ಶರಣ್‌ಗೆ ಯೋಗಾನಂದ್‌ ಮುದ್ದಾನ್‌ ಆ್ಯಕ್ಷನ್‌


Team Udayavani, Jun 8, 2017, 4:24 PM IST

4 d.jpg

ಈಗಾಗಲೇ ಬಹಳಷ್ಟು ಮಂದಿ ಸಂಭಾಷಣೆಗಾರರು ನಿರ್ದೇಶನಕ್ಕಿಳಿದಿದ್ದಾಗಿದೆ. ಈಗ ಮತ್ತೂಬ್ಬ ಸಂಭಾಷಣೆಗಾರನ ಸರದಿ.ಹೌದು, ಇದುವರೆಗೆ ಸುಮಾರು ಹದಿಮೂರು ಚಿತ್ರಗಳಿಗೆ ಮಾತುಗಳನ್ನು ಪೋಣಿಸಿ ರುವ ಯೋಗಾನಂದ ಮುದ್ದಾನ್‌ ಇದೇ ಮೊದಲ ಸಲ ಸಿನಿಮಾವೊಂದನ್ನು ನಿರ್ದೇಶಿಸುತ್ತಿದ್ದಾರೆ. ಅವರ ಚೊಚ್ಚಲ ನಿರ್ದೇಶನದ ಚಿತ್ರಕ್ಕೆ ಶರಣ್‌ ಹೀರೋ. ಚಿತ್ರಕ್ಕಿನ್ನೂ ಶೀರ್ಷಿಕೆ ಇಟ್ಟಿಲ್ಲ. ಇದೊಂದು ಫ್ಯಾಮಿಲಿ ಡ್ರಾಮ ಎಂಬುದು ಯೋಗಾನಂದ್‌ ಮುದ್ದಾನ್‌ ಮಾತು. ಪೀಪಲ್‌ ಮೀಡಿಯ ಟೆಕ್‌ ಎಂಬ ಸಾಫ್ rವೇರ್‌ ಕಂಪೆನಿಯ ವಿಶ್ವ ಹಾಗೂ ವಿವೇಕ್‌ ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಈಗಾಗಲೇ ತೆಲುಗಿನಲ್ಲಿ “ಅಲಾ ಮೊದಲಯಂದಿ’ ಮತ್ತು “ಕೇಶವ’ ಸಿನಿಮಾ ನಿರ್ಮಾಣ ಮಾಡಿದ್ದಾರೆ.

ಬಹುತೇಕ ಹೊಸ ಪ್ರತಿಭೆಗಳಿಗೆ ಅವಕಾಶ ಕೊಟ್ಟು, ಹೊಸಬರನ್ನು ಪರಿಚಯಿಸುತ್ತಿರುವ ನಿರ್ಮಾಪಕರೂ, ಯೋಗಾನಂದ್‌ ಮುದ್ದಾನ್‌ಗೂ ನಿರ್ದೇಶನ ಮಾಡುವ ಅವಕಾಶ ಕೊಟ್ಟಿದ್ದಾರೆ. ಸದ್ಯಕ್ಕೆ ಶರಣ್‌ ಹೀರೆ‌. ಹರಿಕೃಷ್ಣ ಸಂಗೀತ ಕೊಡುತ್ತಿದ್ದಾರೆ ಅನ್ನುವುದು ಬಿಟ್ಟರೆ, ಚಿತ್ರಕ್ಕೆ ನಾಯಕಿ ಯಾರು, ಕ್ಯಾಮೆರಾ ಯಾರು ಹಿಡಿಯಲಿದ್ದಾರೆ, ಉಳಿದ ತಾರಾಬಳಗದಲ್ಲಿ ಯಾರ್ಯಾರು ಇರುತ್ತಾರೆ ಎಂಬ ಕುರಿತು ಈಗಷ್ಟೇ ಚರ್ಚೆ ನಡೆಸುತ್ತಿದ್ದಾರೆ ಯೋಗಾನಂದ್‌ ಮುದ್ದಾನ್‌.

ಯೋಗಾನಂದ್‌ ಮುದ್ದಾನ್‌ “ಬಿರುಗಾಳಿ’ ಮೂಲಕ ಸಂಭಾಷಣೆಗಾರರಾಗಿ ಗುರುತಿಸಿಕೊಂಡವರು.ಅದಕ್ಕೂ ಮುನ್ನ “ಆಪ್ತಮಿತ್ರ’ ಚಿತ್ರದ ಕೆಲ ಸೀನ್‌ಗಳಿಗೂ ಸಂಭಾಷಣೆ ಬರೆದಿದ್ದರು. ಆ ಬಳಿಕ “ತುಘಲಕ್‌’, “ಚಾರುಲತಾ’, “ಚಿಂಗಾರಿ’, “ವಜ್ರಕಾಯ’, “ಭಜರಂಗಿ’, “ಮುಕುಂದ ಮುರಾರಿ’, “ಚೌಕ’, “ಕಲಾಕಾರ್‌’ ಚಿತ್ರಗಳಿಗೆ ಸಂಭಾಷಣೆ ಬರೆದಿದ್ದಾರೆ. ರಿಲೀಸ್‌ ಗೆ ರೆಡಿಯಾಗಿರುವ “ಟೈಗರ್‌’ ಮತ್ತು ಚಿತ್ರೀಕರಣದಲ್ಲಿರುವ “ವಿಐಪಿ’ ಚಿತ್ರಕ್ಕೂ ಇವರದೇ ಮಾತುಗಳಿವೆ. ಯೋಗಾನಂದ್‌ಗೆ ಮೊದಲ ನಿರ್ದೇಶನ ಮಾಡಿದರೆ, ಅದು ಶರಣ್‌ಗೆ ಮಾಡಬೇಕು ಅಂತ ನಿರ್ಧರಿಸಿದ್ದರಂತೆ. ಮೂರು ವರ್ಷಗಳ ಹಿಂದೆಯೇ ಆ ಕುರಿತು ಮಾತುಕತೆ ಆಗಿತ್ತಂತೆ. ಕಾರಣಾಂತರದಿಂದ ಇಬ್ಬರು ಸೇರಿ ಸಿನಿಮಾ ಮಾಡಲು ಆಗಿರಲಿಲ್ಲ. ಈಗ ಅದಕ್ಕೆ ಕಾಲ ಕೂಡಿಬಂದಿದೆಯಂತೆ.

ಇಡೀ ಸಿನಿಮಾ ಅಮೇರಿಕಾದಲ್ಲಿ ನಡೆಯಲಿದ್ದು, ಕ್ಲೈಮ್ಯಾಕ್ಸ್‌ ಭಾಗ ಇಲ್ಲಿ ನಡೆಯಲಿದೆಯಂತೆ. ಶರಣ್‌ ಗೆ ಇದು ಹೊಸ ಜಾನರ್‌ ಸ್ಟೋರಿಯಾಗಿದ್ದು, ಸಿಂಗಲ್‌ ಥಿಯೇಟರ್‌ ಮತ್ತು ಮಲ್ಟಿಪ್ಲೆಕ್ಸ್‌ಗಳಲ್ಲೂ ಜನರನ್ನು ಸೆಳೆಯೋ ಚಿತ್ರಕ್ಕೆ ಕೈ ಹಾಕಿರುವ ಯೋಗಾನಂದ್‌ ಮುದ್ದಾನ್‌ ಜತೆಗೆ ಚಿತ್ರಕಥೆಯಲ್ಲಿ ಜನಾರ್ದನ್‌ ಮಹರ್ಷಿ ಸಾಥ್‌ ಕೊಡುತ್ತಿದ್ದಾರಂತೆ. ಕೆ.ಎಂ.ಪ್ರಕಾಶ್‌ ಕತ್ತರಿ ಪ್ರಯೋಗ ಇರಲಿದೆ. ಇನ್ನು, ಚಿತ್ರಕ್ಕೆ ಜುಲೈ ಅಂತ್ಯದಲ್ಲಿ ಚಾಲನೆ ಸಿಗಲಿದೆ.
 

ಟಾಪ್ ನ್ಯೂಸ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Moksha Kushal

Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.