ಮತ್ತೊಮ್ಮೆ ತ್ರಿಮೂರ್ತಿಗಳ ಸಮಾಗಮ..ಜೋರಾಗಿದೆ ಹೊಸ ಸಿನಿಮಾ ಸಿದ್ಧತೆ
Team Udayavani, Jul 25, 2021, 2:29 PM IST
ಯೋಗರಾಜ್ ಭಟ್ , ದುನಿಯಾ ಸೂರಿ ಜೊತೆಯಾಗಿ ಮತ್ತೊಂದು ಸಿನಿಮಾ ಕೈಗೆತ್ತಿಕೊಂಡಿದ್ದಾರೆ. ಈ ಜೋಡಿಗೆ ಸಂಗೀತ ನಿರ್ದೇಶಕ ವಿ. ಹರಿಕೃಷ್ಣ ಅವರೂ ಕೈ ಜೋಡಿಸಿದ್ದು, ಮತ್ತೊಂದು ಬ್ಲಾಕ್ ಬಸ್ಟರ್ ಸಿನಿಮಾ ರೆಡಿಯಾಗುವುದು ಪಕ್ಕಾ ಎನ್ನುವ ಮಾತು ಈಗಾಗಲೇ ಶುರುವಾಗಿದೆ.
ಇನ್ನೂ ಹೆಸರಿಡದ ಈ ಚಿತ್ರದಲ್ಲಿ ಕೃಷಿ ಸಚಿವ ಬಿ.ಸಿ ಪಾಟೀಲ್ ಸಹ ಅಭಿನಯಿಸಲಿದ್ದು, ಬಿಸಿ ಪಾಟೀಲ್ ಸಂಸ್ಥೆಯಿಂದ ಅವರ ಮಗಳು ನಿರ್ಮಾಣ ಮಾಡಲಿದ್ದಾರೆ ಎನ್ನಲಾಗಿದೆ.
ಈ ಸಿನಿಮಾದ ಬಗ್ಗೆ ಚರ್ಚಿಸಲು ಬಿಸಿ ಪಾಟೀಲ್ ನಿವಾಸದಲ್ಲಿ ಎಲ್ಲರೂ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.
ಈ ಬಗ್ಗೆ ಮಾತಾನಾಡಿರುವ ಯೋಗರಾಜ್ ಭಟ್, ” ಸಿನಿಮಾ ಬರ್ತಿದೆ…ರಾಜ್ಯದ ಕೃಷಿ ಮಂತ್ರಿಗಳು ಸನ್ಮಾನ್ಯ ಶ್ರೀ ಬಿ.ಸಿ.ಪಾಟೀಲ್ ಅವರ ಜೊತೆ.. ಸೂರಿ, ಹರಿಕೃಷ್ಣ, ವಿಕಾಸ್, ಸುಧೀರ್… ಒಂದು ಅದ್ಭುತ ಸಿನಿಮಾ ಲೈನ್ ಅಪ್ ಆಯ್ತು.. ಸ್ನೇಹಿತರೆಲ್ಲರ ಮುದ್ದಾಟ ಗುದ್ದಾಟ ಹಾಗು ಸಪೋರ್ಟ್ ಜೊತೆ ನಿರ್ದೇಶನ ನನ್ನದು.. ನಟ ವರ್ಗ ಅದ್ಭುತ ಆದ್ರೆ ಇವತ್ತು ಹೇಳಂಗಿಲ್ಲ.. ಶೀಘ್ರದಲ್ಲೇ ಬಾಕಿ ಸುದ್ದಿ.. ನನ್ನೆಲ್ಲಾ ಗುರುಗಳಾದ ನನ್ನ ಗೆಳೆಯರಿಗೆ ಗುರು ಪೂರ್ಣಿಮಾ ಶುಭಾಶಯಗಳು..” ಎಂದು ಪೋಸ್ಟ್ ಹಾಕಿದ್ದಾರೆ.
ಇನ್ನು ಈಗಾಗಲೇ ಸೂರಿ, ಯೋಗರಾಜ್ ಭಟ್ ಹಾಗೂ ಹರಿಕೃಷ್ಣ ಅವರು ಕಾಂಬಿನೇಷನ್ ನಲ್ಲಿ ರೆಡಿಯಾದ ಸಿನಿಮಾಗಳು ಸೂಪರ್ ಹಿಟ್ ಆಗಿರುವುದು ಎಲ್ಲರಿಗೂ ಗೊತ್ತು. ಇದೀಗ ಹೊಸ ಪ್ರಾಜೆಕ್ಟ್ ಮೇಲೆ ಕನ್ನಡ ಸಿನಿರಸಿಕರ ಕಣ್ಣು ನೆಟ್ಟಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ