10ಸಾವಿರ ಆದಿಪುರುಷ್ ಟಿಕೆಟ್‌ಗಳನ್ನು ಫ್ರೀಯಾಗಿ ನೀಡಲು ಮುಂದಾದ ಕಾಶ್ಮೀರ್‌ ಫೈಲ್ಸ್ ನಿರ್ಮಾಪಕ


Team Udayavani, Jun 8, 2023, 10:38 AM IST

10ಸಾವಿರ ಆದಿಪುರುಷ್ ಟಿಕೆಟ್‌ಗಳನ್ನು ಫ್ರೀಯಾಗಿ ನೀಡಲು ಮುಂದಾದ ಕಾಶ್ಮೀರ್‌ ಫೈಲ್ಸ್ ನಿರ್ಮಾಪಕ

ಹೈದರಾಬಾದ್:‌ ಡಾರ್ಲಿಂಗ್‌ ಪ್ರಭಾಸ್‌ ಅವರ ʼಆದಿಪುರುಷ್‌ʼ ರಿಲೀಸ್‌ ಗೆ ಕೆಲವೇ ದಿನಗಳು ಮಾತ್ರ ಬಾಕಿ ಉಳಿದಿದೆ. ಜೂ.16 ರಂದು ಪ್ಯಾನ್‌ ಇಂಡಿಯಾ ಸಿನಿಮಾ ಗ್ರ್ಯಾಂಡ್‌ ಆಗಿ ಬಿಡುಗಡೆಯಾಗಲಿದೆ.

ತಿರುಪತಿಯಲ್ಲಿ ಅದ್ಧೂರಿಯಾಗಿ ಸಿನಿಮಾದ ಪ್ರೀ – ರಿಲೀಸ್‌ ಇವೆಂಟ್ ನಡೆದಿದೆ. ಅದೇ ಸಮಾರಂಭದಲ್ಲಿ ಫೈನಲ್‌ ಟ್ರೇಲರ್‌ ರಿಲೀಸ್‌ ಆಗಿದೆ. ಇತ್ತೀಚೆಗೆ ಸಿನಿಮಾ ತಂಡ ಒಂದು ವಿಶೇಷವಾದ ಅನೌನ್ಸ್‌ ಮೆಂಟನ್ನು ಮಾಡಿತ್ತು. ಪ್ರತಿ ಥಿಯೇಟರ್‌ ನ ಒಂದು ಸೀಟು ಹನುಮಾನ್‌ ದೇವರಿಗೆ ಮೀಸಲಾಗಿ ಇಡಲಾಗುವುದೆಂದು ಹೇಳಿತ್ತು.

ರಾಮಾಯಣದ ಕಥೆಯನ್ನು ಆಧರಿಸಿರುವ ʼಆದಿಪುರುಷ್‌ʼ ಟ್ರೇಲರ್‌ ರಿಲೀಸ್‌ ಆದಾಗಿನಿಂದ ದೊಡ್ಡಮಟ್ಟದಲ್ಲಿ ಸುದ್ದಿಯಾಗುತ್ತಿದೆ. ಸಿನಿ ಪ್ರಿಯರ ಕುತೂಹಲವನ್ನು ಹೆಚ್ಚಿಸಿದೆ. ಇದೀಗ ʼಕಾಶ್ಮೀರ್‌ ಫೈಲ್ಸ್‌ʼ, ʼಕಾರ್ತಿಕೇಯ 2ʼ ಸಿನಿಮಾದ ನಿರ್ಮಾಪಕ ಅಭಿಷೇಕ್ ಅಗರ್ವಾಲ್ ಅವರು ʼಆದಿಪುರುಷ್‌ʼ ಸಿನಿಮಾದ ಕುರಿತು ಸ್ಪೆಷೆಲ್‌ ಅನೌನ್ಸ್‌ ಮೆಂಟ್‌ ಮಾಡಿದ್ದಾರೆ.

“ಆದಿಪುರುಷ್‌ʼ ಜೀವಮಾನದಲ್ಲಿ ಒಮ್ಮೆ ನೋಡಬಹುದಾದ ಸಿನಿಮಾ. ಇದನ್ನು ಎಲ್ಲರೂ ಸೇರಿ ಸಂಭ್ರಮಿಸಲೇಬೇಕು. ಭಗವಾನ್ ಶ್ರೀರಾಮನ ಮೇಲಿನ ನನ್ನ ಭಕ್ತಿಯಿಂದ, ನಾನು ತೆಲಂಗಾಣದಾದ್ಯಂತ ಸರ್ಕಾರಿ ಶಾಲೆಗಳು, ಅನಾಥಾಶ್ರಮಗಳು ಮತ್ತು ವೃದ್ಧಾಶ್ರಮಗಳಿಗೆ 10,000+ ಟಿಕೆಟ್‌ಗಳನ್ನು ಉಚಿತವಾಗಿ ನೀಡಲು ನಿರ್ಧರಿಸಿದ್ದೇನೆ. ಟಿಕೆಟ್‌ಗಳನ್ನು ಪಡೆಯಲು ನಿಮ್ಮ ವಿವರಗಳೊಂದಿಗೆ ಗೂಗಲ್ ಫಾರ್ಮ್ ಅನ್ನು ಭರ್ತಿ ಮಾಡಿ” ಎಂದು ನಿರ್ಮಾಪಕರು ಟ್ವೀಟ್‌ ಮೂಲಕ ಹೇಳಿದ್ದಾರೆ.

ಓಂ ರಾವುತ್‌ ನಿರ್ದೇಶನದ ಸಿನಿಮಾದಲ್ಲಿ ರಾಘವ್ ಆಗಿ ಪ್ರಭಾಸ್, ಜಾನಕಿಯಾಗಿ ಕೃತಿ ಸನೋನ್, ಶೇಷನಾಗಿ ಸನ್ನಿ ಸಿಂಗ್ ಮತ್ತು ಭಜರಂಗನಾಗಿ ದೇವದತ್ತ ನಾಗೆ ಕಾಣಿಸಿಕೊಳ್ಳಲಿದ್ದಾರೆ. ಇನ್ನು ರಾವಣನಾಗಿ ಸೈಫ್‌ ಆಲಿ ಖಾನ್‌ ಕಾಣಿಸಿಕೊಳ್ಳಲಿದ್ದಾರೆ.

ಟಾಪ್ ನ್ಯೂಸ್

1-saasd

Tamil Nadu : ನೀಲಗಿರಿಯಲ್ಲಿ ಪ್ರವಾಸಿಗರ ಬಸ್ ಕಮರಿಗೆ ಬಿದ್ದು 8 ಮಂದಿ ಮೃತ್ಯು

1-sasa

Asian Games ಅಭಿಯಾನ ದುರಂತದಲ್ಲಿ ಕೊನೆ; ಜಾರಿ ಬಿದ್ದ ಮೀರಾಬಾಯಿ ಚಾನು

accident

Holehonnuru ; ಭೀಕರ ರಸ್ತೆ ಅಪಘಾತದಲ್ಲಿ ಮೂವರ ದುರ್ಮರಣ

1-asdasd

Asian Games ಪುರುಷರ ಹಾಕಿ: 10-2ರಿಂದ ಪಾಕಿಸ್ಥಾನವನ್ನು ಮಣಿಸಿದ ಭಾರತ

1-dadas

Kushtagi : ವೈಯಕ್ತಿಕ ಸಿಟ್ಟಿಗೆ ಸ್ನೇಹಿತನ ಹತ್ಯೆಗೈದ ಇಬ್ಬರ ಬಂಧನ

Shamanuru Shivashankarappa

Lingayat ಅಧಿಕಾರಿಗಳಿಗೆ ಅನ್ಯಾಯ ಹೇಳಿಕೆಗೆ ಬದ್ಧ: ಶಾಮನೂರು ಪುನರುಚ್ಚಾರ

1-sasa-sa

Hirekerur ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಲೋಕಾಯುಕ್ತ ಬಲೆಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-dasdas

CBFC ವಿರುದ್ಧ ನಟ ವಿಶಾಲ್ ಲಂಚ ಆರೋಪ: ತನಿಖೆಗೆ I&B ಸಚಿವಾಲಯ ಆದೇಶ

tdy-15

Leo 2nd Song ರಿಲೀಸ್:‌ “Badass” ಮೂಲಕ ಹೈಪ್‌ ಹೆಚ್ಚಿಸಿದ ʼಲಿಯೋದಾಸ್‌ʼ

Vivek Agnihotri ಅವರ ʼದಿ ವ್ಯಾಕ್ಸಿನ್ ವಾರ್‌ʼ ಸಿನಿಮಾಕ್ಕೆ ಪೈರಸಿ ಕಾಟ; HD ಕಾಪಿ ಲೀಕ್

Vivek Agnihotri ಅವರ ʼದಿ ವ್ಯಾಕ್ಸಿನ್ ವಾರ್‌ʼ ಸಿನಿಮಾಕ್ಕೆ ಪೈರಸಿ ಕಾಟ; HD ಕಾಪಿ ಲೀಕ್

Animal teaser ರಿಲೀಸ್: ʼಡಾರ್ಲಿಂಗ್‌ʼ ಎಂದು ರಶ್ಮಿಕಾಗೆ ಶುಭಕೋರಿದ ದೇವರಕೊಂಡ

Animal teaser ರಿಲೀಸ್: ʼಡಾರ್ಲಿಂಗ್‌ʼ ಎಂದು ರಶ್ಮಿಕಾಗೆ ಶುಭಕೋರಿದ ದೇವರಕೊಂಡ

tdy-2

Jawan ತಂಡದಿಂದ ಪ್ರೇಕ್ಷಕರಿಗೆ ʼಬೈ1 ಗೆಟ್‌ 1 ಫ್ರೀʼ ಟಿಕೆಟ್‌ ಆಫರ್ ಘೋಷಿಸಿದ ಶಾರುಖ್‌ ಖಾನ್

MUST WATCH

udayavani youtube

ಸಾಗರದಾಳದಲ್ಲಿ ಕಣ್ಮರೆಯಾಗಿದ್ದ 8 ನೇ ಖಂಡ ಪತ್ತೆ

udayavani youtube

ಕುದುಕುಳ್ಳಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ

udayavani youtube

ಕ್ಷಮೆ ಕೇಳಿದ ಶಿವಣ್ಣ

udayavani youtube

ಅಕ್ವಾಟಿಕ್ಸ್ ಗ್ಯಾಲರಿ ನೋಡಿ ಕಣ್ತುಂಬಿಕೊಂಡ ಪ್ರಧಾನಿ ಮೋದಿ

udayavani youtube

ಬೆಂಗಳೂರಿನಲ್ಲಿ ನಡೆಯಿತು ತುಳುನಾಡ ಸಂಸ್ಕೃತಿ ಬಿಂಬಿಸುವ ಅಷ್ಟಮಿದ ಐಸಿರ

ಹೊಸ ಸೇರ್ಪಡೆ

beg

Pakistani: ಅರಬ್‌ ರಾಷ್ಟ್ರಗಳಲ್ಲಿ ಪಾಕ್‌ ಭಿಕ್ಷುಕರ ಸಾಮ್ರಾಜ್ಯ!

art of living

Art of Living: ಕಲಾರಾಧನೆಗೆ ಆರ್ಟ್‌ ಆಫ್ ಲಿವಿಂಗ್‌ ಸಾಮರಸ್ಯದ ವೇದಿಕೆ

chandrayaan 3………….

Fraud: ಚಂದ್ರಯಾನ-3 ಹೆಸರಿನಲ್ಲಿ 20 ಕೋಟಿ ರೂ. ವಂಚನೆ!

ny rain

Rain: ದಿಢೀರ್‌ ಪ್ರವಾಹಕ್ಕೆ ನ್ಯೂಯಾರ್ಕ್‌ ತತ್ತರ

AADITYA L 1

Aditya L1: ಪ್ರಭಾವಲಯ ದಾಟಿದ ಆದಿತ್ಯ ಎಲ್‌1

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.