Kannada Cinema; ‘ಅಗ್ನಿಲೋಕ’ ಮೂಲಕ ಚಿತ್ರರಂಗಕ್ಕೆ ಬಂದ ಯಶಸ್ವ
Team Udayavani, Feb 4, 2024, 12:43 PM IST
ಕನ್ನಡ ಚಿತ್ರರಂಗದ ಹಿರಿಯ ಛಾಯಾಗ್ರಹಕ, ನಿರ್ಮಾಪಕ, ನಿರ್ದೇಶಕ ಹಾಗೂ ಚಲನಚಿತ್ರ ನಿರ್ಮಾಪಕರ ಸಂಘದ ಪ್ರಥಮ ಅಧ್ಯಕ್ಷರೂ ಆಗಿದ್ದ ಹೆಚ್.ಎಂ.ಕೆ. ಮೂರ್ತಿ ಅವರ ಮೊಮ್ಮಗ ಹಾಗೂ ನಿರ್ದೇಶಕ, ನಿರ್ಮಾಪಕ ರಾಜೇಶ್ ಮೂರ್ತಿ ಅವರ ಪುತ್ರ ಯಶಸ್ವ ಈಗ ನಾಯಕನಾಗಿ ಚಿತ್ರರಂಗಕ್ಕೆ ಎಂಟ್ರಿ ಕೊಡಲು ಅಣಿಯಾಗಿದ್ದಾರೆ.
ಅಂದಹಾಗೆ, ಯಶಸ್ವ ಆಕ್ಷನ್ ಹೀರೋ ಆಗಿ ಅಭಿನಯಿಸುತ್ತಿರುವ ಚೊಚ್ಚಲ ಸಿನಿಮಾಕ್ಕೆ “ಅಗ್ನಿಲೋಕ’ ಎಂದು ಹೆಸರಿಡಲಾಗಿದ್ದು, ಎಮೋಷನಲ್ ಹಾಗೂ ಆ್ಯಕ್ಷನ್-ಥ್ರಿಲ್ಲರ್ ಕಥಾಹಂದರ “ಅಗ್ನಿಲೋಕ’ ಸಿನಿಮಾ ಈಗ ಬಿಡುಗಡೆಯ ಹಂತದಲ್ಲಿದೆ.
ಇನ್ನು ಮಗನ ಚಿತ್ರಕ್ಕೆ ರಾಜೇಶ್ ಮೂರ್ತಿ ಅವರೇ ಕಥೆ, ಚಿತ್ರಕಥೆ ಬರೆದು ಆ್ಯಕ್ಷನ್-ಕಟ್ ಹೇಳಿದ್ದಾರೆ. ವಿಷ್ಣು “ಪುಷ್ಪ ಫಿಲಂಸ್’ ಮೂಲಕ ಪುಷ್ಪ ಮಂಜುನಾಥ್ ಈ ಸಿನಿಮಾವನ್ನು ನಿರ್ಮಿಸುತ್ತಿದ್ದಾರೆ. ಬೆಂಗಳೂರು, ಕೆಜಿಎಫ್, ಮಂಡ್ಯ, ಚಿಕ್ಕಮಗಳೂರು ಸುತ್ತಮುತ್ತ ಸುಮಾರು 30 ದಿನಗಳ ಕಾಲ ಈ ಸಿನಿಮಾದ ಚಿತ್ರೀಕರಣ ನಡೆಸಲಾಗಿದೆ. ಈಗಾಗಲೇ ತನ್ನ ಶೂಟಿಂಗ್ ಹಾಗೂ ಪೋಸ್ಟ್ ಪ್ರೊಡಕ್ಷನ್ ಕೆಲಸಗಳನ್ನೆಲ್ಲ ಮುಗಿಸಿಕೊಂಡಿರುವ “ಅಗ್ನಿಲೋಕ’ ಸಿನಿಮಾ ಈಗ ಸೆನ್ಸಾರ್ ಮುಂದಿದೆ.
“ಅಗ್ನಿಲೋಕ’ ಸಿನಿಮಾದಲ್ಲಿ ಮಂಜುಶ್ರೀ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ. ಉಳಿದಂತೆ ನೆ. ಲ ಮಹೇಶ್, ಮಂಜುನಾಥ್, ಅಜಿತ್ ಕುಮಾರ್, ಪ್ರಮೋದ್ ಹಿರೇಮಠ್ ಮತ್ತಿತರರು ನಟಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sandalwood: ಪ್ರೇಕ್ಷಕಳಾಗಿ ಕಾಂಗರೂ ನನಗೆ ಇಷ್ಟವಾಯಿತು..
Sandalwood: ಬಿಸಿಲ ಧಗೆ ಎಫೆಕ್ಟ್; ಔಟ್ಡೋರ್ ಶೂಟಿಂಗ್ನಿಂದ ಸಿನಿಮಂದಿ ದೂರ
Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ
Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ
ಈ ಪೆನ್ಡ್ರೈವ್ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್
MUST WATCH
ಹೊಸ ಸೇರ್ಪಡೆ
ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…
Kollywood: ದಳಪತಿ ವಿಜಯ್ ʼGOATʼ ಸಿನಿಮಾದಲ್ಲಿ ಧೋನಿ, ರುತ್ ರಾಜ್ ನಟನೆ?
Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ
ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ
Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್ಗೆ ಗೆಲುವು: ಮುನಿಯಪ್ಪ ವಿಶ್ವಾಸ