Yuva Rajkumar; ಫ್ಯಾಮಿಲಿ ಡ್ರಾಮಾದಲ್ಲಿ ಯುವ ಕನಸು


Team Udayavani, Mar 22, 2024, 4:18 PM IST

yuva rajkumar

ವರನಟ ಡಾ. ರಾಜಕುಮಾರ್‌ ಕುಟುಂಬದ ಮೂರನೇ ತಲೆಮಾರಿನ ನಟ ಯುವ (ಗುರು) ರಾಜಕುಮಾರ್‌ “ಯುವ’ ಸಿನಿಮಾದ ಮೂಲಕ ನಾಯಕ ನಟನಾಗಿ ಬೆಳ್ಳಿತೆರೆಗೆ ಅಡಿಯಿಡಲು ತಯಾರಾಗಿದ್ದಾರೆ. ಇದೇ ಮಾ. 29ರಂದು “ಯುವ’ ಸಿನಿಮಾ ಬಿಡುಗಡೆಯಾಗುತ್ತಿದ್ದು, ಇದೇ ವೇಳೆ ಮಾತಿಗೆ ಸಿಕ್ಕ ಯುವ ರಾಜಕುಮಾರ್‌ ಅಭಿನಯದ ತಮ್ಮ ಚೊಚ್ಚಲ ಸಿನಿಮಾದ ಬಗ್ಗೆ ಒಂದಷ್ಟು ಮಾತನಾಡಿದ್ದಾರೆ.

ನಟನಾಗಬೇಕು ಎಂಬ ಕನಸು, ಯೋಚನೆ ಬಂದಿದ್ದು ಯಾವಾಗ?

ಎಲ್ಲರಿಗೂ ಗೊತ್ತಿರುವಂತೆ, ನಮ್ಮ ಮನೆಯಲ್ಲಿ ಮೊದಲಿನಿಂದಲೂ ಸಿನಿಮಾದ ವಾತಾವರಣವಿತ್ತು. ಚಿಕ್ಕವಯಸ್ಸಿನಿಂದಲೂ ನಮ್ಮ ತಾತ, ಅಪ್ಪ, ದೊಡ್ಡಪ್ಪ, ಚಿಕ್ಕಪ್ಪ ಹೀಗೆ ಎಲ್ಲರೂ ನಟರಾಗಿ ಗುರುತಿಸಿಕೊಂಡಿದ್ದರಿಂದ, ಅವರ ಸಿನಿಮಾಗಳನ್ನು ನೋಡುತ್ತಾ ಬೆಳೆದವನು ನಾನು. ನನಗೇ ಗೊತ್ತಿಲ್ಲದಂತೆ, ಚಿಕ್ಕ ವಯಸ್ಸಿನಿಂದಲೇ ಸಿನಿಮಾ ನಟನಾಗಬೇಕು ಎಂಬ ಆಸೆ ಶುರುವಾಯಿತು. ಆದರೆ ಒಂದಷ್ಟು ವಿದ್ಯಾಭ್ಯಾಸ ಮುಗಿಸಿ ನಂತರ ಸಿನಿಮಾ ನಟನಾಗುವ ಯೋಚನೆ ಮಾಡಿದೆ.

“ಯುವ’ ಸಿನಿಮಾ ನಿಮಗೆ ಸಿಕ್ಕಿದ್ದು ಹೇಗೆ?

ನನಗೆ ನಿರ್ದೇಶಕ ಸಂತೋಷ್‌ ಆನಂದ್‌ ಅವರ ಸಿನಿಮಾ ಮೇಕಿಂಗ್‌, ಅವರ ವರ್ಕ್‌ ಸ್ಟೈಲ್‌ ಎಲ್ಲವೂ ಇಷ್ಟ. ಹಾಗಾಗಿ ನನ್ನ ಮೊದಲ ಸಿನಿಮಾ ಅವರ ಜೊತೆ ಮಾಡಬೇಕು ಎಂಬ ಆಸೆಯಿತ್ತು. ಅವರು ಸಿಕ್ಕಾಗಲೆಲ್ಲ, “ಯಾವುದಾದರೂ ಒಳ್ಳೆಯ ಸಬೆjಕ್ಟ್ ಇದ್ದರೆ, ನಾವೊಂದು ಸಿನಿಮಾ ಮಾಡೋಣ ಸರ್‌’ ಎನ್ನುತ್ತಿದ್ದೆ. ಕೊನೆಗೂ ನಾವು ಅಂದುಕೊಳ್ಳುತ್ತಿದ್ದ ಸಬ್ಜೆಕ್ಟ್ “ಯುವ’ ಸಿನಿಮಾದಲ್ಲಿ ಸಿಕ್ಕಿತ್ತು. ಹೀಗೆ ಸಿನಿಮಾ ಶುರುವಾಯ್ತು.

“ಯುವ’ ಸಿನಿಮಾದಲ್ಲಿ ನಿಮ್ಮ ಪಾತ್ರ ಹೇಗಿದೆ?

“ಯುವ’ ಸಿನಿಮಾದಲ್ಲಿ ನಾನು ಮಧ್ಯಮ ಕುಟುಂಬದ ಹುಡುಗನಾಗಿ ಕಾಣಿಸಿ ಕೊಂಡಿದ್ದೇನೆ. ಸಿನಿಮಾದ ಫ‌ಸ್ಟ್ ಹಾಫ್ನಲ್ಲಿ ಕಾಲೇಜ್‌ ಹುಡುಗನಾಗಿ, ಸೆಕೆಂಡ್‌ ಹಾಫ್ನಲ್ಲಿ ಡೆಲಿವರಿ ಬಾಯ್‌ ಆಗಿ ಕಾಣಿಸಿಕೊಂಡಿದ್ದೇನೆ. ಸ್ವಲ್ಪ ಮುಂಗೋಪಿಯಾಗಿರುವ, ರಗಡ್‌ ಲುಕ್‌ನಲ್ಲಿ ಇರುವಂಥ, ರಫ್ ಮ್ಯಾನರಿಸಂ ಇರುವಂಥ ಪಾತ್ರ ದಾಗಿದೆ.

ಸಿನಿಮಾದ ಶೂಟಿಂಗ್‌ ಅನುಭವ ಹೇಗಿತ್ತು?

ನಿರ್ದೇಶಕ ಸಂತೋಷ್‌ ಆನಂದರಾಮ್‌ ಮತ್ತು ನಿರ್ಮಾಪಕ ವಿಜಯ್‌ ಕಿರಗಂದೂರು ಇಬ್ಬರೂ ತುಂಬ ವೃತ್ತಿಪರರು. ಸಿನಿಮಾಕ್ಕೆ ಏನು ಬೇಕೋ ಅದೆಲ್ಲ ಎಫ‌ರ್ಟ್‌ ಹಾಕಿ ಸಿನಿಮಾ ಮಾಡಿದ್ದಾರೆ. ಅಂದುಕೊಂಡ ಸಮಯಕ್ಕೆ ಸರಿಯಾಗಿ “ಹೊಂಬಾಳೆ ಫಿಲಂಸ್‌’ನವರು ತುಂಬ ಪ್ರೊಫೆಷನಲ್‌ ಆಗಿ ಸಿನಿಮಾ ಮಾಡಿ ಮುಗಿಸಿದ್ದಾರೆ. ಮೊದಲ ಸಿನಿಮಾದಲ್ಲೇ ಇಂಥದ್ದೊಂದು ವೃತ್ತಿಪರ ಟೀಮ್‌ ಜೊತೆ ಕೆಲಸ ಮಾಡಿದ್ದರಿಂದ ಸಾಕಷ್ಟು ವಿಷಯಗಳನ್ನು ಕಲಿತುಕೊಳ್ಳುವಂತಾಯಿತು.

ಸಿನಿಮಾಕ್ಕೆ ನೀವು ಏನೆಲ್ಲ ತಯಾರಿ ಮಾಡಿಕೊಳ್ಳಬೇಕಾಯ್ತು?

ಈ ಸಿನಿಮಾಕ್ಕೆ ಸುಮಾರು ಎಂಟು-ಹತ್ತು ತಿಂಗಳು ಸ್ಕ್ರಿಪ್ಟ್ಗೆ ಸಮಯ ತೆಗೆದು ಕೊಂಡಿತ್ತು. ಅದಾದ ನಂತರ ಸಿನಿಮಾದ ಕ್ಯಾರೆಕ್ಟರ್‌ಗೆ ತಕ್ಕಂತೆ ಒಂದಷ್ಟು ಹೋಮ್‌ ವರ್ಕ್‌ ಮಾಡಿಕೊಳ್ಳ ಬೇಕಾಗಿತ್ತು. ನಿರ್ದೇಶಕ ಸಂತೋಷ್‌ ಆನಂದರಾಮ್‌ ಅವರ ಸೂಚನೆಯಂತೆ ಆ್ಯಕ್ಷನ್‌, ಡ್ಯಾನ್ಸ್‌, ಕ್ಯಾರೆಕ್ಟರ್‌ ಪ್ರಸೆಂಟೇಷನ್‌ಗೆ ಸುಮಾರು ಐದಾರು ತಿಂಗಳು ತರಬೇತಿ ಪಡೆದುಕೊಂಡು ತಯಾರಿ ಮಾಡಿ ಕೊಳ್ಳಬೇಕಾಯಿತು.

ನಿಮ್ಮ ಪ್ರಕಾರ “ಯುವ’ ಸಿನಿಮಾವನ್ನು ಹೇಗೆ ವಿಶ್ಲೇಷಿಸುತ್ತೀರಿ?

ಇದೊಂದು ಕಂಪ್ಲೀಟ್‌ ಫ್ಯಾಮಿಲಿ ಎಂಟರ್‌ಟೈನ್ಮೆಂಟ್‌ ಸಿನಿಮಾ. ಒಂದು ಸಿನಿಮಾ ದಲ್ಲಿ ಇರಬೇಕಾದ ಎಲ್ಲ ಥರದ ಎಂಟರ್‌ ಟೈನ್ಮೆಂಟ್‌ ಎಲಿಮೆಂಟ್ಸ್‌ “ಯುವ’ ಸಿನಿಮಾದಲ್ಲಿ. ಒಳ್ಳೆಯ ಕಥೆ, ಸಾಂಗ್ಸ್‌, ಡ್ಯಾನ್ಸ್‌, ಆ್ಯಕ್ಷನ್‌, ಡೈಲಾಗ್ಸ್‌, ಕಾಮಿಡಿ, ಎಮೋಶನ್ಸ್‌, ರಿಚ್‌ ಮೇಕಿಂಗ್‌, ಬಿಗ್‌ ಸ್ಟಾರ್‌ ಕಾಸ್ಟಿಂಗ್‌ ಹೀಗೆ ಆಡಿಯನ್ಸ್‌ ಏನೇನು ನಿರೀಕ್ಷಿಸುತ್ತಾರೋ, ಅದೆಲ್ಲವೂ ಇರುವಂಥ ಕಂಪ್ಲೀಟ್‌ ಎಂಟರ್‌ಟೈನ್ಮೆಂಟ್‌ ಪ್ಯಾಕೇಜ್‌ “ಯುವ’ ಸಿನಿಮಾದಲ್ಲಿದೆ.

“ಯುವ’ ಸಿನಿಮಾದ ಮೇಲೆ ನಿಮ್ಮ ನಿರೀಕ್ಷೆ ಹೇಗಿದೆ?

“ಯುವ’ ನನ್ನ ಮೊದಲ ಸಿನಿಮಾವಾಗಿದ್ದರಿಂದ, ಸಹಜವಾಗಿಯೇ ಸಿನಿಮಾದ ಮೇಲೆ ತುಂಬ ನಿರೀಕ್ಷೆಯಿದೆ. ಒಂದು ಒಳ್ಳೆಯ ಸಬ್ಜೆಕ್ಟ್ ಇಟ್ಟುಕೊಂಡು ಎಲ್ಲ ಥರದ ಆಡಿಯನ್ಸ್‌ಗೂ ಇಷ್ಟವಾಗುವಂಥ ಸಿನಿಮಾ ಮಾಡಿದ್ದೇವೆ ಎಂಬ ವಿಶ್ವಾಸವಿದೆ. ಈಗಾಗಲೇ ಸಿನಿಮಾಕ್ಕೆ ಎಲ್ಲ ಕಡೆಗಳಿಂದ ಒಳ್ಳೆಯ ರೆಸ್ಪಾನ್ಸ್‌ ಸಿಗುತ್ತಿದೆ. “ಯುವ’ ಥಿಯೇಟರಿನಲ್ಲೂ ಆಡಿಯನ್ಸ್‌ಗೆ ಇಷ್ಟವಾಗಲಿದೆ ಎಂಬ ನಿರೀಕ್ಷೆಯಿದೆ.

 ಜಿ.ಎಸ್‌.ಕಾರ್ತಿಕ ಸುಧನ್‌

ಟಾಪ್ ನ್ಯೂಸ್

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

MP Tejaswi Surya: ಸಂಸದ ತೇಜಸ್ವಿ ಸೂರ್ಯ ವಿರುದ್ಧ ದೂರು

MP Tejaswi Surya: ಸಂಸದ ತೇಜಸ್ವಿ ಸೂರ್ಯ ವಿರುದ್ಧ ದೂರು

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.