ಯುವರಾಜ್ ಫ್ಯಾಮಿಲಿ ಫ್ರೆಂಡ್,ಒಂದೂವರೆ ಕೋಟಿ ಕೊಟ್ಟಿಲ್ಲ:ರಾಧಿಕಾಕುಮಾರಸ್ವಾಮಿ ಪತ್ರಿಕಾಗೋಷ್ಠಿ

ಒಂದು ಖಾತೆಯಿಂದ ನೇರವಾಗಿ ಹಣ ಬಂದಿದ್ದರಿಂದ ನಾನು ಈ ಬಗ್ಗೆ ತಲೆಕೆಡಿಸಿಕೊಂಡಿರಲಿಲ್ಲ.

Team Udayavani, Jan 6, 2021, 3:09 PM IST

ಯುವರಾಜ್ ಒಂದೂವರೆ ಕೋಟಿ ರೂ. ಕೊಟ್ಟಿಲ್ಲ; ರಾಧಿಕಾ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ…

ಬೆಂಗಳೂರು: ಯುವರಾಜ್ ನನ್ನ ತಂದೆ ಕಾಲದಿಂದಲೂ ನಮ್ಮ ಕುಟುಂಬದ ಗೆಳೆಯರು, ಜ್ಯೋತಿಷಿ ಆಗಿದ್ದರು. ಸುಮಾರು 17 ವರ್ಷದಿಂದ ನಮಗೆ ಪರಿಚಯ ಇದೆ. ನನ್ನ ಅಣ್ಣನಿಗೂ, ಯುವರಾಜ್ ಗೂ ಯಾವುದೇ ಸಂಬಂಧವಿಲ್ಲ…ಇದು ಬಂಧಿತ ಯುವರಾಜ್ ಜತೆಗಿನ ವ್ಯಾವಹಾರಿಕ ಸಂಬಂಧದ ಆರೋಪದ ಕುರಿತು ಸ್ಯಾಂಡಲ್ ವುಡ್ ನಟಿ ರಾಧಿಕಾರ ಕುಮಾರಸ್ವಾಮಿ ಬುಧವಾರ(ಜನವರಿ 06, 2021) ನೀಡಿರುವ ಪ್ರತಿಕ್ರಿಯೆ.

ರಾಜಕಾರಣಿಗಳ ಹೆಸರಿನಲ್ಲಿ ಜನರಿಂದ ಹಣ ಪಡೆದು ವಂಚಿಸುತ್ತಿದ್ದ ಆರೋಪದಲ್ಲಿ ಯುವರಾಜ್ ನನ್ನು ಸಿಸಿಬಿ ಬಂಧಿಸಿತ್ತು. ವಿಚಾರಣೆ ವೇಳೆ ನಟಿ ರಾಧಿಕಾ ಅವರ ಖಾತೆಗೆ ಒಂದೂವರೆ ಕೋಟಿ ವರ್ಗಾವಣೆಯಾಗಿರುವ ಬಗ್ಗೆ ತಿಳಿಸಿರುವುದಾಗಿ ವರದಿಯಾಗಿತ್ತು.

ಪತ್ರಿಕಾಗೋಷ್ಠಿಯಲ್ಲಿ ರಾಧಿಕಾಕುಮಾರಸ್ವಾಮಿ ಹೇಳಿದ್ದಿಷ್ಟು:

ಡಾಲರ್ಸ್ ಕಾಲೋನಿ ನಿವಾಸದಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ರಾಧಿಕಾ, ನಮ್ಮ ತಂದೆ ನಿಧನದ ನಂತರ ನಾವು ದೆಹಲಿಯಲ್ಲಿದ್ದೇವು. ಎಲ್ಲಿಗೂ ಓಡಿ ಹೋಗಿಲ್ಲ. ನಮ್ಮ ಕುಟುಂಬದ ಪರಿಚಯದವರಾಗಿದ್ದರಿಂದ ಅವರ ಪತ್ನಿಯ ಹೆಸರಿನಲ್ಲಿರುವ ಪ್ರೊಡಕ್ಷನ್ ಹೌಸ್ ನಿಂದ ತಯಾರಾಗುವ ಸಿನಿಮಾವೊಂದರಲ್ಲಿ ನಟಿಸುವಂತೆ ಕೇಳಿಕೊಂಡಿದ್ದರು.

ಅದಕ್ಕಾಗಿ ಅವರು ನನ್ನ ಖಾತೆಗೆ ಮೊದಲು 15 ಲಕ್ಷ ರೂಪಾಯಿ ಹಾಕಿದ್ದರು. ನಂತರ ಬೇರೆ ನಿರ್ಮಾಪಕರೊಬ್ಬರ ಖಾತೆಯಿಂದ 60 ಲಕ್ಷ ರೂಪಾಯಿ ಹಣ ಬಂದಿದೆ. ಯುವರಾಜ್ ಕೊಟ್ಟಿದ್ದು ಒಂದೂವರೆ ಕೋಟಿ ಅಲ್ಲ, 15 ಲಕ್ಷ ರೂಪಾಯಿ ಅಡ್ವಾನ್ಸ್ ಹಣ ಮಾತ್ರ ಕೊಟ್ಟಿದ್ದಾರೆ ಎಂದು ರಾಧಿಕಾ ಹೇಳಿದರು. 2020ರ ಫೆಬ್ರುವರಿ, ಮಾರ್ಚ್ ನಲ್ಲಿ ನನಗೆ ಈ ಹಣ ಬಂದಿದೆ. ಒಂದು ಖಾತೆಯಿಂದ ನೇರವಾಗಿ ಹಣ ಬಂದಿದ್ದರಿಂದ ನಾನು ಈ ಬಗ್ಗೆ ತಲೆಕೆಡಿಸಿಕೊಂಡಿರಲಿಲ್ಲ. ಯುವರಾಜ್ ಬಂಧನವಾದಾಗ ಶಾಕ್ ಆಗಿತ್ತು.

ಸಿನಿಮಾಕ್ಕೆ ಎಷ್ಟು ಸಂಭಾವನೆ ಅಂತ ಕೇಳಿದ್ದರು, ನಾನು ದಿನಾಂಕದ ಮೇಲೆ ಅವಲಂಬಿಸಿರುತ್ತದೆ ಎಂದು ಹೇಳಿದ್ದೆ. ನಾನು ಪ್ರಾಮಾಣಿಕಳಾಗಿದ್ದಾಗ ಹೆದರುವ ಅಗತ್ಯವಿಲ್ಲ. ಸಿನಿಮಾ ಬಿಟ್ಟು ಯುವರಾಜ್ ಜತೆ ಬೇರೆ ಯಾವುದೇ ವ್ಯವಹಾರ ಇರಲಿಲ್ಲವಾಗಿತ್ತು ಎಂದು ರಾಧಿಕಾ ಸ್ಪಷ್ಟನೆ ನೀಡಿದ್ದಾರೆ.

ಚುನಾವಣೆಗೆ ಸ್ಪರ್ಧಿಸುವಂತೆ ನನ್ನಲ್ಲಿ ಕೇಳಿಕೊಂಡಿದ್ದರು. ಆದರೆ ರಾಜಕೀಯಕ್ಕೆ ಬರುವುದಿಲ್ಲ, ಸಿನಿಮಾದಲ್ಲಿ ನಟಿಸುವುದಾಗಿ ಹೇಳಿದ್ದರಿಂದ, ತಮ್ಮ ಪ್ರೊಡಕ್ಷನ್ ಹೌಸ್ ಸಿನಿಮಾದಲ್ಲಿ ನಟಿಸುವಂತೆ ಕೇಳಿಕೊಂಡಿದ್ದರು. ಅವರ ಸಹವಾಸ ನನಗೆ ಬೇಡ, ಆದರೆ ನಮ್ಮ ತಾಯಿ ಬಗ್ಗೆ ಮಾತ್ರ ಯೋಚಿಸುತ್ತಿದ್ದೇನೆ ಎಂದರು.

ಕೇವಲ ಮಾತಿನ ಮೇಲೆ ನಾಟ್ಯ ರಾಣಿ ಶಾಂತಲಾ ಸಿನಿಮಾ ಮಾಡಲು ಒಪ್ಪಿಕೊಂಡಿದ್ದೆ, ಯಾವುದೇ ಒಪ್ಪಂದ ಮಾಡಿಕೊಂಡಿರಲಿಲ್ಲವಾಗಿತ್ತು. ಇವರಿಂದಲೇ ಹೀಗೆ ಮೋಸವಾಗುತ್ತೆ ಎಂದು ಭಾವಿಸಿರಲಿಲ್ಲ ಎಂದು ಹೇಳಿದರು.

ಟಾಪ್ ನ್ಯೂಸ್

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

10-screenshot

Students Notes: ಸ್ಕ್ರೀನ್‌ ಶಾರ್ಟ್‌ಗಳೆಂದು ಪುಸ್ತಕವಾಗದಿರಲಿ

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.