸಸ್ಪೆನ್ಸ್‌, ಥ್ರಿಲ್ಲರ್‌ನಲ್ಲಿ ಸಾಗುವ ಸಿನಿಮಾ ಆಗಿದ್ದರೂ, ವಾಸ್ತವ ಅಂಶಗಳು ಚಿತ್ರದ ಪ್ರಮುಖ ಅಂಶವಂತೆ. ಹುಟ್ಟು ಸಾವಿನ ನಡುವೆ ಸಮಯ ಎಂಬುದು ಮನುಷ್ಯನ್ನು ಹೇಗೆಲ್ಲಾ ಆಡಿಸುತ್ತದೆ ಎಂಬುದನ್ನಿಲ್ಲಿ ಸೂಕ್ಷ್ಮವಾಗಿ ಹೇಳಲಾಗಿದೆಯಂತೆ. ಬಳ್ಳಾರಿ ಸುತ್ತಮುತ್ತ ಶೇ.80 ರಷ್ಟು ಚಿತ್ರೀಕರಿಸಿರುವ ನಿರ್ದೇಶಕರು, ಸಕಲೇಶಪುರ, ಶ್ರೀರಂಗಪಟ್ಟಣ, ಬೆಂಗಳೂರಿನಲ್ಲೂ ಚಿತ್ರೀಕರಿಸಿದ ಬಗ್ಗೆ ವಿವರ ಕೊಡುತ್ತಾರೆ.

ಚಿತ್ರಕ್ಕೆ ಅಭಿ ಮತ್ತು ರಾಜ್‌ ಇಬ್ಬರು ನಾಯಕರು.  ಈ ಪೈಕಿ ರಾಜ್‌ ಅವರು ಅಭಿನಯದ ಜೊತೆಗೆ ನಿರ್ಮಾಣದ ಜವಾಬ್ದಾರಿಯನ್ನೂ ಹೊತ್ತಿದ್ದಾರಂತೆ. ಇನ್ನು, ವರ್ಷಾ ಅವರಿಗೆ ನಾಯಕಿಯಾಗಿ ನಟಿಸಿದ್ದಾರೆ. ನಾಯಕ ರಾಜು ಅವರು ಮೂಲತಃ ಬಳ್ಳಾರಿಯವರು. 

ಚಿತ್ರರಂಗದಲ್ಲಿ ತಾನೂ ಹೀರೋ ಆಗಬೇಕು ಅಂತ ಕಳೆದ ಏಳು ವರ್ಷಗಳಿಂದ ಪ್ರಯತ್ನ ಪಡುತ್ತಿದ್ದರಂತೆ. ಕೊನೆಗೆ ಗೆಳೆಯನಿಗೂ ನಿರ್ದೇಶನದ ಕನಸು ಇದ್ದುದರಿಂದ ಅವರೇ ಹಣ ಹಾಕುವ ಮೂಲಕ ನಿರ್ಮಾಣ ಮಾಡಲು ಮುಂದಾಗಿದ್ದಾರೆ. ಅವರ ಈ ಕೆಲಸಕ್ಕೆ ಮನೆಯವರಿಂದಲೂ ಬೆಂಬಲ ಸಿಕ್ಕಿದೆ. ಆಂದಹಾಗೆ, ರಾಜು ಇಲ್ಲಿ ಒಂದು ರೀತಿಯ ಸೈಕೋ ಪಾತ್ರ ಮಾಡಿದ್ದಾರಂತೆ. 

ಇನ್ನೊಬ್ಬ ಹೀರೋ ಅಭಿ ಅವರಿಗೂ ಚಿತ್ರರಂಗ ಹೊಸದೇನಲ್ಲ. ಸಿನಿಮಾರಂಗದಲ್ಲಿ ಅವರು ಸಹಾಯಕ ನಿರ್ದೇಶಕರಾಗಿ ಕೆಲಸ ಮಾಡಿದ್ದಾರೆ. ಫೇಸ್‌ಬುಕ್‌ ಮೂಲಕ ಈ ಚಿತ್ರತಂಡಕ್ಕೆ ಪರಿಚಯವಾಗಿ, ಆ ಮೂಲಕ ಹೀರೋ ಆಗುವ ಅವಕಾಶ ಗಿಟ್ಟಿಸಿಕೊಂಡಿದ್ದಾರೆ ಅಭಿ. “ಇದೊಂದು ತ್ರಿಕೋನ ಪ್ರೇಮಕಥೆಯಾಗಿದ್ದು, ಪಕ್ಕಾ ರಾ ಲವ್‌ ಸಬ್ಜೆಕ್ಟ್ ಎಂಬುದು ಅಭಿ ಮಾತು.

ಚಿತ್ರಕ್ಕೆ ಲೋಕಿ ಅವರು ಸಂಗೀತ ನೀಡಿದ್ದಾರೆ. ಹಂಸಲೇಖ ಅವರ ದೇಸಿ ಕಾಲೇಜಿನಲ್ಲಿ ಕೆಲಸ ಮಾಡಿದ್ದ ಲೋಕಿ ಇಲ್ಲಿ ನಾಲ್ಕು ಹಾಡುಗಳನ್ನು ನೀಡಿದ್ದಾರೆ. ವಿನು ಮನಸು ಚಿತ್ರಕ್ಕೆ ಹಿನ್ನೆಲೆ ಸಂಗೀತ ನೀಡಿದ್ದಾರೆ. ಪ್ರದೀಪ್‌ ಗಾಂಧಿ ಚಿತ್ರದ ಛಾಯಾಗ್ರಾಹಕರು.

ಟಾಪ್ ನ್ಯೂಸ್

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.