ಜೀ ಕನ್ನಡದಲ್ಲಿ ಅದೇ ಹಾಡು ಹೊಸ ಧ್ವನಿ;ಸೆ.29 ರಿಂದ ಸರಿಗಮಪ ಸೀಸನ್‌ 15


Team Udayavani, Sep 27, 2018, 6:15 PM IST

songs.jpg

ಕಿರುತೆರೆಯಲ್ಲಿ ಸಂಗೀತ ಹಬ್ಬಕ್ಕೆ ಕಾರಣವಾದ ಜೀ ಕನ್ನಡ ವಾಹಿನಿ, ಈಗ ಮತ್ತೂಂದು ಹಾಡು-ಹಬ್ಬಕ್ಕೆ ಸಾಕ್ಷಿಯಾಗುತ್ತಿದೆ. ಹೌದು, ತನ್ನ ಹದಿನಾಲ್ಕನೆ ಸರಿಗಮಪ ರಿಯಾಲಿಟಿ ಶೋವನ್ನು ಯಶಸ್ವಿಯಾಗಿ ಮುಗಿಸಿದ್ದು, ಇದೀಗ ಹದಿನೈದನೇ ಆವೃತ್ತಿಯತ್ತ ದಾಪುಗಾಲು ಇಡುತ್ತಿದೆ. ಸೆ.29 ರಿಂದ ಪ್ರತಿ ಶನಿವಾರ ಮತ್ತು ಭಾನುವಾರ ರಾತ್ರಿ 7.30 ಕ್ಕೆ ಪ್ರಸಾರವಾಗಲಿದೆ. ಪ್ರತಿ ಆವೃತ್ತಿಯಲ್ಲೂ ಹೊಸ ಪ್ರತಿಭೆಗಳನ್ನು ಪರಿಚಯಿಸುತ್ತ ಬಂದಿರುವ ಜೀ ಕನ್ನಡ ವಾಹಿನಿ, ಈ ಆವೃತ್ತಿಯಲ್ಲೂ ಹೊಸ ಪ್ರತಿಭೆಗಳಿಗೆ ವೇದಿಕೆ ಕಲ್ಪಿಸುತ್ತಿದೆ. ಹಿರಿಯ ಸಂಗೀತ ನಿರ್ದೇಶಕ ಹಂಸಲೇಖ ಅವರು ಈ ಸಂಗೀತ ಸ್ಪರ್ಧೆಯ ಮುಖ್ಯ ಆಕರ್ಷಣೆ. ಉಳಿದಂತೆ ಗಾಯಕರಾದ ರಾಜೇಶ್‌ ಕೃಷ್ಣನ್‌, ವಿಜಯಪ್ರಕಾಶ್‌ ಮತ್ತು ಸಂಗೀತ ನಿರ್ದೇಶಕ ಅರ್ಜುನ್‌ ಜನ್ಯ ತೀರ್ಪುಗಾರರಾಗಿ ಕಾರ್ಯ ನಿರ್ವಹಿಸಲಿದ್ದಾರೆ.

ಜೀ ವಾಹಿನಿಯ ಸರಿಗಮಪ ಸಿಂಗಿಂಗ್‌ ರಿಯಾಲಿಟಿ ಶೋನಲ್ಲಿ ಅತೀ ಹೆಚ್ಚು ತೀರ್ಪುಗಾರರಾಗಿ ಕಾರ್ಯನಿರ್ವಹಿಸಿದ್ದ ರಾಜೇಶ್‌ ಕೃಷ್ಣನ್‌, ಕಳೆದ ಆವೃತ್ತಿಯಲ್ಲಿ ಇರಲಿಲ್ಲ. ಈ ಆವೃತ್ತಿಗೆ ಆಗಮಿಸಿದ್ದು, ರಿಯಾಲಿಟಿ ಶೋ ಮತ್ತಷ್ಟು ಕಲರ್‌ಫ‌ುಲ್‌ ಆಗಿರಲಿದೆ ಎಂಬುದು ಜೀ ವಾಹಿನಿ ತಂಡದ ಮಾತು.

ಸರಿಗಮಪ ಹದಿನೈದನೇ ಆವೃತ್ತಿ ಬಗ್ಗೆ ಹಂಸಲೇಖ ಅವರಿಗೆ ಎಲ್ಲಿಲ್ಲದ ಖುಷಿ. “ಈ ಕಾರ್ಯಕ್ರಮ ಮೂಲಕ ಹೊಸ ಪ್ರತಿಭೆಗಳನ್ನು ನಾಡಿಗೆ ಪರಿಚಯಿಸುವ ಕೆಲಸ ಆಗುತ್ತಿದೆ. ಈ ಬಾರಿ ಎಲ್ಲೆಡೆಯಿಂದ ಪ್ರತಿಭಾವಂತರ ಆಗಮನವಾಗಿದೆ. ಈ ಸಲ ಮಾಸ್ಟರ್‌ ಕ್ಲಾಸ್‌ ಎಂಬ ಜವಾಬ್ದಾರಿಯೊಂದಿಗೆ ಹೊಸ ಬಗೆಯ ಹಾಡು ಹೇಳಿಸುವ ಮೂಲಕ ಪ್ರತಿಭೆಗಳನ್ನು ಹುರಿದುಂಬಿಸುವ ಕೆಲಸ ಮಾಡಲು ಸಜ್ಜಾಗಿದ್ಧೇವೆ’ ಎಂಬುದು ಹಂಸಲೇಖ ಮಾತು. ಇನ್ನು, ಜೀ ಕನ್ನಡ ವಾಹಿನಿಯ ಮುಖ್ಯಸ್ಥ ರಾಘವೇಂದ್ರ ಹುಣಸೂರು ಅವರಿಗೆ ಟಿಆರ್‌ಪಿ ಹೆಚ್ಚಿರುವ ಖುಷಿ. ಅದರಲ್ಲೂ ಸರಿಗಮಪ ಮೂಲಕ ನಗರ ಭಾಗದಲ್ಲಿ ನಂಬರ್‌ ಒನ್‌ ಸ್ಥಾನದಲ್ಲಿದೆ ಎಂಬ ಹೆಮ್ಮೆ. “ರಾಜ್ಯದ 30 ಜಿಲ್ಲೆಗಳಲ್ಲಿ ಆಡಿಷನ್‌ ನಡೆಸಿ, ಪ್ರತಿಭೆಗಳನ್ನು ಗುರುತಿಸಿ ಅವಕಾಶ ಕಲ್ಪಿಸಲಾಗಿದೆ. ಕೊಡಗು-ಮಡಿಕೇರಿ ಹೊರತುಪಡಿಸಿ ರಾಜ್ಯದೆಲ್ಲೆಡೆ ಸುತ್ತಾಡಿದ್ದೇವೆ.

ಸುಮಾರು 5 ಲಕ್ಷ ಪ್ರತಿಭೆಗಳ ಪೈಕಿ 35 ಪ್ರತಿಭಾವಂತರನ್ನು ಅಂತಿಮವಾಗಿ ಆಯ್ಕೆ ಮಾಡಲಾಗಿದೆ. ಅದೇ ಹಾಡನ್ನು ಹೊಸ ಧ್ವನಿಯಲ್ಲಿ ಹಾಡಿಸುವ ಉದ್ದೇಶ ನಮಗಿದೆ. ಇಲ್ಲಿ ದಿಗ್ಗಜ ತೀರ್ಪುಗಾರರು ಇರುವುದರಿಂದ ಪ್ರತಿ ಎಪಿಸೋಡು ಕೂಡ ಗ್ರಾಂಡ್‌ ಫಿನಾಲೆ ರೀತಿಯೇ ಮೂಡಿಬರಲಿದೆ’ ಎಂಬುದು ರಾಘವೇಂದ್ರ ಹುಣಸೂರು ಮಾತು.

ಗಾಯಕ ವಿಜಯಪ್ರಕಾಶ್‌ಗೆ ಹಂಸಲೇಖ ಅವರೊಂದಿಗೆ ಕೆಲಸ ಮಾಡುತ್ತಿರುವ ಖುಷಿ ಒಂದೆಡೆಯಾದರೆ, ಈ ಬಾರಿಯೂ ಹೊಸ ಪ್ರತಿಭಾವಂತರ ಎನರ್ಜಿಯನ್ನು ನೋಡುವ ಖುಷಿ ಇನ್ನೊಂದೆಡೆ. ಕನ್ನಡ ಕಲಾವಿದರಿಗೊಂದು ಅಪರೂಪದ ವೇದಿಕೆ ಇದು. ಇಲ್ಲಿ ಅದೆಷ್ಟೋ ಕಲಾಪ್ರತಿಭೆಗಳು ರೂಪುಗೊಳ್ಳುತ್ತಿವೆ. ಅಂತಹ ಕೆಲಸದಲ್ಲಿ ನಾವೂ ಇದ್ದೇವೆ ಎಂಬ ಖುಷಿ ಇದೆ ಎನ್ನುತ್ತಾರೆ ವಿಜಯಪ್ರಕಾಶ್‌.

ರಾಜೇಶ್‌ಕೃಷ್ಣನ್‌ ಅವರಿಗೆ ಕಳೆದ ಸೀಸನ್‌ನಲ್ಲಿ ಇರಲಿಲ್ಲ ಎಂಬ ಭಾವನೆಯೇ ಇರಲಿಲ್ಲವಂತೆ. ಇಲ್ಲಿ ಎಲ್ಲರ ಶ್ರಮ ಇದ್ದೇ ಇರುತ್ತೆ. ಈ ಬಾರಿಯೂ ಪ್ರಾಮಾಣಿಕ ಪ್ರಯತ್ನದೊಂದಿಗೆ ಹೊಸ ಪ್ರತಿಭೆಗಳನ್ನು ಗುರುತಿಸುವ ಕೆಲಸ ಆಗಲಿದೆ ಎಂಬುದು ರಾಜೇಶ್‌ ಕೃಷ್ಣನ್‌ ಮಾತು. ಅರ್ಜುನ್‌ ಜನ್ಯ ಅವರಿಗೆ ಈ ರಿಯಾಲಿಟಿ ಶೋ ಮೂಲಕ ಒಳ್ಳೆಯ ಗಾಯಕರು ಸಿಕ್ಕ ಖುಷಿಯಂತೆ.

ಟಾಪ್ ನ್ಯೂಸ್

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

nalkane ayama kannada movie

Sandalwood; ‘ನಾಲ್ಕನೇ ಆಯಾಮ’ ಮೇಲೆ ಗೌತಮ್‌ ಕನಸು: ಇಂದು ತೆರೆಗೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.