‘ಕರಟಕ ದಮನಕ’ ಶಿವಣ್ಣ – ಪ್ರಭುದೇವ ಚಿತ್ರದ ಟೈಟಲ್ ರಿವೀಲ್; ತಲೆಗೆ ಹುಳ ಬಿಟ್ಟ ಭಟ್ರು
Team Udayavani, Sep 3, 2022, 12:17 PM IST
ಬೆಂಗಳೂರು: ಯೋಗರಾಜ್ ಭಟ್ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರಿಗೆ ಡೈರೆಕ್ಟ್ ಮಾಡುತ್ತಿರುವ ವಿಷಯ ಕೆಲ ದಿನಗಳ ಹಿಂದೆ ರಿವೀಲ್ ಆಗಿತ್ತು. ಈಗ ಚಿತ್ರ ತಂಡದಿಂದ ಮತ್ತೊಂದು ಅಪ್ ಡೇಟ್ ಹೊರ ಬಿದ್ದಿದೆ.
ʼಗಾಳಿಪಟ-2ʼ ಬಳಿಕ ಯೋಗರಾಜ್ ಭಟ್ ಶಿವರಾಜ್ ಕುಮಾರ್ ಅವರಿಗೆ ನಿರ್ದೇಶನ ಮಾಡುತ್ತಿರುವ ಚಿತ್ರದ ಮುಹೂರ್ತ ನೆರವೇರಿತ್ತು. ಕೆಲ ಸಮಯದ ಬಳಿಕ ಚಿತ್ರೀಕರಣವೂ ಸದ್ದಿಲ್ಲದೇ ಆರಂಭಿಸಿದ್ದ ಭಟ್ & ಟೀಮ್ ಈಗ ಚಿತ್ರದ ಟೈಟಲ್ ರಿವೀಲ್ ಮಾಡಿದೆ.
ಶಿವಣ್ಣ ಹಾಗೂ ಪ್ರಭುದೇವ ಇಬ್ಬರು ಚಿತ್ರದಲ್ಲಿ ಜೊತೆಯಾಗಿ ನಟಿಸಲಿದ್ದಾರೆ. ಇಬ್ಬರದ್ದೂ ಚಿತ್ರದಲ್ಲಿ ಪ್ರಧಾನ ಪಾತ್ರಗಳೇ. ಕೆಲ ದಿನಗಳ ಹಿಂದೆ ಶಿವಣ್ಣ – ಪ್ರಭುದೇವ ಶೂಟಿಂಗ್ ಸೆಟ್ ನಲ್ಲಿದ್ದ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು.
ಚಿತ್ರೀಕರಣ ಆರಂಭಿಸಿದ್ದ ಯೋಗರಾಜ್ ಭಟ್ ಚಿತ್ರದ ಟೈಟಲ್ ಫಿಕ್ಸ್ ಮಾಡಿರಲಿಲ್ಲ. ಈಗ ಚಿತ್ರದ ಟೈಟಲ್ ರಿವೀಲ್ ಮಾಡಿದ್ದು, ‘ಕರಟಕ ದಮನಕ’ ಎಂದು ಭಿನ್ನವಾದ ಶೀರ್ಷಿಕೆಯನ್ನಿಟ್ಟು ಪ್ರೇಕ್ಷಕರ ತಲೆಗೆ ಕುತೂಹಲದ ಹುಳು ಬಿಟ್ಟಿದ್ದಾರೆ ಯೋಗರಾಜ್ ಭಟ್.
ರಾಕ್ ಲೈನ್ ಪ್ರೂಡಕ್ಷನ್ಸ್ ಚಿತ್ರವನ್ನು ನಿರ್ಮಾಣ ಮಾಡುತ್ತಿದೆ.ಚಿತ್ರದ ನಾಯಕಿ ಹಾಗೂ ಇತರ ಪಾತ್ರ ವರ್ಗದ ಬಗ್ಗೆ ಇನ್ನಷ್ಟೇ ಮಾಹಿತಿ ಹೊರ ಬೀಳಬೇಕಿದೆ.
View this post on Instagram
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ
Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ
Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ