ವೀರಭದ್ರನಾದ ಯತಿರಾಜ್‌

ಓಜಸ್‌ನಲ್ಲಿ ವಿಲನ್‌ ಪಾತ್ರದಲ್ಲಿ ನಟನೆ!

Team Udayavani, Feb 5, 2020, 7:02 AM IST

Ojas–Yethiraj

ಕನ್ನಡದಲ್ಲಿ ಈಗಾಗಲೇ ಹಲವು ವಿಭಿನ್ನ ಕಥಾಹಂದರವುಳ್ಳ ಚಿತ್ರಗಳು ಹೊಸ ನಿರೀಕ್ಷೆ ಹುಟ್ಟಿಸುತ್ತಿರುವುದು ಗೊತ್ತೇ ಇದೆ. ಅದರಲ್ಲೂ ಶೀರ್ಷಿಕೆ ಮೂಲಕವೇ ಒಂದಷ್ಟು ಕುತೂಹಲ ಕೆರಳಿಸುವುದುಂಟು. ಆ ಸಾಲಿಗೆ ಈಗ “ಓಜಸ್‌’ ಎಂಬ ಸಿನಿಮಾವೂ ಸೇರಿದೆ. ಚಿತ್ರದಲ್ಲಿ ಕಾಣಿಸಿಕೊಂಡಿರುವ ನಟ,ನಟಿಯರನ್ನು ಹೊರತುಪಡಿಸಿದರೆ, ತೆರೆ ಹಿಂದೆ ನಿಂತವರೆಲ್ಲರಿಗೂ ಇದು ಹೊಸ ಅನುಭವ. “ಓಜಸ್‌’ ಅಂದರೆ, ಬೆಳಕು ಎಂದರ್ಥ.

ಚಿತ್ರದಲ್ಲಿ ಕುಡಿತ ವಿಷಯ ಸೇರಿದಂತೆ ಹಲವು ವ್ಯಸನಗಳ ಕುರಿತಾದ ಅಂಶಗಳಿವೆ. ಚಿತ್ರದಲ್ಲಿ ಯಾವುದೇ ಹೊಡಿ,ಬಡಿ, ಕಡಿ ದೃಶ್ಯಗಳಿಲ್ಲ. ಆದರೂ, ಇಲ್ಲೊಬ್ಬ ಖಳನಟನಿದ್ದಾನೆ. ಆ ಪಾತ್ರವನ್ನು ನಟ ಯತಿರಾಜ್‌ ನಿರ್ವಹಿಸಿದ್ದಾರೆ. ಈವರೆಗೆ 150 ಪ್ಲಸ್‌ ಚಿತ್ರಗಳಲ್ಲಿ ನಟಿಸಿರುವ ಯತಿರಾಜ್‌, “ಓಜಸ್‌’ ಚಿತ್ರದಲ್ಲಿ ಪೂರ್ಣಪ್ರಮಾಣದ ಖಳನಟರಾಗಿ ನಟಿಸಿದ್ದಾರೆ. ತಮ್ಮ ಪಾತ್ರ ಕುರಿತು ಹೇಳುವ ಯತಿರಾಜ್‌, “ನಾನು ಇದುವರೆಗೆ 150 ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದೇನೆ.

ಖಳ ಪಾತ್ರಗಳಲ್ಲೂ ಕಾಣಿಸಿಕೊಂಡಿದ್ದೇನೆ. ಆದರೆ, “ಓಜಸ್‌’ ಚಿತ್ರದ ಪಾತ್ರ ವಿಶೇಷವಾಗಿದೆ. ಕಾರಣ, ಇಡೀ ಚಿತ್ರದಲ್ಲಿ ನಾನು ಪೂರ್ಣಪ್ರಮಾಣದ ಖಳನಾಯಕನಾಗಿ ಕಾಣಿಸಿಕೊಂಡಿದ್ದೇನೆ. ಅದೊಂದು ವಿಶೇಷ ಪಾತ್ರ ಎನ್ನಬಹುದು. ಖಳನಟ ಅಂದಾಕ್ಷಣ, ಫೈಟ್‌ ದೃಶ್ಯಗಳಿಲ್ಲ. ವಿಭಿನ್ನ ಮ್ಯಾನರಿಸಂ ಇರುವ, ಖಡಕ್‌ ಆಗಿ ಮಾತನಾಡುವ, ಪಕ್ಕಾ ಹಳ್ಳಿ ಶೈಲಿಯ ಪಾತ್ರವದು. ವಿಭಿನ್ನ ಗೆಟಪ್‌ ಇರುವ ವೀರಭದ್ರ ಎಂಬ ಹಳ್ಳಿ ಗೌಡನ ಪಾತ್ರವದು.

ಸದಾ ವಿಭೂತಿ, ಗಂಧ, ಕುಂಕುಮ ಇಟ್ಟುಕೊಂಡು, ಉರಿ ಮೀಸೆ ಬಿಟ್ಟು, ವಯಸ್ಸು ಹೆಚ್ಚಿರುವ ಪಾತ್ರವದು. ಸಿನಿಮಾದಲ್ಲಿ ಖಳಪಾತ್ರಕ್ಕೆ ಹೆಚ್ಚು ಒತ್ತು ಇದೆ. ರೆಗ್ಯುಲರ್‌ ಪ್ಯಾಟ್ರನ್‌ಗಿಂತ ಡಿಫ‌ರೆಂಟ್‌ ಆಗಿರುವ ಸಿನಿಮಾದಲ್ಲಿ ಅಬ್ಬರಿಸುವುದರ ಜೊತೆಯಲ್ಲಿ ಭಾವನಾತ್ಮಕ ವಿಷಯಗಳೂ ಇವೆ’ ಎನ್ನುತ್ತಾರೆ ಯತಿರಾಜ್‌. ಅಂದಹಾಗೆ, ಫೆ.7 ರಂದು ರಿಲೀಸ್‌ ಆಗುತ್ತಿರುವ ಈ ಚಿತ್ರಕ್ಕೆ ಸಿ.ಜೆ.ವರ್ಧನ್‌ ನಿರ್ದೇಶಕರು.

ಕಥೆ, ಚಿತ್ರಕಥೆ ಜವಾಬ್ದಾರಿ ವಹಿಸಿಕೊಂಡ ಅವರ ಚೊಚ್ಚಲ ಚಿತ್ರವನ್ನು ರಜತ್‌ ರಘುನಾಥ್‌ ಪ್ರೊಡಕ್ಷನ್ಸ್‌ ಬ್ಯಾನರ್‌ನಲ್ಲಿ ರಜತ್‌ ರಘುನಾಥ್‌ ಹಾಗೂ ಡಾ. ಎಡ್ವರ್ಡ್ ಡಿಸೋಜ ಅವರು ನಿರ್ಮಿಸಿದ್ದಾರೆ. ಚಿತ್ರದಲ್ಲಿ ನೇಹಾ ಸಕ್ಸೇನಾ ಪ್ರಮುಖ ಪಾತ್ರ ನಿರ್ವಹಿಸಿದ್ದು, ಹಿರಿಯ ನಟಿ ಭವ್ಯಾ ತಾಯಿ ಪಾತ್ರ ಮಾಡಿದ್ದಾರೆ. ರಜತ್‌ ಪೊಲೀಸ್‌ ಅಧಿಕಾರಿ ಪಾತ್ರದಲ್ಲಿ ಹಾಗು ಡಾ. ಎಡ್ವರ್‌x ಡಿಸೋಜ ಸಿಎಂ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

ಟಾಪ್ ನ್ಯೂಸ್

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

Loksabha election; ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

nenapirali prem as police in new movie

Kannada Cinema; ಹೊಸ ಚಿತ್ರದಲ್ಲಿ ಖಡಕ್ ಪೊಲೀಸ್ ಆದ ನೆನಪಿರಲಿ ಪ್ರೇಮ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್‌ ದಾಖಲು

Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್‌ ದಾಖಲು

ramarasa kannada movie

Kannada Cinema; ‘ರಾಮರಸ’ ಹಿಂದೆ ಗುರು ಆ್ಯಂಡ್‌ ಟೀಂ

ಮೈಸೂರಲ್ಲಿ ‘ಬಘೀರ’ ಶೂಟಿಂಗ್ ವೇಳೆ ನಟ ಶ್ರೀಮುರುಳಿಗೆ ಗಾಯ

ಮೈಸೂರಲ್ಲಿ ‘ಬಘೀರ’ ಶೂಟಿಂಗ್ ವೇಳೆ ನಟ ಶ್ರೀಮುರುಳಿಗೆ ಗಾಯ; ಆಸ್ಪತ್ರೆಗೆ ದಾಖಲು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.